Homeಕರ್ನಾಟಕಹನೂರು ಕ್ಷೇತ್ರ ಸಮೀಕ್ಷೆ: ಕುಟುಂಬ ಪ್ರತಿಷ್ಠೆಯ ಕಣದಲ್ಲಿ ಜೆಡಿಎಸ್ ಅಭ್ಯರ್ಥಿ ಸವಾಲಾಗಬಲ್ಲರೆ?

ಹನೂರು ಕ್ಷೇತ್ರ ಸಮೀಕ್ಷೆ: ಕುಟುಂಬ ಪ್ರತಿಷ್ಠೆಯ ಕಣದಲ್ಲಿ ಜೆಡಿಎಸ್ ಅಭ್ಯರ್ಥಿ ಸವಾಲಾಗಬಲ್ಲರೆ?

ಲಿಂಗಾಯತ ಸಮುದಾಯ ಪ್ರಾಬಲ್ಯವಿರುವ ಹನೂರಿನಲ್ಲಿ ಒಕ್ಕಲಿಗ ಸಮುದಾಯದ ಆರ್.ನರೇಂದ್ರ ಹ್ಯಾಟ್ರಿಕ್ ಗೆಲುವು ಸಾಧಿಸಿರುವುದು ವಿಶೇಷ

- Advertisement -
- Advertisement -

ಕರ್ನಾಟಕದ ಮತದಾರರು ವ್ಯಕ್ತಿಗಿಂತ ಪಕ್ಷವನ್ನು ಪರಿಗಣಿಸುತ್ತಾರೆಂದು ಕೆಲವು ಸಮೀಕ್ಷೆಗಳು ಹೇಳುತ್ತವೆ. ಆದರೆ ಹನೂರು ವಿಧಾನಸಭಾ ಕ್ಷೇತ್ರವು ಪಕ್ಷಕ್ಕಿಂತ ವ್ಯಕ್ತಿ ಪ್ರತಿಷ್ಠೆಯ ಕ್ಷೇತ್ರ. ಮಾಜಿ ಶಾಸಕರುಗಳಾದ ದಿವಂಗತ ರಾಜೂಗೌಡ ಮತ್ತು ಎಚ್.ನಾಗಪ್ಪ ಕುಟುಂಬವೇ ಇಲ್ಲಿನ ರಾಜಕಾರಣದ ಕ್ಷೇತ್ರ ಬಿಂದು.

ಹೆಚ್ಚೆಂದರೆ 12,000 ಒಕ್ಕಲಿಗ ಮತದಾರರಿರುವ ಈ ಕ್ಷೇತ್ರದಲ್ಲಿ ಲಿಂಗಾಯತರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸುಮಾರು 45,000 ಲಿಂಗಾಯಿತರಿದ್ದರೂ ಒಕ್ಕಲಿಗ ಸಮುದಾಯದ ರಾಜೂಗೌಡ ಕುಟುಂಬ ಮೇಲುಗೈ ಸಾಧಿಸಿರುವುದು ಇಲ್ಲಿನ ವಿಶೇಷ. ಲಿಂಗಾಯತ ಸಮುದಾಯದ ನಾಗಪ್ಪ ಕುಟುಂಬ ಕ್ಷೇತ್ರವನ್ನು ತನ್ನ ತಕ್ಕೆಗೆ ಮರಳಿ ಪಡೆಯಲು ಸತತ ಯತ್ನಿಸುತ್ತಿದೆ.

