Homeಮುಖಪುಟ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುವಂತೆ ಬಲವಂತ: ಹಾಪುರದಲ್ಲಿ ಮುಸ್ಲಿಂ ಯುವಕರ ಮೇಲೆ ಹಲ್ಲೆ,...

‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುವಂತೆ ಬಲವಂತ: ಹಾಪುರದಲ್ಲಿ ಮುಸ್ಲಿಂ ಯುವಕರ ಮೇಲೆ ಹಲ್ಲೆ, ದ್ವೇಷದ ಘಟನೆ ಬೆಳಕಿಗೆ

- Advertisement -
- Advertisement -

ಹಾಪೂರ, ಉತ್ತರ ಪ್ರದೇಶ: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಪರ್ತಾಪುರ್ ಗ್ರಾಮದಲ್ಲಿ ಮೂವರು ಮುಸ್ಲಿಂ ಯುವಕರಾದ ಅಮೀರ್ (28), ವಾಸಿಮ್ (28), ಮತ್ತು ರಿಜ್ವಾನ್ (24) ಅವರನ್ನು ರಸ್ತೆಯಲ್ಲಿ ತಡೆದು, ಅವರ ಹೆಸರುಗಳನ್ನು ಕೇಳಿ ಅವರು ಮುಸ್ಲಿಮರು ಎಂದು ಖಚಿತಪಡಿಸಿಕೊಂಡ ನಂತರ, ದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳಿಂದ ಕ್ರೂರವಾಗಿ ಥಳಿಸಿ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಆಗಸ್ಟ್ 26ರ ಮಂಗಳವಾರ ಸಂಜೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅವರನ್ನು ದೊಣ್ಣೆಗಳು ಮತ್ತು ಲೋಹದ ರಾಡ್‌ಗಳಿಂದ ನಿರ್ದಯವಾಗಿ ಥಳಿಸಿ, ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಬಲವಂತಪಡಿಸಲಾಗಿದೆ.

ಅಮೀರ್, ವಾಸಿಮ್, ಮತ್ತು ರಿಜ್ವಾನ್ ಅವರು ತಮ್ಮ ಕೆಲಸ ಮುಗಿಸಿ ಪೀಲ್ಖುವಾದಿಂದ ತಮ್ಮ ಗ್ರಾಮವಾದ ಕಲ್ಚೀನಾಕ್ಕೆ ಮೋಟಾರ್‌ಸೈಕಲ್‌ನಲ್ಲಿ ಹಿಂತಿರುಗುತ್ತಿದ್ದಾಗ ಈ ದಾಳಿ ನಡೆದಿದೆ. ಷಾಮ್ಲಿ ಜಿಲ್ಲೆಗೆ ಹೋಗುವ ರಸ್ತೆಯಲ್ಲಿರುವ ಪರ್ತಾಪುರ್ ಗ್ರಾಮದಲ್ಲಿ ಅವರನ್ನು ನಾಲ್ವರು ಹಿಂದೂ ವ್ಯಕ್ತಿಗಳು ತಡೆದು, ಅವರ ಹೆಸರುಗಳನ್ನು ಕೇಳಿ ನಂತರ ಥಳಿಸಿದ್ದಾರೆ. ದಾಳಿಕೋರರನ್ನು ದೀಪಕ್, ನಿಖಿಲ್, ಜೆಜೆ ಕಾಂತ್, ಮತ್ತು ಪಂಕಜ್ ಎಂದು ಗುರುತಿಸಲಾಗಿದೆ.

