Homeಕರ್ನಾಟಕಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

- Advertisement -
- Advertisement -

ಹನುಮ ಜಯಂತಿ ಪ್ರಯುಕ್ತ ದೇವಾಲಯ ಪ್ರವೇಶಿಸಿದ ದಲಿತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರದಲ್ಲಿ ನಡೆದಿದೆ.

ಡಿ.16ರಂದು ಘಟನೆ ನಡೆದಿದ್ದು, ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರಂಜನ್‌ ದೂರು ಸ್ವೀಕರಿಸಲು ನಿರಾಕರಿಸಿದ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರಲ್ಲಿ ದಲಿತರು ನೋವು ತೋಡಿಕೊಂಡಿದ್ದು, 27 ಮಂದಿಯ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾಗಿದೆ.

“ನಿಮ್ಮಿಂದ ದೇವಸ್ಥಾನ ಮಲಿನಗೊಂಡಿದೆ. ನಿಮ್ಮಂಥ ಜನರನ್ನು ಭೂಮಿ ಮೇಲೆ ಇರದಂತೆ ಸುಟ್ಟು ಹಾಕುತ್ತೇವೆ ಎಂದು ಡಿ.16ರ ರಾತ್ರಿ 11.30ರ ಸಮಯದಲ್ಲಿ ಸುಮಾರು 50-60 ಜನ ಸವರ್ಣೀಯರು ಮಾರಕಾಸ್ತ್ರಗಳಿಂದ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಾದ ದೊಣ್ಣೆ, ಕೊಡಲಿ, ಪಂಚ್‌, ಕಲ್ಲು ಮತ್ತು ಇಟ್ಟಿಗೆಗಳೊಂದಿಗೆ ದಲಿತ ಕಾಲೋನಿಗೆ ನುಗ್ಗಿ ದಾಂದಲೆ ನಡೆಸಿದ್ದಾರೆ. ಅಂಗವಿಕಲ ವ್ಯಕ್ತಿ ನಂಜಯ್ಯ ಎಂಬುವವರ ಮೇಲೆಯೂ ದಾಳಿ ನಡೆದಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಸಲಾಗಿದೆ” ಎಂದು ದಲಿತರು ದೂರು ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ದಲಿತ ಯುವಕರಾದ ದರ್ಶನ್, ಸುನಿಲ್‌, ಲೋಹಿತ್‌, ಅಭಿಷೇಕ್‌, ವಿನಯ್‌, ಸಂಜಯ್‌, ಚಲವರಾಜು, ಭಾಗ್ಯಮ್ಮ, ಕುಮಾರ, ರಂಜಮ್ಮ, ಶೋಭಾ, ನಂಜಯ್ಯ ಅವರು ನೀಡಿದ ದೂರಿನ ಅನ್ವಯ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಆದರೆ ಯಾರನ್ನೂ ಈವರೆಗೆ ಬಂಧಿಸಿಲ್ಲ ಎಂದು ತಿಳಿದುಬಂದಿದೆ.

ಆರೋಪಿಗಳು: ಮಂಜುನಾಥ್‌ (ತಂದೆ: ತಮ್ಮೇಗೌಡ), ಶ್ರೀಧರ (ನಾಗೇಗೌಡ), ಸಂತೋಷ್ (ಕೃಷ್ಣೇಗೌಡ), ಶ್ರೀನಿವಾಸ ಎಚ್‌.ಟಿ. (ತಿಮ್ಮೇಗೌಡ), ರಂಜಿತ್‌ (ನಾರಾಯಣಗೌಡ), ಸತೀಶ (ರಾಮೇಗೌಡ), ಸ್ವಾಮಿ (ಸಹದೇವ), ಮುತ್ತು (ನಾರಾಯಣ), ರಜಿತ್‌ ಅಲಿಯಾಸ್ ಮಿಲ್ಟ್ರಿ (ನಾರಾಯಣಗೌಡ), ಮಂಜುನಾಥ (ತಮ್ಮೇಗೌಡ), ಮೋಹನ್ (ನಂಜೇಗೌಡ), ಮಂಜ (ಜಿಂಕೆ ಚಲುವಯ್ಯ), ಹರೀಶ ಮಡಗಿನಕುಡಿ, ವೆಂಕಟೇಶ್‌ ಹರಿಹರಪುರ, ರಾಘು (ವೆಂಕಟೇಶ್‌), ರವಿ ಅಲಿಯಾಸ್ ಚಡ್ಡಿ (ಮಂಜೇಗೌಡ), ಮಂಜ (ಜವರೇಗೌಡ), ಸುರೇಶ (ಕರಿಯಪ್ಪ), ಗುಂಡೂ (ವೆಂಕಟಾಚಲ), ಬಾನುಪ್ರಕಾಶ್ (ಗಂಗಾಧರ್‌), ಶಿವಕುಮಾರ (ಶ್ರೀನಿವಾಸ್), ದರ್ಶನ್‌ ಕುರೇನಹಳ್ಳಿ, ದೀಪು (ಶಂಕರ್‌ ಅಲಿಯಾಸ್‌ ರೇಷ್ಮೇ ಇಲಾಖೆ), ಮೋಹನ (ಶ್ರೀನಿವಾಸ್‌), ಪ್ರದೀಪ್ (ವೆಂಕಟೇಶ್), ಜಯಂತ್‌ (ಡಯಟ್ ಜಯರಾಮ್‌), ಗೌತಮ್ಮ ಅಲಿಯಾಸ್ ಕುಳ್ಳಯ್ಯ.

ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರ್ಲಕ್ಷ್ಯ

ಮೈಸೂರಿನ ವಕೀಲರಾದ ಎ.ಆರ್‌.ಕಾಂತರಾಜು ಅವರು ಘಟನೆ ಕುರಿತು ಮಾತನಾಡಿದ್ದು, “21ನೇ ಶತಮಾನ ಕಳೆದರೂ ಸಂವಿಧಾನದ ಆಶಯಗಳು ಈಡೇರಲಿಲ್ಲ. ದಲಿತರನ್ನು ಪ್ರಾಣಿಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿದೆ. ಇಂದು ಹಸು ಕೊಲ್ಲಬಾರದೆಂದು, ಮೇಕೆ ಕೊಲ್ಲಬಾರದೆಂದು ಕಾನೂನು ತರುತ್ತಾರೆ. ಆದರೆ ಮನುಷ್ಯರನ್ನು ಹಸು ಮತ್ತು ಮೇಕೆಗಳಿಗಿಂತ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಪೊಲೀಸರು ದಲಿತರಿಗೆ ರಕ್ಷಣೆ ನೀಡಬೇಕಾದ ಸ್ಥಳೀಯ ಪೊಲೀಸರೇ ದಬ್ಬಾಳಿಕೆ ನಡೆಸಿದ್ದಾರೆ” ಎಂದು ದೂರಿದ್ದಾರೆ.

“ಹರಿಹರಪುರ ಗ್ರಾಮದಲ್ಲಿ ಹದಿನೇಳು ವರ್ಷಗಳಿಂದ ಹನುಮ ಜಯಂತಿ ನಡೆಯುತ್ತಿದೆ. ಹನುಮ ಜಯಂತಿ ನಡೆಸುವಾಗ ದಲಿತರಿಂದ ಯಾವುದೇ ವಂತಿಕೆಯನ್ನು ಪಡೆಯುವುದಿಲ್ಲ. ದಲಿತರಿಂದ ಹತ್ತು ರೂಪಾಯಿ ವಂತಿಕೆ ಪಡೆದರೂ ನಾಳೆ ದಲಿತರನ್ನು ದೇವಸ್ಥಾನಕ್ಕೆ ಬಿಟ್ಟುಕೊಳ್ಳಬೇಕಾಗುತ್ತದೆ ಎಂಬುದು ಇದಕ್ಕೆ ಕಾರಣ. ಇದುವರೆಗೂ ದಲಿತರು ಕದ್ದು ಮುಚ್ಚಿ ದೇವರಿಗೆ ನಮಸ್ಕಾರ ಮಾಡುತ್ತಿದ್ದರು. ಸವರ್ಣೀಯರನ್ನು ಎದುರು ಹಾಕಿಕೊಳ್ಳುವ ಶಕ್ತಿ ಇರಲಿಲ್ಲ. ಇದನ್ನು ಪ್ರಶ್ನಿಸಿ ದಲಿತರು ಈ ಬಾರಿ ದೇವಾಲಯ ಪ್ರವೇಶಿಸಿದ್ದರು. ಅದನ್ನು ನೋಡಿದ ಮೇಲ್ವರ್ಗದ ಜನ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ” ಎಂದು ತಿಳಿಸಿದ್ದಾರೆ.