ರಾಜೂಗೌಡ ಮತ್ತು ನಾಗಪ್ಪ ಕುಟುಂಬವಷ್ಟೇ ದಶಕಗಳ ಕಾಲ ಈ ಕ್ಷೇತ್ರದ ಮೇಲೆ ಹಿಡಿತ ಸಾಧಿಸುತ್ತಾ ಬಂದಿವೆ. ಈಗಲೂ ಅಷ್ಟೇ ಎರಡು ಕುಟುಂಬಗಳ ನಡುವೆಯೇ ರಾಷ್ಟ್ರೀಯ ಪಕ್ಷಗಳ ಟಿಕೆಟ್ ಹಂಚಿಕೆಯಾಗಿದೆ. ಒಂದು ಕಾಲಕ್ಕೆ ಹನೂರು ವಿಧಾನಸಭಾ ಕ್ಷೇತ್ರವೂ ಕಾಂಗ್ರೆಸ್ ಮತ್ತು ಜೆಡಿಎಸ್ಸಿನ ಭದ್ರಕೋಟೆಯಾಗಿತ್ತು. ಆದರೆ ನಾಗಪ್ಪನವರು ಕಾಡುಗಳ್ಳ ವೀರಪ್ಪನ್ ಗುಂಡಿಗೆ ಬಲಿಯಾದ ಬಳಿಕ, ಅವರ ಪತ್ನಿ ಪರಿಮಳಾ ನಾಗಪ್ಪ ಸತತವಾಗಿ ಪಕ್ಷ ನಿಷ್ಠೆಯನ್ನು ಬದಲಿಸುತ್ತಾ ಬಂದಿರುವುದು ಫಲಿತಾಂಶದ ಮೇಲೆ ಪರಿಣಾಮ ಬೀರಿದೆ.

ಇಲ್ಲಿ ಜಾತಿ ಸಮೀಕರಣಕ್ಕಿಂತ ಎರಡು ಕುಟುಂಬಗಳ ಪ್ರತಿಷ್ಠೆಯೇ ಚುನಾವಣಾ ಫಲಿತಾಂಶದ ಫ್ಯಾಕ್ಟರ್ ಆಗಿತ್ತು. ಆದರೆ ಜೆಡಿಎಸ್ಸಿನಲ್ಲಿ ಸಕ್ರಿಯವಾಗಿರುವ, ಕಳೆದ ಚುನಾವಣೆಯಲ್ಲಿ ಸೋತಿಸುವ ರಿಯಲ್ ಎಸ್ಟೇಟ್ ಉದ್ಯಮಿ, ಕುರುಬ ಸಮುದಾಯದ ಎಂ.ಆರ್.ಮಂಜುನಾಥ್ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಿಂದ ಸುತ್ತಾಡಿದ್ದಾರೆ. ಕೊರೊನಾ ಸಮಯದಲ್ಲಿ ಒಂದಿಷ್ಟು ಕಾಣೆಯಾಗಿದ್ದು ಬಿಟ್ಟರೆ, ಮಂಜುನಾಥ್ ತನ್ನದೇ ಕಾರ್ಯಕರ್ತರನ್ನು ತೆಕ್ಕೆಯಲ್ಲಿ ಇಟ್ಟುಕೊಂಡಿರುವ ಅಭ್ಯರ್ಥಿಯಾಗಿದ್ದಾರೆ. 2018ರ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲು ಮಂಜುನಾಥ್ ಪ್ರವೇಶ ಕಾರಣವಾಗಿತ್ತು. ಈ ಬಾರಿಯೂ ಮಂಜುನಾಥ್ ಅವರನ್ನು ಜೆಡಿಎಸ್ ಕಣಕ್ಕಿಳಿಸಿದ್ದು, ಮತ್ತೆ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದೆ.

ರಾಜೂಗೌಡರ ಪುತ್ರ ಆರ್.ನರೇಂದ್ರ ಅವರು ಕಾಂಗ್ರೆಸ್ಸಿನಿಂದ ಮೂರು ಬಾರಿ ಸತತವಾಗಿ ಆಯ್ಕೆಯಾಗಿದ್ದಾರೆ. ಈ ಬಾರಿಯೂ ಕಾಂಗ್ರೆಸ್ ಟಿಕೆಟ್ ನೀಡಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯನ್ನು ಬಿಟ್ಟರೆ, ಉಳಿದೆರಡು ಅವಧಿಯಲ್ಲಿ ಕ್ಷೇತ್ರ ಅಭಿವೃದ್ಧಿಯಾಗಿಲ್ಲ ಎಂಬ ಆರೋಪಗಳಿವೆ. ಆದರೆ ನರೇಂದ್ರ ಅವರು ಹೇಳುವುದೇ ಬೇರೆ. “ಬಿಜೆಪಿಯಂತಹ ಭ್ರಷ್ಟ ಸರ್ಕಾರ ಇನ್ನೊಂದಿಲ್ಲ. ನಮ್ಮ ಕ್ಷೇತ್ರಕ್ಕೆ ನೀಡಬೇಕಾದ ಅನುದಾನವನ್ನು ನೀಡುತ್ತಿಲ್ಲ’’ ಎಂದು ಆರೋಪಿಸುತ್ತಾ ಬಂದಿದ್ದಾರೆ.

