Homeಮುಖಪುಟ‘ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿ’ – ಗುಜರಾತ್ ಸರ್ಕಾರದ ವಿರುದ್ಧ ಬಿಜೆಪಿ ಹಿರಿಯ ನಾಯಕ...

‘ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿ’ – ಗುಜರಾತ್ ಸರ್ಕಾರದ ವಿರುದ್ಧ ಬಿಜೆಪಿ ಹಿರಿಯ ನಾಯಕ ವಾಗ್ದಾಳಿ

ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿಯು ಆಗಿರುವ ಅವರು ಹೇಳಿದ್ದಾರೆ

- Advertisement -
- Advertisement -

ಬಿಲ್ಕಿಸ್ ಬಾನೊ ಪ್ರಕರಣದ ಬಗ್ಗೆ ಬಿಜೆಪಿ ಮೌನ ವಹಿಸಿದ್ದರೂ, ಪಕ್ಷದ ಹಿರಿಯ ನಾಯಕ, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಾಂತ ಕುಮಾರ್ ಅವರು ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳ ಬಿಡುಗಡೆಗೆ ಅವಕಾಶ ನೀಡಿದ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಅವರು ಹೇಳಿದ್ದು, ಇದು ಇತಿಹಾಸದಲ್ಲೆ ಅತ್ಯಂತ ಅನಾಗರಿಕ ಪ್ರಕರಣಗಳಲ್ಲಿ ಒಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ದಿ ಪ್ರಿಂಟ್ ಸುದ್ದಿ ಮಾಧ್ಯಮದ ಜೊತೆ ಮಾತನಾಡಿದ ಅವರು,“ಅಪರಾಧಿಗಳ ಬಿಡುಗಡೆಯ ಬಗ್ಗೆ ತಿಳಿದ ನಂತರ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ. ಇದು ಇತಿಹಾಸದಲ್ಲೆ ಅತ್ಯಂತ ಅನಾಗರಿಕ ಪ್ರಕರಣಗಳಲ್ಲಿ ಒಂದಾಗಿದೆ. ಯಾವುದೇ ಸರ್ಕಾರವಿರಲಿ ಅಪರಾಧಿಗಳಿಗೆ ಈ ರೀತಿಯ ಕ್ಷಮಾದಾನ ನೀಡುವುದನ್ನು ಹೇಗೆ ಅನುಮತಿಸಲು ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗುಜರಾತ್ ಸರ್ಕಾರವು ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು. ಪ್ರಕರಣದಲ್ಲಿ ಅಪರಾಧಿಗಳಾಗಿರುವ ಜನರನ್ನು ಗಲ್ಲಿಗೇರಿಸಬೇಕು” ಎಂದು ಶಾಂತ ಕುಮಾರ್ ಅವರು ಆಗ್ರಹಿಸಿದ್ದಾರೆ. ಅಪರಾಧಿಗಳಿಗೆ ನೀಡಲಾದ ಕ್ಷಮಾದಾನವನ್ನು ‘‘ರದ್ದುಮಾಡಲು” ತಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪರ್ಕಿಸುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಒಂದು ವೇಳೆ ವಿಮಲಾ ದೇವಿ ಆಗಿದ್ದರೆ?

“ಅವರು ಮಾಡಿದ ಅಪರಾಧಕ್ಕಾಗಿ ವಿಶೇಷ ನ್ಯಾಯಾಲಯವು ತನ್ನ ತೀರ್ಪನ್ನು ಪ್ರಕಟಿಸಿದೆ. ಅತ್ಯಾಚಾರ ಮತ್ತು ಕೊಲೆಗಾಗಿ ಮಾಡಿದ್ದಕ್ಕಾಗಿ ಅವರ ಶಿಕ್ಷೆಯನ್ನು ಉಚ್ಚ ನ್ಯಾಯಾಲಯ ಎತ್ತಿಹಿಡಿದಿದೆ. ಈ ಮೂಲಕ ಅವರು ಘೋರ ಅಪರಾಧಗಳನ್ನು ಮಾಡಿದ್ದಾರೆ ಎಂದು ಸಾಬೀತಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಇಂತಹ ಘೋರ ಅಪರಾಧಗಳ ಹೊರತಾಗಿಯೂ, ಅವರನ್ನು ಗಲ್ಲಿಗೇರಿಸಲಾಗಿಲ್ಲ ಎಂದು ನನಗೆ ಆಶ್ಚರ್ಯವಾಗಿದೆ. ಈಗ ಗುಜರಾತ್ ಸರ್ಕಾರ ವಿಶೇಷ ನಿಬಂಧನೆಯನ್ನು ಬಳಸಿಕೊಂಡು ಅವರನ್ನು ಬಿಡುಗಡೆ ಮಾಡಿದೆ ಎಂದು ತಿಳಿದ ನಂತರ ನನಗೆ ಆಶ್ಚರ್ಯವಾಗಿದೆ. ದೇಶ ಸ್ವಾತಂತ್ರ್ಯಗೊಂಡು 75 ವರ್ಷವಾಗಿದ್ದರೂ, ಮಹಿಳೆಯರು ಮತ್ತು ಹುಡುಗಿಯರ ಮೇಲಿನ ಅಪರಾಧಗಳು ಹೆಚ್ಚಾಗುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಅವರು ಹೇಳಿದ್ದಾರೆ.

ಗುಜರಾತ್‌ನ ಭೂಪೇಂದ್ರ ಪಟೇಲ್ ನೇತೃತ್ವದ ಬಿಜೆಪಿ ಸರ್ಕಾರವು ಸ್ವಾತಂತ್ರ್ಯ ದಿನದಂದು ತನ್ನ ಕ್ಷಮಾದಾನ ನೀತಿಯಡಿಯಲ್ಲಿ ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ನಂತರ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲಾ 11 ಅಪರಾಧಿಗಳು ಗೋದ್ರಾ ಉಪ ಜೈಲಿನಿಂದ ಬಿಡುಗಡೆಗೊಂಡಿದ್ದರು.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿ ಎಂದು ಆದೇಶಿಸಿಲ್ಲ ಎಂದ ಸುಪ್ರೀಂ!

ಈ ಅಪರಾಧಿಗಳಿಗೆ 2002 ರಲ್ಲಿ ಗುಜರಾತ್ ಕೋಮುಗಲಭೆಯ ಸಮಯದಲ್ಲಿ ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಅವರ ಕುಟುಂಬದ ಹಲವು ಸದಸ್ಯರನ್ನು ಹತ್ಯೆಗೈದ ಆರೋಪದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ರಾಜ್ಯದಲ್ಲಿ ಚುನಾವಣೆಗೆ ಒಂದು ವರ್ಷ ಬಾಕಿಯಿರುವ ವೇಳೆ ಈ ಕ್ಷಮಾದಾನ ನೀಡಲಾಗಿದೆ.

ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆ ವಿಎಚ್‌ಪಿ ಆಗಸ್ಟ್ 17 ರಂದು ತನ್ನ ಕಚೇರಿಯಲ್ಲಿ ಅಪರಾಧಿಗಳನ್ನು ಹೂಮಾಲೆಯೊಂದಿಗೆ ಸ್ವಾಗತಿಸಿದ ನಂತರ ಪ್ರಕರಣದ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತು. ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ “ಪೊಳ್ಳು ಪ್ರತಿಪಾದನೆ” ಮಾಡಿದಕ್ಕಾಗಿ ಪ್ರತಿಪಕ್ಷ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದೆ. ಇಷ್ಟಾದರೂ ಈ ಬಗ್ಗೆ ಬಿಜೆಪಿ ಮೌನ ವಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...