Homeಕರ್ನಾಟಕಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

- Advertisement -
- Advertisement -

ಹನುಮ ಜಯಂತಿ ಪ್ರಯುಕ್ತ ದೇವಾಲಯ ಪ್ರವೇಶಿಸಿದ ದಲಿತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರದಲ್ಲಿ ನಡೆದಿದೆ.

ಡಿ.16ರಂದು ಘಟನೆ ನಡೆದಿದ್ದು, ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರಂಜನ್‌ ದೂರು ಸ್ವೀಕರಿಸಲು ನಿರಾಕರಿಸಿದ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರಲ್ಲಿ ದಲಿತರು ನೋವು ತೋಡಿಕೊಂಡಿದ್ದು, 27 ಮಂದಿಯ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾಗಿದೆ.

“ನಿಮ್ಮಿಂದ ದೇವಸ್ಥಾನ ಮಲಿನಗೊಂಡಿದೆ. ನಿಮ್ಮಂಥ ಜನರನ್ನು ಭೂಮಿ ಮೇಲೆ ಇರದಂತೆ ಸುಟ್ಟು ಹಾಕುತ್ತೇವೆ ಎಂದು ಡಿ.16ರ ರಾತ್ರಿ 11.30ರ ಸಮಯದಲ್ಲಿ ಸುಮಾರು 50-60 ಜನ ಸವರ್ಣೀಯರು ಮಾರಕಾಸ್ತ್ರಗಳಿಂದ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಾದ ದೊಣ್ಣೆ, ಕೊಡಲಿ, ಪಂಚ್‌, ಕಲ್ಲು ಮತ್ತು ಇಟ್ಟಿಗೆಗಳೊಂದಿಗೆ ದಲಿತ ಕಾಲೋನಿಗೆ ನುಗ್ಗಿ ದಾಂದಲೆ ನಡೆಸಿದ್ದಾರೆ. ಅಂಗವಿಕಲ ವ್ಯಕ್ತಿ ನಂಜಯ್ಯ ಎಂಬುವವರ ಮೇಲೆಯೂ ದಾಳಿ ನಡೆದಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಸಲಾಗಿದೆ” ಎಂದು ದಲಿತರು ದೂರು ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ದಲಿತ ಯುವಕರಾದ ದರ್ಶನ್, ಸುನಿಲ್‌, ಲೋಹಿತ್‌, ಅಭಿಷೇಕ್‌, ವಿನಯ್‌, ಸಂಜಯ್‌, ಚಲವರಾಜು, ಭಾಗ್ಯಮ್ಮ, ಕುಮಾರ, ರಂಜಮ್ಮ, ಶೋಭಾ, ನಂಜಯ್ಯ ಅವರು ನೀಡಿದ ದೂರಿನ ಅನ್ವಯ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಆದರೆ ಯಾರನ್ನೂ ಈವರೆಗೆ ಬಂಧಿಸಿಲ್ಲ ಎಂದು ತಿಳಿದುಬಂದಿದೆ.

ಆರೋಪಿಗಳು: ಮಂಜುನಾಥ್‌ (ತಂದೆ: ತಮ್ಮೇಗೌಡ), ಶ್ರೀಧರ (ನಾಗೇಗೌಡ), ಸಂತೋಷ್ (ಕೃಷ್ಣೇಗೌಡ), ಶ್ರೀನಿವಾಸ ಎಚ್‌.ಟಿ. (ತಿಮ್ಮೇಗೌಡ), ರಂಜಿತ್‌ (ನಾರಾಯಣಗೌಡ), ಸತೀಶ (ರಾಮೇಗೌಡ), ಸ್ವಾಮಿ (ಸಹದೇವ), ಮುತ್ತು (ನಾರಾಯಣ), ರಜಿತ್‌ ಅಲಿಯಾಸ್ ಮಿಲ್ಟ್ರಿ (ನಾರಾಯಣಗೌಡ), ಮಂಜುನಾಥ (ತಮ್ಮೇಗೌಡ), ಮೋಹನ್ (ನಂಜೇಗೌಡ), ಮಂಜ (ಜಿಂಕೆ ಚಲುವಯ್ಯ), ಹರೀಶ ಮಡಗಿನಕುಡಿ, ವೆಂಕಟೇಶ್‌ ಹರಿಹರಪುರ, ರಾಘು (ವೆಂಕಟೇಶ್‌), ರವಿ ಅಲಿಯಾಸ್ ಚಡ್ಡಿ (ಮಂಜೇಗೌಡ), ಮಂಜ (ಜವರೇಗೌಡ), ಸುರೇಶ (ಕರಿಯಪ್ಪ), ಗುಂಡೂ (ವೆಂಕಟಾಚಲ), ಬಾನುಪ್ರಕಾಶ್ (ಗಂಗಾಧರ್‌), ಶಿವಕುಮಾರ (ಶ್ರೀನಿವಾಸ್), ದರ್ಶನ್‌ ಕುರೇನಹಳ್ಳಿ, ದೀಪು (ಶಂಕರ್‌ ಅಲಿಯಾಸ್‌ ರೇಷ್ಮೇ ಇಲಾಖೆ), ಮೋಹನ (ಶ್ರೀನಿವಾಸ್‌), ಪ್ರದೀಪ್ (ವೆಂಕಟೇಶ್), ಜಯಂತ್‌ (ಡಯಟ್ ಜಯರಾಮ್‌), ಗೌತಮ್ಮ ಅಲಿಯಾಸ್ ಕುಳ್ಳಯ್ಯ.

ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರ್ಲಕ್ಷ್ಯ

ಮೈಸೂರಿನ ವಕೀಲರಾದ ಎ.ಆರ್‌.ಕಾಂತರಾಜು ಅವರು ಘಟನೆ ಕುರಿತು ಮಾತನಾಡಿದ್ದು, “21ನೇ ಶತಮಾನ ಕಳೆದರೂ ಸಂವಿಧಾನದ ಆಶಯಗಳು ಈಡೇರಲಿಲ್ಲ. ದಲಿತರನ್ನು ಪ್ರಾಣಿಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿದೆ. ಇಂದು ಹಸು ಕೊಲ್ಲಬಾರದೆಂದು, ಮೇಕೆ ಕೊಲ್ಲಬಾರದೆಂದು ಕಾನೂನು ತರುತ್ತಾರೆ. ಆದರೆ ಮನುಷ್ಯರನ್ನು ಹಸು ಮತ್ತು ಮೇಕೆಗಳಿಗಿಂತ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಪೊಲೀಸರು ದಲಿತರಿಗೆ ರಕ್ಷಣೆ ನೀಡಬೇಕಾದ ಸ್ಥಳೀಯ ಪೊಲೀಸರೇ ದಬ್ಬಾಳಿಕೆ ನಡೆಸಿದ್ದಾರೆ” ಎಂದು ದೂರಿದ್ದಾರೆ.

“ಹರಿಹರಪುರ ಗ್ರಾಮದಲ್ಲಿ ಹದಿನೇಳು ವರ್ಷಗಳಿಂದ ಹನುಮ ಜಯಂತಿ ನಡೆಯುತ್ತಿದೆ. ಹನುಮ ಜಯಂತಿ ನಡೆಸುವಾಗ ದಲಿತರಿಂದ ಯಾವುದೇ ವಂತಿಕೆಯನ್ನು ಪಡೆಯುವುದಿಲ್ಲ. ದಲಿತರಿಂದ ಹತ್ತು ರೂಪಾಯಿ ವಂತಿಕೆ ಪಡೆದರೂ ನಾಳೆ ದಲಿತರನ್ನು ದೇವಸ್ಥಾನಕ್ಕೆ ಬಿಟ್ಟುಕೊಳ್ಳಬೇಕಾಗುತ್ತದೆ ಎಂಬುದು ಇದಕ್ಕೆ ಕಾರಣ. ಇದುವರೆಗೂ ದಲಿತರು ಕದ್ದು ಮುಚ್ಚಿ ದೇವರಿಗೆ ನಮಸ್ಕಾರ ಮಾಡುತ್ತಿದ್ದರು. ಸವರ್ಣೀಯರನ್ನು ಎದುರು ಹಾಕಿಕೊಳ್ಳುವ ಶಕ್ತಿ ಇರಲಿಲ್ಲ. ಇದನ್ನು ಪ್ರಶ್ನಿಸಿ ದಲಿತರು ಈ ಬಾರಿ ದೇವಾಲಯ ಪ್ರವೇಶಿಸಿದ್ದರು. ಅದನ್ನು ನೋಡಿದ ಮೇಲ್ವರ್ಗದ ಜನ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ” ಎಂದು ತಿಳಿಸಿದ್ದಾರೆ.

