Homeಕರ್ನಾಟಕಆಂಧ್ರಪ್ರದೇಶ ಮತ್ತು ಕರ್ನಾಟಕದ ನಡುವೆ ಮುನ್ನೆಲೆಗೆ ಬಂದ ಹನುಮಾನ್ ಜನ್ಮಭೂಮಿ ವಿವಾದ

ಆಂಧ್ರಪ್ರದೇಶ ಮತ್ತು ಕರ್ನಾಟಕದ ನಡುವೆ ಮುನ್ನೆಲೆಗೆ ಬಂದ ಹನುಮಾನ್ ಜನ್ಮಭೂಮಿ ವಿವಾದ

- Advertisement -
- Advertisement -

ನವೆಂಬರ್ 2019 ರಲ್ಲಿ ರಾಮ ಜನ್ಮಭೂಮಿ ವಿವಾದವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದ ನಂತರ, ಹನುಮಾನ್ ಜನ್ಮಭೂಮಿಯ ಬಗ್ಗೆ ಹೊಸ ವಿವಾದವೊಂದು ಭುಗಿಲೆದ್ದಿದೆ. ಎರಡು ರಾಜ್ಯಗಳ ನಡುವಿನ ಈ ವಿವಾದ ಮತ್ತಷ್ಟು ದೊಡ್ಡದಾಗುವ ಸಾಧ್ಯತೆಯಿದೆ.

ಆಂಧ್ರಪ್ರದೇಶ ಮತ್ತು ಕರ್ನಾಟಕದ ಎರಡು ಹಿಂದೂ ಟ್ರಸ್ಟ್‌ಗಳ ನಡುವೆ ಈ ವಿವಾದ ಉಂಟಾಗಿದ್ದು, ತಮ್ಮ ಊರಿನಲ್ಲಿರುವ ಬೇರೆ ಬೇರೆ ಸ್ಥಳಗಳನ್ನು ಹನುಮಾನ್ ಜನ್ಮಸ್ಥಳವೆಂದು ವಾದಿಸುತ್ತಿವೆ.

ಒಂದು ಹೆಜ್ಜೆ ಮುಂದೆ ಹೋಗಿರುವ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ, ತಿರುಮಲ ಬೆಟ್ಟದಲ್ಲಿನ ದೇವಾಲಯ ಮತ್ತು ಯಾತ್ರಾಸ್ಥಳವಾದ ಅಂಜನಾದ್ರಿಯನ್ನು ಭವ್ಯವಾಗಿ ಅಭಿವೃದ್ಧಿಪಡಿಸಲು ಬುಧವಾರದಂದು (ಫೆ.16) ಸಮಾರಂಭ ಒಂದನ್ನು ಆಯೋಜಿಸಿದೆ. ಕಳೆದ ವರ್ಷ ಟಿಟಿಡು ಏಪ್ರಿಲ್‌ನಲ್ಲಿ ರಾಮನವಮಿಯಂದು ತಿರುಮಲ ಅಂಜನಾದ್ರಿಯನ್ನು ಹನುಮಂತನ ಜನ್ಮಸ್ಥಳ ಎಂದು ಘೋಷಿಸಿದೆ.

ಆದರೆ ರಾಜ್ಯದ ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇದನ್ನು ಒಪ್ಪುವುದಿಲ್ಲ. ಈ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಸಂಸ್ಥಾಪಕ ಸ್ವಾಮಿ ಗೋವಿಂದಾನಂದ ಸರಸ್ವತಿ ಇಂದು (ಫೆ.14) ತಿರುಮಲಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ಜೋಡಿಗಳು ಪಾರ್ಕ್‌‌ನಲ್ಲಿ ಸುತ್ತಾಡುವುದು ಕಂಡರೆ ಅವರ ಕಾಲುಗಳನ್ನು ಮುರಿಯುತ್ತೇವೆ: ಶಿವಸೇನೆ ಎಚ್ಚರಿಕೆ

ವಾಲ್ಮೀಕಿ ರಾಮಾಯಣವು ಹನುಮಂತನು ಕಿಷ್ಕಿಂಧೆಯ ಅಂಜನಹಳ್ಳಿಯಲ್ಲಿ ಜನಿಸಿದನೆಂದು ಹೇಳುತ್ತದೆ, ಇದು ಹಂಪಿ ಬಳಿಯ ತುಂಗಭದ್ರಾ ನದಿಯ ದಡದಲ್ಲಿದೆ ಎಂದು ನಂಬಲಾಗಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಈ ವಿವಾದ ಬಗೆಹರಿಸಲು ಚರ್ಚೆ ನಡೆದರೂ ಮುಗಿಯುವ ಹಂತಕ್ಕೆ ಬರಲಿಲ್ಲ.

