Homeಕರ್ನಾಟಕಹನೂರು ಕ್ಷೇತ್ರ ಸಮೀಕ್ಷೆ: ಕುಟುಂಬ ಪ್ರತಿಷ್ಠೆಯ ಕಣದಲ್ಲಿ ಜೆಡಿಎಸ್ ಅಭ್ಯರ್ಥಿ ಸವಾಲಾಗಬಲ್ಲರೆ?

ಹನೂರು ಕ್ಷೇತ್ರ ಸಮೀಕ್ಷೆ: ಕುಟುಂಬ ಪ್ರತಿಷ್ಠೆಯ ಕಣದಲ್ಲಿ ಜೆಡಿಎಸ್ ಅಭ್ಯರ್ಥಿ ಸವಾಲಾಗಬಲ್ಲರೆ?

ಲಿಂಗಾಯತ ಸಮುದಾಯ ಪ್ರಾಬಲ್ಯವಿರುವ ಹನೂರಿನಲ್ಲಿ ಒಕ್ಕಲಿಗ ಸಮುದಾಯದ ಆರ್.ನರೇಂದ್ರ ಹ್ಯಾಟ್ರಿಕ್ ಗೆಲುವು ಸಾಧಿಸಿರುವುದು ವಿಶೇಷ

- Advertisement -
- Advertisement -

ಕರ್ನಾಟಕದ ಮತದಾರರು ವ್ಯಕ್ತಿಗಿಂತ ಪಕ್ಷವನ್ನು ಪರಿಗಣಿಸುತ್ತಾರೆಂದು ಕೆಲವು ಸಮೀಕ್ಷೆಗಳು ಹೇಳುತ್ತವೆ. ಆದರೆ ಹನೂರು ವಿಧಾನಸಭಾ ಕ್ಷೇತ್ರವು ಪಕ್ಷಕ್ಕಿಂತ ವ್ಯಕ್ತಿ ಪ್ರತಿಷ್ಠೆಯ ಕ್ಷೇತ್ರ. ಮಾಜಿ ಶಾಸಕರುಗಳಾದ ದಿವಂಗತ ರಾಜೂಗೌಡ ಮತ್ತು ಎಚ್.ನಾಗಪ್ಪ ಕುಟುಂಬವೇ ಇಲ್ಲಿನ ರಾಜಕಾರಣದ ಕ್ಷೇತ್ರ ಬಿಂದು.

ಹೆಚ್ಚೆಂದರೆ 12,000 ಒಕ್ಕಲಿಗ ಮತದಾರರಿರುವ ಈ ಕ್ಷೇತ್ರದಲ್ಲಿ ಲಿಂಗಾಯತರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸುಮಾರು 45,000 ಲಿಂಗಾಯಿತರಿದ್ದರೂ ಒಕ್ಕಲಿಗ ಸಮುದಾಯದ ರಾಜೂಗೌಡ ಕುಟುಂಬ ಮೇಲುಗೈ ಸಾಧಿಸಿರುವುದು ಇಲ್ಲಿನ ವಿಶೇಷ. ಲಿಂಗಾಯತ ಸಮುದಾಯದ ನಾಗಪ್ಪ ಕುಟುಂಬ ಕ್ಷೇತ್ರವನ್ನು ತನ್ನ ತಕ್ಕೆಗೆ ಮರಳಿ ಪಡೆಯಲು ಸತತ ಯತ್ನಿಸುತ್ತಿದೆ.

