Homeಕರ್ನಾಟಕಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

- Advertisement -
- Advertisement -

ಹನುಮ ಜಯಂತಿ ಪ್ರಯುಕ್ತ ದೇವಾಲಯ ಪ್ರವೇಶಿಸಿದ ದಲಿತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರದಲ್ಲಿ ನಡೆದಿದೆ.

ಡಿ.16ರಂದು ಘಟನೆ ನಡೆದಿದ್ದು, ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರಂಜನ್‌ ದೂರು ಸ್ವೀಕರಿಸಲು ನಿರಾಕರಿಸಿದ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರಲ್ಲಿ ದಲಿತರು ನೋವು ತೋಡಿಕೊಂಡಿದ್ದು, 27 ಮಂದಿಯ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾಗಿದೆ.

“ನಿಮ್ಮಿಂದ ದೇವಸ್ಥಾನ ಮಲಿನಗೊಂಡಿದೆ. ನಿಮ್ಮಂಥ ಜನರನ್ನು ಭೂಮಿ ಮೇಲೆ ಇರದಂತೆ ಸುಟ್ಟು ಹಾಕುತ್ತೇವೆ ಎಂದು ಡಿ.16ರ ರಾತ್ರಿ 11.30ರ ಸಮಯದಲ್ಲಿ ಸುಮಾರು 50-60 ಜನ ಸವರ್ಣೀಯರು ಮಾರಕಾಸ್ತ್ರಗಳಿಂದ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಾದ ದೊಣ್ಣೆ, ಕೊಡಲಿ, ಪಂಚ್‌, ಕಲ್ಲು ಮತ್ತು ಇಟ್ಟಿಗೆಗಳೊಂದಿಗೆ ದಲಿತ ಕಾಲೋನಿಗೆ ನುಗ್ಗಿ ದಾಂದಲೆ ನಡೆಸಿದ್ದಾರೆ. ಅಂಗವಿಕಲ ವ್ಯಕ್ತಿ ನಂಜಯ್ಯ ಎಂಬುವವರ ಮೇಲೆಯೂ ದಾಳಿ ನಡೆದಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಸಲಾಗಿದೆ” ಎಂದು ದಲಿತರು ದೂರು ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ದಲಿತ ಯುವಕರಾದ ದರ್ಶನ್, ಸುನಿಲ್‌, ಲೋಹಿತ್‌, ಅಭಿಷೇಕ್‌, ವಿನಯ್‌, ಸಂಜಯ್‌, ಚಲವರಾಜು, ಭಾಗ್ಯಮ್ಮ, ಕುಮಾರ, ರಂಜಮ್ಮ, ಶೋಭಾ, ನಂಜಯ್ಯ ಅವರು ನೀಡಿದ ದೂರಿನ ಅನ್ವಯ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಆದರೆ ಯಾರನ್ನೂ ಈವರೆಗೆ ಬಂಧಿಸಿಲ್ಲ ಎಂದು ತಿಳಿದುಬಂದಿದೆ.

ಆರೋಪಿಗಳು: ಮಂಜುನಾಥ್‌ (ತಂದೆ: ತಮ್ಮೇಗೌಡ), ಶ್ರೀಧರ (ನಾಗೇಗೌಡ), ಸಂತೋಷ್ (ಕೃಷ್ಣೇಗೌಡ), ಶ್ರೀನಿವಾಸ ಎಚ್‌.ಟಿ. (ತಿಮ್ಮೇಗೌಡ), ರಂಜಿತ್‌ (ನಾರಾಯಣಗೌಡ), ಸತೀಶ (ರಾಮೇಗೌಡ), ಸ್ವಾಮಿ (ಸಹದೇವ), ಮುತ್ತು (ನಾರಾಯಣ), ರಜಿತ್‌ ಅಲಿಯಾಸ್ ಮಿಲ್ಟ್ರಿ (ನಾರಾಯಣಗೌಡ), ಮಂಜುನಾಥ (ತಮ್ಮೇಗೌಡ), ಮೋಹನ್ (ನಂಜೇಗೌಡ), ಮಂಜ (ಜಿಂಕೆ ಚಲುವಯ್ಯ), ಹರೀಶ ಮಡಗಿನಕುಡಿ, ವೆಂಕಟೇಶ್‌ ಹರಿಹರಪುರ, ರಾಘು (ವೆಂಕಟೇಶ್‌), ರವಿ ಅಲಿಯಾಸ್ ಚಡ್ಡಿ (ಮಂಜೇಗೌಡ), ಮಂಜ (ಜವರೇಗೌಡ), ಸುರೇಶ (ಕರಿಯಪ್ಪ), ಗುಂಡೂ (ವೆಂಕಟಾಚಲ), ಬಾನುಪ್ರಕಾಶ್ (ಗಂಗಾಧರ್‌), ಶಿವಕುಮಾರ (ಶ್ರೀನಿವಾಸ್), ದರ್ಶನ್‌ ಕುರೇನಹಳ್ಳಿ, ದೀಪು (ಶಂಕರ್‌ ಅಲಿಯಾಸ್‌ ರೇಷ್ಮೇ ಇಲಾಖೆ), ಮೋಹನ (ಶ್ರೀನಿವಾಸ್‌), ಪ್ರದೀಪ್ (ವೆಂಕಟೇಶ್), ಜಯಂತ್‌ (ಡಯಟ್ ಜಯರಾಮ್‌), ಗೌತಮ್ಮ ಅಲಿಯಾಸ್ ಕುಳ್ಳಯ್ಯ.

ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರ್ಲಕ್ಷ್ಯ

ಮೈಸೂರಿನ ವಕೀಲರಾದ ಎ.ಆರ್‌.ಕಾಂತರಾಜು ಅವರು ಘಟನೆ ಕುರಿತು ಮಾತನಾಡಿದ್ದು, “21ನೇ ಶತಮಾನ ಕಳೆದರೂ ಸಂವಿಧಾನದ ಆಶಯಗಳು ಈಡೇರಲಿಲ್ಲ. ದಲಿತರನ್ನು ಪ್ರಾಣಿಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿದೆ. ಇಂದು ಹಸು ಕೊಲ್ಲಬಾರದೆಂದು, ಮೇಕೆ ಕೊಲ್ಲಬಾರದೆಂದು ಕಾನೂನು ತರುತ್ತಾರೆ. ಆದರೆ ಮನುಷ್ಯರನ್ನು ಹಸು ಮತ್ತು ಮೇಕೆಗಳಿಗಿಂತ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಪೊಲೀಸರು ದಲಿತರಿಗೆ ರಕ್ಷಣೆ ನೀಡಬೇಕಾದ ಸ್ಥಳೀಯ ಪೊಲೀಸರೇ ದಬ್ಬಾಳಿಕೆ ನಡೆಸಿದ್ದಾರೆ” ಎಂದು ದೂರಿದ್ದಾರೆ.

“ಹರಿಹರಪುರ ಗ್ರಾಮದಲ್ಲಿ ಹದಿನೇಳು ವರ್ಷಗಳಿಂದ ಹನುಮ ಜಯಂತಿ ನಡೆಯುತ್ತಿದೆ. ಹನುಮ ಜಯಂತಿ ನಡೆಸುವಾಗ ದಲಿತರಿಂದ ಯಾವುದೇ ವಂತಿಕೆಯನ್ನು ಪಡೆಯುವುದಿಲ್ಲ. ದಲಿತರಿಂದ ಹತ್ತು ರೂಪಾಯಿ ವಂತಿಕೆ ಪಡೆದರೂ ನಾಳೆ ದಲಿತರನ್ನು ದೇವಸ್ಥಾನಕ್ಕೆ ಬಿಟ್ಟುಕೊಳ್ಳಬೇಕಾಗುತ್ತದೆ ಎಂಬುದು ಇದಕ್ಕೆ ಕಾರಣ. ಇದುವರೆಗೂ ದಲಿತರು ಕದ್ದು ಮುಚ್ಚಿ ದೇವರಿಗೆ ನಮಸ್ಕಾರ ಮಾಡುತ್ತಿದ್ದರು. ಸವರ್ಣೀಯರನ್ನು ಎದುರು ಹಾಕಿಕೊಳ್ಳುವ ಶಕ್ತಿ ಇರಲಿಲ್ಲ. ಇದನ್ನು ಪ್ರಶ್ನಿಸಿ ದಲಿತರು ಈ ಬಾರಿ ದೇವಾಲಯ ಪ್ರವೇಶಿಸಿದ್ದರು. ಅದನ್ನು ನೋಡಿದ ಮೇಲ್ವರ್ಗದ ಜನ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ” ಎಂದು ತಿಳಿಸಿದ್ದಾರೆ.

