Homeಮುಖಪುಟಸರಸ್ವತಿಯನ್ನು ಆರಾಧಿಸದ ದಲಿತ ಶಿಕ್ಷಕಿಗೆ ಕಿರುಕುಳ?

ಸರಸ್ವತಿಯನ್ನು ಆರಾಧಿಸದ ದಲಿತ ಶಿಕ್ಷಕಿಗೆ ಕಿರುಕುಳ?

- Advertisement -
- Advertisement -

ರಾಜಸ್ಥಾನದ ಬರಾನ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ತಿಂಗಳು ನಡೆದ ಗಣರಾಜ್ಯೋತ್ಸವ ಆಚರಣೆಯ ವೇಳಿನ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಗುಂಪೊಂದು ದಲಿತ ಸಮುದಾಯಕ್ಕೆ ಸೇರಿದ 40 ವರ್ಷದ ಶಿಕ್ಷಕಿ ಹೇಮಲತಾ ಬೈರ್ವಾ ಅವರೊಂದಿಗೆ ಜಗಳವಾಡುತ್ತಿರುವುದು, ಅವರಲ್ಲಿ ಸರಸ್ವತಿಯನ್ನು ಯಾಕೆ ಪೂಜಿಸುತ್ತಿಲ್ಲ ಎಂದು ಪ್ರಶ್ನಿಸುತ್ತಿರುವುದು ಕಂಡು ಬಂದಿದೆ.

ಇದಾದ ಒಂದು ತಿಂಗಳ ನಂತರ ರಾಜಸ್ಥಾನದ ಸಚಿವ ಮದನ್ ದಿಲಾವರ್ ಅವರ ಸೂಚನೆಯ ಮೇರೆಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಬೈರ್ವಾ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರನ್ನು ಅವರ ಮನೆಯಿಂದ 600 ಕಿಲೋಮೀಟರ್ ದೂರದಲ್ಲಿರುವ ಬಿಕಾನೇರ್‌ಗೆ ವರ್ಗಾಯಿಸಲಾಗಿದೆ. ಬೈರವರ ಅಮಾನತು ಖಂಡಿಸಿ ದಲಿತ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಸಚಿವ ಮದನ್ ದಿಲಾವರ್ ರಾಜೀನಾಮೆಗೆ ದಲಿತ ಸಮುದಾಯ ಪಟ್ಟು ಹಿಡಿದಿದೆ.

ಜನವರಿ 26ರಂದು ಈ ಕುರಿತು ವೀಡಿಯೊ ವೈರಲ್‌ ಆಗಿದೆ. ಶಿಕ್ಷಕಿ ಬೈರ್ವಾ, ಮಹಾತ್ಮಾ ಗಾಂಧಿ, ಸಾವಿತ್ರಿಬಾಯಿ ಫುಲೆ ಮತ್ತು ಬಿಆರ್ ಅಂಬೇಡ್ಕರ್ ಅವರ ಹಾರ ಹಾಕಿದ ಫೋಟೋಗಳ ಮುಂದೆ ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಪುರುಷರ ಗುಂಪು ಅವಳ ಜೊತೆ ವಾಗ್ವಾದ ನಡೆಸುವುದು ಕಂಡು ಬಂದಿದೆ.

ಬಚ್ಚೋನ್ ಕಿ ದೇವಿ ಸರಸ್ವತಿ ಹೈ (ಮಕ್ಕಳ ದೇವತೆ ಸರಸ್ವತಿ) ಎಂದು ಗುಂಪು ಹೇಳುವುದು ವಿಡಿಯೋದಲ್ಲಿ ಕೇಳಿಸುತ್ತಿದೆ. ಅದಕ್ಕೆ ಬೈರ್ವಾ ‘ಬಚ್ಚೋನ್ ಕಿ ದೇವಿ ತೋ ಸಾವಿತ್ರಿಬಾಯಿ ಫುಲೆ ಹೈ (ಮಕ್ಕಳ ದೇವತೆ ಸಾವಿತ್ರಿಬಾಯಿ ಫುಲೆ)’ ಎಂದು ಉತ್ತರಿಸುವುದು ವಿಡಿಯೋದಲ್ಲಿ ಸೆರೆಯಾಗಿತ್ತು.

