Homeಮುಖಪುಟ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುವಂತೆ ಬಲವಂತ: ಹಾಪುರದಲ್ಲಿ ಮುಸ್ಲಿಂ ಯುವಕರ ಮೇಲೆ ಹಲ್ಲೆ,...

‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುವಂತೆ ಬಲವಂತ: ಹಾಪುರದಲ್ಲಿ ಮುಸ್ಲಿಂ ಯುವಕರ ಮೇಲೆ ಹಲ್ಲೆ, ದ್ವೇಷದ ಘಟನೆ ಬೆಳಕಿಗೆ

- Advertisement -
- Advertisement -

ಹಾಪೂರ, ಉತ್ತರ ಪ್ರದೇಶ: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಪರ್ತಾಪುರ್ ಗ್ರಾಮದಲ್ಲಿ ಮೂವರು ಮುಸ್ಲಿಂ ಯುವಕರಾದ ಅಮೀರ್ (28), ವಾಸಿಮ್ (28), ಮತ್ತು ರಿಜ್ವಾನ್ (24) ಅವರನ್ನು ರಸ್ತೆಯಲ್ಲಿ ತಡೆದು, ಅವರ ಹೆಸರುಗಳನ್ನು ಕೇಳಿ ಅವರು ಮುಸ್ಲಿಮರು ಎಂದು ಖಚಿತಪಡಿಸಿಕೊಂಡ ನಂತರ, ದೊಣ್ಣೆ ಮತ್ತು ಕಬ್ಬಿಣದ ರಾಡ್‌ಗಳಿಂದ ಕ್ರೂರವಾಗಿ ಥಳಿಸಿ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಆಗಸ್ಟ್ 26ರ ಮಂಗಳವಾರ ಸಂಜೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅವರನ್ನು ದೊಣ್ಣೆಗಳು ಮತ್ತು ಲೋಹದ ರಾಡ್‌ಗಳಿಂದ ನಿರ್ದಯವಾಗಿ ಥಳಿಸಿ, ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಬಲವಂತಪಡಿಸಲಾಗಿದೆ.

ಅಮೀರ್, ವಾಸಿಮ್, ಮತ್ತು ರಿಜ್ವಾನ್ ಅವರು ತಮ್ಮ ಕೆಲಸ ಮುಗಿಸಿ ಪೀಲ್ಖುವಾದಿಂದ ತಮ್ಮ ಗ್ರಾಮವಾದ ಕಲ್ಚೀನಾಕ್ಕೆ ಮೋಟಾರ್‌ಸೈಕಲ್‌ನಲ್ಲಿ ಹಿಂತಿರುಗುತ್ತಿದ್ದಾಗ ಈ ದಾಳಿ ನಡೆದಿದೆ. ಷಾಮ್ಲಿ ಜಿಲ್ಲೆಗೆ ಹೋಗುವ ರಸ್ತೆಯಲ್ಲಿರುವ ಪರ್ತಾಪುರ್ ಗ್ರಾಮದಲ್ಲಿ ಅವರನ್ನು ನಾಲ್ವರು ಹಿಂದೂ ವ್ಯಕ್ತಿಗಳು ತಡೆದು, ಅವರ ಹೆಸರುಗಳನ್ನು ಕೇಳಿ ನಂತರ ಥಳಿಸಿದ್ದಾರೆ. ದಾಳಿಕೋರರನ್ನು ದೀಪಕ್, ನಿಖಿಲ್, ಜೆಜೆ ಕಾಂತ್, ಮತ್ತು ಪಂಕಜ್ ಎಂದು ಗುರುತಿಸಲಾಗಿದೆ.

