Homeಮುಖಪುಟ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುವಂತೆ ಬಲವಂತ: ಹಾಪುರದಲ್ಲಿ ಮುಸ್ಲಿಂ ಯುವಕರ ಮೇಲೆ ಹಲ್ಲೆ,...

‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುವಂತೆ ಬಲವಂತ: ಹಾಪುರದಲ್ಲಿ ಮುಸ್ಲಿಂ ಯುವಕರ ಮೇಲೆ ಹಲ್ಲೆ, ದ್ವೇಷದ ಘಟನೆ ಬೆಳಕಿಗೆ

- Advertisement -
- Advertisement -

ಹಾಪೂರ, ಉತ್ತರ ಪ್ರದೇಶ: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಪರ್ತಾಪುರ್ ಗ್ರಾಮದಲ್ಲಿ ಮೂವರು ಮುಸ್ಲಿಂ ಯುವಕರಾದ ಅಮೀರ್ (28), ವಾಸಿಮ್ (28), ಮತ್ತು ರಿಜ್ವಾನ್ (24) ಅವರನ್ನು ರಸ್ತೆಯಲ್ಲಿ ತಡೆದು, ಅವರ ಹೆಸರುಗಳನ್ನು ಕೇಳಿ ಅವರು ಮುಸ್ಲಿಮರು ಎಂದು ಖಚಿತಪಡಿಸಿಕೊಂಡ ನಂತರ, ದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳಿಂದ ಕ್ರೂರವಾಗಿ ಥಳಿಸಿ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಆಗಸ್ಟ್ 26ರ ಮಂಗಳವಾರ ಸಂಜೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅವರನ್ನು ದೊಣ್ಣೆಗಳು ಮತ್ತು ಲೋಹದ ರಾಡ್‌ಗಳಿಂದ ನಿರ್ದಯವಾಗಿ ಥಳಿಸಿ, ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಬಲವಂತಪಡಿಸಲಾಗಿದೆ.

ಅಮೀರ್, ವಾಸಿಮ್, ಮತ್ತು ರಿಜ್ವಾನ್ ಅವರು ತಮ್ಮ ಕೆಲಸ ಮುಗಿಸಿ ಪೀಲ್ಖುವಾದಿಂದ ತಮ್ಮ ಗ್ರಾಮವಾದ ಕಲ್ಚೀನಾಕ್ಕೆ ಮೋಟಾರ್‌ಸೈಕಲ್‌ನಲ್ಲಿ ಹಿಂತಿರುಗುತ್ತಿದ್ದಾಗ ಈ ದಾಳಿ ನಡೆದಿದೆ. ಷಾಮ್ಲಿ ಜಿಲ್ಲೆಗೆ ಹೋಗುವ ರಸ್ತೆಯಲ್ಲಿರುವ ಪರ್ತಾಪುರ್ ಗ್ರಾಮದಲ್ಲಿ ಅವರನ್ನು ನಾಲ್ವರು ಹಿಂದೂ ವ್ಯಕ್ತಿಗಳು ತಡೆದು, ಅವರ ಹೆಸರುಗಳನ್ನು ಕೇಳಿ ನಂತರ ಥಳಿಸಿದ್ದಾರೆ. ದಾಳಿಕೋರರನ್ನು ದೀಪಕ್, ನಿಖಿಲ್, ಜೆಜೆ ಕಾಂತ್, ಮತ್ತು ಪಂಕಜ್ ಎಂದು ಗುರುತಿಸಲಾಗಿದೆ.