ಮೂವರಲ್ಲಿ, ಅಮೀರ್ ಮತ್ತು ರಿಜ್ವಾನ್ ಹೇಗೋ ತಪ್ಪಿಸಿಕೊಂಡಿದ್ದಾರೆ, ಆದರೆ ಮೂರನೇ ವ್ಯಕ್ತಿ ವಾಸಿಮ್ ಅವರನ್ನು ಹಲ್ಲೆಕೋರರು ಕಟ್ಟಿಹಾಕಿ ಕ್ರೂರವಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ವಾಸಿಮ್ ಅವರ ಕುಟುಂಬದವರು ಆತನನ್ನು ರಕ್ಷಿಸಿ, ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಸದ್ಯ ಆತ ಪೀಲ್ಖುವಾದ ಜೆ.ಎಸ್. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಾಧ್ಯಮದೊಂದಿಗೆ ಮಾತನಾಡಿದ ವಾಸಿಮ್ ಅವರ ಸಹೋದರ ಮತ್ತು ದೂರುದಾರರಾದ ಅಫ್ರೋಜ್, “ಹಿಂದಿರುಗುವ ದಾರಿಯಲ್ಲಿ, ಪರ್ತಾಪುರ್ ಗ್ರಾಮದ ಬಳಿ ದೀಪಕ್, ನಿಖಿಲ್, ಜೆಜೆ ಕಾಂತ್ ಮತ್ತು ಪಂಕಜ್ ಎಂದು ಗುರುತಿಸಲಾದ ನಾಲ್ವರು ಹಿಂದೂ ವ್ಯಕ್ತಿಗಳು ಅವರನ್ನು ತಡೆದರು. ನಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ ಮತ್ತು ನ್ಯಾಯಯುತ ತನಿಖೆಗೆ ಒತ್ತಾಯಿಸುತ್ತೇವೆ” ಎಂದರು.

“ಅವರ ಪ್ರಾಣ ಉಳಿದಿರುವುದಕ್ಕೆ ನಾವು ಕೃತಜ್ಞರಾಗಿದ್ದೇವೆ. ಹಲ್ಲೆಕೋರರು ಅವರನ್ನು ಒಂದು ಕೋಣೆಯೊಳಗೆ ಕರೆದುಕೊಂಡು ಹೋಗಿ ಅಪಹರಿಸಲು ಸಹ ಪ್ರಯತ್ನಿಸಿದರು ಎಂದು ನಮಗೆ ತಿಳಿದಿದೆ. ಅಮೀರ್ ಮತ್ತು ರಿಜ್ವಾನ್ ಹೇಗಾದರೂ ಗ್ರಾಮವನ್ನು ತಲುಪಿದರು. ಇಲ್ಲದಿದ್ದರೆ ಅನಾಹುತ ಸಂಭವಿಸಬಹುದಾಗಿತ್ತು,” ಎಂದು ಅಫ್ರೋಜ್ ಹೇಳಿದರು.

ದಾಳಿಗೆ ಒಳಗಾದ ಅಮೀರ್ ತಮ್ಮ ಸಂಪೂರ್ಣ ಕಥೆಯನ್ನು ವಿವರಿಸುತ್ತ, “ನಮ್ಮ ಮೇಲೆ ಯಾರಾದರೂ ದಾಳಿ ಮಾಡಬಹುದು ಎಂಬ ಅರಿವಿಲ್ಲದೆ ನಾವು ರಸ್ತೆಯಲ್ಲಿ ವಿಡಿಯೋ ರೆಕಾರ್ಡ್ ಮಾಡಲು ಪ್ರಯತ್ನಿಸುತ್ತಿದ್ದೆವು” ಎಂದರು.

“ನಮ್ಮ ಹೆಸರುಗಳನ್ನು ಕೇಳಲಾಯಿತು. ಅದರ ನಂತರ, ಅವರು ನಮ್ಮನ್ನು ಥಳಿಸಲು ಪ್ರಾರಂಭಿಸಿದರು” ಎಂದು ಅವರು ಆರೋಪಿಸಿದರು.