ಮೂವರಲ್ಲಿ, ಅಮೀರ್ ಮತ್ತು ರಿಜ್ವಾನ್ ಹೇಗೋ ತಪ್ಪಿಸಿಕೊಂಡಿದ್ದಾರೆ, ಆದರೆ ಮೂರನೇ ವ್ಯಕ್ತಿ ವಾಸಿಮ್ ಅವರನ್ನು ಹಲ್ಲೆಕೋರರು ಕಟ್ಟಿಹಾಕಿ ಕ್ರೂರವಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ವಾಸಿಮ್ ಅವರ ಕುಟುಂಬದವರು ಆತನನ್ನು ರಕ್ಷಿಸಿ, ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಸದ್ಯ ಆತ ಪೀಲ್ಖುವಾದ ಜೆ.ಎಸ್. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಾಧ್ಯಮದೊಂದಿಗೆ ಮಾತನಾಡಿದ ವಾಸಿಮ್ ಅವರ ಸಹೋದರ ಮತ್ತು ದೂರುದಾರರಾದ ಅಫ್ರೋಜ್, “ಹಿಂದಿರುಗುವ ದಾರಿಯಲ್ಲಿ, ಪರ್ತಾಪುರ್ ಗ್ರಾಮದ ಬಳಿ ದೀಪಕ್, ನಿಖಿಲ್, ಜೆಜೆ ಕಾಂತ್ ಮತ್ತು ಪಂಕಜ್ ಎಂದು ಗುರುತಿಸಲಾದ ನಾಲ್ವರು ಹಿಂದೂ ವ್ಯಕ್ತಿಗಳು ಅವರನ್ನು ತಡೆದರು. ನಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ ಮತ್ತು ನ್ಯಾಯಯುತ ತನಿಖೆಗೆ ಒತ್ತಾಯಿಸುತ್ತೇವೆ” ಎಂದರು.

“ಅವರ ಪ್ರಾಣ ಉಳಿದಿರುವುದಕ್ಕೆ ನಾವು ಕೃತಜ್ಞರಾಗಿದ್ದೇವೆ. ಹಲ್ಲೆಕೋರರು ಅವರನ್ನು ಒಂದು ಕೋಣೆಯೊಳಗೆ ಕರೆದುಕೊಂಡು ಹೋಗಿ ಅಪಹರಿಸಲು ಸಹ ಪ್ರಯತ್ನಿಸಿದರು ಎಂದು ನಮಗೆ ತಿಳಿದಿದೆ. ಅಮೀರ್ ಮತ್ತು ರಿಜ್ವಾನ್ ಹೇಗಾದರೂ ಗ್ರಾಮವನ್ನು ತಲುಪಿದರು. ಇಲ್ಲದಿದ್ದರೆ ಅನಾಹುತ ಸಂಭವಿಸಬಹುದಾಗಿತ್ತು,” ಎಂದು ಅಫ್ರೋಜ್ ಹೇಳಿದರು.

ದಾಳಿಗೆ ಒಳಗಾದ ಅಮೀರ್ ತಮ್ಮ ಸಂಪೂರ್ಣ ಕಥೆಯನ್ನು ವಿವರಿಸುತ್ತ, “ನಮ್ಮ ಮೇಲೆ ಯಾರಾದರೂ ದಾಳಿ ಮಾಡಬಹುದು ಎಂಬ ಅರಿವಿಲ್ಲದೆ ನಾವು ರಸ್ತೆಯಲ್ಲಿ ವಿಡಿಯೋ ರೆಕಾರ್ಡ್ ಮಾಡಲು ಪ್ರಯತ್ನಿಸುತ್ತಿದ್ದೆವು” ಎಂದರು.

“ನಮ್ಮ ಹೆಸರುಗಳನ್ನು ಕೇಳಲಾಯಿತು. ಅದರ ನಂತರ, ಅವರು ನಮ್ಮನ್ನು ಥಳಿಸಲು ಪ್ರಾರಂಭಿಸಿದರು” ಎಂದು ಅವರು ಆರೋಪಿಸಿದರು.