ಹನೂರು ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ 50,000, ಪರಿಶಿಷ್ಟ ಪಂಗಡದ 35,000, ಲಿಂಗಾಯತರು 45,000, ತಮಿಳು ಭಾಷಿಕರು 20,000, ಕುರುಬರು 20,000, ಕ್ರಿಶ್ಚಿಯನ್ನರು 10,000, ಉಪ್ಪಾರರು 13,000, ಒಕ್ಕಲಿಗರು 12,000, ಮುಸ್ಲಿಮರು 9,000, ಇತರ ಸಮುದಾಯದ 12,000 ಮತದಾರರು ಇದ್ದಾರೆಂದು ಅಂದಾಜಿಸಲಾಗಿದೆ. ಸಾಮಾನ್ಯ ಕ್ಷೇತ್ರವಾದ ಇಲ್ಲಿ ಲಿಂಗಾಯತರು ಗಣನೀಯವಾಗಿ ಇದ್ದರೂ ನರೇಂದ್ರ ಅವರನ್ನು ಸೋಲಿಸಲು ಸಾಧ್ಯವಾಗುತ್ತಿಲ್ಲ.

ಲಿಂಗಾಯತರು ಹೆಚ್ಚಿರುವ ಕಾರಣಕ್ಕೆ ವಸತಿ ಸಚಿವ ವಿ.ಸೋಮಣ್ಣವರ ಕಣ್ಣು ಈ ಕ್ಷೇತ್ರದ ಮೇಲಿತ್ತು. 2018ರ ಚುನಾವಣೆಯಲ್ಲಿಯೂ ಇಲ್ಲಿಂದ ಸ್ಪರ್ಧಿಸುವ ಆಸಕ್ತಿಯನ್ನು ಸೋಮಣ್ಣ ತೋರಿದ್ದರು. ಆದರೆ ನಾಗಪ್ಪನವರ ಪತ್ನಿ, ಪರಿಮಳಾ ನಾಗಪ್ಪ ಅದಕ್ಕೆ ಒಪ್ಪಲಿಲ್ಲ. ಕ್ಷೇತ್ರದ ಮೇಲೆ ಕುಟುಂಬದ ಹಿಡಿತವನ್ನು ಬಿಟ್ಟುಕೊಡಲು ಅವರು ಸಿದ್ಧವಿರಲಿಲ್ಲ. ಹೀಗಾಗಿ ಯಾವುದಾದರೊಂದು ಪಕ್ಷದಲ್ಲಿ ನಾಗಪ್ಪ ಕುಟುಂಬ ಸ್ಪರ್ಧಿಸುತ್ತಾ ಬಂದಿದೆ. ಸೋಲುಗಳನ್ನು ಕಂಡರೂ ಎರಡನೇ ಅತಿಹೆಚ್ಚು ಮತಪಡೆಯುವಲ್ಲಿ ನಾಗಪ್ಪ ಕುಟುಂಬ ಸಫಲವಾಗಿದೆ.

