Homeಕರ್ನಾಟಕಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

- Advertisement -
- Advertisement -

ಹನುಮ ಜಯಂತಿ ಪ್ರಯುಕ್ತ ದೇವಾಲಯ ಪ್ರವೇಶಿಸಿದ ದಲಿತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರದಲ್ಲಿ ನಡೆದಿದೆ.

ಡಿ.16ರಂದು ಘಟನೆ ನಡೆದಿದ್ದು, ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರಂಜನ್‌ ದೂರು ಸ್ವೀಕರಿಸಲು ನಿರಾಕರಿಸಿದ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರಲ್ಲಿ ದಲಿತರು ನೋವು ತೋಡಿಕೊಂಡಿದ್ದು, 27 ಮಂದಿಯ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾಗಿದೆ.

“ನಿಮ್ಮಿಂದ ದೇವಸ್ಥಾನ ಮಲಿನಗೊಂಡಿದೆ. ನಿಮ್ಮಂಥ ಜನರನ್ನು ಭೂಮಿ ಮೇಲೆ ಇರದಂತೆ ಸುಟ್ಟು ಹಾಕುತ್ತೇವೆ ಎಂದು ಡಿ.16ರ ರಾತ್ರಿ 11.30ರ ಸಮಯದಲ್ಲಿ ಸುಮಾರು 50-60 ಜನ ಸವರ್ಣೀಯರು ಮಾರಕಾಸ್ತ್ರಗಳಿಂದ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಾದ ದೊಣ್ಣೆ, ಕೊಡಲಿ, ಪಂಚ್‌, ಕಲ್ಲು ಮತ್ತು ಇಟ್ಟಿಗೆಗಳೊಂದಿಗೆ ದಲಿತ ಕಾಲೋನಿಗೆ ನುಗ್ಗಿ ದಾಂದಲೆ ನಡೆಸಿದ್ದಾರೆ. ಅಂಗವಿಕಲ ವ್ಯಕ್ತಿ ನಂಜಯ್ಯ ಎಂಬುವವರ ಮೇಲೆಯೂ ದಾಳಿ ನಡೆದಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಸಲಾಗಿದೆ” ಎಂದು ದಲಿತರು ದೂರು ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ದಲಿತ ಯುವಕರಾದ ದರ್ಶನ್, ಸುನಿಲ್‌, ಲೋಹಿತ್‌, ಅಭಿಷೇಕ್‌, ವಿನಯ್‌, ಸಂಜಯ್‌, ಚಲವರಾಜು, ಭಾಗ್ಯಮ್ಮ, ಕುಮಾರ, ರಂಜಮ್ಮ, ಶೋಭಾ, ನಂಜಯ್ಯ ಅವರು ನೀಡಿದ ದೂರಿನ ಅನ್ವಯ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಆದರೆ ಯಾರನ್ನೂ ಈವರೆಗೆ ಬಂಧಿಸಿಲ್ಲ ಎಂದು ತಿಳಿದುಬಂದಿದೆ.

ಆರೋಪಿಗಳು: ಮಂಜುನಾಥ್‌ (ತಂದೆ: ತಮ್ಮೇಗೌಡ), ಶ್ರೀಧರ (ನಾಗೇಗೌಡ), ಸಂತೋಷ್ (ಕೃಷ್ಣೇಗೌಡ), ಶ್ರೀನಿವಾಸ ಎಚ್‌.ಟಿ. (ತಿಮ್ಮೇಗೌಡ), ರಂಜಿತ್‌ (ನಾರಾಯಣಗೌಡ), ಸತೀಶ (ರಾಮೇಗೌಡ), ಸ್ವಾಮಿ (ಸಹದೇವ), ಮುತ್ತು (ನಾರಾಯಣ), ರಜಿತ್‌ ಅಲಿಯಾಸ್ ಮಿಲ್ಟ್ರಿ (ನಾರಾಯಣಗೌಡ), ಮಂಜುನಾಥ (ತಮ್ಮೇಗೌಡ), ಮೋಹನ್ (ನಂಜೇಗೌಡ), ಮಂಜ (ಜಿಂಕೆ ಚಲುವಯ್ಯ), ಹರೀಶ ಮಡಗಿನಕುಡಿ, ವೆಂಕಟೇಶ್‌ ಹರಿಹರಪುರ, ರಾಘು (ವೆಂಕಟೇಶ್‌), ರವಿ ಅಲಿಯಾಸ್ ಚಡ್ಡಿ (ಮಂಜೇಗೌಡ), ಮಂಜ (ಜವರೇಗೌಡ), ಸುರೇಶ (ಕರಿಯಪ್ಪ), ಗುಂಡೂ (ವೆಂಕಟಾಚಲ), ಬಾನುಪ್ರಕಾಶ್ (ಗಂಗಾಧರ್‌), ಶಿವಕುಮಾರ (ಶ್ರೀನಿವಾಸ್), ದರ್ಶನ್‌ ಕುರೇನಹಳ್ಳಿ, ದೀಪು (ಶಂಕರ್‌ ಅಲಿಯಾಸ್‌ ರೇಷ್ಮೇ ಇಲಾಖೆ), ಮೋಹನ (ಶ್ರೀನಿವಾಸ್‌), ಪ್ರದೀಪ್ (ವೆಂಕಟೇಶ್), ಜಯಂತ್‌ (ಡಯಟ್ ಜಯರಾಮ್‌), ಗೌತಮ್ಮ ಅಲಿಯಾಸ್ ಕುಳ್ಳಯ್ಯ.

ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರ್ಲಕ್ಷ್ಯ

ಮೈಸೂರಿನ ವಕೀಲರಾದ ಎ.ಆರ್‌.ಕಾಂತರಾಜು ಅವರು ಘಟನೆ ಕುರಿತು ಮಾತನಾಡಿದ್ದು, “21ನೇ ಶತಮಾನ ಕಳೆದರೂ ಸಂವಿಧಾನದ ಆಶಯಗಳು ಈಡೇರಲಿಲ್ಲ. ದಲಿತರನ್ನು ಪ್ರಾಣಿಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿದೆ. ಇಂದು ಹಸು ಕೊಲ್ಲಬಾರದೆಂದು, ಮೇಕೆ ಕೊಲ್ಲಬಾರದೆಂದು ಕಾನೂನು ತರುತ್ತಾರೆ. ಆದರೆ ಮನುಷ್ಯರನ್ನು ಹಸು ಮತ್ತು ಮೇಕೆಗಳಿಗಿಂತ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಪೊಲೀಸರು ದಲಿತರಿಗೆ ರಕ್ಷಣೆ ನೀಡಬೇಕಾದ ಸ್ಥಳೀಯ ಪೊಲೀಸರೇ ದಬ್ಬಾಳಿಕೆ ನಡೆಸಿದ್ದಾರೆ” ಎಂದು ದೂರಿದ್ದಾರೆ.

“ಹರಿಹರಪುರ ಗ್ರಾಮದಲ್ಲಿ ಹದಿನೇಳು ವರ್ಷಗಳಿಂದ ಹನುಮ ಜಯಂತಿ ನಡೆಯುತ್ತಿದೆ. ಹನುಮ ಜಯಂತಿ ನಡೆಸುವಾಗ ದಲಿತರಿಂದ ಯಾವುದೇ ವಂತಿಕೆಯನ್ನು ಪಡೆಯುವುದಿಲ್ಲ. ದಲಿತರಿಂದ ಹತ್ತು ರೂಪಾಯಿ ವಂತಿಕೆ ಪಡೆದರೂ ನಾಳೆ ದಲಿತರನ್ನು ದೇವಸ್ಥಾನಕ್ಕೆ ಬಿಟ್ಟುಕೊಳ್ಳಬೇಕಾಗುತ್ತದೆ ಎಂಬುದು ಇದಕ್ಕೆ ಕಾರಣ. ಇದುವರೆಗೂ ದಲಿತರು ಕದ್ದು ಮುಚ್ಚಿ ದೇವರಿಗೆ ನಮಸ್ಕಾರ ಮಾಡುತ್ತಿದ್ದರು. ಸವರ್ಣೀಯರನ್ನು ಎದುರು ಹಾಕಿಕೊಳ್ಳುವ ಶಕ್ತಿ ಇರಲಿಲ್ಲ. ಇದನ್ನು ಪ್ರಶ್ನಿಸಿ ದಲಿತರು ಈ ಬಾರಿ ದೇವಾಲಯ ಪ್ರವೇಶಿಸಿದ್ದರು. ಅದನ್ನು ನೋಡಿದ ಮೇಲ್ವರ್ಗದ ಜನ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ” ಎಂದು ತಿಳಿಸಿದ್ದಾರೆ.

