Homeಮುಖಪುಟಗೋಹತ್ಯೆ ವದಂತಿಯಿಂದ ಮುಸ್ಲಿಂ ವ್ಯಾಪಾರಿಯ ಗುಂಪು ಹತ್ಯೆ: ಪೊಲೀಸರು ಕೂಡ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದ್ದೇಕೆ?

ಗೋಹತ್ಯೆ ವದಂತಿಯಿಂದ ಮುಸ್ಲಿಂ ವ್ಯಾಪಾರಿಯ ಗುಂಪು ಹತ್ಯೆ: ಪೊಲೀಸರು ಕೂಡ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದ್ದೇಕೆ?

- Advertisement -
- Advertisement -

ದಾದ್ರಿಯಲ್ಲಿ 2015ರಲ್ಲಿ ಮೊಹಮ್ಮದ್ ಅಖ್ಲಾಕ್ ಎಂಬ ಮುಸ್ಲಿಂ ವ್ಯಕ್ತಿಯನ್ನು ಗೋಹತ್ಯೆ ವದಂತಿಯಿಂದ  ಹೊಡೆದು ಕೊಂದ ನಂತರ ಯುಪಿಯಲ್ಲಿ ಗೋಹತ್ಯೆಯ ಹೆಸರಿನಲ್ಲಿ ದ್ವೇಷದ ಅಪರಾಧಗಳಿಗೆ ಬಲಿಯಾದವರಲ್ಲಿ ಖಾಸಿಮ್ ಕೂಡ ಒಬ್ಬರು. ಜೂನ್ 16, 2018ರಂದು ಹಾಪುರ್‌ನ ಪಿಲ್ಖುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಜೇರಾ ಖುರ್ದ್ ಗ್ರಾಮದ ಹೊಲಗಳ ಬಳಿ ಖಾಸಿಮ್‌ಗೆ ಹೊಡೆದು ಕೊಲೆ ಮಾಡಲಾಗಿತ್ತು. ಎಲ್ಲಾ ಅಪರಾಧಿಗಳು ಬಜೇರಾ ಖುರ್ದ್ ಗ್ರಾಮಕ್ಕೆ ಸೇರಿದವರಾಗಿದ್ದು, ಖಾಸಿಂ ಮೇಕೆಗಳನ್ನು ಖರೀದಿಸಲು ಗ್ರಾಮೀಣ ಪ್ರದೇಶಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿತ್ತು. ಪ್ರಕರಣದಲ್ಲಿ ನ್ಯಾಯಕ್ಕೆ ಸಂತ್ರಸ್ತ ಕುಟುಂಬವು ಕಳೆದ 6 ವರ್ಷಗಳಿಂದ ಅಲೆದಾಡಿದ್ದು, ಪೊಲೀಸರು ಪಕ್ರರಣ ಮುಚ್ಚಿಹಾಕಲು ತಮ್ಮಿಂದಾಗುವ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದರು ಎಂದು ಕೋರ್ಟ್‌ ಗಮನಿಸಿದೆ.

ಖಾಸಿಮ್‌ ಗುಂಪು ಹತ್ಯೆ ನಡೆದಿದ್ದ 6 ವರ್ಷಗಳ ನಂತರ 10 ಮಂದಿ ಅಪರಾಧಿಗಳಿಗೆ ಉತ್ತರಪ್ರದೇಶದ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ತನಿಖೆಯಲ್ಲಿ ನಿರ್ಲಕ್ಷ್ಯ ಮಾಡಿದ್ದಕ್ಕೆ ಕೋರ್ಟ್‌ ಉತ್ತರಪ್ರದೇಶ ರಾಜ್ಯ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣ ದಾಖಲಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದೆ.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಶ್ವೇತಾ ದೀಕ್ಷಿತ್ ಅವರು ತಮ್ಮ 157 ಪುಟಗಳ ತೀರ್ಪಿನಲ್ಲಿ, ಮೇಕೆ ವ್ಯಾಪಾರಿ ಖಾಸಿಂ (45) ಅವರ ಗುಂಪು ಹತ್ಯೆಯನ್ನು “ಘೋರ” ಅಪರಾಧ ಎಂದು ಉಲ್ಲೇಖಿಸಿದ್ದಾರೆ. ಹಾಪುರ್ ಪ್ರಕರಣದಲ್ಲಿ ಅಮಾಯಕ ವ್ಯಕ್ತಿಯನ್ನು ಹತ್ಯೆ ಮಾಡಿದ ಗುಂಪಿನ ವರ್ತನೆಯು ಇಡೀ ಸಮಾಜಕ್ಕೆ ಎಚ್ಚರಿಕೆ ಮತ್ತು ಬೆದರಿಕೆ ಎಂದು ಬಣ್ಣಿಸಿದ್ದಾರೆ.