ವಿ.ಸೋಮಣ್ಣ ಮತ್ತು ಪರಿಮಳಾ ನಾಗಪ್ಪ

ಜನತಾ ಪರಿವಾರದೊಂದಿಗೆ ಗುರುತಿಸಿಕೊಂಡು ಬೆಳೆದ ದಿವಂಗತ ಎಚ್.ನಾಗಪ್ಪ ಮತ್ತು ಕಾಂಗ್ರೆಸ್ಸಿನಲ್ಲಿದ್ದ ದಿವಂಗತ ರಾಜೂಗೌಡರ ನಡುವೆಯೇ ಹಲವು ಚುನಾವಣೆಗಳಲ್ಲಿ ಪೈಪೋಟಿ ನಡೆದಿರುವುದನ್ನು ಕ್ಷೇತ್ರದ ಚುನಾವಣಾ ಇತಿಹಾಸ ಹೇಳುತ್ತದೆ. 1967ರ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿದ್ದ ಎಚ್‌ ನಾಗಪ್ಪ, 1972ರಲ್ಲಿ ಆರ್‌ ರಾಜೇಗೌಡ ಗೆಲುವು ಸಾಧಿಸಿದ್ದರು. 1978ರ ಚುನಾವಣೆಯಲ್ಲಿ ಇಂದಿರಾ ಕಾಂಗ್ರೆಸ್‌ನ ರಾಜೂಗೌಡ ಗೆದ್ದಿದ್ದರು. ಮತ್ತೆ 1983ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೆ.ಪಿ.ಶಿವಮೂರ್ತಿ ಗೆಲುವು ಸಾಧಿಸಿದ್ದರು. 1985ರಲ್ಲಿ ಕಾಂಗ್ರೆಸ್‌ ತೊರೆದು ಸ್ವತಂತ್ರವಾಗಿ ಸ್ಪರ್ಧಿಸಿದ್ದ ರಾಜೂಗೌಡರು ಮತ್ತೆ ಗೆದ್ದು ಕ್ಷೇತ್ರದ ಮೇಲೆ ತಮ್ಮ ಪ್ರಾಬಲ್ಯವನ್ನು ಸಾಬೀತು ಮಾಡಿದ್ದರು. ಬಳಿಕ ನಡೆದ 1989ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮರಳಿದ ರಾಜೂಗೌಡ ಮತ್ತೊಮ್ಮೆ ಆಯ್ಕೆಯಾದರು. 1994ರ ಚುನಾವಣೆಯಲ್ಲಿ ಜನತಾ ದಳದ ಎಚ್‌ ನಾಗಪ್ಪ ಗೆದ್ದರೆ, 1999ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಜಿ ರಾಜುಗೌಡ ಮಗದೊಮ್ಮೆ ಗೆದ್ದಿದ್ದರು.

ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡರಾಗಿದ್ದ ನಾಗಪ್ಪ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದ್ದನು. ವೀರಪ್ಪನ್ ಕಾರ್ಯಾಚರಣೆ ನಡೆಸುತ್ತಿದ್ದ ಕಾಡಿನ ವ್ಯಾಪ್ತಿಯಲ್ಲೇ ಹನೂರು ಕ್ಷೇತ್ರವಿದೆ. ವೀರಪ್ಪನ್ ಆತಂಕದಲ್ಲೇ ಇಲ್ಲಿ ಚುನಾವಣೆಗಳು ನಡೆಯುತ್ತಿದ್ದವು. ಕ್ಷೇತ್ರದ ಮಾಜಿ ಶಾಸಕರಾಗಿದ್ದ ಹನೂರು ನಾಗಪ್ಪ ಅವರನ್ನು ಕಾಮಗೆರೆಯ ಅವರ ಮನೆಯಿಂದ 2002ರ ಆಗಸ್ಟ್ ನಲ್ಲಿ ವೀರಪ್ಪನ್ ಅಪಹರಿಸಿದ್ದ. ವೀರಪ್ಪನ್ ವಶದಲ್ಲಿದ್ದಾಗಲೇ ನಾಗಪ್ಪ ಡಿಸೆಂಬರ್ 2002ರಲ್ಲಿ ಚಂಗಡಿ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಘಟನೆ ರಾಜ್ಯದಲ್ಲಿ ತಲ್ಲಣ ಸೃಷ್ಟಿ ಮಾಡಿತು. 2004ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವು ಪರಿಮಳಾ ನಾಗಪ್ಪನವರಿಗೆ ಟಿಕೆಟ್ ನೀಡಿತು. ರಾಜೂಗೌಡ ಅವರ ಪುತ್ರ ನರೇಂದ್ರ ಪ್ರತಿಸ್ಪರ್ಧಿಯಾಗಿದ್ದರು. ಆ ಚುನಾವಣೆಯಲ್ಲಿ ಗೆದ್ದಿದ್ದ ನಾಗಪ್ಪ ಕುಟುಂಬ ಮತ್ತೆ ಇಲ್ಲಿ ಗೆಲುವು ಕಾಣಲಿಲ್ಲ.

