Homeಮುಖಪುಟಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

ಹನುಮಧ್ವಜ ವಿವಾದ: ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿಂದುತ್ವ ಕಾರ್ಯಕರ್ತರು; ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

- Advertisement -
- Advertisement -

ಮಂಡ್ಯ ಜಿಲ್ಲೆಯ ಕೆರಗೋಡಿನ ಸರ್ಕಾರಿ ಜಾಗದಲ್ಲಿ ನಿರ್ಮಿಸಿದ್ದ ಧ್ವಜಸ್ಥಂಬದಲ್ಲಿ, ನಿಯಮ ಮೀರಿ ಹನುಮಧ್ವಜ ಹಾರಿಸಿದ್ದನ್ನು ಅಧಿಕಾರಿಗಳು ತೆರವುಗೊಳಿಸಿದ್ದರು. ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜ ಹಾರಿಸಲು ಅನುಮತಿ ಪಡೆದಿದ್ದ ಶ್ರೀ ಗೌರಿ ಶಂಕರ ಸೇವಾ ಟ್ರಸ್ಟ್ ಪದಾಧಿಕಾರಿಗಳು ಕೇಸರಿ ಭಾವುಟ ಹಾರಿಸಿ ವಿವಾದ ಹುಟ್ಟುಹಾಕಿದ್ದಾರೆ.

ಹನುಮಧ್ವಜ ತೆರವುಗೊಳಿಸಿದ್ದನ್ನು ವಿರೋಧಿಸಿ ಬಿಜೆಪಿ-ಜೆಡಿಎಸ್ ನಾಯಕರು ಕೆರಗೋಡಿಗೆ ಲಗ್ಗೆ ಇಟ್ಟಿದ್ದು, ಗೌರಿ ಶಂಕರ ಸೇವಾ ಟ್ರಸ್ಟ್ ಕಾರ್ಯಕರ್ತರು ಮತ್ತು ಹಿಂದುತ್ವ ಕಾರ್ಯಕರ್ತರು ಮಂಡ್ಯವನ್ನು ಪ್ರಕ್ಷುಬ್ಧಗೊಳಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಧ್ವಸ್ಥಂಭದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ.
ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ನಡೆಗೆ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಸದ್ಯಕ್ಕೆ ಮಂಡ್ಯದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಕೆರಗೋಡು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಫೆ.9ರಂದು ಮಂಡ್ಯ ನಗರ ಬಂದ್‌ಗೆ ಹಿಂದೂ ಪರ ಸಂಘಟನೆಗಳು ಕರೆ ಕೊಟ್ಟಿದ್ದು, ಜನರ ಹೋರಾಟಕ್ಕೆ ಜೆಡಿಎಸ್-ಬಿಜೆಪಿ ಬೆಂಬಲ ಘೋಷಣೆ ಮಾಡಿರುವುದರಿಂದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಭಾನುವಾರ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ-ಜೆಡಿಎಸ್ ನಾಯಕರು ಭಾನುವಾರ ಕೆರಗೋಡಿನಲ್ಲಿ ಪ್ರತಿಭಟನೆ ನಡೆಸಿದರು. ಹನುಮಧ್ವಜ ಹಾರಿಸುವ ಉದ್ದೇಶದಿಂದ ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಿದಾಗ ಅಶೋಕ್ ಸೇರಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಲಾಯಿತು.

ಮಂಡ್ಯ ಜಿಲ್ಲೆ ಕೆರಗೋಡು ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು 108 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಹನುಮ ಧ್ವಜ ವನ್ನು ಹಾರಿಸಿದ್ದರು. ಈ ಧ್ವಜವನ್ನು ತೆರವುಗೊಳಿಸಿದ ಪೊಲೀಸರ ಕ್ರಮ ಈಗ ಟೀಕೆಗೆ ಒಳಗಾಗಿದ್ದು, ಪ್ರತಿಭಟನೆ ವ್ಯಕ್ತವಾಗುತ್ತಿದೆ.