ರಾಜೂಗೌಡ ಮತ್ತು ನಾಗಪ್ಪ ಕುಟುಂಬವಷ್ಟೇ ದಶಕಗಳ ಕಾಲ ಈ ಕ್ಷೇತ್ರದ ಮೇಲೆ ಹಿಡಿತ ಸಾಧಿಸುತ್ತಾ ಬಂದಿವೆ. ಈಗಲೂ ಅಷ್ಟೇ ಎರಡು ಕುಟುಂಬಗಳ ನಡುವೆಯೇ ರಾಷ್ಟ್ರೀಯ ಪಕ್ಷಗಳ ಟಿಕೆಟ್ ಹಂಚಿಕೆಯಾಗಿದೆ. ಒಂದು ಕಾಲಕ್ಕೆ ಹನೂರು ವಿಧಾನಸಭಾ ಕ್ಷೇತ್ರವೂ ಕಾಂಗ್ರೆಸ್ ಮತ್ತು ಜೆಡಿಎಸ್ಸಿನ ಭದ್ರಕೋಟೆಯಾಗಿತ್ತು. ಆದರೆ ನಾಗಪ್ಪನವರು ಕಾಡುಗಳ್ಳ ವೀರಪ್ಪನ್ ಗುಂಡಿಗೆ ಬಲಿಯಾದ ಬಳಿಕ, ಅವರ ಪತ್ನಿ ಪರಿಮಳಾ ನಾಗಪ್ಪ ಸತತವಾಗಿ ಪಕ್ಷ ನಿಷ್ಠೆಯನ್ನು ಬದಲಿಸುತ್ತಾ ಬಂದಿರುವುದು ಫಲಿತಾಂಶದ ಮೇಲೆ ಪರಿಣಾಮ ಬೀರಿದೆ.

ಇಲ್ಲಿ ಜಾತಿ ಸಮೀಕರಣಕ್ಕಿಂತ ಎರಡು ಕುಟುಂಬಗಳ ಪ್ರತಿಷ್ಠೆಯೇ ಚುನಾವಣಾ ಫಲಿತಾಂಶದ ಫ್ಯಾಕ್ಟರ್ ಆಗಿತ್ತು. ಆದರೆ ಜೆಡಿಎಸ್ಸಿನಲ್ಲಿ ಸಕ್ರಿಯವಾಗಿರುವ, ಕಳೆದ ಚುನಾವಣೆಯಲ್ಲಿ ಸೋತಿಸುವ ರಿಯಲ್ ಎಸ್ಟೇಟ್ ಉದ್ಯಮಿ, ಕುರುಬ ಸಮುದಾಯದ ಎಂ.ಆರ್.ಮಂಜುನಾಥ್ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಿಂದ ಸುತ್ತಾಡಿದ್ದಾರೆ. ಕೊರೊನಾ ಸಮಯದಲ್ಲಿ ಒಂದಿಷ್ಟು ಕಾಣೆಯಾಗಿದ್ದು ಬಿಟ್ಟರೆ, ಮಂಜುನಾಥ್ ತನ್ನದೇ ಕಾರ್ಯಕರ್ತರನ್ನು ತೆಕ್ಕೆಯಲ್ಲಿ ಇಟ್ಟುಕೊಂಡಿರುವ ಅಭ್ಯರ್ಥಿಯಾಗಿದ್ದಾರೆ. 2018ರ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲು ಮಂಜುನಾಥ್ ಪ್ರವೇಶ ಕಾರಣವಾಗಿತ್ತು. ಈ ಬಾರಿಯೂ ಮಂಜುನಾಥ್ ಅವರನ್ನು ಜೆಡಿಎಸ್ ಕಣಕ್ಕಿಳಿಸಿದ್ದು, ಮತ್ತೆ ನೆಲೆಕಂಡುಕೊಳ್ಳಲು ಪ್ರಯತ್ನಿಸುತ್ತಿದೆ.

ರಾಜೂಗೌಡರ ಪುತ್ರ ಆರ್.ನರೇಂದ್ರ ಅವರು ಕಾಂಗ್ರೆಸ್ಸಿನಿಂದ ಮೂರು ಬಾರಿ ಸತತವಾಗಿ ಆಯ್ಕೆಯಾಗಿದ್ದಾರೆ. ಈ ಬಾರಿಯೂ ಕಾಂಗ್ರೆಸ್ ಟಿಕೆಟ್ ನೀಡಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯನ್ನು ಬಿಟ್ಟರೆ, ಉಳಿದೆರಡು ಅವಧಿಯಲ್ಲಿ ಕ್ಷೇತ್ರ ಅಭಿವೃದ್ಧಿಯಾಗಿಲ್ಲ ಎಂಬ ಆರೋಪಗಳಿವೆ. ಆದರೆ ನರೇಂದ್ರ ಅವರು ಹೇಳುವುದೇ ಬೇರೆ. “ಬಿಜೆಪಿಯಂತಹ ಭ್ರಷ್ಟ ಸರ್ಕಾರ ಇನ್ನೊಂದಿಲ್ಲ. ನಮ್ಮ ಕ್ಷೇತ್ರಕ್ಕೆ ನೀಡಬೇಕಾದ ಅನುದಾನವನ್ನು ನೀಡುತ್ತಿಲ್ಲ’’ ಎಂದು ಆರೋಪಿಸುತ್ತಾ ಬಂದಿದ್ದಾರೆ.

