Homeಅಂತರಾಷ್ಟ್ರೀಯಹ್ಯಾಪಿ ಬಾಟಮ್ ಕ್ವಾರ್ಟರ್ ಎಂದರೇನು ಗೊತ್ತೆ?

ಹ್ಯಾಪಿ ಬಾಟಮ್ ಕ್ವಾರ್ಟರ್ ಎಂದರೇನು ಗೊತ್ತೆ?

ಅಷ್ಟೇನೂ ಬುದ್ಧಿವಂತನಲ್ಲ ಎಂದು ಎಲ್ಲರಿಗೂ ಗೊತ್ತಿದ್ದರೂ ಭಾರತದ ರಾಜಕಾರಣಿಯ ಮಗನಿಗೆ ಕೇಂಬ್ರಿಡ್ಜ್ ನಲ್ಲಿ ಪ್ರವೇಶ ದೊರೆತದ್ದು ಹೇಗೆ?

- Advertisement -
- Advertisement -

| ಜಿ.ಆರ್ ವಿದ್ಯಾರಣ್ಯ |

ಇದೆಂತಹ ಕ್ವಾರ್ಟರ್ ಅಥವಾ ಎಣ್ಣೆಯ ಹೊಸ ಹೆಸರೇ ಎಂದು ಯೋಚಿಸಬೇಡಿ. ಇದು ಜಗದ್ವಿಖ್ಯಾತ ವಿದ್ಯಾಸಂಸ್ಥೆಗಳ ಜಾಣತನದ ಬಗ್ಗೆ ಒಂದು ಉದಾಹರಣೆ.

ನಮಗೆಲ್ಲರಿಗೂ ನಮ್ಮ ಮಕ್ಕಳು ಒಳ್ಳೆಯ ಶಾಲಾ-ಕಾಲೇಜುಗಳಲ್ಲಿ ಓದಿ ತುಂಬಾ ವಿದ್ಯಾವಂತರಾಗಲಿ, ನಮ್ಮ ಕುಟುಂಬಕ್ಕೆ, ನಾಡಿಗೆ ಒಳ್ಳೆಯ ಹೆಸರು ತರಬೇಕು ಎಂಬ ಆಸೆಯಂತೂ ಇರುತ್ತದೆ. ಸಾಮಾನ್ಯವಾಗಿ ನಗರ ಪ್ರದೇಶದ ಮಧ್ಯಮ ವರ್ಗದ ಪೋಷಕರ ನಿರ್ಧಾರ ಆ ಶಾಲೆಯ ವರ್ಣರಂಜಿತ ಜಾಹಿರಾತು, ಕಟ್ಟಡ ವಿನ್ಯಾಸ, ಕಲಿಕಾ (ಭಾಷಾ) ಮಾಧ್ಯಮ, ಪ್ರವೇಶ ಎಷ್ಟು ಸುಲಭ/ಕಷ್ಟ, ಪ್ರವೇಶಕ್ಕಾಗಿ ಕಾಯುತ್ತಿರುವವರ ಪಟ್ಟಿ ಎಷ್ಟು ಉದ್ದ, ಪ್ರವೇಶ ಮತ್ತು ಬೋಧನಾ ಶುಲ್ಕ ಎಷ್ಟು ದುಬಾರಿ, ನೆರೆ-ಹೊರೆಯವರ ಅಭಿಪ್ರಾಯ, ಮನೆಯಿಂದ ಶಾಲೆ/ಕಲೇಜು ಎಷ್ಟು ಹತ್ತಿರ/ದೂರ ಅಥವಾ ಸಾರಿಗೆ ಸೌಲಭ್ಯವಿದೆಯೇ, ಮುಂತಾದ ವಿಷಯಗಳ ಮೇಲೆ ಅವಲಂಬಿಸಿರುತ್ತವೆ.