ಮೂವರಲ್ಲಿ, ಅಮೀರ್ ಮತ್ತು ರಿಜ್ವಾನ್ ಹೇಗೋ ತಪ್ಪಿಸಿಕೊಂಡಿದ್ದಾರೆ, ಆದರೆ ಮೂರನೇ ವ್ಯಕ್ತಿ ವಾಸಿಮ್ ಅವರನ್ನು ಹಲ್ಲೆಕೋರರು ಕಟ್ಟಿಹಾಕಿ ಕ್ರೂರವಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ವಾಸಿಮ್ ಅವರ ಕುಟುಂಬದವರು ಆತನನ್ನು ರಕ್ಷಿಸಿ, ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಸದ್ಯ ಆತ ಪೀಲ್ಖುವಾದ ಜೆ.ಎಸ್. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಾಧ್ಯಮದೊಂದಿಗೆ ಮಾತನಾಡಿದ ವಾಸಿಮ್ ಅವರ ಸಹೋದರ ಮತ್ತು ದೂರುದಾರರಾದ ಅಫ್ರೋಜ್, “ಹಿಂದಿರುಗುವ ದಾರಿಯಲ್ಲಿ, ಪರ್ತಾಪುರ್ ಗ್ರಾಮದ ಬಳಿ ದೀಪಕ್, ನಿಖಿಲ್, ಜೆಜೆ ಕಾಂತ್ ಮತ್ತು ಪಂಕಜ್ ಎಂದು ಗುರುತಿಸಲಾದ ನಾಲ್ವರು ಹಿಂದೂ ವ್ಯಕ್ತಿಗಳು ಅವರನ್ನು ತಡೆದರು. ನಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ ಮತ್ತು ನ್ಯಾಯಯುತ ತನಿಖೆಗೆ ಒತ್ತಾಯಿಸುತ್ತೇವೆ” ಎಂದರು.

“ಅವರ ಪ್ರಾಣ ಉಳಿದಿರುವುದಕ್ಕೆ ನಾವು ಕೃತಜ್ಞರಾಗಿದ್ದೇವೆ. ಹಲ್ಲೆಕೋರರು ಅವರನ್ನು ಒಂದು ಕೋಣೆಯೊಳಗೆ ಕರೆದುಕೊಂಡು ಹೋಗಿ ಅಪಹರಿಸಲು ಸಹ ಪ್ರಯತ್ನಿಸಿದರು ಎಂದು ನಮಗೆ ತಿಳಿದಿದೆ. ಅಮೀರ್ ಮತ್ತು ರಿಜ್ವಾನ್ ಹೇಗಾದರೂ ಗ್ರಾಮವನ್ನು ತಲುಪಿದರು. ಇಲ್ಲದಿದ್ದರೆ ಅನಾಹುತ ಸಂಭವಿಸಬಹುದಾಗಿತ್ತು,” ಎಂದು ಅಫ್ರೋಜ್ ಹೇಳಿದರು.

ದಾಳಿಗೆ ಒಳಗಾದ ಅಮೀರ್ ತಮ್ಮ ಸಂಪೂರ್ಣ ಕಥೆಯನ್ನು ವಿವರಿಸುತ್ತ, “ನಮ್ಮ ಮೇಲೆ ಯಾರಾದರೂ ದಾಳಿ ಮಾಡಬಹುದು ಎಂಬ ಅರಿವಿಲ್ಲದೆ ನಾವು ರಸ್ತೆಯಲ್ಲಿ ವಿಡಿಯೋ ರೆಕಾರ್ಡ್ ಮಾಡಲು ಪ್ರಯತ್ನಿಸುತ್ತಿದ್ದೆವು” ಎಂದರು.

“ನಮ್ಮ ಹೆಸರುಗಳನ್ನು ಕೇಳಲಾಯಿತು. ಅದರ ನಂತರ, ಅವರು ನಮ್ಮನ್ನು ಥಳಿಸಲು ಪ್ರಾರಂಭಿಸಿದರು” ಎಂದು ಅವರು ಆರೋಪಿಸಿದರು.

