Homeಮುಖಪುಟಸರಸ್ವತಿಯನ್ನು ಆರಾಧಿಸದ ದಲಿತ ಶಿಕ್ಷಕಿಗೆ ಕಿರುಕುಳ?

ಸರಸ್ವತಿಯನ್ನು ಆರಾಧಿಸದ ದಲಿತ ಶಿಕ್ಷಕಿಗೆ ಕಿರುಕುಳ?

- Advertisement -
- Advertisement -

ರಾಜಸ್ಥಾನದ ಬರಾನ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ತಿಂಗಳು ನಡೆದ ಗಣರಾಜ್ಯೋತ್ಸವ ಆಚರಣೆಯ ವೇಳಿನ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಗುಂಪೊಂದು ದಲಿತ ಸಮುದಾಯಕ್ಕೆ ಸೇರಿದ 40 ವರ್ಷದ ಶಿಕ್ಷಕಿ ಹೇಮಲತಾ ಬೈರ್ವಾ ಅವರೊಂದಿಗೆ ಜಗಳವಾಡುತ್ತಿರುವುದು, ಅವರಲ್ಲಿ ಸರಸ್ವತಿಯನ್ನು ಯಾಕೆ ಪೂಜಿಸುತ್ತಿಲ್ಲ ಎಂದು ಪ್ರಶ್ನಿಸುತ್ತಿರುವುದು ಕಂಡು ಬಂದಿದೆ.

ಇದಾದ ಒಂದು ತಿಂಗಳ ನಂತರ ರಾಜಸ್ಥಾನದ ಸಚಿವ ಮದನ್ ದಿಲಾವರ್ ಅವರ ಸೂಚನೆಯ ಮೇರೆಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಬೈರ್ವಾ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರನ್ನು ಅವರ ಮನೆಯಿಂದ 600 ಕಿಲೋಮೀಟರ್ ದೂರದಲ್ಲಿರುವ ಬಿಕಾನೇರ್‌ಗೆ ವರ್ಗಾಯಿಸಲಾಗಿದೆ. ಬೈರವರ ಅಮಾನತು ಖಂಡಿಸಿ ದಲಿತ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಸಚಿವ ಮದನ್ ದಿಲಾವರ್ ರಾಜೀನಾಮೆಗೆ ದಲಿತ ಸಮುದಾಯ ಪಟ್ಟು ಹಿಡಿದಿದೆ.

ಜನವರಿ 26ರಂದು ಈ ಕುರಿತು ವೀಡಿಯೊ ವೈರಲ್‌ ಆಗಿದೆ. ಶಿಕ್ಷಕಿ ಬೈರ್ವಾ, ಮಹಾತ್ಮಾ ಗಾಂಧಿ, ಸಾವಿತ್ರಿಬಾಯಿ ಫುಲೆ ಮತ್ತು ಬಿಆರ್ ಅಂಬೇಡ್ಕರ್ ಅವರ ಹಾರ ಹಾಕಿದ ಫೋಟೋಗಳ ಮುಂದೆ ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಪುರುಷರ ಗುಂಪು ಅವಳ ಜೊತೆ ವಾಗ್ವಾದ ನಡೆಸುವುದು ಕಂಡು ಬಂದಿದೆ.

ಬಚ್ಚೋನ್ ಕಿ ದೇವಿ ಸರಸ್ವತಿ ಹೈ (ಮಕ್ಕಳ ದೇವತೆ ಸರಸ್ವತಿ) ಎಂದು ಗುಂಪು ಹೇಳುವುದು ವಿಡಿಯೋದಲ್ಲಿ ಕೇಳಿಸುತ್ತಿದೆ. ಅದಕ್ಕೆ ಬೈರ್ವಾ ‘ಬಚ್ಚೋನ್ ಕಿ ದೇವಿ ತೋ ಸಾವಿತ್ರಿಬಾಯಿ ಫುಲೆ ಹೈ (ಮಕ್ಕಳ ದೇವತೆ ಸಾವಿತ್ರಿಬಾಯಿ ಫುಲೆ)’ ಎಂದು ಉತ್ತರಿಸುವುದು ವಿಡಿಯೋದಲ್ಲಿ ಸೆರೆಯಾಗಿತ್ತು.