2008ರ ವೇಳೆಗೆ ಜೆಡಿಎಸ್ಸಿನೊಂದಿಗೆ ಮುನಿಸಿಕೊಂಡ ಪರಿಮಳಾ ಅವರು ಬಿಎಸ್ಪಿಗೆ ಹಾರಿದರು. ನರೇಂದ್ರ ವಿರುದ್ಧ 23,140 ಮತದಂತರದಲ್ಲಿ ಸೋಲು ಕಂಡಿದ್ದರು. 2013ರಲ್ಲಿ ಯಡಿಯೂರಪ್ಪನವರ ಕೆಜೆಪಿಯಿಂದ ಸ್ಪರ್ಧಿಸುವ ಇಚ್ಛೆ ಪರಿಮಳಾ ಅವರಿಗಿತ್ತು. ಆ ವೇಳೆ ಸೋಮಣ್ಣನವರು ಕೆಜೆಪಿ ಟಿಕೆಟ್ ಪಡೆದು ಹನೂರಿಗೆ ಬರುತ್ತಾರೆಂಬ ಸುದ್ದಿ ಹಬ್ಬಿತು. ಗೊಂದಲದಲ್ಲಿದ್ದ ಪರಿಮಳಾ ಅವರು ಮತ್ತೆ ಜೆಡಿಎಸ್ಸಿಗೆ ಬಂದರು. ಈ ಚುನಾವಣೆಯಲ್ಲಿ 11,549 ಮತಗಳಂತರದಲ್ಲಿ ಮತ್ತೆ ಸೋತರು. ಆ ನಂತರದಲ್ಲಿ ಜೆಡಿಎಸ್ ಟಿಕೆಟ್ ದೊರಕಲಿಲ್ಲ. ನಾಗಪ್ಪ ಕುಟುಂಬ ಬಿಜೆಪಿಗೆ ಹೊರಳಿತು. ಜೆಡಿಎಸ್ ನಿಂದ ಉದ್ಯಮಿ ಮಂಜುನಾಥ್ ಅವರಿಗೆ ಟಿಕೆಟ್ ನೀಡಲಾಯಿತು. ಬಿಜೆಪಿಯಿಂದ ನಾಗಪ್ಪ ಅವರ ಪುತ್ರ ಡಾ.ಪ್ರೀತನ್ ನಾಗಪ್ಪ ಕಣಕ್ಕಿಳಿದರು. ಭಾರೀ ಪೈಪೋಟಿ ನೀಡಿದ ಪ್ರೀತನ್, ಕೇವಲ 3513 ಮತಗಳ ಅಂತರದಲ್ಲಿ ಸೋತರು. ಪ್ರೀತನ್ ನಾಗಪ್ಪ 56931 ಮತಗಳನ್ನು ಪಡೆದರೆ, ಜೆಡಿಎಸ್ಸಿನ ಎಂ.ಆರ್.ಮಂಜುನಾಥ್ 44,957 ಮತಗಳನ್ನು ಪಡೆದಿರುವುದು ವಿಶೇಷ. ಬಿಎಸ್ಪಿ ಜೊತೆಯಲ್ಲಿ ಜೆಡಿಎಸ್ ಚುನಾವಣಾ ಪೂರ್ವ ಒಪ್ಪಂದ ಮಾಡಿಕೊಂಡಿದ್ದರಿಂದ ಜೆಡಿಎಸ್ ಮತಗಳು ಹೆಚ್ಚಾದವು ಎಂದು ಹೇಳಲಾಗುತ್ತದೆ.

2008, 2013 ಮತ್ತು 2018ರ ಚುನಾವಣೆಗಳಲ್ಲಿ ನರೇಂದ್ರ ಗೆದ್ದಿದ್ದಾರೆ. ನಾಗಪ್ಪ ಕುಟುಂಬಕ್ಕೆ ಕ್ಷೇತ್ರ ಕೈತಪ್ಪಿ ಹೋದರೂ 2018ರ ಚುನಾವಣೆಯಲ್ಲಿ ನಾಗಪ್ಪ ಪುತ್ರ ಪ್ರೀತನ್ ಬಿಜೆಪಿಯಿಂದ ಸ್ಪರ್ಧಿಸಿ ನರೇಂದ್ರ ಅವರಿಗೆ ನಡುಕ ಹುಟ್ಟಿಸಿದ್ದು ಸುಳ್ಳಲ್ಲ.