ಬಿಜೆಪಿ-ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ-ಸಿಎಂ

‘ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್ ನವರು ಕೆರಗೋಡು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು, ಆ ಧ್ವಜಸ್ತಂಭವನ್ನು ಕರ್ನಾಟಕದ ಧ್ವಜ ಮತ್ತು ತ್ರಿವರ್ಣ ಧ್ವಜ ಹಾರಿಸುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡುತ್ತೇವೆ, ಜೊತೆಗೆ ಗ್ರಾಮ ಪಂಚಾಯತಿಯ ಷರತ್ತುಗಳಿಗೆ ಬದ್ಧರಾಗಿರುವುದಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದರು’ ಅವರ ಮನವಿಯ ಮೇರೆಗೆ ಗ್ರಾಮ ಪಂಚಾಯತಿಯವರು ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ. ಆ ನಂತರ ಅಲ್ಲಿ ಹಾರಿಸಲಾಗಿದ್ದ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಆ ಜಾಗದಲ್ಲಿ ಹನುಮಧ್ವಜವನ್ನು ಹಾರಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

‘ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಧ್ವಜ ಇಳಿಸುವಂತೆ ಜನರಿಗೆ ತಿಳಿ ಹೇಳಿದ್ದಾರೆ. ಆದರೆ ಸ್ಥಳೀಯರು ಪೊಲೀಸರ ಹಾಗೂ ಜಿಲ್ಲಾಡಳಿತದ ಮನವಿಯನ್ನು ತಿರಸ್ಕರಿಸಿ, ಪ್ರತಿಭಟನೆ, ಸಂಘರ್ಷಕ್ಕೆ ಇಳಿಯುವ ಮೂಲಕ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವಂತೆ ಮಾಡಿದ್ದಾರೆ. ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ. ಮಂಡ್ಯದಲ್ಲಿ ಕೋಮುಗಲಭೆ ಎಬ್ಬಿಸುವ ಸಂಚು ರೂಪಿಸಿರುವುದು ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೆ ನಡೆಸಿರುವ ತಯಾರಿಯಾಗಿದೆ ಎಂಬುದರಲ್ಲಿ ಅನುಮಾನವೇ ಇಲ್ಲ’ ಎಂದು ಹೇಳಿದ್ದಾರೆ.

‘ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಾವು ಯಾವುದೇ ನಿರ್ದಿಷ್ಟ ಜಾತಿ, ಧರ್ಮ, ಸಮುದಾಯದ ವಿರುದ್ಧವಿಲ್ಲ, ನಮ್ಮದು ಸಂವಿಧಾನಪರವಾದ ನಿಲುವು. ಬಿಜೆಪಿ ನಾಯಕರ ಮಾತುಗಳಿಗೆ ಮರುಳಾಗಿ, ಕಾನೂನು ಕೈಗೆತ್ತಿಕೊಳ್ಳುವ ತಪ್ಪನ್ನು ಜನತೆ ಮಾಡಬಾರದು. ಸಂವಿಧಾನ, ಕಾನೂನಿಗೆ ಗೌರವ ಕೊಡಬೇಕಿರುವುದು ನಮ್ಮೆಲ್ಲರ ಕರ್ತವ್ಯ. ಚುನಾವಣೆ ಇನ್ನಷ್ಟು ಸಮೀಪಿಸುತ್ತಿದ್ದಂತೆ ಬಿಜೆಪಿ ಗಲಭೆ ಸೃಷ್ಟಿಸುವ, ಶಾಂತಿಗೆ ಭಂಗ ತರುವ ಪ್ರಯತ್ನವನ್ನು ಖಂಡಿತಾ ಮಾಡಲಿದೆ. ಪ್ರಜ್ಞಾವಂತ ಕನ್ನಡಿಗರು ಶಾಂತಿ, ಸಂಯಮದ ಮೂಲಕ ಕೋಮುವಾದಿಗಳ ಷಡ್ಯಂತ್ರವನ್ನು ವಿಫಲಗೊಳಿಸಬೇಕು ಎಂದು ಮನವಿ ಮಾಡುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ; ರೈತ ವಿರೋಧಿ ಬಿಜೆಪಿ ನಾಯಕರು ಸುರಿಸುವ ಕಣ್ಣೀರು ಮೊಸಳೆಯದ್ದು: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...