ಶಾಲೆಗೆ ಬೇಕಾದ ಎಲ್ಲಾ ಸರಕಾರಿ ಪರವಾನಗಿ/ಮಾನ್ಯತೆ ದೊರೆತಿದೆಯೋ ಇಲ್ಲವೋ ಎಂಬ ಮಾಹಿತಿ, ಸುಲಭವಾಗಿ ತಿಳಿಯದಿದ್ದಲ್ಲಿ, ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುವ ಪ್ರಯತ್ನ ಪೋಷಕರು ಮಾಡುವುದು ವಿರಳ. ತಿಳಿಯದ ಯಾವುದೋ ಕಾರಣಕ್ಕಾಗಿ ಶಾಲೆ ಮಧ್ಯದಲ್ಲೇ ಮುಚ್ಚಲ್ಪಡುತ್ತದೋ ಎನೋ ಎಂಬ ಬಗ್ಗೆ ಅವರು ಆತಂಕಕ್ಕೆ ಮೊದಲೇ ಈಡಾಗುವುದಿಲ್ಲ. ಸಾಮಾನ್ಯ ಮಟ್ಟದ  ಶಾಲೆ/ಕಾಲೇಜಿನಲ್ಲಿ ಕಲಿತು ನಾವೆಲ್ಲರೂ ವಿದ್ಯಾವಂತರಾಗಿ ಸರಿಯಾದ ಜೀವನ ನಡೆಸುತ್ತಿದ್ದರೂ ಸಹ, ನಾವು ಕಲಿತ ಸಂಸ್ಥೆಯಲ್ಲೇ ನಮ್ಮ ಮಕ್ಕಳೂ ಕಲಿಯಲಿ ಎಂದು ಯೋಚಿಸುವವರು ಸಹ ತೀರಾ ಅಪರೂಪ. ತಾವು ಕಲಿತ ಶಾಲೆಗಿಂತ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಯಲ್ಲಿ ಮಕ್ಕಳು ಕಲಿಯಲಿ ಎಂಬುದು ಪೋಷಕರ ಆಶಯ.

ಓರ್ವ ವಿದ್ಯಾ ಸಂಸ್ಥೆಯ ಖ್ಯಾತಿ, ಅದರ ಮೇಲೆ ಗೌರವ ನಿಜವಾಗಿ ಹೆಚ್ಚುವುದು ಆ ಸಂಸ್ಥೆಯು ನಡೆಸುತ್ತಿರುವ ಶಾಲಾ-ಕಾಲೇಜುಗಳಲ್ಲಿ ಓದು ಮುಗಿಸಿದ ಎಷ್ಟು ವಿದ್ಯಾರ್ಥಿಗಳು ಮುಂದೆ, ಬೇರೆ ಬೇರೆ ಕ್ಷೇತ್ರದಲ್ಲಿ, ಮಹತ್ತರ ಸಾಧನೆ ಮಾಡಿದ್ದಾರೆ ಅಥವಾ ಖ್ಯಾತಿವಂತ ವ್ಯಕ್ತಿಗಳಾಗಿದ್ದಾರೆ ಎಂಬುದನ್ನು ಅವಲಂಬಿಸಿರುತ್ತದೆ. ಅದರಲ್ಲಿ ಓದಿದ ಎಲ್ಲಾ ವಿದ್ಯಾರ್ಥಿಗಳು ಮುಂದೆ ಪ್ರಸಿದ್ಧಿವಂತರಾಗದೇ ಇರಬಹುದು ಅದರೆ ಅವರಲ್ಲಿ ಹತ್ತಾರು ಜನರಾದರೂ ಖ್ಯಾತಿವಂತರಾದಲ್ಲಿ, ಮಿಕ್ಕವರು, ಕೇವಲ ಆ ಸಂಸ್ಥೆಯಲ್ಲಿ ಓದಿದ ಮಾತ್ರಕ್ಕೆ, ಜಾಣರೆಂದು ಪರಿಗಣಿಸಲ್ಪಡುವ ಸಾಧ್ಯತೆಯಂತೂ ಇರುತ್ತದೆ, ಹೂವಿನ ಜೊತೆಗೆ ನಾರೂ ಸ್ವರ್ಗಕ್ಕೆ ಹೋದಂತೆ.

