Homeಕರ್ನಾಟಕಆಂಧ್ರಪ್ರದೇಶ ಮತ್ತು ಕರ್ನಾಟಕದ ನಡುವೆ ಮುನ್ನೆಲೆಗೆ ಬಂದ ಹನುಮಾನ್ ಜನ್ಮಭೂಮಿ ವಿವಾದ

ಆಂಧ್ರಪ್ರದೇಶ ಮತ್ತು ಕರ್ನಾಟಕದ ನಡುವೆ ಮುನ್ನೆಲೆಗೆ ಬಂದ ಹನುಮಾನ್ ಜನ್ಮಭೂಮಿ ವಿವಾದ

- Advertisement -
- Advertisement -

ನವೆಂಬರ್ 2019 ರಲ್ಲಿ ರಾಮ ಜನ್ಮಭೂಮಿ ವಿವಾದವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದ ನಂತರ, ಹನುಮಾನ್ ಜನ್ಮಭೂಮಿಯ ಬಗ್ಗೆ ಹೊಸ ವಿವಾದವೊಂದು ಭುಗಿಲೆದ್ದಿದೆ. ಎರಡು ರಾಜ್ಯಗಳ ನಡುವಿನ ಈ ವಿವಾದ ಮತ್ತಷ್ಟು ದೊಡ್ಡದಾಗುವ ಸಾಧ್ಯತೆಯಿದೆ.

ಆಂಧ್ರಪ್ರದೇಶ ಮತ್ತು ಕರ್ನಾಟಕದ ಎರಡು ಹಿಂದೂ ಟ್ರಸ್ಟ್‌ಗಳ ನಡುವೆ ಈ ವಿವಾದ ಉಂಟಾಗಿದ್ದು, ತಮ್ಮ ಊರಿನಲ್ಲಿರುವ ಬೇರೆ ಬೇರೆ ಸ್ಥಳಗಳನ್ನು ಹನುಮಾನ್ ಜನ್ಮಸ್ಥಳವೆಂದು ವಾದಿಸುತ್ತಿವೆ.

ಒಂದು ಹೆಜ್ಜೆ ಮುಂದೆ ಹೋಗಿರುವ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ, ತಿರುಮಲ ಬೆಟ್ಟದಲ್ಲಿನ ದೇವಾಲಯ ಮತ್ತು ಯಾತ್ರಾಸ್ಥಳವಾದ ಅಂಜನಾದ್ರಿಯನ್ನು ಭವ್ಯವಾಗಿ ಅಭಿವೃದ್ಧಿಪಡಿಸಲು ಬುಧವಾರದಂದು (ಫೆ.16) ಸಮಾರಂಭ ಒಂದನ್ನು ಆಯೋಜಿಸಿದೆ. ಕಳೆದ ವರ್ಷ ಟಿಟಿಡು ಏಪ್ರಿಲ್‌ನಲ್ಲಿ ರಾಮನವಮಿಯಂದು ತಿರುಮಲ ಅಂಜನಾದ್ರಿಯನ್ನು ಹನುಮಂತನ ಜನ್ಮಸ್ಥಳ ಎಂದು ಘೋಷಿಸಿದೆ.

ಆದರೆ ರಾಜ್ಯದ ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇದನ್ನು ಒಪ್ಪುವುದಿಲ್ಲ. ಈ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಸಂಸ್ಥಾಪಕ ಸ್ವಾಮಿ ಗೋವಿಂದಾನಂದ ಸರಸ್ವತಿ ಇಂದು (ಫೆ.14) ತಿರುಮಲಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ಜೋಡಿಗಳು ಪಾರ್ಕ್‌‌ನಲ್ಲಿ ಸುತ್ತಾಡುವುದು ಕಂಡರೆ ಅವರ ಕಾಲುಗಳನ್ನು ಮುರಿಯುತ್ತೇವೆ: ಶಿವಸೇನೆ ಎಚ್ಚರಿಕೆ

ವಾಲ್ಮೀಕಿ ರಾಮಾಯಣವು ಹನುಮಂತನು ಕಿಷ್ಕಿಂಧೆಯ ಅಂಜನಹಳ್ಳಿಯಲ್ಲಿ ಜನಿಸಿದನೆಂದು ಹೇಳುತ್ತದೆ, ಇದು ಹಂಪಿ ಬಳಿಯ ತುಂಗಭದ್ರಾ ನದಿಯ ದಡದಲ್ಲಿದೆ ಎಂದು ನಂಬಲಾಗಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಈ ವಿವಾದ ಬಗೆಹರಿಸಲು ಚರ್ಚೆ ನಡೆದರೂ ಮುಗಿಯುವ ಹಂತಕ್ಕೆ ಬರಲಿಲ್ಲ.

