Homeಕರ್ನಾಟಕಆಂಧ್ರಪ್ರದೇಶ ಮತ್ತು ಕರ್ನಾಟಕದ ನಡುವೆ ಮುನ್ನೆಲೆಗೆ ಬಂದ ಹನುಮಾನ್ ಜನ್ಮಭೂಮಿ ವಿವಾದ

ಆಂಧ್ರಪ್ರದೇಶ ಮತ್ತು ಕರ್ನಾಟಕದ ನಡುವೆ ಮುನ್ನೆಲೆಗೆ ಬಂದ ಹನುಮಾನ್ ಜನ್ಮಭೂಮಿ ವಿವಾದ

- Advertisement -
- Advertisement -

ನವೆಂಬರ್ 2019 ರಲ್ಲಿ ರಾಮ ಜನ್ಮಭೂಮಿ ವಿವಾದವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದ ನಂತರ, ಹನುಮಾನ್ ಜನ್ಮಭೂಮಿಯ ಬಗ್ಗೆ ಹೊಸ ವಿವಾದವೊಂದು ಭುಗಿಲೆದ್ದಿದೆ. ಎರಡು ರಾಜ್ಯಗಳ ನಡುವಿನ ಈ ವಿವಾದ ಮತ್ತಷ್ಟು ದೊಡ್ಡದಾಗುವ ಸಾಧ್ಯತೆಯಿದೆ.

ಆಂಧ್ರಪ್ರದೇಶ ಮತ್ತು ಕರ್ನಾಟಕದ ಎರಡು ಹಿಂದೂ ಟ್ರಸ್ಟ್‌ಗಳ ನಡುವೆ ಈ ವಿವಾದ ಉಂಟಾಗಿದ್ದು, ತಮ್ಮ ಊರಿನಲ್ಲಿರುವ ಬೇರೆ ಬೇರೆ ಸ್ಥಳಗಳನ್ನು ಹನುಮಾನ್ ಜನ್ಮಸ್ಥಳವೆಂದು ವಾದಿಸುತ್ತಿವೆ.

ಒಂದು ಹೆಜ್ಜೆ ಮುಂದೆ ಹೋಗಿರುವ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ, ತಿರುಮಲ ಬೆಟ್ಟದಲ್ಲಿನ ದೇವಾಲಯ ಮತ್ತು ಯಾತ್ರಾಸ್ಥಳವಾದ ಅಂಜನಾದ್ರಿಯನ್ನು ಭವ್ಯವಾಗಿ ಅಭಿವೃದ್ಧಿಪಡಿಸಲು ಬುಧವಾರದಂದು (ಫೆ.16) ಸಮಾರಂಭ ಒಂದನ್ನು ಆಯೋಜಿಸಿದೆ. ಕಳೆದ ವರ್ಷ ಟಿಟಿಡು ಏಪ್ರಿಲ್‌ನಲ್ಲಿ ರಾಮನವಮಿಯಂದು ತಿರುಮಲ ಅಂಜನಾದ್ರಿಯನ್ನು ಹನುಮಂತನ ಜನ್ಮಸ್ಥಳ ಎಂದು ಘೋಷಿಸಿದೆ.

ಆದರೆ ರಾಜ್ಯದ ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇದನ್ನು ಒಪ್ಪುವುದಿಲ್ಲ. ಈ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಸಂಸ್ಥಾಪಕ ಸ್ವಾಮಿ ಗೋವಿಂದಾನಂದ ಸರಸ್ವತಿ ಇಂದು (ಫೆ.14) ತಿರುಮಲಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ಜೋಡಿಗಳು ಪಾರ್ಕ್‌‌ನಲ್ಲಿ ಸುತ್ತಾಡುವುದು ಕಂಡರೆ ಅವರ ಕಾಲುಗಳನ್ನು ಮುರಿಯುತ್ತೇವೆ: ಶಿವಸೇನೆ ಎಚ್ಚರಿಕೆ

ವಾಲ್ಮೀಕಿ ರಾಮಾಯಣವು ಹನುಮಂತನು ಕಿಷ್ಕಿಂಧೆಯ ಅಂಜನಹಳ್ಳಿಯಲ್ಲಿ ಜನಿಸಿದನೆಂದು ಹೇಳುತ್ತದೆ, ಇದು ಹಂಪಿ ಬಳಿಯ ತುಂಗಭದ್ರಾ ನದಿಯ ದಡದಲ್ಲಿದೆ ಎಂದು ನಂಬಲಾಗಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಈ ವಿವಾದ ಬಗೆಹರಿಸಲು ಚರ್ಚೆ ನಡೆದರೂ ಮುಗಿಯುವ ಹಂತಕ್ಕೆ ಬರಲಿಲ್ಲ.

