Homeಕರ್ನಾಟಕಆಂಧ್ರಪ್ರದೇಶ ಮತ್ತು ಕರ್ನಾಟಕದ ನಡುವೆ ಮುನ್ನೆಲೆಗೆ ಬಂದ ಹನುಮಾನ್ ಜನ್ಮಭೂಮಿ ವಿವಾದ

ಆಂಧ್ರಪ್ರದೇಶ ಮತ್ತು ಕರ್ನಾಟಕದ ನಡುವೆ ಮುನ್ನೆಲೆಗೆ ಬಂದ ಹನುಮಾನ್ ಜನ್ಮಭೂಮಿ ವಿವಾದ

- Advertisement -
- Advertisement -

ನವೆಂಬರ್ 2019 ರಲ್ಲಿ ರಾಮ ಜನ್ಮಭೂಮಿ ವಿವಾದವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದ ನಂತರ, ಹನುಮಾನ್ ಜನ್ಮಭೂಮಿಯ ಬಗ್ಗೆ ಹೊಸ ವಿವಾದವೊಂದು ಭುಗಿಲೆದ್ದಿದೆ. ಎರಡು ರಾಜ್ಯಗಳ ನಡುವಿನ ಈ ವಿವಾದ ಮತ್ತಷ್ಟು ದೊಡ್ಡದಾಗುವ ಸಾಧ್ಯತೆಯಿದೆ.

ಆಂಧ್ರಪ್ರದೇಶ ಮತ್ತು ಕರ್ನಾಟಕದ ಎರಡು ಹಿಂದೂ ಟ್ರಸ್ಟ್‌ಗಳ ನಡುವೆ ಈ ವಿವಾದ ಉಂಟಾಗಿದ್ದು, ತಮ್ಮ ಊರಿನಲ್ಲಿರುವ ಬೇರೆ ಬೇರೆ ಸ್ಥಳಗಳನ್ನು ಹನುಮಾನ್ ಜನ್ಮಸ್ಥಳವೆಂದು ವಾದಿಸುತ್ತಿವೆ.

ಒಂದು ಹೆಜ್ಜೆ ಮುಂದೆ ಹೋಗಿರುವ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ, ತಿರುಮಲ ಬೆಟ್ಟದಲ್ಲಿನ ದೇವಾಲಯ ಮತ್ತು ಯಾತ್ರಾಸ್ಥಳವಾದ ಅಂಜನಾದ್ರಿಯನ್ನು ಭವ್ಯವಾಗಿ ಅಭಿವೃದ್ಧಿಪಡಿಸಲು ಬುಧವಾರದಂದು (ಫೆ.16) ಸಮಾರಂಭ ಒಂದನ್ನು ಆಯೋಜಿಸಿದೆ. ಕಳೆದ ವರ್ಷ ಟಿಟಿಡು ಏಪ್ರಿಲ್‌ನಲ್ಲಿ ರಾಮನವಮಿಯಂದು ತಿರುಮಲ ಅಂಜನಾದ್ರಿಯನ್ನು ಹನುಮಂತನ ಜನ್ಮಸ್ಥಳ ಎಂದು ಘೋಷಿಸಿದೆ.

ಆದರೆ ರಾಜ್ಯದ ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇದನ್ನು ಒಪ್ಪುವುದಿಲ್ಲ. ಈ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಸಂಸ್ಥಾಪಕ ಸ್ವಾಮಿ ಗೋವಿಂದಾನಂದ ಸರಸ್ವತಿ ಇಂದು (ಫೆ.14) ತಿರುಮಲಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ಜೋಡಿಗಳು ಪಾರ್ಕ್‌‌ನಲ್ಲಿ ಸುತ್ತಾಡುವುದು ಕಂಡರೆ ಅವರ ಕಾಲುಗಳನ್ನು ಮುರಿಯುತ್ತೇವೆ: ಶಿವಸೇನೆ ಎಚ್ಚರಿಕೆ

ವಾಲ್ಮೀಕಿ ರಾಮಾಯಣವು ಹನುಮಂತನು ಕಿಷ್ಕಿಂಧೆಯ ಅಂಜನಹಳ್ಳಿಯಲ್ಲಿ ಜನಿಸಿದನೆಂದು ಹೇಳುತ್ತದೆ, ಇದು ಹಂಪಿ ಬಳಿಯ ತುಂಗಭದ್ರಾ ನದಿಯ ದಡದಲ್ಲಿದೆ ಎಂದು ನಂಬಲಾಗಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಈ ವಿವಾದ ಬಗೆಹರಿಸಲು ಚರ್ಚೆ ನಡೆದರೂ ಮುಗಿಯುವ ಹಂತಕ್ಕೆ ಬರಲಿಲ್ಲ.