ಬೈರ್ವಾ ಹಿಂದೂ ದೇವತೆ ಸರಸ್ವತಿಯ ಪೂಜೆಯನ್ನು ಮಾಡಬೇಕೆಂದು ಗುಂಪು ಒತ್ತಾಯಿಸಿದಾಗ, ಅವರ ಅದನ್ನು ನಿರಾಕರಿಸುವುದನ್ನು ಕಾಣಬಹುದು. ಇದಾದ ಬಳಿಕ ಶಾಲೆಯ ಮುಂದೆ ಜಮಾಯಿಸಿದ ಗುಂಪು ಆಕೆಗೆ ಕಾರ್ಯಕ್ರಮ ಹೇಗೆ ಮುಂದುವರಿಸುತ್ತೀರೆಂದು ಸವಾಲು ಹಾಕುತ್ತಿರುವುದು ಕಂಡು ಬಂದಿದೆ. ದೀಪ ಏಕೆ ಇರಲಿಲ್ಲ?  ಬೈರ್ವಾ ಹಿಂದೂ ಸಂಪ್ರದಾಯಗಳ ಬಗ್ಗೆ ತಿಳಿದಿಲ್ಲವೇ ಎಂದು ಒಬ್ಬ ವ್ಯಕ್ತಿ ಕೇಳುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ. ಹಿಂದೂ ಎಂದರೆ ಏನು? ಹಿಂದೂ, ಮುಸ್ಲಿಂ, ಸಿಖ್, ಇಸಾಯಿ ಸಬ್ ಬರಾಬರ್ ಹೈ (ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್ ಎಲ್ಲರೂ ಸಮಾನರು) ಎಂದು ಬೈರ್ವಾ ಹೇಳುತ್ತಿರುವುದು ವಿಡಿಯೋದಲ್ಲಿ ಕೇಳಿಬರುತ್ತಿದೆ.

ಎಫ್‌ಐಆರ್‌ ದಾಖಲು:

ಘಟನೆಯ ಬಗ್ಗೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅದರಲ್ಲಿ ಒಂದು ಬೈರ್ವಾ ಅವರ ವಿರುದ್ಧ ದಾಖಲಿಸಲಾಗಿದೆ ಮತ್ತು ಇನ್ನೊಂದು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದಕ್ಕಾಗಿ ಶಿಕ್ಷಕಿ ಬೈರ್ವಾ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಗಣರಾಜ್ಯೋತ್ಸವದಂದು ಸರ್ಕಾರಿ ಸೇವಕಳಾಗಿ ನಾನು ಭಾರತದ ಪವಿತ್ರ ಸಂವಿಧಾನದ ಅನುಷ್ಠಾನದ 75ನೇ ವಾರ್ಷಿಕೋತ್ಸವವನ್ನು ಆಚರಿಸಲು ಶಾಲೆಯಲ್ಲಿ ಸಿದ್ಧತೆ ಮಾಡುತ್ತಿದ್ದೆ, ಈ ವೇಳೆ ಗುಂಪು ಮತ್ತು ಶಾಲಾ ಸಿಬ್ಬಂದಿಗಳಾದ  ಹಂಸರಾಜ್ ಸೈನ್ ಮತ್ತು ಭೂಪೇಂದ್ರ ಸೇನ್ ಅವರು ಸಾರ್ವಜನಿಕ ಸ್ಥಳದಲ್ಲಿ ಸರಸ್ವತಿ ಪೂಜೆ ಮಾಡುವಂತೆ ನನಗೆ ಕಿರುಕುಳ ನೀಡಲು ಪ್ರಾರಂಭಿಸಿದರು ಎಂದು ಎಫ್‌ಐಆರ್ ದಾಖಲಿಸಲಾಗಿದೆ.