“ಅವರು ನಮ್ಮನ್ನು ಕೋಣೆಯಲ್ಲಿ ಬಂಧಿಸಲು ಪ್ರಯತ್ನಿಸಿದರು, ಆದರೆ ನಾವು ಹೇಗೋ ತಪ್ಪಿಸಿಕೊಂಡೆವು. ವಾಸಿಮ್ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಆತನಿಗೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ನಾವು ತಪ್ಪಿಸಿಕೊಂಡಿರದಿದ್ದರೆ, ಅವರು ನಮ್ಮನ್ನು ಥಳೀಸಿ ಕೊಲ್ಲುತ್ತಿದ್ದರು (lynched),” ಎಂದು ಅಮೀರ್ ನೆನಪಿಸಿಕೊಂಡರು.

ದಾಳಿಕೋರರು ಬಲವಂತವಾಗಿ ಅವರನ್ನು ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಮಾಡಿದರು ಮತ್ತು ಹೊಡೆಯುತ್ತಿದ್ದಾಗ ನಿರಂತರವಾಗಿ ‘ಕಟ್ವಾ ಮತ್ತು ಮುಲ್ಲಾ’ ಎಂದು ನಿಂದಿಸಿದರು ಎಂದು ಅವರು  ಹೇಳಿದ್ದಾರೆ.

ಎಲ್ಲಾ ಸಂತ್ರಸ್ತರಿಗೆ ತೀವ್ರ ಗಾಯಗಳಾಗಿವೆ, ಆದರೆ ವಾಸಿಮ್ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಪೀಲ್ಖುವಾದ ಜೆ.ಎಸ್. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ.

ಸಂತ್ರಸ್ತರ ಸಹೋದರ ನೀಡಿದ ದೂರಿನ ಆಧಾರದ ಮೇಲೆ, ದೀಪಕ್, ನಿಖಿಲ್, ಜೆಜೆ ಕಾಂತ್, ಮತ್ತು ಪಂಕಜ್ ಎಂದು ಗುರುತಿಸಲಾದ ನಾಲ್ವರು ಹಿಂದೂ ವ್ಯಕ್ತಿಗಳ ವಿರುದ್ಧ ಆಗಸ್ಟ್ 27ರಂದು ಪೀಲ್ಖುವಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ 126 (2) (ಅಕ್ರಮವಾಗಿ ಬಂಧನ) ಮತ್ತು 109 (ಕೊಲೆ ಯತ್ನ) ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (FIR) ದಾಖಲಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಆದರೆ, ಹಾಪುರ್ ಪೊಲೀಸರು ಈ ಘಟನೆಗೆ ಮತ್ತೊಂದು ಆವೃತ್ತಿಯನ್ನು ನೀಡಿದ್ದಾರೆ. ಹಿಂದೂತ್ವ ಘೋಷಣೆಗಳ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ಅಧಿಕಾರಿಗಳು ತನಿಖೆ ನಡೆಯುತ್ತಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

ಪ್ರಕರಣದ ಠಾಣಾಧಿಕಾರಿ ಮತ್ತು ತನಿಖಾಧಿಕಾರಿ ಸುಧೀರ್ ಕುಮಾರ್, “ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಮತ್ತು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾವು ಎಲ್ಲಾ ಆರೋಪಗಳನ್ನು ಪರಿಶೀಲಿಸುತ್ತಿದ್ದೇವೆ. ಧಾರ್ಮಿಕ ಘೋಷಣೆಗಳ ಬಗ್ಗೆ ಮಾಡಲಾದ ಆರೋಪ ಸದ್ಯಕ್ಕೆ ನಿಜವಲ್ಲ” ಎಂದಿದ್ದಾರೆ.

“ಈ ಮೂವರು ಹುಡುಗರು ಆ ಹುಡುಗರ (ಆರೋಪಿಗಳ) ಮನೆಯ ಹೊರಗೆ ಇನ್‌ಸ್ಟಾಗ್ರಾಮ್ ರೀಲ್ಸ್ ಮಾಡುತ್ತಿದ್ದರು, ಮತ್ತು ಅವರನ್ನು ಕಳ್ಳರು ಎಂದು ತಪ್ಪಾಗಿ ಭಾವಿಸಿ ಹೊಡೆಯಲಾಗಿದೆ. ಇದರಲ್ಲಿ ಯಾವುದೇ ಧಾರ್ಮಿಕ ಕೋನವಿಲ್ಲ,” ಎಂದು ತನಿಖಾಧಿಕಾರಿ ಹೇಳಿದರು.