ಈ ಬಗ್ಗೆ ಖಾಸಿಂ ಅವರ ಸಹೋದರ ಸಲೀಂ ಮಾತನಾಡುತ್ತಾ, ಈ ಪ್ರಕರಣದ ಶಿಕ್ಷೆಯು ದೇಶದಲ್ಲಿ ವಿಶೇಷವಾಗಿ ಹಸುವಿನ ಹೆಸರಿನಲ್ಲಿ ಗುಂಪು ಹತ್ಯೆಯ ಕೃತ್ಯಗಳನ್ನು ತಡೆಯುವಲ್ಲಿ ತೆಗೆದುಕೊಂಡ ಕ್ರಮ ಎಂದು ನಾನು  ಭಾವಿಸುತ್ತೇನೆ. ಇದಕ್ಕಾಗಿಯೇ ನಾವು ಅವರನ್ನು ಗಲ್ಲಿಗೇರಿಸಬೇಡಿ, ಜೀವಿತಾವಧಿಯಲ್ಲಿ ಜೈಲಿಗೆ ಹಾಕುವಂತೆ ನಾವು ನ್ಯಾಯಾಲಯವನ್ನು ಕೋರಿದ್ದೇವೆ. ಇದರಿಂದ ಅವರು ತಕ್ಕ ಪಾಠ ಕಲಿಯುತ್ತಾರೆ ಎಂದು ಹೇಳಿದ್ದಾರೆ.

ಪ್ರಕರಣ ಮುಚ್ಚಿಹಾಕಲು ಪೊಲೀಸರಿಂದ ಯತ್ನ:

ಮಾರ್ಚ್ 12ರಂದು ನ್ಯಾಯಾಲಯವು ಪ್ರಕರಣದಲ್ಲಿ ಭಾಗಿಯಾಗಿರುವ ತನಿಖಾಧಿಕಾರಿ ಮತ್ತು ಇತರ ಪೊಲೀಸ್ ಸಿಬ್ಬಂದಿಯ ನಿರ್ಲಕ್ಷ್ಯದ ನಾಲ್ಕು ಅಂಶಗಳನ್ನು ಗಮನಿಸಿದೆ. ಮೊದಲನೆಯದಾಗಿ, ಪ್ರಕರಣದ ತನಿಖೆಯನ್ನು ಹಿರಿಯ ಐಪಿಎಸ್ ಅಧಿಕಾರಿ, ಮೀರತ್ ರೇಂಜ್ ಪೊಲೀಸ್ ಮಹಾನಿರೀಕ್ಷಕರು ಮೇಲ್ವಿಚಾರಣೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನದ ಹೊರತಾಗಿಯೂ ಪ್ರಕರಣದ ತನಿಖಾಧಿಕಾರಿಯು ಆರೋಪಿಗಳ ಐಡೆಂಟಿಪಿಕೇಶನ್‌ ಪರೇಡ್‌ ನಡೆಸಲಿಲ್ಲ ಎಂದು ನ್ಯಾಯಾಲಯ ಗಮನಿಸಿದೆ. ಹಿಂಸಾತ್ಮಕ ದಾಳಿಯಿಂದ ಬದುಕುಳಿದಿರುವ ಮತ್ತು ಪ್ರಮುಖ ಸಾಕ್ಷಿಯಾದ ಸಮಯದೀನ್ ಅವರು ಆರೋಪಿಗಳ ಐಡೆಂಟಿಪಿಕೇಶನ್‌ ಪರೇಡ್‌ಗೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ಎರಡನೆಯದಾಗಿ, ಟೆಲಿವಿಷನ್ ಚಾನೆಲ್ ಎನ್‌ಡಿಟಿವಿ ನಡೆಸಿದ ಚುಟುಕು ಕಾರ್ಯಾಚರಣೆಯಲ್ಲಿ ಪ್ರಮುಖ ಆರೋಪಿ ರಾಕೇಶ್ ಅಪರಾಧದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುತ್ತಿರುವ ಸಿಡಿ ವೈರಲ್‌ ಆಗಿರುವುದನ್ನು ನ್ಯಾಯಾಲಯ ಗಮನಿಸಿದೆ. ಸಾಕ್ಷಿಯಾಗಿ ಸಲ್ಲಿಸಲಾದ ಈ ಸಿಡಿಯನ್ನು ಸುರಕ್ಷಿತವಾಗಿ ಇಡದಿರುವುದು ಅತ್ಯಂತ ಆಕ್ಷೇಪಾರ್ಹ ಎಂದು ನ್ಯಾಯಾಧೀಶೆ ದೀಕ್ಷಿತ್ ಹೇಳಿದ್ದಾರೆ. ಸಾಮೂಹಿಕ ಹತ್ಯೆಯ ಘಟನೆಯ ವೀಡಿಯೊವನ್ನು ಒಳಗೊಂಡಿರುವ ಸಿಡಿಯ ಅಗತ್ಯ ಪ್ರಮಾಣಪತ್ರವನ್ನು ಸಲ್ಲಿಸದಿದ್ದಕ್ಕಾಗಿ ತನಿಖಾಧಿಕಾರಿಯನ್ನು ನಿರ್ಲಕ್ಷ್ಯದ ಆರೋಪದಲ್ಲಿ ತಪ್ಪಿತಸ್ಥರೆಂದು ನ್ಯಾಯಾಧೀಶರು ಹೇಳಿದ್ದಾರೆ.