ಸತತ ಸೋಲುಗಳನ್ನು ಕಂಡಿರುವ ನಾಗಪ್ಪ ಕುಟುಂಬದ ಮೇಲೆ ಕ್ಷೇತ್ರದ ಜನರ ಅನುಕಂಪವಿದೆ. ಆದರೆ ಕ್ಷೇತ್ರದ ಜನರೊಂದಿಗೆ ಉತ್ತಮ ಸಂಪರ್ಕವನ್ನು ನರೇಂದ್ರ ಅವರು ಹೊಂದಿರುವುದನ್ನು ಅಲ್ಲಗಳೆಯಲಾಗದು.

ಬೆಂಗಳೂರಿನಲ್ಲಿ ವೈದ್ಯರಾಗಿರುವ ಪ್ರೀತನ್ ಚುನಾವಣೆ ಸಂದರ್ಭದಲ್ಲಿ ಮಾತ್ರ ಕ್ಷೇತ್ರಕ್ಕೆ ಬರುತ್ತಾರೆಂಬ ಆರೋಪಗಳಿವೆ. ಇದು ಪ್ರೀತನ್ ಮೇಲೆ ಗುಮಾನಿ ಹೆಚ್ಚಿಸಲು ಕಾರಣವಾಗಿದೆ. ಇದರ ಜೊತೆಗೆ ಬಿಜೆಪಿಯಿಂದ ಇನ್ನು ನಾಲ್ವರು ಟಿಕೆಟ್ ಆಕಾಂಕ್ಷಿಗಳಿದ್ದರು. ಅದರಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದವರು ಡಾ.ಎಸ್.ದತ್ತೇಶ್‌ ಕುಮಾರ್‌.

ಚಾಮರಾಜನಗರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ದತ್ತೇಶ್ ಮೂಲತಃ ಉದ್ಯಮಿ, ಕೊಳ್ಳೇಗಾಲದಲ್ಲಿರುವ ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ. 2013ರಲ್ಲಿ ನರೇಂದ್ರ ಅವರ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿ, 13,258 ಮತ ಗಳಿಸಿ, ಮೂರನೇ ಸ್ಥಾನದಲ್ಲಿದ್ದರು. 2018ರಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪ್ರೀತನ್ ಅವರಿಗೆ ಪಕ್ಷ ಮಣೆ ಹಾಕಿತು. ನಂತರದಲ್ಲಿ ದತ್ತೇಶ್ ಪಕ್ಷ ಸಂಘಟನೆಯತ್ತ ಗಮನ ಹರಿಸಿದರು. ಜಿಲ್ಲಾ ಉಪಾಧ್ಯಕ್ಷ ಸ್ಥಾನವೂ ಅವರಿಗೆ ದೊರಕಿತು. ಇನ್ನೇನು ಟಿಕೆಟ್ ಸಿಗುತ್ತದೆ ಎಂಬ ಉತ್ಸಾಹದಲ್ಲಿದ್ದಾಗ ಮತ್ತೆ ನಾಗಪ್ಪ ಕುಟುಂಬಕ್ಕೆ ಬಿಜೆಪಿ ಟಿಕೆಟ್ ನೀಡಿತು.

ಇದರಿಂದ ಸಿಟ್ಟಿಗೆದ್ದ ದತ್ತೇಶ್, ಪಕ್ಷ ತೊರೆದು ಕಾಂಗ್ರೆಸ್ ಸೇರುವ ಸೂಚನೆಗಳು ದೊರೆತ್ತಿದ್ದವು. ಆದರೆ ಅಂತಿಮವಾಗಿ ಬಿಜೆಪಿಯಲ್ಲೇ ಉಳಿದು, ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ದತ್ತೇಶ್ ಅವರಂತೆಯೇ ಉದ್ಯಮಿಗಳಾದ ವೆಂಕಟೇಶ್‌, ನಿಶಾಂತ್‌ ಟಿಕೆಟ್‌ಗಾಗಿ ಪೈಪೋಟಿ ನೀಡಿದ್ದರು. ಒಂದೇ ವೇಳೆ ಪ್ರೀತನ್ ಗೆದ್ದರೆ, ಮತ್ತೆ ನಾಗಪ್ಪ ಕುಟುಂಬ ಮೇಲುಗೈ ಸಾಧಿಸುತ್ತದೆ ಎಂಬ ಭಯ ಇತರ ಬಿಜೆಪಿ ಮುಖಂಡರಿಗೆ ಇದ್ದರೆ ಒಳೇಟುಗಳು ಬೀಳುವ ಸಾಧ್ಯತೆ ಇದೆ. ಬಿಜೆಪಿಗೆ ಹೋಲಿಸಿದರೆ ಕಾಂಗ್ರೆಸ್ಸಿನಲ್ಲಿ ಈ ಒಡಕು ಇಲ್ಲವಾಗಿದೆ.

