Homeಕರ್ನಾಟಕಆಂಧ್ರಪ್ರದೇಶ ಮತ್ತು ಕರ್ನಾಟಕದ ನಡುವೆ ಮುನ್ನೆಲೆಗೆ ಬಂದ ಹನುಮಾನ್ ಜನ್ಮಭೂಮಿ ವಿವಾದ

ಆಂಧ್ರಪ್ರದೇಶ ಮತ್ತು ಕರ್ನಾಟಕದ ನಡುವೆ ಮುನ್ನೆಲೆಗೆ ಬಂದ ಹನುಮಾನ್ ಜನ್ಮಭೂಮಿ ವಿವಾದ

- Advertisement -
- Advertisement -

ನವೆಂಬರ್ 2019 ರಲ್ಲಿ ರಾಮ ಜನ್ಮಭೂಮಿ ವಿವಾದವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದ ನಂತರ, ಹನುಮಾನ್ ಜನ್ಮಭೂಮಿಯ ಬಗ್ಗೆ ಹೊಸ ವಿವಾದವೊಂದು ಭುಗಿಲೆದ್ದಿದೆ. ಎರಡು ರಾಜ್ಯಗಳ ನಡುವಿನ ಈ ವಿವಾದ ಮತ್ತಷ್ಟು ದೊಡ್ಡದಾಗುವ ಸಾಧ್ಯತೆಯಿದೆ.

ಆಂಧ್ರಪ್ರದೇಶ ಮತ್ತು ಕರ್ನಾಟಕದ ಎರಡು ಹಿಂದೂ ಟ್ರಸ್ಟ್‌ಗಳ ನಡುವೆ ಈ ವಿವಾದ ಉಂಟಾಗಿದ್ದು, ತಮ್ಮ ಊರಿನಲ್ಲಿರುವ ಬೇರೆ ಬೇರೆ ಸ್ಥಳಗಳನ್ನು ಹನುಮಾನ್ ಜನ್ಮಸ್ಥಳವೆಂದು ವಾದಿಸುತ್ತಿವೆ.

ಒಂದು ಹೆಜ್ಜೆ ಮುಂದೆ ಹೋಗಿರುವ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ, ತಿರುಮಲ ಬೆಟ್ಟದಲ್ಲಿನ ದೇವಾಲಯ ಮತ್ತು ಯಾತ್ರಾಸ್ಥಳವಾದ ಅಂಜನಾದ್ರಿಯನ್ನು ಭವ್ಯವಾಗಿ ಅಭಿವೃದ್ಧಿಪಡಿಸಲು ಬುಧವಾರದಂದು (ಫೆ.16) ಸಮಾರಂಭ ಒಂದನ್ನು ಆಯೋಜಿಸಿದೆ. ಕಳೆದ ವರ್ಷ ಟಿಟಿಡು ಏಪ್ರಿಲ್‌ನಲ್ಲಿ ರಾಮನವಮಿಯಂದು ತಿರುಮಲ ಅಂಜನಾದ್ರಿಯನ್ನು ಹನುಮಂತನ ಜನ್ಮಸ್ಥಳ ಎಂದು ಘೋಷಿಸಿದೆ.

ಆದರೆ ರಾಜ್ಯದ ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇದನ್ನು ಒಪ್ಪುವುದಿಲ್ಲ. ಈ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಸಂಸ್ಥಾಪಕ ಸ್ವಾಮಿ ಗೋವಿಂದಾನಂದ ಸರಸ್ವತಿ ಇಂದು (ಫೆ.14) ತಿರುಮಲಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ಜೋಡಿಗಳು ಪಾರ್ಕ್‌‌ನಲ್ಲಿ ಸುತ್ತಾಡುವುದು ಕಂಡರೆ ಅವರ ಕಾಲುಗಳನ್ನು ಮುರಿಯುತ್ತೇವೆ: ಶಿವಸೇನೆ ಎಚ್ಚರಿಕೆ

ವಾಲ್ಮೀಕಿ ರಾಮಾಯಣವು ಹನುಮಂತನು ಕಿಷ್ಕಿಂಧೆಯ ಅಂಜನಹಳ್ಳಿಯಲ್ಲಿ ಜನಿಸಿದನೆಂದು ಹೇಳುತ್ತದೆ, ಇದು ಹಂಪಿ ಬಳಿಯ ತುಂಗಭದ್ರಾ ನದಿಯ ದಡದಲ್ಲಿದೆ ಎಂದು ನಂಬಲಾಗಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಈ ವಿವಾದ ಬಗೆಹರಿಸಲು ಚರ್ಚೆ ನಡೆದರೂ ಮುಗಿಯುವ ಹಂತಕ್ಕೆ ಬರಲಿಲ್ಲ.