ಯಾವುದೇ ಒಂದು ಖ್ಯಾತಿವಂತ ವಿದ್ಯಾಸಂಸ್ಥೆಯು ಕನಸಿನ ಕೂಸಾಗಿ ಪ್ರಾರಂಭವಾಗಿರದೆ ಇದ್ದಾಗ, ಹೆಚ್ಚಿನ ಶಾಲೆ/ಕಾಲೇಜುಗಳೂ ಸಹ ಸಾಧಾರಣ ಮಕ್ಕಳಂತೆಯೇ, ಸಣ್ಣದಾಗಿ ಹುಟ್ಟಿ-ಬೆಳೆದು ದೊಡ್ಡದಾಗುತ್ತವೆ. ಆದ್ದರಿಂದ ಅದರ ಖ್ಯಾತಿ ಮಂದಗತಿಯಲ್ಲಿಯೇ ಬೆಳೆಯಬೇಕಾಗುತ್ತದೆ. ಶಾಲೆ/ಕಾಲೇಜು ಬೆಳೆದಂತೆ ಅದರಲ್ಲಿ ಓದುವ ಮಕ್ಕಳ ಸಂಖ್ಯೆಯೂ ಬೆಳೆಯುತ್ತದೆ, ಮುಂದೆ ಈ ಮಕ್ಕಳು ಶೈಕ್ಷಣಿಕ/ಕ್ರೀಡೆ/ಇತರ ಕ್ಷೇತ್ರದಲ್ಲಿ ಮಾಡುವ ಒಳ್ಳೆಯ ಸಾಧನೆಗಳಿಂದ ಅವರೂ ಖ್ಯಾತಿ ಪಡೆದು, ತಮ್ಮ ಕುಟುಂಬಕ್ಕೂ, ವಿದ್ಯಾಸಂಸ್ಥೆಗೂ ಗೌರವ ತರುತ್ತಾರೆ. ಸಂಸ್ಥೆಯಲ್ಲಿ ಓದು ಮುಗಿಸಿದ ನಂತರ ಅವರು ಅದರ ಮಾಜಿ ವಿದ್ಯಾರ್ಥಿ (ಅಲುಮ್ನೈ) ಆಗಿ ಮುಂದೆಯೂ ಸಂಸ್ಥೆಗೆ ಒಳ್ಳೆಯ ಹೆಸರು ತರಬಹುದು, ಆದರೆ ಸಂಸ್ಥೆಗೆ ಇದರ ಸುನಿಶ್ಚತತೆ ಇರುವುದಿಲ್ಲ. ಖ್ಯಾತಿ ಸುನಿಶ್ಚತತೆ ಮಾಡಿಕೊಳ್ಳಲು ಸಾಧ್ಯವೇ ಎಂಬುದು ಈ ಲೇಖನದ ಗುರಿಯಾದರೂ ಸಹ ಇಂದಿನ ಶಿಕ್ಷಣ ವ್ಯವಸ್ಥೆಯ ವಿಡಂಬನೆ ಈ ಲೇಖನ ಎಂದು ನಿಮಗೆ ಅನಿಸಬಹುದು.