“ಅವರು ನಮ್ಮನ್ನು ಕೋಣೆಯಲ್ಲಿ ಬಂಧಿಸಲು ಪ್ರಯತ್ನಿಸಿದರು, ಆದರೆ ನಾವು ಹೇಗೋ ತಪ್ಪಿಸಿಕೊಂಡೆವು. ವಾಸಿಮ್ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಆತನಿಗೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ನಾವು ತಪ್ಪಿಸಿಕೊಂಡಿರದಿದ್ದರೆ, ಅವರು ನಮ್ಮನ್ನು ಥಳೀಸಿ ಕೊಲ್ಲುತ್ತಿದ್ದರು (lynched),” ಎಂದು ಅಮೀರ್ ನೆನಪಿಸಿಕೊಂಡರು.

ದಾಳಿಕೋರರು ಬಲವಂತವಾಗಿ ಅವರನ್ನು ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಮಾಡಿದರು ಮತ್ತು ಹೊಡೆಯುತ್ತಿದ್ದಾಗ ನಿರಂತರವಾಗಿ ‘ಕಟ್ವಾ ಮತ್ತು ಮುಲ್ಲಾ’ ಎಂದು ನಿಂದಿಸಿದರು ಎಂದು ಅವರು  ಹೇಳಿದ್ದಾರೆ.

ಎಲ್ಲಾ ಸಂತ್ರಸ್ತರಿಗೆ ತೀವ್ರ ಗಾಯಗಳಾಗಿವೆ, ಆದರೆ ವಾಸಿಮ್ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಪೀಲ್ಖುವಾದ ಜೆ.ಎಸ್. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ.

ಸಂತ್ರಸ್ತರ ಸಹೋದರ ನೀಡಿದ ದೂರಿನ ಆಧಾರದ ಮೇಲೆ, ದೀಪಕ್, ನಿಖಿಲ್, ಜೆಜೆ ಕಾಂತ್, ಮತ್ತು ಪಂಕಜ್ ಎಂದು ಗುರುತಿಸಲಾದ ನಾಲ್ವರು ಹಿಂದೂ ವ್ಯಕ್ತಿಗಳ ವಿರುದ್ಧ ಆಗಸ್ಟ್ 27ರಂದು ಪೀಲ್ಖುವಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ 126 (2) (ಅಕ್ರಮವಾಗಿ ಬಂಧನ) ಮತ್ತು 109 (ಕೊಲೆ ಯತ್ನ) ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (FIR) ದಾಖಲಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಆದರೆ, ಹಾಪುರ್ ಪೊಲೀಸರು ಈ ಘಟನೆಗೆ ಮತ್ತೊಂದು ಆವೃತ್ತಿಯನ್ನು ನೀಡಿದ್ದಾರೆ. ಹಿಂದೂತ್ವ ಘೋಷಣೆಗಳ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ಅಧಿಕಾರಿಗಳು ತನಿಖೆ ನಡೆಯುತ್ತಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

ಪ್ರಕರಣದ ಠಾಣಾಧಿಕಾರಿ ಮತ್ತು ತನಿಖಾಧಿಕಾರಿ ಸುಧೀರ್ ಕುಮಾರ್, “ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಮತ್ತು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾವು ಎಲ್ಲಾ ಆರೋಪಗಳನ್ನು ಪರಿಶೀಲಿಸುತ್ತಿದ್ದೇವೆ. ಧಾರ್ಮಿಕ ಘೋಷಣೆಗಳ ಬಗ್ಗೆ ಮಾಡಲಾದ ಆರೋಪ ಸದ್ಯಕ್ಕೆ ನಿಜವಲ್ಲ” ಎಂದಿದ್ದಾರೆ.

“ಈ ಮೂವರು ಹುಡುಗರು ಆ ಹುಡುಗರ (ಆರೋಪಿಗಳ) ಮನೆಯ ಹೊರಗೆ ಇನ್‌ಸ್ಟಾಗ್ರಾಮ್ ರೀಲ್ಸ್ ಮಾಡುತ್ತಿದ್ದರು, ಮತ್ತು ಅವರನ್ನು ಕಳ್ಳರು ಎಂದು ತಪ್ಪಾಗಿ ಭಾವಿಸಿ ಹೊಡೆಯಲಾಗಿದೆ. ಇದರಲ್ಲಿ ಯಾವುದೇ ಧಾರ್ಮಿಕ ಕೋನವಿಲ್ಲ,” ಎಂದು ತನಿಖಾಧಿಕಾರಿ ಹೇಳಿದರು.