ಟಿಟಿಡಿ ಸಮಿತಿಯು (ಕಳೆದ ತಿಂಗಳು ನಿಧನರಾದ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯದ ಉಪಕುಲಪತಿ ವಿ ಮುರಳೀಧರ ಶರ್ಮಾ ಅವರ ನೇತೃತ್ವದ) ಪುರಾತನ ಗ್ರಂಥಗಳು ಮತ್ತು ತಾಮ್ರ-ಲೇಖನದಂತಹ ಪ್ರಾಚೀನ ಗ್ರಂಥಗಳು ಈಗ ತಿರುಮಲ ಎಂದು ಕರೆಯಲ್ಪಡುವ ಅಂಜನಾದ್ರಿಯನ್ನು ಹನುಮಂತನ ಜನ್ಮಸ್ಥಳವೆಂದು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ ಎಂದಿದೆ.

ಏಪ್ರಿಲ್‌ನಲ್ಲಿ ಟಿಟಿಡಿ ಅಂಜನಾದ್ರಿಯೇ ಹನುಮಾನ್ ಜನ್ಮಸ್ಥಳ ಎಂದು ಸಾರುವ ಕಿರುಪುಸ್ತಕವನ್ನು ಪ್ರಕಟಿಸಿತ್ತು. ಈ ಕಿರುಪುಸ್ತಕವು ಡಿಸೆಂಬರ್ 2020 ರಲ್ಲಿ ರಚಿತವಾದ ಎಂಟು ಸದಸ್ಯರ ಸಮಿತಿಯು ಸಲ್ಲಿಸಿದ ವರದಿಯನ್ನು ಆಧರಿಸಿದೆ. ಇದಕ್ಕೆ ಪ್ರತಿಯಾಗಿ ರಾಜ್ಯದ ಹನುಮನ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಟಿಟಿಡಿಗೆ ಆರು ಪುಟಗಳ ಪತ್ರದೊಂದಿಗೆ ಪ್ರತಿವಾದ ಹೂಡಿ, ಚರ್ಚೆ ನಡೆಸಿತ್ತು.

ಹಲವಾರು ವೈದಿಕ ಮತ್ತು ಪುರಾಣದ ವಿದ್ವಾಂಸರು ಒಪ್ಪಿಕೊಂಡಿರುವ ಪೌರಾಣಿಕ, ಸಾಹಿತ್ಯಿಕ, ಪುರಾತತ್ವ ಮತ್ತು ಭೌಗೋಳಿಕ ಪುರಾವೆಗಳ ಮೇಲೆ ಟಿಟಿಡಿ ತನ್ನ ಹಕ್ಕನ್ನು ಆಧರಿಸಿದೆ ಮತ್ತು ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳುತ್ತದೆ.

ಟಿಟಿಡಿ ಬುಧವಾರ ನಡೆಸಲಿರುವ ಸಮಾರಂಭದಲ್ಲಿ ಶಾರದಾ ಪೀಠಾಧಿಪತಿ ಸ್ವರೂಪೇಂದ್ರ ಸರಸ್ವತಿ, ಚಿತ್ರಕೂಟದ ತುಳಸಿ ಪೀಠದ ರಾಮಭದ್ರಾಚಾರ್ಯ ಮಹಾರಾಜರು, ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸ್ವಾಮಿ ಗೋವಿಂದ್ ದೇವ್ ಗಿರಿ ಮತ್ತು ದೇಶದ ಇತರ ಭಾಗಗಳ ಸ್ವಾಮೀಜಿಗಳು, ಟಿಟಿಡಿ ಅಧ್ಯಕ್ಷರು ಭಾಗವಹಿಸಲಿದ್ದಾರೆ.


ಇದನ್ನೂ ಓದಿ: ಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್‌ಗೆ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸ್ ತೆರಳಿದ 13 ವಿದ್ಯಾರ್ಥಿನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...