Homeಕರ್ನಾಟಕಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

ಹನುಮ ಜಯಂತಿ: ಕೆ.ಆರ್‌.ಪೇಟೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 27 ಮಂದಿ ಸವರ್ಣೀಯರ ಮೇಲೆ ಎಫ್‌ಐಆರ್‌‌

- Advertisement -
- Advertisement -

ಹನುಮ ಜಯಂತಿ ಪ್ರಯುಕ್ತ ದೇವಾಲಯ ಪ್ರವೇಶಿಸಿದ ದಲಿತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರದಲ್ಲಿ ನಡೆದಿದೆ.

ಡಿ.16ರಂದು ಘಟನೆ ನಡೆದಿದ್ದು, ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರಂಜನ್‌ ದೂರು ಸ್ವೀಕರಿಸಲು ನಿರಾಕರಿಸಿದ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರಲ್ಲಿ ದಲಿತರು ನೋವು ತೋಡಿಕೊಂಡಿದ್ದು, 27 ಮಂದಿಯ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾಗಿದೆ.

“ನಿಮ್ಮಿಂದ ದೇವಸ್ಥಾನ ಮಲಿನಗೊಂಡಿದೆ. ನಿಮ್ಮಂಥ ಜನರನ್ನು ಭೂಮಿ ಮೇಲೆ ಇರದಂತೆ ಸುಟ್ಟು ಹಾಕುತ್ತೇವೆ ಎಂದು ಡಿ.16ರ ರಾತ್ರಿ 11.30ರ ಸಮಯದಲ್ಲಿ ಸುಮಾರು 50-60 ಜನ ಸವರ್ಣೀಯರು ಮಾರಕಾಸ್ತ್ರಗಳಿಂದ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಮಾರಕಾಸ್ತ್ರಗಳಾದ ದೊಣ್ಣೆ, ಕೊಡಲಿ, ಪಂಚ್‌, ಕಲ್ಲು ಮತ್ತು ಇಟ್ಟಿಗೆಗಳೊಂದಿಗೆ ದಲಿತ ಕಾಲೋನಿಗೆ ನುಗ್ಗಿ ದಾಂದಲೆ ನಡೆಸಿದ್ದಾರೆ. ಅಂಗವಿಕಲ ವ್ಯಕ್ತಿ ನಂಜಯ್ಯ ಎಂಬುವವರ ಮೇಲೆಯೂ ದಾಳಿ ನಡೆದಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಸಲಾಗಿದೆ” ಎಂದು ದಲಿತರು ದೂರು ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ದಲಿತ ಯುವಕರಾದ ದರ್ಶನ್, ಸುನಿಲ್‌, ಲೋಹಿತ್‌, ಅಭಿಷೇಕ್‌, ವಿನಯ್‌, ಸಂಜಯ್‌, ಚಲವರಾಜು, ಭಾಗ್ಯಮ್ಮ, ಕುಮಾರ, ರಂಜಮ್ಮ, ಶೋಭಾ, ನಂಜಯ್ಯ ಅವರು ನೀಡಿದ ದೂರಿನ ಅನ್ವಯ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಆದರೆ ಯಾರನ್ನೂ ಈವರೆಗೆ ಬಂಧಿಸಿಲ್ಲ ಎಂದು ತಿಳಿದುಬಂದಿದೆ.

ಆರೋಪಿಗಳು: ಮಂಜುನಾಥ್‌ (ತಂದೆ: ತಮ್ಮೇಗೌಡ), ಶ್ರೀಧರ (ನಾಗೇಗೌಡ), ಸಂತೋಷ್ (ಕೃಷ್ಣೇಗೌಡ), ಶ್ರೀನಿವಾಸ ಎಚ್‌.ಟಿ. (ತಿಮ್ಮೇಗೌಡ), ರಂಜಿತ್‌ (ನಾರಾಯಣಗೌಡ), ಸತೀಶ (ರಾಮೇಗೌಡ), ಸ್ವಾಮಿ (ಸಹದೇವ), ಮುತ್ತು (ನಾರಾಯಣ), ರಜಿತ್‌ ಅಲಿಯಾಸ್ ಮಿಲ್ಟ್ರಿ (ನಾರಾಯಣಗೌಡ), ಮಂಜುನಾಥ (ತಮ್ಮೇಗೌಡ), ಮೋಹನ್ (ನಂಜೇಗೌಡ), ಮಂಜ (ಜಿಂಕೆ ಚಲುವಯ್ಯ), ಹರೀಶ ಮಡಗಿನಕುಡಿ, ವೆಂಕಟೇಶ್‌ ಹರಿಹರಪುರ, ರಾಘು (ವೆಂಕಟೇಶ್‌), ರವಿ ಅಲಿಯಾಸ್ ಚಡ್ಡಿ (ಮಂಜೇಗೌಡ), ಮಂಜ (ಜವರೇಗೌಡ), ಸುರೇಶ (ಕರಿಯಪ್ಪ), ಗುಂಡೂ (ವೆಂಕಟಾಚಲ), ಬಾನುಪ್ರಕಾಶ್ (ಗಂಗಾಧರ್‌), ಶಿವಕುಮಾರ (ಶ್ರೀನಿವಾಸ್), ದರ್ಶನ್‌ ಕುರೇನಹಳ್ಳಿ, ದೀಪು (ಶಂಕರ್‌ ಅಲಿಯಾಸ್‌ ರೇಷ್ಮೇ ಇಲಾಖೆ), ಮೋಹನ (ಶ್ರೀನಿವಾಸ್‌), ಪ್ರದೀಪ್ (ವೆಂಕಟೇಶ್), ಜಯಂತ್‌ (ಡಯಟ್ ಜಯರಾಮ್‌), ಗೌತಮ್ಮ ಅಲಿಯಾಸ್ ಕುಳ್ಳಯ್ಯ.

ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಕೆ.ಆರ್‌.ಪೇಟೆ ಸರ್ಕಲ್‌ ಇನ್‌ಸ್ಪೆಕ್ಟರ್‌ ನಿರ್ಲಕ್ಷ್ಯ

ಮೈಸೂರಿನ ವಕೀಲರಾದ ಎ.ಆರ್‌.ಕಾಂತರಾಜು ಅವರು ಘಟನೆ ಕುರಿತು ಮಾತನಾಡಿದ್ದು, “21ನೇ ಶತಮಾನ ಕಳೆದರೂ ಸಂವಿಧಾನದ ಆಶಯಗಳು ಈಡೇರಲಿಲ್ಲ. ದಲಿತರನ್ನು ಪ್ರಾಣಿಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿದೆ. ಇಂದು ಹಸು ಕೊಲ್ಲಬಾರದೆಂದು, ಮೇಕೆ ಕೊಲ್ಲಬಾರದೆಂದು ಕಾನೂನು ತರುತ್ತಾರೆ. ಆದರೆ ಮನುಷ್ಯರನ್ನು ಹಸು ಮತ್ತು ಮೇಕೆಗಳಿಗಿಂತ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಪೊಲೀಸರು ದಲಿತರಿಗೆ ರಕ್ಷಣೆ ನೀಡಬೇಕಾದ ಸ್ಥಳೀಯ ಪೊಲೀಸರೇ ದಬ್ಬಾಳಿಕೆ ನಡೆಸಿದ್ದಾರೆ” ಎಂದು ದೂರಿದ್ದಾರೆ.

“ಹರಿಹರಪುರ ಗ್ರಾಮದಲ್ಲಿ ಹದಿನೇಳು ವರ್ಷಗಳಿಂದ ಹನುಮ ಜಯಂತಿ ನಡೆಯುತ್ತಿದೆ. ಹನುಮ ಜಯಂತಿ ನಡೆಸುವಾಗ ದಲಿತರಿಂದ ಯಾವುದೇ ವಂತಿಕೆಯನ್ನು ಪಡೆಯುವುದಿಲ್ಲ. ದಲಿತರಿಂದ ಹತ್ತು ರೂಪಾಯಿ ವಂತಿಕೆ ಪಡೆದರೂ ನಾಳೆ ದಲಿತರನ್ನು ದೇವಸ್ಥಾನಕ್ಕೆ ಬಿಟ್ಟುಕೊಳ್ಳಬೇಕಾಗುತ್ತದೆ ಎಂಬುದು ಇದಕ್ಕೆ ಕಾರಣ. ಇದುವರೆಗೂ ದಲಿತರು ಕದ್ದು ಮುಚ್ಚಿ ದೇವರಿಗೆ ನಮಸ್ಕಾರ ಮಾಡುತ್ತಿದ್ದರು. ಸವರ್ಣೀಯರನ್ನು ಎದುರು ಹಾಕಿಕೊಳ್ಳುವ ಶಕ್ತಿ ಇರಲಿಲ್ಲ. ಇದನ್ನು ಪ್ರಶ್ನಿಸಿ ದಲಿತರು ಈ ಬಾರಿ ದೇವಾಲಯ ಪ್ರವೇಶಿಸಿದ್ದರು. ಅದನ್ನು ನೋಡಿದ ಮೇಲ್ವರ್ಗದ ಜನ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ” ಎಂದು ತಿಳಿಸಿದ್ದಾರೆ.