ಕುಮಾರ್‌ ಎಂಬ ಯುವಕ ಈ ಘಟನೆಯನ್ನು ಸೆರೆ ಹಿಡಿಯಲು ಯತ್ನಿಸಿದಾಗ ಆತನ ಮೊಬೈಲ್‌ ಕೂಡ ಕಸಿದುಕೊಂಡು 20-30 ಜನ ಮನಬಂದಂತೆ ಥಳಿಸಿದ್ದಾರೆ. ಇಷ್ಟೆಲ್ಲ ಘಟನೆಯಾದ ಬಳಿಕ ಅಂದು ರಾತ್ರಿ 12.30ಕ್ಕೆ ಕೆ.ಆರ್‌.ಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್‌ ನಿರಂಜನ್‌ ಅವರನ್ನು ಭೇಟಿ ಮಾಡಿ ದೂರು ನೀಡಲು ಹೋಗುತ್ತಾರೆ. ಜನರಿಗೆ ರಕ್ಷಣೆ ಕೊಡಬೇಕಾದ ಇನ್‌ಸ್ಪೆಕ್ಟರ್‌ ನಿರಂಜನ್‌, “ದಲಿತರದ್ದು ಅತಿಯಾಯಿತು, ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಳ್ಳಲು ಆಗಲ್ಲ. ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಂಡು ಕೂತರೆ ದಿನವೆಲ್ಲ ತೆಗೆದುಕೊಳ್ಳಬೇಕಾಗುತ್ತದೆ. ನಾಳೆ ಬನ್ನಿ” ಎಂದು ಹೇಳುತ್ತಾರೆ. ಇದಾದ ಮೇಲೆ ಒಂದು ಗಂಟೆಯಲ್ಲೇ ಗ್ರಾಮಕ್ಕೆ ಪೊಲೀಸರನ್ನು ಕಳಿಸಿ, ದಲಿತರಿಗೆಯೇ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ದಲಿತರಿಗೆ ಭಯಭೀತಿ ಹುಟ್ಟಿಸಿದ್ದಾರೆ. ಮಾರನೇ ದಿನ ದೂರು ನೀಡಲು ಹೋದಾಗಲೂ ದೂರು ಸ್ವೀಕರಿಸಲಿಲ್ಲ. ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಲು ಹೋಗಿದ್ದೆವು. ಎಸ್‌ಪಿಯವರು ನಮ್ಮಿಂದ ವಿವರವಾದ ದೂರು ಸ್ವೀಕರಿಸಿದರು. “ಯಾರು ದೂರು ಸ್ವೀಕರಿಸಲ್ಲ ನೋಡ್ತೀನಿ. ಗ್ರಾಮದಲ್ಲಿ ಅಹಿತರಕ ಘಟನೆ ನಡೆಯದಂತೆ ಕ್ರಮ ವಹಿಸುತ್ತೇನೆ” ಎಂದು ತಿಳಿಸಿದರು. ಐಪಿಎಸ್‌‌ ಅಧಿಕಾರಿಗಳು ಸಾಂತ್ವನ ಹೇಳುತ್ತಾರೆ. ಆದರೆ ಸ್ಥಳೀಯವಾಗಿ ಇರುವಂತಹ ಜಾತಿವಾದಿ ಮನಸ್ಥಿತಿಯ ಅಧಿಕಾರಿಗಳೂ ದಲಿತರಿಗೆ ಯಾಕೆ ರಕ್ಷಣೆ ನೀಡುತ್ತಿಲ್ಲ. ಇದೇನಾ ಭಾರತದ ಕಾನೂನು? ಇದೇನಾ ದಲಿತರಿಗೆ ನೀಡುವ ರಕ್ಷಣೆ? ಎಂದು ಪ್ರಶ್ನಿಸಿದ್ದಾರೆ ಕಾಂತರಾಜು.


ಇದನ್ನೂ ಓದಿರಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಇಂತಹ ಕೀಳು ಮನಸ್ಥಿತಿ ಇರುವ ಜನರು ನೀವು, ನಾಚಿಕೆಯಾಗಬೇಕು ನಿಮಗೆ ನಾಗರೀಕ ಸಮಾಜದಲ್ಲಿ ಬದುಕಲು ಯೋಗ್ಯತೆ ಇಲ್ಲದ ನೀವು ಹುಚಿನಾಯಿಗಳಿಗಿಂತ ಕೀಳು ನೀವು. ಮನುಷ್ಯರನ್ನು ಪ್ರೀತಿಸಿ ಗೌರವಿಸಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...