ಹನೂರು ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ 50,000, ಪರಿಶಿಷ್ಟ ಪಂಗಡದ 35,000, ಲಿಂಗಾಯತರು 45,000, ತಮಿಳು ಭಾಷಿಕರು 20,000, ಕುರುಬರು 20,000, ಕ್ರಿಶ್ಚಿಯನ್ನರು 10,000, ಉಪ್ಪಾರರು 13,000, ಒಕ್ಕಲಿಗರು 12,000, ಮುಸ್ಲಿಮರು 9,000, ಇತರ ಸಮುದಾಯದ 12,000 ಮತದಾರರು ಇದ್ದಾರೆಂದು ಅಂದಾಜಿಸಲಾಗಿದೆ. ಸಾಮಾನ್ಯ ಕ್ಷೇತ್ರವಾದ ಇಲ್ಲಿ ಲಿಂಗಾಯತರು ಗಣನೀಯವಾಗಿ ಇದ್ದರೂ ನರೇಂದ್ರ ಅವರನ್ನು ಸೋಲಿಸಲು ಸಾಧ್ಯವಾಗುತ್ತಿಲ್ಲ.

ಲಿಂಗಾಯತರು ಹೆಚ್ಚಿರುವ ಕಾರಣಕ್ಕೆ ವಸತಿ ಸಚಿವ ವಿ.ಸೋಮಣ್ಣವರ ಕಣ್ಣು ಈ ಕ್ಷೇತ್ರದ ಮೇಲಿತ್ತು. 2018ರ ಚುನಾವಣೆಯಲ್ಲಿಯೂ ಇಲ್ಲಿಂದ ಸ್ಪರ್ಧಿಸುವ ಆಸಕ್ತಿಯನ್ನು ಸೋಮಣ್ಣ ತೋರಿದ್ದರು. ಆದರೆ ನಾಗಪ್ಪನವರ ಪತ್ನಿ, ಪರಿಮಳಾ ನಾಗಪ್ಪ ಅದಕ್ಕೆ ಒಪ್ಪಲಿಲ್ಲ. ಕ್ಷೇತ್ರದ ಮೇಲೆ ಕುಟುಂಬದ ಹಿಡಿತವನ್ನು ಬಿಟ್ಟುಕೊಡಲು ಅವರು ಸಿದ್ಧವಿರಲಿಲ್ಲ. ಹೀಗಾಗಿ ಯಾವುದಾದರೊಂದು ಪಕ್ಷದಲ್ಲಿ ನಾಗಪ್ಪ ಕುಟುಂಬ ಸ್ಪರ್ಧಿಸುತ್ತಾ ಬಂದಿದೆ. ಸೋಲುಗಳನ್ನು ಕಂಡರೂ ಎರಡನೇ ಅತಿಹೆಚ್ಚು ಮತಪಡೆಯುವಲ್ಲಿ ನಾಗಪ್ಪ ಕುಟುಂಬ ಸಫಲವಾಗಿದೆ.