“ಅವರು ನಮ್ಮನ್ನು ಕೋಣೆಯಲ್ಲಿ ಬಂಧಿಸಲು ಪ್ರಯತ್ನಿಸಿದರು, ಆದರೆ ನಾವು ಹೇಗೋ ತಪ್ಪಿಸಿಕೊಂಡೆವು. ವಾಸಿಮ್ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಆತನಿಗೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ನಾವು ತಪ್ಪಿಸಿಕೊಂಡಿರದಿದ್ದರೆ, ಅವರು ನಮ್ಮನ್ನು ಥಳೀಸಿ ಕೊಲ್ಲುತ್ತಿದ್ದರು (lynched),” ಎಂದು ಅಮೀರ್ ನೆನಪಿಸಿಕೊಂಡರು.

ದಾಳಿಕೋರರು ಬಲವಂತವಾಗಿ ಅವರನ್ನು ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಮಾಡಿದರು ಮತ್ತು ಹೊಡೆಯುತ್ತಿದ್ದಾಗ ನಿರಂತರವಾಗಿ ‘ಕಟ್ವಾ ಮತ್ತು ಮುಲ್ಲಾ’ ಎಂದು ನಿಂದಿಸಿದರು ಎಂದು ಅವರು  ಹೇಳಿದ್ದಾರೆ.

ಎಲ್ಲಾ ಸಂತ್ರಸ್ತರಿಗೆ ತೀವ್ರ ಗಾಯಗಳಾಗಿವೆ, ಆದರೆ ವಾಸಿಮ್ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಪೀಲ್ಖುವಾದ ಜೆ.ಎಸ್. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ.

ಸಂತ್ರಸ್ತರ ಸಹೋದರ ನೀಡಿದ ದೂರಿನ ಆಧಾರದ ಮೇಲೆ, ದೀಪಕ್, ನಿಖಿಲ್, ಜೆಜೆ ಕಾಂತ್, ಮತ್ತು ಪಂಕಜ್ ಎಂದು ಗುರುತಿಸಲಾದ ನಾಲ್ವರು ಹಿಂದೂ ವ್ಯಕ್ತಿಗಳ ವಿರುದ್ಧ ಆಗಸ್ಟ್ 27ರಂದು ಪೀಲ್ಖುವಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ 126 (2) (ಅಕ್ರಮವಾಗಿ ಬಂಧನ) ಮತ್ತು 109 (ಕೊಲೆ ಯತ್ನ) ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (FIR) ದಾಖಲಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಆದರೆ, ಹಾಪುರ್ ಪೊಲೀಸರು ಈ ಘಟನೆಗೆ ಮತ್ತೊಂದು ಆವೃತ್ತಿಯನ್ನು ನೀಡಿದ್ದಾರೆ. ಹಿಂದೂತ್ವ ಘೋಷಣೆಗಳ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ಅಧಿಕಾರಿಗಳು ತನಿಖೆ ನಡೆಯುತ್ತಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

ಪ್ರಕರಣದ ಠಾಣಾಧಿಕಾರಿ ಮತ್ತು ತನಿಖಾಧಿಕಾರಿ ಸುಧೀರ್ ಕುಮಾರ್, “ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಮತ್ತು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾವು ಎಲ್ಲಾ ಆರೋಪಗಳನ್ನು ಪರಿಶೀಲಿಸುತ್ತಿದ್ದೇವೆ. ಧಾರ್ಮಿಕ ಘೋಷಣೆಗಳ ಬಗ್ಗೆ ಮಾಡಲಾದ ಆರೋಪ ಸದ್ಯಕ್ಕೆ ನಿಜವಲ್ಲ” ಎಂದಿದ್ದಾರೆ.

“ಈ ಮೂವರು ಹುಡುಗರು ಆ ಹುಡುಗರ (ಆರೋಪಿಗಳ) ಮನೆಯ ಹೊರಗೆ ಇನ್‌ಸ್ಟಾಗ್ರಾಮ್ ರೀಲ್ಸ್ ಮಾಡುತ್ತಿದ್ದರು, ಮತ್ತು ಅವರನ್ನು ಕಳ್ಳರು ಎಂದು ತಪ್ಪಾಗಿ ಭಾವಿಸಿ ಹೊಡೆಯಲಾಗಿದೆ. ಇದರಲ್ಲಿ ಯಾವುದೇ ಧಾರ್ಮಿಕ ಕೋನವಿಲ್ಲ,” ಎಂದು ತನಿಖಾಧಿಕಾರಿ ಹೇಳಿದರು.

