Homeಮುಖಪುಟ‘ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿ’ – ಗುಜರಾತ್ ಸರ್ಕಾರದ ವಿರುದ್ಧ ಬಿಜೆಪಿ ಹಿರಿಯ ನಾಯಕ...

‘ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿ’ – ಗುಜರಾತ್ ಸರ್ಕಾರದ ವಿರುದ್ಧ ಬಿಜೆಪಿ ಹಿರಿಯ ನಾಯಕ ವಾಗ್ದಾಳಿ

ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿಯು ಆಗಿರುವ ಅವರು ಹೇಳಿದ್ದಾರೆ

- Advertisement -
- Advertisement -

ಬಿಲ್ಕಿಸ್ ಬಾನೊ ಪ್ರಕರಣದ ಬಗ್ಗೆ ಬಿಜೆಪಿ ಮೌನ ವಹಿಸಿದ್ದರೂ, ಪಕ್ಷದ ಹಿರಿಯ ನಾಯಕ, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಾಂತ ಕುಮಾರ್ ಅವರು ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳ ಬಿಡುಗಡೆಗೆ ಅವಕಾಶ ನೀಡಿದ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಅವರು ಹೇಳಿದ್ದು, ಇದು ಇತಿಹಾಸದಲ್ಲೆ ಅತ್ಯಂತ ಅನಾಗರಿಕ ಪ್ರಕರಣಗಳಲ್ಲಿ ಒಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ದಿ ಪ್ರಿಂಟ್ ಸುದ್ದಿ ಮಾಧ್ಯಮದ ಜೊತೆ ಮಾತನಾಡಿದ ಅವರು,“ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ. ಇದು ಇತಿಹಾಸದಲ್ಲೆ ಅತ್ಯಂತ ಅನಾಗರಿಕ ಪ್ರಕರಣಗಳಲ್ಲಿ ಒಂದಾಗಿದೆ. ಯಾವುದೇ ಸರ್ಕಾರವಿರಲಿ ಅಪರಾಧಿಗಳಿಗೆ ಈ ರೀತಿಯ ಕ್ಷಮಾದಾನ ನೀಡುವುದನ್ನು ಹೇಗೆ ಅನುಮತಿಸಲು ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗುಜರಾತ್ ಸರ್ಕಾರವು ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು. ಪ್ರಕರಣದಲ್ಲಿ ಅಪರಾಧಿಗಳಾಗಿರುವ ಜನರನ್ನು ಗಲ್ಲಿಗೇರಿಸಬೇಕು” ಎಂದು ಶಾಂತ ಕುಮಾರ್ ಅವರು ಆಗ್ರಹಿಸಿದ್ದಾರೆ. ಅಪರಾಧಿಗಳಿಗೆ ನೀಡಲಾದ ಕ್ಷಮಾದಾನವನ್ನು ‘‘ರದ್ದುಮಾಡಲು” ತಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪರ್ಕಿಸುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಒಂದು ವೇಳೆ ವಿಮಲಾ ದೇವಿ ಆಗಿದ್ದರೆ?

“ಅವರು ಮಾಡಿದ ಅಪರಾಧಕ್ಕಾಗಿ ವಿಶೇಷ ನ್ಯಾಯಾಲಯವು ತನ್ನ ತೀರ್ಪನ್ನು ಪ್ರಕಟಿಸಿದೆ. ಅತ್ಯಾಚಾರ ಮತ್ತು ಕೊಲೆಗಾಗಿ ಮಾಡಿದ್ದಕ್ಕಾಗಿ ಅವರ ಶಿಕ್ಷೆಯನ್ನು ಉಚ್ಚ ನ್ಯಾಯಾಲಯ ಎತ್ತಿಹಿಡಿದಿದೆ. ಈ ಮೂಲಕ ಅವರು ಘೋರ ಅಪರಾಧಗಳನ್ನು ಮಾಡಿದ್ದಾರೆ ಎಂದು ಸಾಬೀತಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಇಂತಹ ಘೋರ ಅಪರಾಧಗಳ ಹೊರತಾಗಿಯೂ, ಅವರನ್ನು ಗಲ್ಲಿಗೇರಿಸಲಾಗಿಲ್ಲ ಎಂದು ನನಗೆ ಆಶ್ಚರ್ಯವಾಗಿದೆ. ಈಗ ಗುಜರಾತ್ ಸರ್ಕಾರ ವಿಶೇಷ ನಿಬಂಧನೆಯನ್ನು ಬಳಸಿಕೊಂಡು ಅವರನ್ನು ಬಿಡುಗಡೆ ಮಾಡಿದೆ ಎಂದು ತಿಳಿದ ನಂತರ ನನಗೆ ಆಶ್ಚರ್ಯವಾಗಿದೆ. ದೇಶ ಸ್ವಾತಂತ್ರ್ಯಗೊಂಡು 75 ವರ್ಷವಾಗಿದ್ದರೂ, ಮಹಿಳೆಯರು ಮತ್ತು ಹುಡುಗಿಯರ ಮೇಲಿನ ಅಪರಾಧಗಳು ಹೆಚ್ಚಾಗುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಅವರು ಹೇಳಿದ್ದಾರೆ.

ಗುಜರಾತ್‌ನ ಭೂಪೇಂದ್ರ ಪಟೇಲ್ ನೇತೃತ್ವದ ಬಿಜೆಪಿ ಸರ್ಕಾರವು ಸ್ವಾತಂತ್ರ್ಯ ದಿನದಂದು ತನ್ನ ಕ್ಷಮಾದಾನ ನೀತಿಯಡಿಯಲ್ಲಿ ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ನಂತರ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲಾ 11 ಅಪರಾಧಿಗಳು ಗೋದ್ರಾ ಉಪ ಜೈಲಿನಿಂದ ಬಿಡುಗಡೆಗೊಂಡಿದ್ದರು.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿ ಎಂದು ಆದೇಶಿಸಿಲ್ಲ ಎಂದ ಸುಪ್ರೀಂ!

ಈ ಅಪರಾಧಿಗಳಿಗೆ 2002 ರಲ್ಲಿ ಗುಜರಾತ್ ಕೋಮುಗಲಭೆಯ ಸಮಯದಲ್ಲಿ ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬದ ಹಲವು ಸದಸ್ಯರನ್ನು ಹತ್ಯೆಗೈದ ಆರೋಪದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ರಾಜ್ಯದಲ್ಲಿ ಚುನಾವಣೆಗೆ ಒಂದು ವರ್ಷ ಬಾಕಿಯಿರುವ ವೇಳೆ ಈ ಕ್ಷಮಾದಾನ ನೀಡಲಾಗಿದೆ.

ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆ ವಿಎಚ್‌ಪಿ ಆಗಸ್ಟ್ 17 ರಂದು ತನ್ನ ಕಚೇರಿಯಲ್ಲಿ ಅಪರಾಧಿಗಳನ್ನು ಹೂಮಾಲೆಯೊಂದಿಗೆ ಸ್ವಾಗತಿಸಿದ ನಂತರ ಪ್ರಕರಣದ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತು. ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ “ಪೊಳ್ಳು ಪ್ರತಿಪಾದನೆ” ಮಾಡಿದಕ್ಕಾಗಿ ಪ್ರತಿಪಕ್ಷ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದೆ. ಇಷ್ಟಾದರೂ ಈ ಬಗ್ಗೆ ಬಿಜೆಪಿ ಮೌನ ವಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...