Homeಕರ್ನಾಟಕಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

- Advertisement -
- Advertisement -

ಹನುಮ ಜಯಂತಿ ಪ್ರಯುಕ್ತ ದೇವಾಲಯ ಪ್ರವೇಶಿಸಿದ ದಲಿತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರದಲ್ಲಿ ನಡೆದಿದೆ.

ಡಿ.16ರಂದು ಘಟನೆ ನಡೆದಿದ್ದು, ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರಂಜನ್‌ ದೂರು ಸ್ವೀಕರಿಸಲು ನಿರಾಕರಿಸಿದ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರಲ್ಲಿ ದಲಿತರು ನೋವು ತೋಡಿಕೊಂಡಿದ್ದು, 27 ಮಂದಿಯ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾಗಿದೆ.

“ನಿಮ್ಮಿಂದ ದೇವಸ್ಥಾನ ಮಲಿನಗೊಂಡಿದೆ. ನಿಮ್ಮಂಥ ಜನರನ್ನು ಭೂಮಿ ಮೇಲೆ ಇರದಂತೆ ಸುಟ್ಟು ಹಾಕುತ್ತೇವೆ ಎಂದು ಡಿ.16ರ ರಾತ್ರಿ 11.30ರ ಸಮಯದಲ್ಲಿ ಸುಮಾರು 50-60 ಜನ ಸವರ್ಣೀಯರು ಮಾರಕಾಸ್ತ್ರಗಳಿಂದ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಾದ ದೊಣ್ಣೆ, ಕೊಡಲಿ, ಪಂಚ್‌, ಕಲ್ಲು ಮತ್ತು ಇಟ್ಟಿಗೆಗಳೊಂದಿಗೆ ದಲಿತ ಕಾಲೋನಿಗೆ ನುಗ್ಗಿ ದಾಂದಲೆ ನಡೆಸಿದ್ದಾರೆ. ಅಂಗವಿಕಲ ವ್ಯಕ್ತಿ ನಂಜಯ್ಯ ಎಂಬುವವರ ಮೇಲೆಯೂ ದಾಳಿ ನಡೆದಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಸಲಾಗಿದೆ” ಎಂದು ದಲಿತರು ದೂರು ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ದಲಿತ ಯುವಕರಾದ ದರ್ಶನ್, ಸುನಿಲ್‌, ಲೋಹಿತ್‌, ಅಭಿಷೇಕ್‌, ವಿನಯ್‌, ಸಂಜಯ್‌, ಚಲವರಾಜು, ಭಾಗ್ಯಮ್ಮ, ಕುಮಾರ, ರಂಜಮ್ಮ, ಶೋಭಾ, ನಂಜಯ್ಯ ಅವರು ನೀಡಿದ ದೂರಿನ ಅನ್ವಯ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಆದರೆ ಯಾರನ್ನೂ ಈವರೆಗೆ ಬಂಧಿಸಿಲ್ಲ ಎಂದು ತಿಳಿದುಬಂದಿದೆ.

ಆರೋಪಿಗಳು: ಮಂಜುನಾಥ್‌ (ತಂದೆ: ತಮ್ಮೇಗೌಡ), ಶ್ರೀಧರ (ನಾಗೇಗೌಡ), ಸಂತೋಷ್ (ಕೃಷ್ಣೇಗೌಡ), ಶ್ರೀನಿವಾಸ ಎಚ್‌.ಟಿ. (ತಿಮ್ಮೇಗೌಡ), ರಂಜಿತ್‌ (ನಾರಾಯಣಗೌಡ), ಸತೀಶ (ರಾಮೇಗೌಡ), ಸ್ವಾಮಿ (ಸಹದೇವ), ಮುತ್ತು (ನಾರಾಯಣ), ರಜಿತ್‌ ಅಲಿಯಾಸ್ ಮಿಲ್ಟ್ರಿ (ನಾರಾಯಣಗೌಡ), ಮಂಜುನಾಥ (ತಮ್ಮೇಗೌಡ), ಮೋಹನ್ (ನಂಜೇಗೌಡ), ಮಂಜ (ಜಿಂಕೆ ಚಲುವಯ್ಯ), ಹರೀಶ ಮಡಗಿನಕುಡಿ, ವೆಂಕಟೇಶ್‌ ಹರಿಹರಪುರ, ರಾಘು (ವೆಂಕಟೇಶ್‌), ರವಿ ಅಲಿಯಾಸ್ ಚಡ್ಡಿ (ಮಂಜೇಗೌಡ), ಮಂಜ (ಜವರೇಗೌಡ), ಸುರೇಶ (ಕರಿಯಪ್ಪ), ಗುಂಡೂ (ವೆಂಕಟಾಚಲ), ಬಾನುಪ್ರಕಾಶ್ (ಗಂಗಾಧರ್‌), ಶಿವಕುಮಾರ (ಶ್ರೀನಿವಾಸ್), ದರ್ಶನ್‌ ಕುರೇನಹಳ್ಳಿ, ದೀಪು (ಶಂಕರ್‌ ಅಲಿಯಾಸ್‌ ರೇಷ್ಮೇ ಇಲಾಖೆ), ಮೋಹನ (ಶ್ರೀನಿವಾಸ್‌), ಪ್ರದೀಪ್ (ವೆಂಕಟೇಶ್), ಜಯಂತ್‌ (ಡಯಟ್ ಜಯರಾಮ್‌), ಗೌತಮ್ಮ ಅಲಿಯಾಸ್ ಕುಳ್ಳಯ್ಯ.

ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರ್ಲಕ್ಷ್ಯ

ಮೈಸೂರಿನ ವಕೀಲರಾದ ಎ.ಆರ್‌.ಕಾಂತರಾಜು ಅವರು ಘಟನೆ ಕುರಿತು ಮಾತನಾಡಿದ್ದು, “21ನೇ ಶತಮಾನ ಕಳೆದರೂ ಸಂವಿಧಾನದ ಆಶಯಗಳು ಈಡೇರಲಿಲ್ಲ. ದಲಿತರನ್ನು ಪ್ರಾಣಿಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿದೆ. ಇಂದು ಹಸು ಕೊಲ್ಲಬಾರದೆಂದು, ಮೇಕೆ ಕೊಲ್ಲಬಾರದೆಂದು ಕಾನೂನು ತರುತ್ತಾರೆ. ಆದರೆ ಮನುಷ್ಯರನ್ನು ಹಸು ಮತ್ತು ಮೇಕೆಗಳಿಗಿಂತ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಪೊಲೀಸರು ದಲಿತರಿಗೆ ರಕ್ಷಣೆ ನೀಡಬೇಕಾದ ಸ್ಥಳೀಯ ಪೊಲೀಸರೇ ದಬ್ಬಾಳಿಕೆ ನಡೆಸಿದ್ದಾರೆ” ಎಂದು ದೂರಿದ್ದಾರೆ.

“ಹರಿಹರಪುರ ಗ್ರಾಮದಲ್ಲಿ ಹದಿನೇಳು ವರ್ಷಗಳಿಂದ ಹನುಮ ಜಯಂತಿ ನಡೆಯುತ್ತಿದೆ. ಹನುಮ ಜಯಂತಿ ನಡೆಸುವಾಗ ದಲಿತರಿಂದ ಯಾವುದೇ ವಂತಿಕೆಯನ್ನು ಪಡೆಯುವುದಿಲ್ಲ. ದಲಿತರಿಂದ ಹತ್ತು ರೂಪಾಯಿ ವಂತಿಕೆ ಪಡೆದರೂ ನಾಳೆ ದಲಿತರನ್ನು ದೇವಸ್ಥಾನಕ್ಕೆ ಬಿಟ್ಟುಕೊಳ್ಳಬೇಕಾಗುತ್ತದೆ ಎಂಬುದು ಇದಕ್ಕೆ ಕಾರಣ. ಇದುವರೆಗೂ ದಲಿತರು ಕದ್ದು ಮುಚ್ಚಿ ದೇವರಿಗೆ ನಮಸ್ಕಾರ ಮಾಡುತ್ತಿದ್ದರು. ಸವರ್ಣೀಯರನ್ನು ಎದುರು ಹಾಕಿಕೊಳ್ಳುವ ಶಕ್ತಿ ಇರಲಿಲ್ಲ. ಇದನ್ನು ಪ್ರಶ್ನಿಸಿ ದಲಿತರು ಈ ಬಾರಿ ದೇವಾಲಯ ಪ್ರವೇಶಿಸಿದ್ದರು. ಅದನ್ನು ನೋಡಿದ ಮೇಲ್ವರ್ಗದ ಜನ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ” ಎಂದು ತಿಳಿಸಿದ್ದಾರೆ.