ವಿ.ಸೋಮಣ್ಣ ಮತ್ತು ಪರಿಮಳಾ ನಾಗಪ್ಪ

ಜನತಾ ಪರಿವಾರದೊಂದಿಗೆ ಗುರುತಿಸಿಕೊಂಡು ಬೆಳೆದ ದಿವಂಗತ ಎಚ್.ನಾಗಪ್ಪ ಮತ್ತು ಕಾಂಗ್ರೆಸ್ಸಿನಲ್ಲಿದ್ದ ದಿವಂಗತ ರಾಜೂಗೌಡರ ನಡುವೆಯೇ ಹಲವು ಚುನಾವಣೆಗಳಲ್ಲಿ ಪೈಪೋಟಿ ನಡೆದಿರುವುದನ್ನು ಕ್ಷೇತ್ರದ ಚುನಾವಣಾ ಇತಿಹಾಸ ಹೇಳುತ್ತದೆ. 1967ರ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿದ್ದ ಎಚ್‌ ನಾಗಪ್ಪ, 1972ರಲ್ಲಿ ಆರ್‌ ರಾಜೇಗೌಡ ಗೆಲುವು ಸಾಧಿಸಿದ್ದರು. 1978ರ ಚುನಾವಣೆಯಲ್ಲಿ ಇಂದಿರಾ ಕಾಂಗ್ರೆಸ್‌ನ ರಾಜೂಗೌಡ ಗೆದ್ದಿದ್ದರು. ಮತ್ತೆ 1983ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೆ.ಪಿ.ಶಿವಮೂರ್ತಿ ಗೆಲುವು ಸಾಧಿಸಿದ್ದರು. 1985ರಲ್ಲಿ ಕಾಂಗ್ರೆಸ್‌ ತೊರೆದು ಸ್ವತಂತ್ರವಾಗಿ ಸ್ಪರ್ಧಿಸಿದ್ದ ರಾಜೂಗೌಡರು ಮತ್ತೆ ಗೆದ್ದು ಕ್ಷೇತ್ರದ ಮೇಲೆ ತಮ್ಮ ಪ್ರಾಬಲ್ಯವನ್ನು ಸಾಬೀತು ಮಾಡಿದ್ದರು. ಬಳಿಕ ನಡೆದ 1989ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮರಳಿದ ರಾಜೂಗೌಡ ಮತ್ತೊಮ್ಮೆ ಆಯ್ಕೆಯಾದರು. 1994ರ ಚುನಾವಣೆಯಲ್ಲಿ ಜನತಾ ದಳದ ಎಚ್‌ ನಾಗಪ್ಪ ಗೆದ್ದರೆ, 1999ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಜಿ ರಾಜುಗೌಡ ಮಗದೊಮ್ಮೆ ಗೆದ್ದಿದ್ದರು.

ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡರಾಗಿದ್ದ ನಾಗಪ್ಪ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದ್ದನು. ವೀರಪ್ಪನ್ ಕಾರ್ಯಾಚರಣೆ ನಡೆಸುತ್ತಿದ್ದ ಕಾಡಿನ ವ್ಯಾಪ್ತಿಯಲ್ಲೇ ಹನೂರು ಕ್ಷೇತ್ರವಿದೆ. ವೀರಪ್ಪನ್ ಆತಂಕದಲ್ಲೇ ಇಲ್ಲಿ ಚುನಾವಣೆಗಳು ನಡೆಯುತ್ತಿದ್ದವು. ಕ್ಷೇತ್ರದ ಮಾಜಿ ಶಾಸಕರಾಗಿದ್ದ ಹನೂರು ನಾಗಪ್ಪ ಅವರನ್ನು ಕಾಮಗೆರೆಯ ಅವರ ಮನೆಯಿಂದ 2002ರ ಆಗಸ್ಟ್ ನಲ್ಲಿ ವೀರಪ್ಪನ್ ಅಪಹರಿಸಿದ್ದ. ವೀರಪ್ಪನ್ ವಶದಲ್ಲಿದ್ದಾಗಲೇ ನಾಗಪ್ಪ ಡಿಸೆಂಬರ್ 2002ರಲ್ಲಿ ಚಂಗಡಿ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಘಟನೆ ರಾಜ್ಯದಲ್ಲಿ ತಲ್ಲಣ ಸೃಷ್ಟಿ ಮಾಡಿತು. 2004ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವು ಪರಿಮಳಾ ನಾಗಪ್ಪನವರಿಗೆ ಟಿಕೆಟ್ ನೀಡಿತು. ರಾಜೂಗೌಡ ಅವರ ಪುತ್ರ ನರೇಂದ್ರ ಪ್ರತಿಸ್ಪರ್ಧಿಯಾಗಿದ್ದರು. ಆ ಚುನಾವಣೆಯಲ್ಲಿ ಗೆದ್ದಿದ್ದ ನಾಗಪ್ಪ ಕುಟುಂಬ ಮತ್ತೆ ಇಲ್ಲಿ ಗೆಲುವು ಕಾಣಲಿಲ್ಲ.