ಈ ಬಗ್ಗೆ ಬರಾನ್‌ನ ನಹರ್‌ಗಢ್ ಪೊಲೀಸ್ ಠಾಣೆಯಲ್ಲಿ ಬೈರ್ವಾ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ನಾನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದ ಮಹಿಳಾ ಸೇವಕಿ. ಹಂಸರಾಜ್ ನಗರ, ಭಾರತ್ ನಗರ, ರಾಧೇಶ್ಯಾಮ್ ನಗರ ಜಾತಿ ನಿಂದನೆಗಳನ್ನು ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಕಿರುಕುಳವಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೆ ಸರ್ಕಾರಿ ಶಿಕ್ಷಕಿ ಹೇಮಲತಾ ಬೈರ್ವಾ ವಿರುದ್ಧ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಸೇರಿದಂತೆ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಜನವರಿ 26ರ ಘಟನೆಯ ನಂತರ, ಬಿಜೆಪಿಯ ಹಿರಿಯ ಶಾಸಕ ಮತ್ತು ರಾಜಸ್ಥಾನ ಶಿಕ್ಷಣ ಸಚಿವ ಮದನ್ ದಿಲಾವರ್ಹಾದ್ ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಬೈರ್ವಾ ಅವರನ್ನು ಕಳೆದ ವಾರ ಅಮಾನತುಗೊಳಿಸಲಾಗಿತ್ತು.

ಬೈರ್ವಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ತನ್ನ ಜಾತಿಯ ಕಾರಣಕ್ಕಾಗಿ ತನಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ತಾನು ಬಿಕಾನೇರ್‌ಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಸಾರ್ವಜನಿಕ ವೇದಿಕೆಯಲ್ಲಿ ನನಗೆ ಬೆದರಿಕೆ ಹಾಕುವುದು ಎಷ್ಟು ಸರಿ? ನಾನು ಎಫ್‌ಐಆರ್ ದಾಖಲಿಸಿದ್ದು, ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ. ಬದಲಾಗಿ ನನ್ನನ್ನು ಅಮಾನತು ಮಾಡಲಾಗಿದೆ. ದಲಿತ ಮಕ್ಕಳು ಇರುವ ಶಾಲೆಯಲ್ಲಿ ಕೆಲವು ಆರೋಪಿಗಳು ನಿಯಮಿತವಾಗಿ ಜಾತಿಪದ್ಧತಿ ಅನುಸರಿಸುತ್ತಾರೆ. ಸಾವಿತ್ರಿಭಾಯಿ ಫುಲೆ ಮಹಿಳೆಯರಿಗಾಗಿ ಶಾಲೆಗಳನ್ನು ತೆರೆದರು. ಅವಳಿಗಿಂತ ಮೊದಲು ಎಷ್ಟು ಮಹಿಳೆಯರು ಅಕ್ಷರಸ್ಥರಾಗಿದ್ದರು? ಧಾರ್ಮಿಕ ನಂಬಿಕೆಗಳು ವೈಯಕ್ತಿಕ ಮತ್ತು ನಾವು ಸಂವಿಧಾನವನ್ನು ಮಾತ್ರ ಅನುಸರಿಸುತ್ತೇವೆ ಎಂದು ಹೇಳಿದ್ದಾರೆ.

ಇದಲ್ಲದೆ ದಲಿತ ಶಿಕ್ಷಕಿಯನ್ನು ಅಮಾನತು ಮಾಡಿದ್ದನ್ನು ಖಂಡಿಸಿ ಪ್ರತಿಭಟಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನು ಓದಿ: ಬ್ರಾಹ್ಮಣರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಅರ್ಚಕ ಹುದ್ದೆ ಪ್ರಶ್ನಿಸಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...