ಕುಮಾರ್‌ ಎಂಬ ಯುವಕ ಈ ಘಟನೆಯನ್ನು ಸೆರೆ ಹಿಡಿಯಲು ಯತ್ನಿಸಿದಾಗ ಆತನ ಮೊಬೈಲ್‌ ಕೂಡ ಕಸಿದುಕೊಂಡು 20-30 ಜನ ಮನಬಂದಂತೆ ಥಳಿಸಿದ್ದಾರೆ. ಇಷ್ಟೆಲ್ಲ ಘಟನೆಯಾದ ಬಳಿಕ ಅಂದು ರಾತ್ರಿ 12.30ಕ್ಕೆ ಕೆ.ಆರ್‌.ಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್‌ ನಿರಂಜನ್‌ ಅವರನ್ನು ಭೇಟಿ ಮಾಡಿ ದೂರು ನೀಡಲು ಹೋಗುತ್ತಾರೆ. ಜನರಿಗೆ ರಕ್ಷಣೆ ಕೊಡಬೇಕಾದ ಇನ್‌ಸ್ಪೆಕ್ಟರ್‌ ನಿರಂಜನ್‌, “ದಲಿತರದ್ದು ಅತಿಯಾಯಿತು, ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಳ್ಳಲು ಆಗಲ್ಲ. ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಂಡು ಕೂತರೆ ದಿನವೆಲ್ಲ ತೆಗೆದುಕೊಳ್ಳಬೇಕಾಗುತ್ತದೆ. ನಾಳೆ ಬನ್ನಿ” ಎಂದು ಹೇಳುತ್ತಾರೆ. ಇದಾದ ಮೇಲೆ ಒಂದು ಗಂಟೆಯಲ್ಲೇ ಗ್ರಾಮಕ್ಕೆ ಪೊಲೀಸರನ್ನು ಕಳಿಸಿ, ದಲಿತರಿಗೆಯೇ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ದಲಿತರಿಗೆ ಭಯಭೀತಿ ಹುಟ್ಟಿಸಿದ್ದಾರೆ. ಮಾರನೇ ದಿನ ದೂರು ನೀಡಲು ಹೋದಾಗಲೂ ದೂರು ಸ್ವೀಕರಿಸಲಿಲ್ಲ. ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಲು ಹೋಗಿದ್ದೆವು. ಎಸ್‌ಪಿಯವರು ನಮ್ಮಿಂದ ವಿವರವಾದ ದೂರು ಸ್ವೀಕರಿಸಿದರು. “ಯಾರು ದೂರು ಸ್ವೀಕರಿಸಲ್ಲ ನೋಡ್ತೀನಿ. ಗ್ರಾಮದಲ್ಲಿ ಅಹಿತರಕ ಘಟನೆ ನಡೆಯದಂತೆ ಕ್ರಮ ವಹಿಸುತ್ತೇನೆ” ಎಂದು ತಿಳಿಸಿದರು. ಐಪಿಎಸ್‌‌ ಅಧಿಕಾರಿಗಳು ಸಾಂತ್ವನ ಹೇಳುತ್ತಾರೆ. ಆದರೆ ಸ್ಥಳೀಯವಾಗಿ ಇರುವಂತಹ ಜಾತಿವಾದಿ ಮನಸ್ಥಿತಿಯ ಅಧಿಕಾರಿಗಳೂ ದಲಿತರಿಗೆ ಯಾಕೆ ರಕ್ಷಣೆ ನೀಡುತ್ತಿಲ್ಲ. ಇದೇನಾ ಭಾರತದ ಕಾನೂನು? ಇದೇನಾ ದಲಿತರಿಗೆ ನೀಡುವ ರಕ್ಷಣೆ? ಎಂದು ಪ್ರಶ್ನಿಸಿದ್ದಾರೆ ಕಾಂತರಾಜು.


ಇದನ್ನೂ ಓದಿರಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಇಂತಹ ಕೀಳು ಮನಸ್ಥಿತಿ ಇರುವ ಜನರು ನೀವು, ನಾಚಿಕೆಯಾಗಬೇಕು ನಿಮಗೆ ನಾಗರೀಕ ಸಮಾಜದಲ್ಲಿ ಬದುಕಲು ಯೋಗ್ಯತೆ ಇಲ್ಲದ ನೀವು ಹುಚಿನಾಯಿಗಳಿಗಿಂತ ಕೀಳು ನೀವು. ಮನುಷ್ಯರನ್ನು ಪ್ರೀತಿಸಿ ಗೌರವಿಸಿ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...