2008ರ ವೇಳೆಗೆ ಜೆಡಿಎಸ್ಸಿನೊಂದಿಗೆ ಮುನಿಸಿಕೊಂಡ ಪರಿಮಳಾ ಅವರು ಬಿಎಸ್ಪಿಗೆ ಹಾರಿದರು. ನರೇಂದ್ರ ವಿರುದ್ಧ 23,140 ಮತದಂತರದಲ್ಲಿ ಸೋಲು ಕಂಡಿದ್ದರು. 2013ರಲ್ಲಿ ಯಡಿಯೂರಪ್ಪನವರ ಕೆಜೆಪಿಯಿಂದ ಸ್ಪರ್ಧಿಸುವ ಇಚ್ಛೆ ಪರಿಮಳಾ ಅವರಿಗಿತ್ತು. ಆ ವೇಳೆ ಸೋಮಣ್ಣನವರು ಕೆಜೆಪಿ ಟಿಕೆಟ್ ಪಡೆದು ಹನೂರಿಗೆ ಬರುತ್ತಾರೆಂಬ ಸುದ್ದಿ ಹಬ್ಬಿತು. ಗೊಂದಲದಲ್ಲಿದ್ದ ಪರಿಮಳಾ ಅವರು ಮತ್ತೆ ಜೆಡಿಎಸ್ಸಿಗೆ ಬಂದರು. ಈ ಚುನಾವಣೆಯಲ್ಲಿ 11,549 ಮತಗಳಂತರದಲ್ಲಿ ಮತ್ತೆ ಸೋತರು. ಆ ನಂತರದಲ್ಲಿ ಜೆಡಿಎಸ್ ಟಿಕೆಟ್ ದೊರಕಲಿಲ್ಲ. ನಾಗಪ್ಪ ಕುಟುಂಬ ಬಿಜೆಪಿಗೆ ಹೊರಳಿತು. ಜೆಡಿಎಸ್ ನಿಂದ ಉದ್ಯಮಿ ಮಂಜುನಾಥ್ ಅವರಿಗೆ ಟಿಕೆಟ್ ನೀಡಲಾಯಿತು. ಬಿಜೆಪಿಯಿಂದ ನಾಗಪ್ಪ ಅವರ ಪುತ್ರ ಡಾ.ಪ್ರೀತನ್ ನಾಗಪ್ಪ ಕಣಕ್ಕಿಳಿದರು. ಭಾರೀ ಪೈಪೋಟಿ ನೀಡಿದ ಪ್ರೀತನ್, ಕೇವಲ 3513 ಮತಗಳ ಅಂತರದಲ್ಲಿ ಸೋತರು. ಪ್ರೀತನ್ ನಾಗಪ್ಪ 56931 ಮತಗಳನ್ನು ಪಡೆದರೆ, ಜೆಡಿಎಸ್ಸಿನ ಎಂ.ಆರ್.ಮಂಜುನಾಥ್ 44,957 ಮತಗಳನ್ನು ಪಡೆದಿರುವುದು ವಿಶೇಷ. ಬಿಎಸ್ಪಿ ಜೊತೆಯಲ್ಲಿ ಜೆಡಿಎಸ್ ಚುನಾವಣಾ ಪೂರ್ವ ಒಪ್ಪಂದ ಮಾಡಿಕೊಂಡಿದ್ದರಿಂದ ಜೆಡಿಎಸ್ ಮತಗಳು ಹೆಚ್ಚಾದವು ಎಂದು ಹೇಳಲಾಗುತ್ತದೆ.

2008, 2013 ಮತ್ತು 2018ರ ಚುನಾವಣೆಗಳಲ್ಲಿ ನರೇಂದ್ರ ಗೆದ್ದಿದ್ದಾರೆ. ನಾಗಪ್ಪ ಕುಟುಂಬಕ್ಕೆ ಕ್ಷೇತ್ರ ಕೈತಪ್ಪಿ ಹೋದರೂ 2018ರ ಚುನಾವಣೆಯಲ್ಲಿ ನಾಗಪ್ಪ ಪುತ್ರ ಪ್ರೀತನ್ ಬಿಜೆಪಿಯಿಂದ ಸ್ಪರ್ಧಿಸಿ ನರೇಂದ್ರ ಅವರಿಗೆ ನಡುಕ ಹುಟ್ಟಿಸಿದ್ದು ಸುಳ್ಳಲ್ಲ.