ಹಾರ್ವರ್ಡ್, ಯೇಲ್, ಕೇಂಬ್ರಿಡ್ಜ್  ಮುಂತಾದ ವಿಶ್ವವಿಖ್ಯಾತ ವಿದ್ಯಾಸಂಸ್ಥೆಗಳು ತಮ್ಮ ಖ್ಯಾತಿ ನಿರಂತವಾಗಿರಲು ಏನೆಲ್ಲಾ ಮಾಡುತ್ತವೆ, ನೋಡೋಣ. ಇದನ್ನು “ಹ್ಯಾಪಿ ಬಾಟಮ್ ಕ್ವಾರ್ಟರ್” (ಎಚ್.ಬಿ.ಕ್ಯೂ.) ಎಂದುಕರೆಯುತ್ತಾರೆ. ಹಾರ್ವರ್ಡ್ ಇದನ್ನು ಪ್ರಾರಂಬಿಸಿತಾದರೂ ಶೀಘ್ರದಲ್ಲೇ ಇದು ಪ್ರಿನ್ಸ್ಟನ್, ಸ್ಟ್ಯಾನ್ಫರ್ಡ್, ಯೇಲ್, ಮುಂತಾದ ಸಂಸ್ಥೆಗಳಿಗೂ ಪಸರಿಸಿತು. ನಮ್ಮ ದೇಶದ ಐಐಟಿ ಅಥವಾ ಅಮೇರಿಕದ ಕ್ಯಾಲೊಫೋರ್ನಿಯದಲ್ಲಿರುವ ಕ್ಯಾಲ್ಟೆಕ್ವಿದ್ಯಾ ಸಂಸ್ಥೆಯ ಪ್ರವೇಶ ನೀತಿಗೆ ತದ್ವಿರುದ್ಧವಾಗಿ, ಮೇಧಾವಿ ಮಕ್ಕಳನ್ನು ತಮ್ಮಲ್ಲಿಗೆ ಸೇರಿಸಿಕೊಳ್ಳುವ ಬದಲಾಗಿ, ಮುಂದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿವಂತರಾಗುವ ಹೆಚ್ಚು ಸಾಧ್ಯತೆಯುಳ್ಳ ಮಕ್ಕಳಿಗೆ ಮುಖನೋಡಿ ಮಣೆ ಹಾಕುತ್ತಾರೆ. ಆದರೂ ಸಹ ಯಾವುದೇ ಕಾರಣಕ್ಕೂ ತನ್ನ ಖ್ಯಾತಿಗೆ ಚ್ಯುತಿ ಬರದಂತೆಯೂ ಬೇಕಾದ ಜಾಗೃತೆಯನ್ನೂ ವಹಿಸುತ್ತಾರೆ.

ಈ ನೀತಿಯನ್ವಯ ಸಂಸ್ಥೆಯ 25% ಸೀಟುಗಳನ್ನು ಕಾಯ್ದಿರಿಸಿ, ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಮಕ್ಕಳು, ಅಂದರೆ ದೇಶದ ಅಧ್ಯಕ್ಷರು, ಪ್ರಧಾನಮಂತ್ರಿಗಳು, ರಾಜಕಾರಣಿಗಳು, ಆಗರ್ಭ ಶ್ರೀಮಂತರು, ದೊಡ್ಡ ಉದ್ಯೋಗಪತಿಗಳು, ಸಿನಿಮಾನಟ-ನಟಿಯರು, ಕ್ರೀಡಾಪಟುಗಳು, ನೋಬೆಲ್ ಮುಂತಾದ ಪುರಸ್ಕಾರ ವಿಜೇತರು, ಯಾವುದೇ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಿದವರು, ಮುಂತಾದವರ ಮಕ್ಕಳಿಗೆ ಪ್ರವೇಶ ನೀಡುತ್ತಾರೆ. ಇಂತಹ ಮಕ್ಕಳ ವಿದ್ಯಾಭ್ಯಾಸದ ಖರ್ಚು ಅವರ ಪೋಷಕರಿಗೇನೂ ಭಾರವಲ್ಲ, ಬದಲಾಗಿ ಕೇಳಿದಷ್ಟು ಡೊನೇಷನ್ ಕೊಡಲೂ ಸಿಧ್ಧರಿರುತ್ತಾರಷ್ಟೇ ಅಲ್ಲ, ಅದರ ಬಗ್ಗೆ ಯಾವಾಗಲೂ ತುಟಿಪಿಟಕ್ ಎನ್ನುವುದಿಲ್ಲ. ಇಂತಹವರ ಮಕ್ಕಳು ಮುಂದೆ ಖ್ಯಾತಿವಂತರಾಗುವ ಸಾಧ್ಯತೆ ಅತಿ ಹೆಚ್ಚಾಗಿರುತ್ತದೆ ಮತ್ತು ಅವರು ನಮ್ಮ ಸಂಸ್ಥೆಯ ಮಾಜಿ ವಿದ್ಯಾರ್ಥಿ ಎಂದು ವಿದ್ಯಾಸಂಸ್ಥೆಯೂ ಹೆಮ್ಮೆಯಿಂದ ಹೇಳಿಕೊಳ್ಳಲು ಮುಂದಾಗಿರುತಾರೆ. ನೋಬೆಲ್  ಮುಂತಾದ ಪುರಸ್ಕಾರ ವಿಜೇತರ ಮತ್ತು ವಿವಿಧ ಕ್ಷೇತ್ರದ ಪರಿಣಿತರ ಮಕ್ಕಳು ತಮ್ಮ ಆಯ್ದ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೆ ಸಿದ್ಧರಾಗಿಯೇ ಇರುತ್ತಾರೆ ಹಾಗೂ ಹಣದ ದಾಹ ಇರುವವರು ಹೇಗೇ ಆದರೂ ಹಣಗಳಿಸಿಯೇ ತೀರುತ್ತಾರೆ.