ಬೈರ್ವಾ ಹಿಂದೂ ದೇವತೆ ಸರಸ್ವತಿಯ ಪೂಜೆಯನ್ನು ಮಾಡಬೇಕೆಂದು ಗುಂಪು ಒತ್ತಾಯಿಸಿದಾಗ, ಅವರ ಅದನ್ನು ನಿರಾಕರಿಸುವುದನ್ನು ಕಾಣಬಹುದು. ಇದಾದ ಬಳಿಕ ಶಾಲೆಯ ಮುಂದೆ ಜಮಾಯಿಸಿದ ಗುಂಪು ಆಕೆಗೆ ಕಾರ್ಯಕ್ರಮ ಹೇಗೆ ಮುಂದುವರಿಸುತ್ತೀರೆಂದು ಸವಾಲು ಹಾಕುತ್ತಿರುವುದು ಕಂಡು ಬಂದಿದೆ. ದೀಪ ಏಕೆ ಇರಲಿಲ್ಲ?  ಬೈರ್ವಾ ಹಿಂದೂ ಸಂಪ್ರದಾಯಗಳ ಬಗ್ಗೆ ತಿಳಿದಿಲ್ಲವೇ ಎಂದು ಒಬ್ಬ ವ್ಯಕ್ತಿ ಕೇಳುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ. ಹಿಂದೂ ಎಂದರೆ ಏನು? ಹಿಂದೂ, ಮುಸ್ಲಿಂ, ಸಿಖ್, ಇಸಾಯಿ ಸಬ್ ಬರಾಬರ್ ಹೈ (ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್ ಎಲ್ಲರೂ ಸಮಾನರು) ಎಂದು ಬೈರ್ವಾ ಹೇಳುತ್ತಿರುವುದು ವಿಡಿಯೋದಲ್ಲಿ ಕೇಳಿಬರುತ್ತಿದೆ.

ಎಫ್‌ಐಆರ್‌ ದಾಖಲು:

ಘಟನೆಯ ಬಗ್ಗೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅದರಲ್ಲಿ ಒಂದು ಬೈರ್ವಾ ಅವರ ವಿರುದ್ಧ ದಾಖಲಿಸಲಾಗಿದೆ ಮತ್ತು ಇನ್ನೊಂದು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದಕ್ಕಾಗಿ ಶಿಕ್ಷಕಿ ಬೈರ್ವಾ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಗಣರಾಜ್ಯೋತ್ಸವದಂದು ಸರ್ಕಾರಿ ಸೇವಕಳಾಗಿ ನಾನು ಭಾರತದ ಪವಿತ್ರ ಸಂವಿಧಾನದ ಅನುಷ್ಠಾನದ 75ನೇ ವಾರ್ಷಿಕೋತ್ಸವವನ್ನು ಆಚರಿಸಲು ಶಾಲೆಯಲ್ಲಿ ಸಿದ್ಧತೆ ಮಾಡುತ್ತಿದ್ದೆ, ಈ ವೇಳೆ ಗುಂಪು ಮತ್ತು ಶಾಲಾ ಸಿಬ್ಬಂದಿಗಳಾದ  ಹಂಸರಾಜ್ ಸೈನ್ ಮತ್ತು ಭೂಪೇಂದ್ರ ಸೇನ್ ಅವರು ಸಾರ್ವಜನಿಕ ಸ್ಥಳದಲ್ಲಿ ಸರಸ್ವತಿ ಪೂಜೆ ಮಾಡುವಂತೆ ನನಗೆ ಕಿರುಕುಳ ನೀಡಲು ಪ್ರಾರಂಭಿಸಿದರು ಎಂದು ಎಫ್‌ಐಆರ್ ದಾಖಲಿಸಲಾಗಿದೆ.