ಮೂವರ ಕುಟುಂಬವು ಆತಂಕದಲ್ಲಿದ್ದು, ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆಗಾಗಿ ಎದುರು ನೋಡುತ್ತಿದೆ.

ಎರಡು ಭಿನ್ನ ಕಥೆಗಳು ಮತ್ತು ನ್ಯಾಯದ ಪ್ರಶ್ನೆ

ಈ ಘಟನೆಯ ಕುರಿತು ಎರಡು ಭಿನ್ನ ಕಥೆಗಳು ಸಾರ್ವಜನಿಕವಾಗಿ ಚರ್ಚೆಯಲ್ಲಿವೆ. ಒಂದು ಕಡೆ, ಸಂತ್ರಸ್ತರ ಹೇಳಿಕೆ ಮತ್ತು ಅವರ ದೈಹಿಕ ಗಾಯಗಳು ಧಾರ್ಮಿಕ ದ್ವೇಷದ ಹಿಂಸೆಯನ್ನು ಸ್ಪಷ್ಟವಾಗಿ ತೋರಿಸುತ್ತವೆ. ಮತ್ತೊಂದು ಕಡೆ, ಪೊಲೀಸರು ಪ್ರಕರಣಕ್ಕೆ ಯಾವುದೇ ಧಾರ್ಮಿಕ ಆಯಾಮವಿಲ್ಲ ಎಂದು ಹೇಳಿ, ಯುವಕರನ್ನು ಕಳ್ಳರು ಎಂದು ತಪ್ಪಾಗಿ ಭಾವಿಸಿ ಹೊಡೆಯಲಾಗಿದೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಈ ಎರಡು ಆವೃತ್ತಿಗಳು ನ್ಯಾಯದ ವ್ಯವಸ್ಥೆಯ ಮೇಲೆ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿವೆ. ನ್ಯಾಯಯುತ ತನಿಖೆ ನಡೆಸಿ, ಯಾವ ಕಥೆ ನಿಜ ಎಂದು ಬಹಿರಂಗಪಡಿಸಬೇಕಾದ ಜವಾಬ್ದಾರಿ ಪೊಲೀಸರ ಮೇಲಿದೆ. ಪೊಲೀಸರ ಹೇಳಿಕೆಗಳು, ಸಂತ್ರಸ್ತರ ಆತಂಕಗಳನ್ನು ಹೆಚ್ಚಿಸಿವೆ. ಸದ್ಯ, ಮೂವರ ಕುಟುಂಬ ನ್ಯಾಯಯುತ ತನಿಖೆಗಾಗಿ ಎದುರು ನೋಡುತ್ತಿದ್ದು, ಈ ಪ್ರಕರಣದಲ್ಲಿ ಸತ್ಯ ಹೊರಬರುತ್ತದೆಯೇ ಎಂದು ಇಡೀ ಸಮಾಜ ಗಮನಿಸುತ್ತಿದೆ. ಈ ರೀತಿಯ ಘಟನೆಗಳು ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಎದುರಿಸುತ್ತಿರುವ ಅಸುರಕ್ಷಿತ ವಾತಾವರಣವನ್ನು ಎತ್ತಿ ತೋರಿಸುತ್ತವೆ.

ಶಿಕ್ಷಣಕ್ಕೆ ಅರ್ಹನಲ್ಲ: ಗುಜರಾತ್ ಶಾಲೆಯ ಮಾಲೀಕನಿಂದ ದಲಿತ ವಿದ್ಯಾರ್ಥಿಗೆ ಅವಮಾನ, ಕಾಲಿನಿಂದ ಒದ್ದು ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...