ಟಿಟಿಡಿ ಸಮಿತಿಯು (ಕಳೆದ ತಿಂಗಳು ನಿಧನರಾದ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯದ ಉಪಕುಲಪತಿ ವಿ ಮುರಳೀಧರ ಶರ್ಮಾ ಅವರ ನೇತೃತ್ವದ) ಪುರಾತನ ಗ್ರಂಥಗಳು ಮತ್ತು ತಾಮ್ರ-ಲೇಖನದಂತಹ ಪ್ರಾಚೀನ ಗ್ರಂಥಗಳು ಈಗ ತಿರುಮಲ ಎಂದು ಕರೆಯಲ್ಪಡುವ ಅಂಜನಾದ್ರಿಯನ್ನು ಹನುಮಂತನ ಜನ್ಮಸ್ಥಳವೆಂದು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ ಎಂದಿದೆ.

ಏಪ್ರಿಲ್‌ನಲ್ಲಿ ಟಿಟಿಡಿ ಅಂಜನಾದ್ರಿಯೇ ಹನುಮಾನ್ ಜನ್ಮಸ್ಥಳ ಎಂದು ಸಾರುವ ಕಿರುಪುಸ್ತಕವನ್ನು ಪ್ರಕಟಿಸಿತ್ತು. ಈ ಕಿರುಪುಸ್ತಕವು ಡಿಸೆಂಬರ್ 2020 ರಲ್ಲಿ ರಚಿತವಾದ ಎಂಟು ಸದಸ್ಯರ ಸಮಿತಿಯು ಸಲ್ಲಿಸಿದ ವರದಿಯನ್ನು ಆಧರಿಸಿದೆ. ಇದಕ್ಕೆ ಪ್ರತಿಯಾಗಿ ರಾಜ್ಯದ ಹನುಮನ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಟಿಟಿಡಿಗೆ ಆರು ಪುಟಗಳ ಪತ್ರದೊಂದಿಗೆ ಪ್ರತಿವಾದ ಹೂಡಿ, ಚರ್ಚೆ ನಡೆಸಿತ್ತು.

ಹಲವಾರು ವೈದಿಕ ಮತ್ತು ಪುರಾಣದ ವಿದ್ವಾಂಸರು ಒಪ್ಪಿಕೊಂಡಿರುವ ಪೌರಾಣಿಕ, ಸಾಹಿತ್ಯಿಕ, ಪುರಾತತ್ವ ಮತ್ತು ಭೌಗೋಳಿಕ ಪುರಾವೆಗಳ ಮೇಲೆ ಟಿಟಿಡಿ ತನ್ನ ಹಕ್ಕನ್ನು ಆಧರಿಸಿದೆ ಮತ್ತು ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳುತ್ತದೆ.

ಟಿಟಿಡಿ ಬುಧವಾರ ನಡೆಸಲಿರುವ ಸಮಾರಂಭದಲ್ಲಿ ಶಾರದಾ ಪೀಠಾಧಿಪತಿ ಸ್ವರೂಪೇಂದ್ರ ಸರಸ್ವತಿ, ಚಿತ್ರಕೂಟದ ತುಳಸಿ ಪೀಠದ ರಾಮಭದ್ರಾಚಾರ್ಯ ಮಹಾರಾಜರು, ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸ್ವಾಮಿ ಗೋವಿಂದ್ ದೇವ್ ಗಿರಿ ಮತ್ತು ದೇಶದ ಇತರ ಭಾಗಗಳ ಸ್ವಾಮೀಜಿಗಳು, ಟಿಟಿಡಿ ಅಧ್ಯಕ್ಷರು ಭಾಗವಹಿಸಲಿದ್ದಾರೆ.


ಇದನ್ನೂ ಓದಿ: ಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್‌ಗೆ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸ್ ತೆರಳಿದ 13 ವಿದ್ಯಾರ್ಥಿನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...