ಉದ್ಯೋಗಪತಿಗಳ ಮಕ್ಕಳು ಮುಂದೆ ಅಷ್ಟೇ ಪ್ರಖ್ಯಾತರಾಗುತ್ತರೆ ಎನ್ನುವುದು ಕಷ್ಟ ಅಥವಾ ಹೊಸ ಉದ್ಯೋಗ ಪ್ರಾರಂಭಿಸಬಲ್ಲವರು ಅಷ್ಟೇ ಸಫಲರಾಗುತ್ತಾರೆ ಎನ್ನುವುದೂ ಸಹ ಅನಿಶ್ಚಿತ. ಮುಂದಿನ ಫೇಸ್ಪುಕ್ ನಂತಹ ಅತ್ಯಂತ ಸಫಲವಾದ ಸ್ಟಾರ್ಟ್ ಅಪ್ ಧೀರ ಹಾರ್ವರ್ಡಿನಿಂದಲೇ ಬರುತ್ತಾನೆ ಎಂಬುದು ಕೇವಲ ಊಹಾಪೋಹ. ಇದು ಅವರ ನೀತಿಯಲ್ಲಿನ ಒಂದು ಅಪಾಯ (ರಿಸ್ಕ್). ಬಹುರಾಷ್ಟ್ರೀಯ ಕಂಪನಿಯ ಮುಖ್ಯಾಧಿಕಾರಿಗಳು ಸಹ ಅಪಾಯಕರ. ಅದನ್ನು ವಿದ್ಯಾಸಂಸ್ಥೆ ಸರಿಯಾಗಿ ಅರ್ಥ ಮಾಡಿಕೊಂಡಿದ್ದಾರೆ. ಈಗಿರುವ ಕ್ರೀಡಾಪಟುಗಳು ಮತ್ತು ಸಿನಿಮಾ ನಟ-ನಟಿಯರು ಆಗಲೇ ಹೇರಳ ಹಣ ಸಂಪಾದನೆ ಮಾಡುತ್ತಿರುತ್ತಾರೆ ಮತ್ತು ಅವರಿಗೆ ಪತಿಷ್ಟಿತ ಕಾಲೇಜಿನ ಪದವಿ ಪಡೆಯಲೇಬೇಕು ಎಂಬ ಹುಮ್ಮಸ್ಸು ಅಥವಾ ಸಮಯ ಇರುವುದಿಲ್ಲ ಆದರೆ ತಮ್ಮ ಮಕ್ಕಳನ್ನು ಹಣ ತೆತ್ತು ಒಳ್ಳೆಯ ಕಡೆ ಸೇರಿಸಲು ಸಿದ್ಧರಿರುತ್ತಾರೆ.