ಟಿಟಿಡಿ ಸಮಿತಿಯು (ಕಳೆದ ತಿಂಗಳು ನಿಧನರಾದ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯದ ಉಪಕುಲಪತಿ ವಿ ಮುರಳೀಧರ ಶರ್ಮಾ ಅವರ ನೇತೃತ್ವದ) ಪುರಾತನ ಗ್ರಂಥಗಳು ಮತ್ತು ತಾಮ್ರ-ಲೇಖನದಂತಹ ಪ್ರಾಚೀನ ಗ್ರಂಥಗಳು ಈಗ ತಿರುಮಲ ಎಂದು ಕರೆಯಲ್ಪಡುವ ಅಂಜನಾದ್ರಿಯನ್ನು ಹನುಮಂತನ ಜನ್ಮಸ್ಥಳವೆಂದು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ ಎಂದಿದೆ.

ಏಪ್ರಿಲ್‌ನಲ್ಲಿ ಟಿಟಿಡಿ ಅಂಜನಾದ್ರಿಯೇ ಹನುಮಾನ್ ಜನ್ಮಸ್ಥಳ ಎಂದು ಸಾರುವ ಕಿರುಪುಸ್ತಕವನ್ನು ಪ್ರಕಟಿಸಿತ್ತು. ಈ ಕಿರುಪುಸ್ತಕವು ಡಿಸೆಂಬರ್ 2020 ರಲ್ಲಿ ರಚಿತವಾದ ಎಂಟು ಸದಸ್ಯರ ಸಮಿತಿಯು ಸಲ್ಲಿಸಿದ ವರದಿಯನ್ನು ಆಧರಿಸಿದೆ. ಇದಕ್ಕೆ ಪ್ರತಿಯಾಗಿ ರಾಜ್ಯದ ಹನುಮನ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಟಿಟಿಡಿಗೆ ಆರು ಪುಟಗಳ ಪತ್ರದೊಂದಿಗೆ ಪ್ರತಿವಾದ ಹೂಡಿ, ಚರ್ಚೆ ನಡೆಸಿತ್ತು.

ಹಲವಾರು ವೈದಿಕ ಮತ್ತು ಪುರಾಣದ ವಿದ್ವಾಂಸರು ಒಪ್ಪಿಕೊಂಡಿರುವ ಪೌರಾಣಿಕ, ಸಾಹಿತ್ಯಿಕ, ಪುರಾತತ್ವ ಮತ್ತು ಭೌಗೋಳಿಕ ಪುರಾವೆಗಳ ಮೇಲೆ ಟಿಟಿಡಿ ತನ್ನ ಹಕ್ಕನ್ನು ಆಧರಿಸಿದೆ ಮತ್ತು ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳುತ್ತದೆ.

ಟಿಟಿಡಿ ಬುಧವಾರ ನಡೆಸಲಿರುವ ಸಮಾರಂಭದಲ್ಲಿ ಶಾರದಾ ಪೀಠಾಧಿಪತಿ ಸ್ವರೂಪೇಂದ್ರ ಸರಸ್ವತಿ, ಚಿತ್ರಕೂಟದ ತುಳಸಿ ಪೀಠದ ರಾಮಭದ್ರಾಚಾರ್ಯ ಮಹಾರಾಜರು, ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸ್ವಾಮಿ ಗೋವಿಂದ್ ದೇವ್ ಗಿರಿ ಮತ್ತು ದೇಶದ ಇತರ ಭಾಗಗಳ ಸ್ವಾಮೀಜಿಗಳು, ಟಿಟಿಡಿ ಅಧ್ಯಕ್ಷರು ಭಾಗವಹಿಸಲಿದ್ದಾರೆ.


ಇದನ್ನೂ ಓದಿ: ಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್‌ಗೆ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸ್ ತೆರಳಿದ 13 ವಿದ್ಯಾರ್ಥಿನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...