ಕುಮಾರ್‌ ಎಂಬ ಯುವಕ ಈ ಘಟನೆಯನ್ನು ಸೆರೆ ಹಿಡಿಯಲು ಯತ್ನಿಸಿದಾಗ ಆತನ ಮೊಬೈಲ್‌ ಕೂಡ ಕಸಿದುಕೊಂಡು 20-30 ಜನ ಮನಬಂದಂತೆ ಥಳಿಸಿದ್ದಾರೆ. ಇಷ್ಟೆಲ್ಲ ಘಟನೆಯಾದ ಬಳಿಕ ಅಂದು ರಾತ್ರಿ 12.30ಕ್ಕೆ ಕೆ.ಆರ್‌.ಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್‌ ನಿರಂಜನ್‌ ಅವರನ್ನು ಭೇಟಿ ಮಾಡಿ ದೂರು ನೀಡಲು ಹೋಗುತ್ತಾರೆ. ಜನರಿಗೆ ರಕ್ಷಣೆ ಕೊಡಬೇಕಾದ ಇನ್‌ಸ್ಪೆಕ್ಟರ್‌ ನಿರಂಜನ್‌, “ದಲಿತರದ್ದು ಅತಿಯಾಯಿತು, ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಳ್ಳಲು ಆಗಲ್ಲ. ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಂಡು ಕೂತರೆ ದಿನವೆಲ್ಲ ತೆಗೆದುಕೊಳ್ಳಬೇಕಾಗುತ್ತದೆ. ನಾಳೆ ಬನ್ನಿ” ಎಂದು ಹೇಳುತ್ತಾರೆ. ಇದಾದ ಮೇಲೆ ಒಂದು ಗಂಟೆಯಲ್ಲೇ ಗ್ರಾಮಕ್ಕೆ ಪೊಲೀಸರನ್ನು ಕಳಿಸಿ, ದಲಿತರಿಗೆಯೇ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ದಲಿತರಿಗೆ ಭಯಭೀತಿ ಹುಟ್ಟಿಸಿದ್ದಾರೆ. ಮಾರನೇ ದಿನ ದೂರು ನೀಡಲು ಹೋದಾಗಲೂ ದೂರು ಸ್ವೀಕರಿಸಲಿಲ್ಲ. ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಲು ಹೋಗಿದ್ದೆವು. ಎಸ್‌ಪಿಯವರು ನಮ್ಮಿಂದ ವಿವರವಾದ ದೂರು ಸ್ವೀಕರಿಸಿದರು. “ಯಾರು ದೂರು ಸ್ವೀಕರಿಸಲ್ಲ ನೋಡ್ತೀನಿ. ಗ್ರಾಮದಲ್ಲಿ ಅಹಿತರಕ ಘಟನೆ ನಡೆಯದಂತೆ ಕ್ರಮ ವಹಿಸುತ್ತೇನೆ” ಎಂದು ತಿಳಿಸಿದರು. ಐಪಿಎಸ್‌‌ ಅಧಿಕಾರಿಗಳು ಸಾಂತ್ವನ ಹೇಳುತ್ತಾರೆ. ಆದರೆ ಸ್ಥಳೀಯವಾಗಿ ಇರುವಂತಹ ಜಾತಿವಾದಿ ಮನಸ್ಥಿತಿಯ ಅಧಿಕಾರಿಗಳೂ ದಲಿತರಿಗೆ ಯಾಕೆ ರಕ್ಷಣೆ ನೀಡುತ್ತಿಲ್ಲ. ಇದೇನಾ ಭಾರತದ ಕಾನೂನು? ಇದೇನಾ ದಲಿತರಿಗೆ ನೀಡುವ ರಕ್ಷಣೆ? ಎಂದು ಪ್ರಶ್ನಿಸಿದ್ದಾರೆ ಕಾಂತರಾಜು.


ಇದನ್ನೂ ಓದಿರಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಇಂತಹ ಕೀಳು ಮನಸ್ಥಿತಿ ಇರುವ ಜನರು ನೀವು, ನಾಚಿಕೆಯಾಗಬೇಕು ನಿಮಗೆ ನಾಗರೀಕ ಸಮಾಜದಲ್ಲಿ ಬದುಕಲು ಯೋಗ್ಯತೆ ಇಲ್ಲದ ನೀವು ಹುಚಿನಾಯಿಗಳಿಗಿಂತ ಕೀಳು ನೀವು. ಮನುಷ್ಯರನ್ನು ಪ್ರೀತಿಸಿ ಗೌರವಿಸಿ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...