ಸಲೀಂ ತನ್ನ ಫೋನ್‌ನಲ್ಲಿ ತನ್ನ ಸಹೋದರನನ್ನು ಹತ್ಯೆಗೈದ ವಿಡಿಯೋವನ್ನು ಸ್ವೀಕರಿಸಿದ್ದ. ತನಿಖಾಧಿಕಾರಿ ಲಕ್ಷ್ಮಣ್ ವರ್ಮಾ, ಸಿಡಿ ವಿಚಾರದಲ್ಲಿ ನಿರ್ಲಕ್ಷ್ಯವನ್ನು ವಹಿಸಿರುವುದನ್ನು ಕೋರ್ಟ್ ಗಮನಿಸಿದೆ. ಆರೋಪಿ ಕರನ್‌ಪಾಲ್‌ನಿಂದ ವಶಕ್ಕೆ ಪಡೆದುಕೊಂಡ ಅಪರಾಧಕ್ಕೆ ಬಳಸಿದ ಲಾಠಿಯನ್ನು ಪೊಲೀಸರು ಬೆರಳಚ್ಚುಗಳ ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಲ್ಲ ಎಂದು ನ್ಯಾಯಾಲಯವು ಗಮನಿಸಿದೆ. ಇದಲ್ಲದೆ ಘಟನೆಯಲ್ಲಿ ಬದುಕುಳಿದ ಸಂತ್ರಸ್ತ ಸಮಯ್ದೀನ್ ಅವರ ಸಹೋದರನಲ್ಲಿ ಜೂನ್ 16, 2018ರಂದು ಪೊಲೀಸರು ಸುಳ್ಳು ಮಾಹಿತಿ ನೀಡಿದ ಎಫ್‌ಐಆರ್‌ಗೆ ಸಹಿ ಹಾಕುವಂತೆ ಒತ್ತಡ ಹೇರಿದ್ದಾರೆ ಎಂದು ಕೋರ್ಟ್‌ ಗಮನಿಸಿದೆ.