ಕುಮಾರ್‌ ಎಂಬ ಯುವಕ ಈ ಘಟನೆಯನ್ನು ಸೆರೆ ಹಿಡಿಯಲು ಯತ್ನಿಸಿದಾಗ ಆತನ ಮೊಬೈಲ್‌ ಕೂಡ ಕಸಿದುಕೊಂಡು 20-30 ಜನ ಮನಬಂದಂತೆ ಥಳಿಸಿದ್ದಾರೆ. ಇಷ್ಟೆಲ್ಲ ಘಟನೆಯಾದ ಬಳಿಕ ಅಂದು ರಾತ್ರಿ 12.30ಕ್ಕೆ ಕೆ.ಆರ್‌.ಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್‌ ನಿರಂಜನ್‌ ಅವರನ್ನು ಭೇಟಿ ಮಾಡಿ ದೂರು ನೀಡಲು ಹೋಗುತ್ತಾರೆ. ಜನರಿಗೆ ರಕ್ಷಣೆ ಕೊಡಬೇಕಾದ ಇನ್‌ಸ್ಪೆಕ್ಟರ್‌ ನಿರಂಜನ್‌, “ದಲಿತರದ್ದು ಅತಿಯಾಯಿತು, ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಳ್ಳಲು ಆಗಲ್ಲ. ನಿಮ್ಮಂಥವರ ಕಂಪ್ಲೇಟ್‌ ತೆಗೆದುಕೊಂಡು ಕೂತರೆ ದಿನವೆಲ್ಲ ತೆಗೆದುಕೊಳ್ಳಬೇಕಾಗುತ್ತದೆ. ನಾಳೆ ಬನ್ನಿ” ಎಂದು ಹೇಳುತ್ತಾರೆ. ಇದಾದ ಮೇಲೆ ಒಂದು ಗಂಟೆಯಲ್ಲೇ ಗ್ರಾಮಕ್ಕೆ ಪೊಲೀಸರನ್ನು ಕಳಿಸಿ, ದಲಿತರಿಗೆಯೇ ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ದಲಿತರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ದಲಿತರಿಗೆ ಭಯಭೀತಿ ಹುಟ್ಟಿಸಿದ್ದಾರೆ. ಮಾರನೇ ದಿನ ದೂರು ನೀಡಲು ಹೋದಾಗಲೂ ದೂರು ಸ್ವೀಕರಿಸಲಿಲ್ಲ. ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಲು ಹೋಗಿದ್ದೆವು. ಎಸ್‌ಪಿಯವರು ನಮ್ಮಿಂದ ವಿವರವಾದ ದೂರು ಸ್ವೀಕರಿಸಿದರು. “ಯಾರು ದೂರು ಸ್ವೀಕರಿಸಲ್ಲ ನೋಡ್ತೀನಿ. ಗ್ರಾಮದಲ್ಲಿ ಅಹಿತರಕ ಘಟನೆ ನಡೆಯದಂತೆ ಕ್ರಮ ವಹಿಸುತ್ತೇನೆ” ಎಂದು ತಿಳಿಸಿದರು. ಐಪಿಎಸ್‌‌ ಅಧಿಕಾರಿಗಳು ಸಾಂತ್ವನ ಹೇಳುತ್ತಾರೆ. ಆದರೆ ಸ್ಥಳೀಯವಾಗಿ ಇರುವಂತಹ ಜಾತಿವಾದಿ ಮನಸ್ಥಿತಿಯ ಅಧಿಕಾರಿಗಳೂ ದಲಿತರಿಗೆ ಯಾಕೆ ರಕ್ಷಣೆ ನೀಡುತ್ತಿಲ್ಲ. ಇದೇನಾ ಭಾರತದ ಕಾನೂನು? ಇದೇನಾ ದಲಿತರಿಗೆ ನೀಡುವ ರಕ್ಷಣೆ? ಎಂದು ಪ್ರಶ್ನಿಸಿದ್ದಾರೆ ಕಾಂತರಾಜು.


ಇದನ್ನೂ ಓದಿರಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಇಂತಹ ಕೀಳು ಮನಸ್ಥಿತಿ ಇರುವ ಜನರು ನೀವು, ನಾಚಿಕೆಯಾಗಬೇಕು ನಿಮಗೆ ನಾಗರೀಕ ಸಮಾಜದಲ್ಲಿ ಬದುಕಲು ಯೋಗ್ಯತೆ ಇಲ್ಲದ ನೀವು ಹುಚಿನಾಯಿಗಳಿಗಿಂತ ಕೀಳು ನೀವು. ಮನುಷ್ಯರನ್ನು ಪ್ರೀತಿಸಿ ಗೌರವಿಸಿ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...