ಈ ಬಗ್ಗೆ ಬರಾನ್‌ನ ನಹರ್‌ಗಢ್ ಪೊಲೀಸ್ ಠಾಣೆಯಲ್ಲಿ ಬೈರ್ವಾ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ನಾನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದ ಮಹಿಳಾ ಸೇವಕಿ. ಹಂಸರಾಜ್ ನಗರ, ಭಾರತ್ ನಗರ, ರಾಧೇಶ್ಯಾಮ್ ನಗರ ಜಾತಿ ನಿಂದನೆಗಳನ್ನು ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಕಿರುಕುಳವಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೆ ಸರ್ಕಾರಿ ಶಿಕ್ಷಕಿ ಹೇಮಲತಾ ಬೈರ್ವಾ ವಿರುದ್ಧ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಸೇರಿದಂತೆ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಜನವರಿ 26ರ ಘಟನೆಯ ನಂತರ, ಬಿಜೆಪಿಯ ಹಿರಿಯ ಶಾಸಕ ಮತ್ತು ರಾಜಸ್ಥಾನ ಶಿಕ್ಷಣ ಸಚಿವ ಮದನ್ ದಿಲಾವರ್ಹಾದ್ ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಬೈರ್ವಾ ಅವರನ್ನು ಕಳೆದ ವಾರ ಅಮಾನತುಗೊಳಿಸಲಾಗಿತ್ತು.

ಬೈರ್ವಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ತನ್ನ ಜಾತಿಯ ಕಾರಣಕ್ಕಾಗಿ ತನಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ತಾನು ಬಿಕಾನೇರ್‌ಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಸಾರ್ವಜನಿಕ ವೇದಿಕೆಯಲ್ಲಿ ನನಗೆ ಬೆದರಿಕೆ ಹಾಕುವುದು ಎಷ್ಟು ಸರಿ? ನಾನು ಎಫ್‌ಐಆರ್ ದಾಖಲಿಸಿದ್ದು, ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ. ಬದಲಾಗಿ ನನ್ನನ್ನು ಅಮಾನತು ಮಾಡಲಾಗಿದೆ. ದಲಿತ ಮಕ್ಕಳು ಇರುವ ಶಾಲೆಯಲ್ಲಿ ಕೆಲವು ಆರೋಪಿಗಳು ನಿಯಮಿತವಾಗಿ ಜಾತಿಪದ್ಧತಿ ಅನುಸರಿಸುತ್ತಾರೆ. ಸಾವಿತ್ರಿಭಾಯಿ ಫುಲೆ ಮಹಿಳೆಯರಿಗಾಗಿ ಶಾಲೆಗಳನ್ನು ತೆರೆದರು. ಅವಳಿಗಿಂತ ಮೊದಲು ಎಷ್ಟು ಮಹಿಳೆಯರು ಅಕ್ಷರಸ್ಥರಾಗಿದ್ದರು? ಧಾರ್ಮಿಕ ನಂಬಿಕೆಗಳು ವೈಯಕ್ತಿಕ ಮತ್ತು ನಾವು ಸಂವಿಧಾನವನ್ನು ಮಾತ್ರ ಅನುಸರಿಸುತ್ತೇವೆ ಎಂದು ಹೇಳಿದ್ದಾರೆ.

ಇದಲ್ಲದೆ ದಲಿತ ಶಿಕ್ಷಕಿಯನ್ನು ಅಮಾನತು ಮಾಡಿದ್ದನ್ನು ಖಂಡಿಸಿ ಪ್ರತಿಭಟಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನು ಓದಿ: ಬ್ರಾಹ್ಮಣರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಅರ್ಚಕ ಹುದ್ದೆ ಪ್ರಶ್ನಿಸಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...