ಮೂವರ ಕುಟುಂಬವು ಆತಂಕದಲ್ಲಿದ್ದು, ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆಗಾಗಿ ಎದುರು ನೋಡುತ್ತಿದೆ.

ಎರಡು ಭಿನ್ನ ಕಥೆಗಳು ಮತ್ತು ನ್ಯಾಯದ ಪ್ರಶ್ನೆ

ಈ ಘಟನೆಯ ಕುರಿತು ಎರಡು ಭಿನ್ನ ಕಥೆಗಳು ಸಾರ್ವಜನಿಕವಾಗಿ ಚರ್ಚೆಯಲ್ಲಿವೆ. ಒಂದು ಕಡೆ, ಸಂತ್ರಸ್ತರ ಹೇಳಿಕೆ ಮತ್ತು ಅವರ ದೈಹಿಕ ಗಾಯಗಳು ಧಾರ್ಮಿಕ ದ್ವೇಷದ ಹಿಂಸೆಯನ್ನು ಸ್ಪಷ್ಟವಾಗಿ ತೋರಿಸುತ್ತವೆ. ಮತ್ತೊಂದು ಕಡೆ, ಪೊಲೀಸರು ಪ್ರಕರಣಕ್ಕೆ ಯಾವುದೇ ಧಾರ್ಮಿಕ ಆಯಾಮವಿಲ್ಲ ಎಂದು ಹೇಳಿ, ಯುವಕರನ್ನು ಕಳ್ಳರು ಎಂದು ತಪ್ಪಾಗಿ ಭಾವಿಸಿ ಹೊಡೆಯಲಾಗಿದೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಈ ಎರಡು ಆವೃತ್ತಿಗಳು ನ್ಯಾಯದ ವ್ಯವಸ್ಥೆಯ ಮೇಲೆ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿವೆ. ನ್ಯಾಯಯುತ ತನಿಖೆ ನಡೆಸಿ, ಯಾವ ಕಥೆ ನಿಜ ಎಂದು ಬಹಿರಂಗಪಡಿಸಬೇಕಾದ ಜವಾಬ್ದಾರಿ ಪೊಲೀಸರ ಮೇಲಿದೆ. ಪೊಲೀಸರ ಹೇಳಿಕೆಗಳು, ಸಂತ್ರಸ್ತರ ಆತಂಕಗಳನ್ನು ಹೆಚ್ಚಿಸಿವೆ. ಸದ್ಯ, ಮೂವರ ಕುಟುಂಬ ನ್ಯಾಯಯುತ ತನಿಖೆಗಾಗಿ ಎದುರು ನೋಡುತ್ತಿದ್ದು, ಈ ಪ್ರಕರಣದಲ್ಲಿ ಸತ್ಯ ಹೊರಬರುತ್ತದೆಯೇ ಎಂದು ಇಡೀ ಸಮಾಜ ಗಮನಿಸುತ್ತಿದೆ. ಈ ರೀತಿಯ ಘಟನೆಗಳು ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಎದುರಿಸುತ್ತಿರುವ ಅಸುರಕ್ಷಿತ ವಾತಾವರಣವನ್ನು ಎತ್ತಿ ತೋರಿಸುತ್ತವೆ.

ಶಿಕ್ಷಣಕ್ಕೆ ಅರ್ಹನಲ್ಲ: ಗುಜರಾತ್ ಶಾಲೆಯ ಮಾಲೀಕನಿಂದ ದಲಿತ ವಿದ್ಯಾರ್ಥಿಗೆ ಅವಮಾನ, ಕಾಲಿನಿಂದ ಒದ್ದು ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...