ಕುಮಾರ್‌ ಎಂಬ ಯುವಕ ಈ ಘಟನೆಯನ್ನು ಸೆರೆ ಹಿಡಿಯಲು ಯತ್ನಿಸಿದಾಗ ಆತನ ಮೊಬೈಲ್‌ ಕೂಡ ಕಸಿದುಕೊಂಡು 20-30 ಜನ ಮನಬಂದಂತೆ ಥಳಿಸಿದ್ದಾರೆ. ಇಷ್ಟೆಲ್ಲ ಘಟನೆಯಾದ ಬಳಿಕ ಅಂದು ರಾತ್ರಿ 12.30ಕ್ಕೆ ಕೆ.ಆರ್‌.ಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್‌ ನಿರಂಜನ್‌ ಅವರನ್ನು ಭೇಟಿ ಮಾಡಿ ದೂರು ನೀಡಲು ಹೋಗುತ್ತಾರೆ. ಜನರಿಗೆ ರಕ್ಷಣೆ ಕೊಡಬೇಕಾದ ಇನ್‌ಸ್ಪೆಕ್ಟರ್‌ ನಿರಂಜನ್‌, “ದಲಿತರದ್ದು ಅತಿಯಾಯಿತು, ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಳ್ಳಲು ಆಗಲ್ಲ. ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಂಡು ಕೂತರೆ ದಿನವೆಲ್ಲ ತೆಗೆದುಕೊಳ್ಳಬೇಕಾಗುತ್ತದೆ. ನಾಳೆ ಬನ್ನಿ” ಎಂದು ಹೇಳುತ್ತಾರೆ. ಇದಾದ ಮೇಲೆ ಒಂದು ಗಂಟೆಯಲ್ಲೇ ಗ್ರಾಮಕ್ಕೆ ಪೊಲೀಸರನ್ನು ಕಳಿಸಿ, ದಲಿತರಿಗೆಯೇ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ದಲಿತರಿಗೆ ಭಯಭೀತಿ ಹುಟ್ಟಿಸಿದ್ದಾರೆ. ಮಾರನೇ ದಿನ ದೂರು ನೀಡಲು ಹೋದಾಗಲೂ ದೂರು ಸ್ವೀಕರಿಸಲಿಲ್ಲ. ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಲು ಹೋಗಿದ್ದೆವು. ಎಸ್‌ಪಿಯವರು ನಮ್ಮಿಂದ ವಿವರವಾದ ದೂರು ಸ್ವೀಕರಿಸಿದರು. “ಯಾರು ದೂರು ಸ್ವೀಕರಿಸಲ್ಲ ನೋಡ್ತೀನಿ. ಗ್ರಾಮದಲ್ಲಿ ಅಹಿತರಕ ಘಟನೆ ನಡೆಯದಂತೆ ಕ್ರಮ ವಹಿಸುತ್ತೇನೆ” ಎಂದು ತಿಳಿಸಿದರು. ಐಪಿಎಸ್‌‌ ಅಧಿಕಾರಿಗಳು ಸಾಂತ್ವನ ಹೇಳುತ್ತಾರೆ. ಆದರೆ ಸ್ಥಳೀಯವಾಗಿ ಇರುವಂತಹ ಜಾತಿವಾದಿ ಮನಸ್ಥಿತಿಯ ಅಧಿಕಾರಿಗಳೂ ದಲಿತರಿಗೆ ಯಾಕೆ ರಕ್ಷಣೆ ನೀಡುತ್ತಿಲ್ಲ. ಇದೇನಾ ಭಾರತದ ಕಾನೂನು? ಇದೇನಾ ದಲಿತರಿಗೆ ನೀಡುವ ರಕ್ಷಣೆ? ಎಂದು ಪ್ರಶ್ನಿಸಿದ್ದಾರೆ ಕಾಂತರಾಜು.


ಇದನ್ನೂ ಓದಿರಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಇಂತಹ ಕೀಳು ಮನಸ್ಥಿತಿ ಇರುವ ಜನರು ನೀವು, ನಾಚಿಕೆಯಾಗಬೇಕು ನಿಮಗೆ ನಾಗರೀಕ ಸಮಾಜದಲ್ಲಿ ಬದುಕಲು ಯೋಗ್ಯತೆ ಇಲ್ಲದ ನೀವು ಹುಚಿನಾಯಿಗಳಿಗಿಂತ ಕೀಳು ನೀವು. ಮನುಷ್ಯರನ್ನು ಪ್ರೀತಿಸಿ ಗೌರವಿಸಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...