ಕುಮಾರ್‌ ಎಂಬ ಯುವಕ ಈ ಘಟನೆಯನ್ನು ಸೆರೆ ಹಿಡಿಯಲು ಯತ್ನಿಸಿದಾಗ ಆತನ ಮೊಬೈಲ್‌ ಕೂಡ ಕಸಿದುಕೊಂಡು 20-30 ಜನ ಮನಬಂದಂತೆ ಥಳಿಸಿದ್ದಾರೆ. ಇಷ್ಟೆಲ್ಲ ಘಟನೆಯಾದ ಬಳಿಕ ಅಂದು ರಾತ್ರಿ 12.30ಕ್ಕೆ ಕೆ.ಆರ್‌.ಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್‌ ನಿರಂಜನ್‌ ಅವರನ್ನು ಭೇಟಿ ಮಾಡಿ ದೂರು ನೀಡಲು ಹೋಗುತ್ತಾರೆ. ಜನರಿಗೆ ರಕ್ಷಣೆ ಕೊಡಬೇಕಾದ ಇನ್‌ಸ್ಪೆಕ್ಟರ್‌ ನಿರಂಜನ್‌, “ದಲಿತರದ್ದು ಅತಿಯಾಯಿತು, ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಳ್ಳಲು ಆಗಲ್ಲ. ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಂಡು ಕೂತರೆ ದಿನವೆಲ್ಲ ತೆಗೆದುಕೊಳ್ಳಬೇಕಾಗುತ್ತದೆ. ನಾಳೆ ಬನ್ನಿ” ಎಂದು ಹೇಳುತ್ತಾರೆ. ಇದಾದ ಮೇಲೆ ಒಂದು ಗಂಟೆಯಲ್ಲೇ ಗ್ರಾಮಕ್ಕೆ ಪೊಲೀಸರನ್ನು ಕಳಿಸಿ, ದಲಿತರಿಗೆಯೇ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ದಲಿತರಿಗೆ ಭಯಭೀತಿ ಹುಟ್ಟಿಸಿದ್ದಾರೆ. ಮಾರನೇ ದಿನ ದೂರು ನೀಡಲು ಹೋದಾಗಲೂ ದೂರು ಸ್ವೀಕರಿಸಲಿಲ್ಲ. ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಲು ಹೋಗಿದ್ದೆವು. ಎಸ್‌ಪಿಯವರು ನಮ್ಮಿಂದ ವಿವರವಾದ ದೂರು ಸ್ವೀಕರಿಸಿದರು. “ಯಾರು ದೂರು ಸ್ವೀಕರಿಸಲ್ಲ ನೋಡ್ತೀನಿ. ಗ್ರಾಮದಲ್ಲಿ ಅಹಿತರಕ ಘಟನೆ ನಡೆಯದಂತೆ ಕ್ರಮ ವಹಿಸುತ್ತೇನೆ” ಎಂದು ತಿಳಿಸಿದರು. ಐಪಿಎಸ್‌‌ ಅಧಿಕಾರಿಗಳು ಸಾಂತ್ವನ ಹೇಳುತ್ತಾರೆ. ಆದರೆ ಸ್ಥಳೀಯವಾಗಿ ಇರುವಂತಹ ಜಾತಿವಾದಿ ಮನಸ್ಥಿತಿಯ ಅಧಿಕಾರಿಗಳೂ ದಲಿತರಿಗೆ ಯಾಕೆ ರಕ್ಷಣೆ ನೀಡುತ್ತಿಲ್ಲ. ಇದೇನಾ ಭಾರತದ ಕಾನೂನು? ಇದೇನಾ ದಲಿತರಿಗೆ ನೀಡುವ ರಕ್ಷಣೆ? ಎಂದು ಪ್ರಶ್ನಿಸಿದ್ದಾರೆ ಕಾಂತರಾಜು.


ಇದನ್ನೂ ಓದಿರಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಇಂತಹ ಕೀಳು ಮನಸ್ಥಿತಿ ಇರುವ ಜನರು ನೀವು, ನಾಚಿಕೆಯಾಗಬೇಕು ನಿಮಗೆ ನಾಗರೀಕ ಸಮಾಜದಲ್ಲಿ ಬದುಕಲು ಯೋಗ್ಯತೆ ಇಲ್ಲದ ನೀವು ಹುಚಿನಾಯಿಗಳಿಗಿಂತ ಕೀಳು ನೀವು. ಮನುಷ್ಯರನ್ನು ಪ್ರೀತಿಸಿ ಗೌರವಿಸಿ.

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...