ಆರಂಭಿಕ ಎಫ್‌ಐಆರ್‌ನಲ್ಲಿ ಈ ಘಟನೆಯು ಮೋಟಾರ್‌ಬೈಕ್ ಅಪಘಾತದ ಪರಿಣಾಮವಾಗಿ ಸಂಭವಿಸಿದೆ ಎಂದು ಹೇಳಿದರೆ, ಯಾಸಿನ್ ಮತ್ತು ಸಮಯದೀನ್ ನಂತರ ಎಫ್‌ಐಆರ್‌ನ್ನು ಪೊಲೀಸರ ಒತ್ತಡದಲ್ಲಿ ಬರೆಯಲಾಗಿದೆ ಎಂದು ಹೇಳಿದ್ದಾರೆ ಮತ್ತು ಮೋಟಾರ್‌ಬೈಕ್ ಅಪಘಾತದ ಘಟನೆಯನ್ನು ಕಟ್ಟುಕಥೆ ಎಂದು ಹೇಳಿದ್ದಾರೆ. ಗೋಹತ್ಯೆಯ ಸುಳ್ಳು ವದಂತಿಗಳ ಮೇಲೆ ಖಾಸಿಂ ಮತ್ತು ಸಮಯದೀನ್ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಮತ್ತು ಮೋಟಾರು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದಲ್ಲ ಎಂದು ಸಂತ್ರಸ್ತರು ಹೇಳಿದ್ದಾರೆ, ಇದನ್ನು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಎತ್ತಿ ಹಿಡಿದಿದೆ.

ಪ್ರಕರಣದ ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ತನಿಖೆ ನಡೆಸುವುದು ಅಗತ್ಯವಾಗಿದ್ದು, ಸಂಬಂಧಪಟ್ಟವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಧೀಶರಾದ ದೀಕ್ಷಿತ್ ಹೇಳಿದ್ದಾರೆ. ಈ ಬಗ್ಗೆ ಉತ್ತರಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆಯಲಾಗುವುದು ಮತ್ತು ತೀರ್ಪಿನ ಪ್ರತಿಯನ್ನು ಕ್ರಮಕ್ಕಾಗಿ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ಖಾಸಿಂ ಹತ್ಯೆಗೀಡಾದ ಆರು ವರ್ಷಗಳ ನಂತರ, ಮಾರ್ಚ್ 12ರಂದು ನ್ಯಾಯಾಲಯವು 10 ಜನ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದೆ ಮತ್ತು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಯುಧಿಷ್ಠಿರ್, ರಾಕೇಶ್, ಕಾನು, ಸೋನು, ಮಂಗೇರಾಮ್, ರಿಂಕು, ಹರಿಓಂ, ಮನೀಶ್, ಲಲಿತ್ ಮತ್ತು ಕರಣ್‌ಪಾಲ್ ಅಪರಾಧಕ್ಕೆ ಶಿಕ್ಷೆಗೊಳಗಾದವರು. ಕೃತ್ಯದ 11ನೇ ಆರೋಪಿ ಅಪ್ರಾಪ್ತನಾಗಿದ್ದಾನೆ. ಘಟನೆಯಲ್ಲಿ ಬದುಕುಳಿದ ಸಂತ್ರಸ್ತ ಸಮಯ್ದೀನ್ ಅವರ ಸಾಕ್ಷ್ಯವು ಅಪರಾಧಿಗಳಿಗೆ ಶಿಕ್ಷೆ ವಿಧಿಸಿದ ನಿರ್ಣಾಯಕ ಅಂಶಗಳಲ್ಲಿ ಒಂದಾಗಿದೆ. ನ್ಯಾಯಾಧೀಶ ದೀಕ್ಷಿತ್ ಅವರು 10 ಮಂದಿಯನ್ನು ಕೊಲೆ, ಕೊಲೆಗೆ ಯತ್ನ, ಮಾರಕ ಆಯುಧಗಳಿಂದ ಗಲಭೆ ಮತ್ತು ಧರ್ಮದ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ  ಪ್ರಕರಣದಲ್ಲಿ ಅಪರಾಧಿಗಳು ಎಂದು ಘೋಷಿಸಿದ್ದರು ಮತ್ತು ಅವರಿಗೆ ತಲಾ 58,000ರೂ.ದಂಡ ಮತ್ತು ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದರು.

ಇದನ್ನು ಓದಿ: ಭಾರತದಲ್ಲಿ ಸಿಎಎ ಜಾರಿ: ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ, ಅಮೆರಿಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...