ಮೂವರ ಕುಟುಂಬವು ಆತಂಕದಲ್ಲಿದ್ದು, ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆಗಾಗಿ ಎದುರು ನೋಡುತ್ತಿದೆ.

ಎರಡು ಭಿನ್ನ ಕಥೆಗಳು ಮತ್ತು ನ್ಯಾಯದ ಪ್ರಶ್ನೆ

ಈ ಘಟನೆಯ ಕುರಿತು ಎರಡು ಭಿನ್ನ ಕಥೆಗಳು ಸಾರ್ವಜನಿಕವಾಗಿ ಚರ್ಚೆಯಲ್ಲಿವೆ. ಒಂದು ಕಡೆ, ಸಂತ್ರಸ್ತರ ಹೇಳಿಕೆ ಮತ್ತು ಅವರ ದೈಹಿಕ ಗಾಯಗಳು ಧಾರ್ಮಿಕ ದ್ವೇಷದ ಹಿಂಸೆಯನ್ನು ಸ್ಪಷ್ಟವಾಗಿ ತೋರಿಸುತ್ತವೆ. ಮತ್ತೊಂದು ಕಡೆ, ಪೊಲೀಸರು ಪ್ರಕರಣಕ್ಕೆ ಯಾವುದೇ ಧಾರ್ಮಿಕ ಆಯಾಮವಿಲ್ಲ ಎಂದು ಹೇಳಿ, ಯುವಕರನ್ನು ಕಳ್ಳರು ಎಂದು ತಪ್ಪಾಗಿ ಭಾವಿಸಿ ಹೊಡೆಯಲಾಗಿದೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಈ ಎರಡು ಆವೃತ್ತಿಗಳು ನ್ಯಾಯದ ವ್ಯವಸ್ಥೆಯ ಮೇಲೆ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿವೆ. ನ್ಯಾಯಯುತ ತನಿಖೆ ನಡೆಸಿ, ಯಾವ ಕಥೆ ನಿಜ ಎಂದು ಬಹಿರಂಗಪಡಿಸಬೇಕಾದ ಜವಾಬ್ದಾರಿ ಪೊಲೀಸರ ಮೇಲಿದೆ. ಪೊಲೀಸರ ಹೇಳಿಕೆಗಳು, ಸಂತ್ರಸ್ತರ ಆತಂಕಗಳನ್ನು ಹೆಚ್ಚಿಸಿವೆ. ಸದ್ಯ, ಮೂವರ ಕುಟುಂಬ ನ್ಯಾಯಯುತ ತನಿಖೆಗಾಗಿ ಎದುರು ನೋಡುತ್ತಿದ್ದು, ಈ ಪ್ರಕರಣದಲ್ಲಿ ಸತ್ಯ ಹೊರಬರುತ್ತದೆಯೇ ಎಂದು ಇಡೀ ಸಮಾಜ ಗಮನಿಸುತ್ತಿದೆ. ಈ ರೀತಿಯ ಘಟನೆಗಳು ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಎದುರಿಸುತ್ತಿರುವ ಅಸುರಕ್ಷಿತ ವಾತಾವರಣವನ್ನು ಎತ್ತಿ ತೋರಿಸುತ್ತವೆ.

ಶಿಕ್ಷಣಕ್ಕೆ ಅರ್ಹನಲ್ಲ: ಗುಜರಾತ್ ಶಾಲೆಯ ಮಾಲೀಕನಿಂದ ದಲಿತ ವಿದ್ಯಾರ್ಥಿಗೆ ಅವಮಾನ, ಕಾಲಿನಿಂದ ಒದ್ದು ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...