Homeಮುಖಪುಟ‘ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿ’ – ಗುಜರಾತ್ ಸರ್ಕಾರದ ವಿರುದ್ಧ ಬಿಜೆಪಿ ಹಿರಿಯ ನಾಯಕ...

‘ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿ’ – ಗುಜರಾತ್ ಸರ್ಕಾರದ ವಿರುದ್ಧ ಬಿಜೆಪಿ ಹಿರಿಯ ನಾಯಕ ವಾಗ್ದಾಳಿ

ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿಯು ಆಗಿರುವ ಅವರು ಹೇಳಿದ್ದಾರೆ

- Advertisement -
- Advertisement -

ಬಿಲ್ಕಿಸ್ ಬಾನೊ ಪ್ರಕರಣದ ಬಗ್ಗೆ ಬಿಜೆಪಿ ಮೌನ ವಹಿಸಿದ್ದರೂ, ಪಕ್ಷದ ಹಿರಿಯ ನಾಯಕ, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಾಂತ ಕುಮಾರ್ ಅವರು ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳ ಬಿಡುಗಡೆಗೆ ಅವಕಾಶ ನೀಡಿದ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಅವರು ಹೇಳಿದ್ದು, ಇದು ಇತಿಹಾಸದಲ್ಲೆ ಅತ್ಯಂತ ಅನಾಗರಿಕ ಪ್ರಕರಣಗಳಲ್ಲಿ ಒಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ದಿ ಪ್ರಿಂಟ್ ಸುದ್ದಿ ಮಾಧ್ಯಮದ ಜೊತೆ ಮಾತನಾಡಿದ ಅವರು,“ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ. ಇದು ಇತಿಹಾಸದಲ್ಲೆ ಅತ್ಯಂತ ಅನಾಗರಿಕ ಪ್ರಕರಣಗಳಲ್ಲಿ ಒಂದಾಗಿದೆ. ಯಾವುದೇ ಸರ್ಕಾರವಿರಲಿ ಅಪರಾಧಿಗಳಿಗೆ ಈ ರೀತಿಯ ಕ್ಷಮಾದಾನ ನೀಡುವುದನ್ನು ಹೇಗೆ ಅನುಮತಿಸಲು ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗುಜರಾತ್ ಸರ್ಕಾರವು ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು. ಪ್ರಕರಣದಲ್ಲಿ ಅಪರಾಧಿಗಳಾಗಿರುವ ಜನರನ್ನು ಗಲ್ಲಿಗೇರಿಸಬೇಕು” ಎಂದು ಶಾಂತ ಕುಮಾರ್ ಅವರು ಆಗ್ರಹಿಸಿದ್ದಾರೆ. ಅಪರಾಧಿಗಳಿಗೆ ನೀಡಲಾದ ಕ್ಷಮಾದಾನವನ್ನು ‘‘ರದ್ದುಮಾಡಲು” ತಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪರ್ಕಿಸುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಒಂದು ವೇಳೆ ವಿಮಲಾ ದೇವಿ ಆಗಿದ್ದರೆ?

“ಅವರು ಮಾಡಿದ ಅಪರಾಧಕ್ಕಾಗಿ ವಿಶೇಷ ನ್ಯಾಯಾಲಯವು ತನ್ನ ತೀರ್ಪನ್ನು ಪ್ರಕಟಿಸಿದೆ. ಅತ್ಯಾಚಾರ ಮತ್ತು ಕೊಲೆಗಾಗಿ ಮಾಡಿದ್ದಕ್ಕಾಗಿ ಅವರ ಶಿಕ್ಷೆಯನ್ನು ಉಚ್ಚ ನ್ಯಾಯಾಲಯ ಎತ್ತಿಹಿಡಿದಿದೆ. ಈ ಮೂಲಕ ಅವರು ಘೋರ ಅಪರಾಧಗಳನ್ನು ಮಾಡಿದ್ದಾರೆ ಎಂದು ಸಾಬೀತಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಇಂತಹ ಘೋರ ಅಪರಾಧಗಳ ಹೊರತಾಗಿಯೂ, ಅವರನ್ನು ಗಲ್ಲಿಗೇರಿಸಲಾಗಿಲ್ಲ ಎಂದು ನನಗೆ ಆಶ್ಚರ್ಯವಾಗಿದೆ. ಈಗ ಗುಜರಾತ್ ಸರ್ಕಾರ ವಿಶೇಷ ನಿಬಂಧನೆಯನ್ನು ಬಳಸಿಕೊಂಡು ಅವರನ್ನು ಬಿಡುಗಡೆ ಮಾಡಿದೆ ಎಂದು ತಿಳಿದ ನಂತರ ನನಗೆ ಆಶ್ಚರ್ಯವಾಗಿದೆ. ದೇಶ ಸ್ವಾತಂತ್ರ್ಯಗೊಂಡು 75 ವರ್ಷವಾಗಿದ್ದರೂ, ಮಹಿಳೆಯರು ಮತ್ತು ಹುಡುಗಿಯರ ಮೇಲಿನ ಅಪರಾಧಗಳು ಹೆಚ್ಚಾಗುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಅವರು ಹೇಳಿದ್ದಾರೆ.

ಗುಜರಾತ್‌ನ ಭೂಪೇಂದ್ರ ಪಟೇಲ್ ನೇತೃತ್ವದ ಬಿಜೆಪಿ ಸರ್ಕಾರವು ಸ್ವಾತಂತ್ರ್ಯ ದಿನದಂದು ತನ್ನ ಕ್ಷಮಾದಾನ ನೀತಿಯಡಿಯಲ್ಲಿ ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ನಂತರ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲಾ 11 ಅಪರಾಧಿಗಳು ಗೋದ್ರಾ ಉಪ ಜೈಲಿನಿಂದ ಬಿಡುಗಡೆಗೊಂಡಿದ್ದರು.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿ ಎಂದು ಆದೇಶಿಸಿಲ್ಲ ಎಂದ ಸುಪ್ರೀಂ!

ಈ ಅಪರಾಧಿಗಳಿಗೆ 2002 ರಲ್ಲಿ ಗುಜರಾತ್ ಕೋಮುಗಲಭೆಯ ಸಮಯದಲ್ಲಿ ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬದ ಹಲವು ಸದಸ್ಯರನ್ನು ಹತ್ಯೆಗೈದ ಆರೋಪದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ರಾಜ್ಯದಲ್ಲಿ ಚುನಾವಣೆಗೆ ಒಂದು ವರ್ಷ ಬಾಕಿಯಿರುವ ವೇಳೆ ಈ ಕ್ಷಮಾದಾನ ನೀಡಲಾಗಿದೆ.

ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆ ವಿಎಚ್‌ಪಿ ಆಗಸ್ಟ್ 17 ರಂದು ತನ್ನ ಕಚೇರಿಯಲ್ಲಿ ಅಪರಾಧಿಗಳನ್ನು ಹೂಮಾಲೆಯೊಂದಿಗೆ ಸ್ವಾಗತಿಸಿದ ನಂತರ ಪ್ರಕರಣದ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತು. ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ “ಪೊಳ್ಳು ಪ್ರತಿಪಾದನೆ” ಮಾಡಿದಕ್ಕಾಗಿ ಪ್ರತಿಪಕ್ಷ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದೆ. ಇಷ್ಟಾದರೂ ಈ ಬಗ್ಗೆ ಬಿಜೆಪಿ ಮೌನ ವಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...