ಒಳ್ಳೆಯ ಭವಿಷ್ಯವುಳ್ಳ ಕ್ರೀಡಾಪಟುಗಳನ್ನು ಹುಡುಕುವುದು ಅಂತಹ ಕಷ್ಟಕರವೇನಲ್ಲ, ಅವರಿಗೆ ಕರೆದು ಪ್ರವೇಶ ನೀಡುತ್ತಾರೆ. ಪ್ರಗತಿ ಹೊಂದಿದ ವಿದೇಶದ ರಾಜಕಾರಣಿಗಳ ಮಕ್ಕಳು ಮುಂದೆ ಅಧಿಕಾರಕ್ಕೇರುವ ಸಾಧ್ಯತೆ ಅಷ್ಟೇನೂ ಇಲ್ಲದಿದ್ದರೂ ಭಾರತದಂತಹ ಪ್ರಗತಿಶೀಲ ರಾಜ್ಯಗಳಲ್ಲಿ ಸಾಧ್ಯತೆ ಹೆಚ್ಚಿರುತ್ತದೆ.

ಇಂದಿನ ಜಗತ್ತಿನಲ್ಲಿ ವಂಶಪಾರಂಪರೆಯ ವಾದ ಹೇರಳವಾಗಿದೆ, ಎಲ್ಲಾ ದೇಶದಲ್ಲೂ ಅಡೆತಡೆಯಿಲ್ಲದೆ ನಡೆಯುತ್ತದೆ. ಅಷ್ಟೇನೂ ಬುದ್ಧಿವಂತನಲ್ಲ ಎಂದು ಎಲ್ಲರಿಗೂ ಗೊತ್ತಿದ್ದರೂ ಭಾರತದ ರಾಜಕಾರಣಿಯ ಮಗನಿಗೆ ಕೇಂಬ್ರಿಜ್ನಲ್ಲಿ ಪ್ರವೇಶ ದೊರೆತದ್ದು ಹೇಗೆ ಅಥವಾ ಭಾರತದ ಅತಿ ದೊಡ್ಡ ಉದ್ಯೋಗಪತಿಯ ಎರಡನೆಯ ಮಗ ಅಮೇರಿಕದ ಹಾಲಿ ಅಧ್ಯಕ್ಷ ಹಾಗೂ ಗೂಗಲ್ ಸಂಸ್ಥೆಯ ಹಾಲಿ ಮುಖ್ಯಸ್ಥ ಓದಿದ ವ್ಹಾರ್ಟನ್ ವಿದ್ಯಾಸಂಸ್ಥೆಗೆ ಪ್ರವೇಶ ಗಳಿಸಿದ್ದು ಹೇಗೆ, ಅವರ ಹಾಜರಾತಿ ಸಮರ್ಪಕವಾಗಿತ್ತೇ ಅಥವಾ ಅವರು ಒಳ್ಳೆಯ ಅಂಕ ಪಡೆದು ಉತ್ತೀರ್ಣರಾದರೇ ಎಂದು ಯಾರೂ ತಲೆ ಕೆಡೆಸಿಕೊಳ್ಳುವುದಿಲ್ಲ. ಇಂತಹವರಿಗೆ ಪ್ರವೇಶ ನೀಡುವುದು ಸಂಸ್ಥೆಗೆ ಬಹಳ ಸುಲಭವೂ, ಲಾಭದಾಯಕವೂ ಆಗಿರುತ್ತದೆ. ಭಾರತದಲ್ಲೂ ಡೊನೇಷನ್ ಸೀಟುಗಳು ಸಾರಾಸಗಟಾಗಿ ಮಾರಾಟವಾಗುತ್ತದೆ ಅಥವಾ ಪ್ರಭಾವಶಾಲೀ ವ್ಯಕ್ತಿಗಳಿಗೆ ಕೊಡಲಾಗುತ್ತದೆ. ಅದರಲ್ಲಿ ಸಂಸ್ಥೆಗೆ ಬರುವ ಹಣ ಅಥವಾ ಆಗುವ ಲಾಭವೇ ಮುಖ್ಯವಾಗಿರುತ್ತದೆ ವಿನಃ ಅಂತಹ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಅವರ ಮುಂದಿನ ಭವಿಷ್ಯ ಅಥವಾ ಸಂಸ್ಥೆಯ ಪ್ರಖ್ಯಾತಿ ಅಷ್ಟು ಮಹತ್ವದ್ದಾಗಿರುವುದಿಲ್ಲ.