ಸತತ ಸೋಲುಗಳನ್ನು ಕಂಡಿರುವ ನಾಗಪ್ಪ ಕುಟುಂಬದ ಮೇಲೆ ಕ್ಷೇತ್ರದ ಜನರ ಅನುಕಂಪವಿದೆ. ಆದರೆ ಕ್ಷೇತ್ರದ ಜನರೊಂದಿಗೆ ಉತ್ತಮ ಸಂಪರ್ಕವನ್ನು ನರೇಂದ್ರ ಅವರು ಹೊಂದಿರುವುದನ್ನು ಅಲ್ಲಗಳೆಯಲಾಗದು.

ಬೆಂಗಳೂರಿನಲ್ಲಿ ವೈದ್ಯರಾಗಿರುವ ಪ್ರೀತನ್ ಚುನಾವಣೆ ಸಂದರ್ಭದಲ್ಲಿ ಮಾತ್ರ ಕ್ಷೇತ್ರಕ್ಕೆ ಬರುತ್ತಾರೆಂಬ ಆರೋಪಗಳಿವೆ. ಇದು ಪ್ರೀತನ್ ಮೇಲೆ ಗುಮಾನಿ ಹೆಚ್ಚಿಸಲು ಕಾರಣವಾಗಿದೆ. ಇದರ ಜೊತೆಗೆ ಬಿಜೆಪಿಯಿಂದ ಇನ್ನು ನಾಲ್ವರು ಟಿಕೆಟ್ ಆಕಾಂಕ್ಷಿಗಳಿದ್ದರು. ಅದರಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದವರು ಡಾ.ಎಸ್.ದತ್ತೇಶ್‌ ಕುಮಾರ್‌.

ಚಾಮರಾಜನಗರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ದತ್ತೇಶ್ ಮೂಲತಃ ಉದ್ಯಮಿ, ಕೊಳ್ಳೇಗಾಲದಲ್ಲಿರುವ ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ. 2013ರಲ್ಲಿ ನರೇಂದ್ರ ಅವರ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿ, 13,258 ಮತ ಗಳಿಸಿ, ಮೂರನೇ ಸ್ಥಾನದಲ್ಲಿದ್ದರು. 2018ರಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪ್ರೀತನ್ ಅವರಿಗೆ ಪಕ್ಷ ಮಣೆ ಹಾಕಿತು. ನಂತರದಲ್ಲಿ ದತ್ತೇಶ್ ಪಕ್ಷ ಸಂಘಟನೆಯತ್ತ ಗಮನ ಹರಿಸಿದರು. ಜಿಲ್ಲಾ ಉಪಾಧ್ಯಕ್ಷ ಸ್ಥಾನವೂ ಅವರಿಗೆ ದೊರಕಿತು. ಇನ್ನೇನು ಟಿಕೆಟ್ ಸಿಗುತ್ತದೆ ಎಂಬ ಉತ್ಸಾಹದಲ್ಲಿದ್ದಾಗ ಮತ್ತೆ ನಾಗಪ್ಪ ಕುಟುಂಬಕ್ಕೆ ಬಿಜೆಪಿ ಟಿಕೆಟ್ ನೀಡಿತು.

ಇದರಿಂದ ಸಿಟ್ಟಿಗೆದ್ದ ದತ್ತೇಶ್, ಪಕ್ಷ ತೊರೆದು ಕಾಂಗ್ರೆಸ್ ಸೇರುವ ಸೂಚನೆಗಳು ದೊರೆತ್ತಿದ್ದವು. ಆದರೆ ಅಂತಿಮವಾಗಿ ಬಿಜೆಪಿಯಲ್ಲೇ ಉಳಿದು, ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ದತ್ತೇಶ್ ಅವರಂತೆಯೇ ಉದ್ಯಮಿಗಳಾದ ವೆಂಕಟೇಶ್‌, ನಿಶಾಂತ್‌ ಟಿಕೆಟ್‌ಗಾಗಿ ಪೈಪೋಟಿ ನೀಡಿದ್ದರು. ಒಂದೇ ವೇಳೆ ಪ್ರೀತನ್ ಗೆದ್ದರೆ, ಮತ್ತೆ ನಾಗಪ್ಪ ಕುಟುಂಬ ಮೇಲುಗೈ ಸಾಧಿಸುತ್ತದೆ ಎಂಬ ಭಯ ಇತರ ಬಿಜೆಪಿ ಮುಖಂಡರಿಗೆ ಇದ್ದರೆ ಒಳೇಟುಗಳು ಬೀಳುವ ಸಾಧ್ಯತೆ ಇದೆ. ಬಿಜೆಪಿಗೆ ಹೋಲಿಸಿದರೆ ಕಾಂಗ್ರೆಸ್ಸಿನಲ್ಲಿ ಈ ಒಡಕು ಇಲ್ಲವಾಗಿದೆ.