ಟಿಟಿಡಿ ಸಮಿತಿಯು (ಕಳೆದ ತಿಂಗಳು ನಿಧನರಾದ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯದ ಉಪಕುಲಪತಿ ವಿ ಮುರಳೀಧರ ಶರ್ಮಾ ಅವರ ನೇತೃತ್ವದ) ಪುರಾತನ ಗ್ರಂಥಗಳು ಮತ್ತು ತಾಮ್ರ-ಲೇಖನದಂತಹ ಪ್ರಾಚೀನ ಗ್ರಂಥಗಳು ಈಗ ತಿರುಮಲ ಎಂದು ಕರೆಯಲ್ಪಡುವ ಅಂಜನಾದ್ರಿಯನ್ನು ಹನುಮಂತನ ಜನ್ಮಸ್ಥಳವೆಂದು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ ಎಂದಿದೆ.

ಏಪ್ರಿಲ್‌ನಲ್ಲಿ ಟಿಟಿಡಿ ಅಂಜನಾದ್ರಿಯೇ ಹನುಮಾನ್ ಜನ್ಮಸ್ಥಳ ಎಂದು ಸಾರುವ ಕಿರುಪುಸ್ತಕವನ್ನು ಪ್ರಕಟಿಸಿತ್ತು. ಈ ಕಿರುಪುಸ್ತಕವು ಡಿಸೆಂಬರ್ 2020 ರಲ್ಲಿ ರಚಿತವಾದ ಎಂಟು ಸದಸ್ಯರ ಸಮಿತಿಯು ಸಲ್ಲಿಸಿದ ವರದಿಯನ್ನು ಆಧರಿಸಿದೆ. ಇದಕ್ಕೆ ಪ್ರತಿಯಾಗಿ ರಾಜ್ಯದ ಹನುಮನ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಟಿಟಿಡಿಗೆ ಆರು ಪುಟಗಳ ಪತ್ರದೊಂದಿಗೆ ಪ್ರತಿವಾದ ಹೂಡಿ, ಚರ್ಚೆ ನಡೆಸಿತ್ತು.

ಹಲವಾರು ವೈದಿಕ ಮತ್ತು ಪುರಾಣದ ವಿದ್ವಾಂಸರು ಒಪ್ಪಿಕೊಂಡಿರುವ ಪೌರಾಣಿಕ, ಸಾಹಿತ್ಯಿಕ, ಪುರಾತತ್ವ ಮತ್ತು ಭೌಗೋಳಿಕ ಪುರಾವೆಗಳ ಮೇಲೆ ಟಿಟಿಡಿ ತನ್ನ ಹಕ್ಕನ್ನು ಆಧರಿಸಿದೆ ಮತ್ತು ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳುತ್ತದೆ.

ಟಿಟಿಡಿ ಬುಧವಾರ ನಡೆಸಲಿರುವ ಸಮಾರಂಭದಲ್ಲಿ ಶಾರದಾ ಪೀಠಾಧಿಪತಿ ಸ್ವರೂಪೇಂದ್ರ ಸರಸ್ವತಿ, ಚಿತ್ರಕೂಟದ ತುಳಸಿ ಪೀಠದ ರಾಮಭದ್ರಾಚಾರ್ಯ ಮಹಾರಾಜರು, ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸ್ವಾಮಿ ಗೋವಿಂದ್ ದೇವ್ ಗಿರಿ ಮತ್ತು ದೇಶದ ಇತರ ಭಾಗಗಳ ಸ್ವಾಮೀಜಿಗಳು, ಟಿಟಿಡಿ ಅಧ್ಯಕ್ಷರು ಭಾಗವಹಿಸಲಿದ್ದಾರೆ.


ಇದನ್ನೂ ಓದಿ: ಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್‌ಗೆ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸ್ ತೆರಳಿದ 13 ವಿದ್ಯಾರ್ಥಿನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...