ಈ “ಹ್ಯಾಪಿ ಬಾಟಮ್ ಕ್ವಾರ್ಟರ್” ನ ಮಧ್ಯದ ಪದ ಗಮನೀಯವಾದದ್ದು. ಈ “ಬಾಟಮ್” ಇರುವುದಕ್ಕೆ ಮುಖ್ಯ ಕಾರಣ ವಿದ್ಯಾಸಂಸ್ಥೆ ತನ್ನ “ಟಾಪ್” 75% ಸೀಟುಗಳನ್ನು ನಿಜವಾದ ಮೇಧಾವಿ ವಿದ್ಯಾರ್ಥಿಗಳಿಗೆ ನೀಡುತ್ತದೆ. ಮೇಧಾವಿ ವಿದ್ಯಾರ್ಥಿಗಳು ಸಂಸ್ಥೆಯಿಂದ ಉತ್ತೀರ್ಣರಾಗಿ ಹೊರ ಹೋಗುವಾಗ ಕೆಳಗಿನ 25% ಸೀಟಿನ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಜೊತೆಗೆ ಖಂಡಿತ ಪೈಪೋಟಿ ಮಾಡುವುದಿಲ್ಲ. ಈ ವಿದ್ಯಾಸಂಸ್ಥೆಗಳು ತಮ್ಮ ಕೆಲವು ಸೀಟುಗಳನ್ನು ಮುಂದೆ ಪ್ರಭಾವಶಾಲಿ ವ್ಯಕ್ತಿಯಾಗಬಲ್ಲವನ ಮೇಲೆ ಜೂಜಾಡಿ ಸ್ವಲ್ಪ ಮಟ್ಟದ “ರಿಸ್ಕ್” ತೆಗೆದುಕೊಳ್ಳುತ್ತವೆ, ಆದರೆ ಅಪಾಯಕ್ಕೆ ತಕ್ಕ ಹಣವಂತೂ ಸಂಸ್ಥೆಯ ಖಾತೆಗೆ ಆಗಲೇ ಜಮಾ ಆಗಿರುತ್ತದೆ. ಮುಂದೆ ಅಂತಹಾ ಅಪಾಯಕಾರಿ ವಿದ್ಯಾರ್ಥಿ 20-30-40 ವರ್ಷದ ನಂತರ, ಯಾವುದೇ ದೇಶದ ಪ್ರಧಾನಿ, ಶ್ರೀಮಂತ ವ್ಯಕ್ತಿ ಆದರೂ ಅಥವಾ ಆಗದಿದ್ದರೂ ಸಹ ಆ ವಿದ್ಯಾಸಂಸ್ಥೆಯ ಹೆಸರು ಕೆಡುವುದಿಲ್ಲ ಅಥವಾ ಅವನು ವಿದ್ಯಾಸಂಸ್ಥೆಯಲ್ಲಿದ್ದಾಗ ಎಂತಹ ವಿದ್ಯಾರ್ಥಿಯಾಗಿದ್ದ ಎಂದು ಯಾರೂ ನೆನಪಿನಲ್ಲಿಡುವುದಿಲ್ಲ.

ಒಟ್ಟಿನಲ್ಲಿ ಇದು ಪ್ರತಿಷ್ಠಿತ ವಿದ್ಯಾಸಂಸ್ಥೆಗಳ ದೂರದೃಷ್ಟಿ ಮತ್ತು ಜಾಣತನವಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....