ಉಳಿದಂತೆ ಬಿಎಸ್‌ಪಿಯಿಂದ ಮಾದೇಶ, ಎಎಪಿಯಿಂದ ಕೆ.ಹರೀಶ್‌, ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾದಿಂದ (ಅಠಾವಳೆ) ಟಿ.ಜಾನ್‌ ಪೀಟರ್‌, ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಎನ್‌.ಪ್ರದೀಪ್‌ಕುಮಾರ್‌, ಕರ್ನಾಟಕ ಪ್ರಜಾ ಪಾರ್ಟಿಯಿಂದ (ರೈತ ಪರ್ವ) ಜಿ.ಮುರುಗೇಶನ್‌, ಸರ್ವೋದಯ ಕರ್ನಾಟಕ ಪಕ್ಷದಿಂದ ಶೈಲೇಂದ್ರ ಶ್ರೀಕಂಠಸ್ವಾಮಿ, ಕಂಟ್ರಿ ಸಿಟಿಜನ್‌ ಪಾರ್ಟಿಯಿಂದ ಸಿದ್ದಪ್ಪ ಆರ್‌., ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಸುರೇಶ್‌ ಎಂ., ಪಕ್ಷೇತರರಾಗಿ ಹನೂರು ನಾಗರಾಜು, ಪ್ರದೀಪ್‌ಕುಮಾರ್‌ ಎಂ, ಮುಜಾಮಿಲ್‌ ಪಾಷಾ, ಟಿ.ಮುತ್ತುರಾಜು, ರಾಜಶೇಖರ್‌, ಸಿ.ಸಿದ್ದಾರ್ಥನ್‌ ಮತ್ತು ಸೆಲ್ವರಾಜ್‌ ಎಸ್‌ ಕಣದಲ್ಲಿದ್ದಾರೆ.

ಮೇಲು ನೋಟಕ್ಕೆ ಬಿಜೆಪಿ- ಕಾಂಗ್ರೆಸ್ ನಡುವೆ ಪೈಪೋಟಿ ಕಂಡು ಬಂದರೂ ಮಂಜುನಾಥ್ ಸುಮ್ಮನೆ ಕೂರುವವರಲ್ಲ. ಹೀಗಾಗಿ ತ್ರಿಕೋನ ಸ್ಪರ್ಧೆ ಏರ್ಪಡುವಂತೆ ಕಾಣುತ್ತಿದೆ. ಒಕ್ಕಲಿಗ ಸಮುದಾಯದ ನರೇಂದ್ರ, ಲಿಂಗಾಯತ ಸಮುದಾಯದ ಪ್ರೀತನ್, ಕುರುಬ ಸಮುದಾಯದ ಮಂಜುನಾಥ್ ನಡುವೆ ವಿವಿಧ ಜಾತಿಗಳ ಮತಗಳು ಹೇಗೆ ವಿಭಜನೆಯಾಗುತ್ತವೆ ಎಂಬುದರ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ಬಿಜೆಪಿಯೊಳಗೆ ಒಳೇಟು ಹೆಚ್ಚಾದರೆ ಕುಟುಂಬ ಪ್ರತಿಷ್ಠೆಯ ಕಣದಲ್ಲಿ ನರೇಂದ್ರ ಅವರು ಮರು ಆಯ್ಕೆಯಾಗುವ ಸಾಧ್ಯತೆಯೂ ನಿಚ್ಚಳವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...