ಟಿಟಿಡಿ ಸಮಿತಿಯು (ಕಳೆದ ತಿಂಗಳು ನಿಧನರಾದ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯದ ಉಪಕುಲಪತಿ ವಿ ಮುರಳೀಧರ ಶರ್ಮಾ ಅವರ ನೇತೃತ್ವದ) ಪುರಾತನ ಗ್ರಂಥಗಳು ಮತ್ತು ತಾಮ್ರ-ಲೇಖನದಂತಹ ಪ್ರಾಚೀನ ಗ್ರಂಥಗಳು ಈಗ ತಿರುಮಲ ಎಂದು ಕರೆಯಲ್ಪಡುವ ಅಂಜನಾದ್ರಿಯನ್ನು ಹನುಮಂತನ ಜನ್ಮಸ್ಥಳವೆಂದು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ ಎಂದಿದೆ.

ಏಪ್ರಿಲ್‌ನಲ್ಲಿ ಟಿಟಿಡಿ ಅಂಜನಾದ್ರಿಯೇ ಹನುಮಾನ್ ಜನ್ಮಸ್ಥಳ ಎಂದು ಸಾರುವ ಕಿರುಪುಸ್ತಕವನ್ನು ಪ್ರಕಟಿಸಿತ್ತು. ಈ ಕಿರುಪುಸ್ತಕವು ಡಿಸೆಂಬರ್ 2020 ರಲ್ಲಿ ರಚಿತವಾದ ಎಂಟು ಸದಸ್ಯರ ಸಮಿತಿಯು ಸಲ್ಲಿಸಿದ ವರದಿಯನ್ನು ಆಧರಿಸಿದೆ. ಇದಕ್ಕೆ ಪ್ರತಿಯಾಗಿ ರಾಜ್ಯದ ಹನುಮನ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಟಿಟಿಡಿಗೆ ಆರು ಪುಟಗಳ ಪತ್ರದೊಂದಿಗೆ ಪ್ರತಿವಾದ ಹೂಡಿ, ಚರ್ಚೆ ನಡೆಸಿತ್ತು.

ಹಲವಾರು ವೈದಿಕ ಮತ್ತು ಪುರಾಣದ ವಿದ್ವಾಂಸರು ಒಪ್ಪಿಕೊಂಡಿರುವ ಪೌರಾಣಿಕ, ಸಾಹಿತ್ಯಿಕ, ಪುರಾತತ್ವ ಮತ್ತು ಭೌಗೋಳಿಕ ಪುರಾವೆಗಳ ಮೇಲೆ ಟಿಟಿಡಿ ತನ್ನ ಹಕ್ಕನ್ನು ಆಧರಿಸಿದೆ ಮತ್ತು ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳುತ್ತದೆ.

ಟಿಟಿಡಿ ಬುಧವಾರ ನಡೆಸಲಿರುವ ಸಮಾರಂಭದಲ್ಲಿ ಶಾರದಾ ಪೀಠಾಧಿಪತಿ ಸ್ವರೂಪೇಂದ್ರ ಸರಸ್ವತಿ, ಚಿತ್ರಕೂಟದ ತುಳಸಿ ಪೀಠದ ರಾಮಭದ್ರಾಚಾರ್ಯ ಮಹಾರಾಜರು, ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸ್ವಾಮಿ ಗೋವಿಂದ್ ದೇವ್ ಗಿರಿ ಮತ್ತು ದೇಶದ ಇತರ ಭಾಗಗಳ ಸ್ವಾಮೀಜಿಗಳು, ಟಿಟಿಡಿ ಅಧ್ಯಕ್ಷರು ಭಾಗವಹಿಸಲಿದ್ದಾರೆ.


ಇದನ್ನೂ ಓದಿ: ಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್‌ಗೆ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸ್ ತೆರಳಿದ 13 ವಿದ್ಯಾರ್ಥಿನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...