ಉಳಿದಂತೆ ಬಿಎಸ್‌ಪಿಯಿಂದ ಮಾದೇಶ, ಎಎಪಿಯಿಂದ ಕೆ.ಹರೀಶ್‌, ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾದಿಂದ (ಅಠಾವಳೆ) ಟಿ.ಜಾನ್‌ ಪೀಟರ್‌, ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಎನ್‌.ಪ್ರದೀಪ್‌ಕುಮಾರ್‌, ಕರ್ನಾಟಕ ಪ್ರಜಾ ಪಾರ್ಟಿಯಿಂದ (ರೈತ ಪರ್ವ) ಜಿ.ಮುರುಗೇಶನ್‌, ಸರ್ವೋದಯ ಕರ್ನಾಟಕ ಪಕ್ಷದಿಂದ ಶೈಲೇಂದ್ರ ಶ್ರೀಕಂಠಸ್ವಾಮಿ, ಕಂಟ್ರಿ ಸಿಟಿಜನ್‌ ಪಾರ್ಟಿಯಿಂದ ಸಿದ್ದಪ್ಪ ಆರ್‌., ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಸುರೇಶ್‌ ಎಂ., ಪಕ್ಷೇತರರಾಗಿ ಹನೂರು ನಾಗರಾಜು, ಪ್ರದೀಪ್‌ಕುಮಾರ್‌ ಎಂ, ಮುಜಾಮಿಲ್‌ ಪಾಷಾ, ಟಿ.ಮುತ್ತುರಾಜು, ರಾಜಶೇಖರ್‌, ಸಿ.ಸಿದ್ದಾರ್ಥನ್‌ ಮತ್ತು ಸೆಲ್ವರಾಜ್‌ ಎಸ್‌ ಕಣದಲ್ಲಿದ್ದಾರೆ.

ಮೇಲು ನೋಟಕ್ಕೆ ಬಿಜೆಪಿ- ಕಾಂಗ್ರೆಸ್ ನಡುವೆ ಪೈಪೋಟಿ ಕಂಡು ಬಂದರೂ ಮಂಜುನಾಥ್ ಸುಮ್ಮನೆ ಕೂರುವವರಲ್ಲ. ಹೀಗಾಗಿ ತ್ರಿಕೋನ ಸ್ಪರ್ಧೆ ಏರ್ಪಡುವಂತೆ ಕಾಣುತ್ತಿದೆ. ಒಕ್ಕಲಿಗ ಸಮುದಾಯದ ನರೇಂದ್ರ, ಲಿಂಗಾಯತ ಸಮುದಾಯದ ಪ್ರೀತನ್, ಕುರುಬ ಸಮುದಾಯದ ಮಂಜುನಾಥ್ ನಡುವೆ ವಿವಿಧ ಜಾತಿಗಳ ಮತಗಳು ಹೇಗೆ ವಿಭಜನೆಯಾಗುತ್ತವೆ ಎಂಬುದರ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ಬಿಜೆಪಿಯೊಳಗೆ ಒಳೇಟು ಹೆಚ್ಚಾದರೆ ಕುಟುಂಬ ಪ್ರತಿಷ್ಠೆಯ ಕಣದಲ್ಲಿ ನರೇಂದ್ರ ಅವರು ಮರು ಆಯ್ಕೆಯಾಗುವ ಸಾಧ್ಯತೆಯೂ ನಿಚ್ಚಳವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...