Homeಮುಖಪುಟಸರಸ್ವತಿಯನ್ನು ಆರಾಧಿಸದ ದಲಿತ ಶಿಕ್ಷಕಿಗೆ ಕಿರುಕುಳ?

ಸರಸ್ವತಿಯನ್ನು ಆರಾಧಿಸದ ದಲಿತ ಶಿಕ್ಷಕಿಗೆ ಕಿರುಕುಳ?

- Advertisement -
- Advertisement -

ರಾಜಸ್ಥಾನದ ಬರಾನ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ತಿಂಗಳು ನಡೆದ ಗಣರಾಜ್ಯೋತ್ಸವ ಆಚರಣೆಯ ವೇಳಿನ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಗುಂಪೊಂದು ದಲಿತ ಸಮುದಾಯಕ್ಕೆ ಸೇರಿದ 40 ವರ್ಷದ ಶಿಕ್ಷಕಿ ಹೇಮಲತಾ ಬೈರ್ವಾ ಅವರೊಂದಿಗೆ ಜಗಳವಾಡುತ್ತಿರುವುದು, ಅವರಲ್ಲಿ ಸರಸ್ವತಿಯನ್ನು ಯಾಕೆ ಪೂಜಿಸುತ್ತಿಲ್ಲ ಎಂದು ಪ್ರಶ್ನಿಸುತ್ತಿರುವುದು ಕಂಡು ಬಂದಿದೆ.

ಇದಾದ ಒಂದು ತಿಂಗಳ ನಂತರ ರಾಜಸ್ಥಾನದ ಸಚಿವ ಮದನ್ ದಿಲಾವರ್ ಅವರ ಸೂಚನೆಯ ಮೇರೆಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಬೈರ್ವಾ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರನ್ನು ಅವರ ಮನೆಯಿಂದ 600 ಕಿಲೋಮೀಟರ್ ದೂರದಲ್ಲಿರುವ ಬಿಕಾನೇರ್‌ಗೆ ವರ್ಗಾಯಿಸಲಾಗಿದೆ. ಬೈರವರ ಅಮಾನತು ಖಂಡಿಸಿ ದಲಿತ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಸಚಿವ ಮದನ್ ದಿಲಾವರ್ ರಾಜೀನಾಮೆಗೆ ದಲಿತ ಸಮುದಾಯ ಪಟ್ಟು ಹಿಡಿದಿದೆ.

ಜನವರಿ 26ರಂದು ಈ ಕುರಿತು ವೀಡಿಯೊ ವೈರಲ್‌ ಆಗಿದೆ. ಶಿಕ್ಷಕಿ ಬೈರ್ವಾ, ಮಹಾತ್ಮಾ ಗಾಂಧಿ, ಸಾವಿತ್ರಿಬಾಯಿ ಫುಲೆ ಮತ್ತು ಬಿಆರ್ ಅಂಬೇಡ್ಕರ್ ಅವರ ಹಾರ ಹಾಕಿದ ಫೋಟೋಗಳ ಮುಂದೆ ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಪುರುಷರ ಗುಂಪು ಅವಳ ಜೊತೆ ವಾಗ್ವಾದ ನಡೆಸುವುದು ಕಂಡು ಬಂದಿದೆ.

ಬಚ್ಚೋನ್ ಕಿ ದೇವಿ ಸರಸ್ವತಿ ಹೈ (ಮಕ್ಕಳ ದೇವತೆ ಸರಸ್ವತಿ) ಎಂದು ಗುಂಪು ಹೇಳುವುದು ವಿಡಿಯೋದಲ್ಲಿ ಕೇಳಿಸುತ್ತಿದೆ. ಅದಕ್ಕೆ ಬೈರ್ವಾ ‘ಬಚ್ಚೋನ್ ಕಿ ದೇವಿ ತೋ ಸಾವಿತ್ರಿಬಾಯಿ ಫುಲೆ ಹೈ (ಮಕ್ಕಳ ದೇವತೆ ಸಾವಿತ್ರಿಬಾಯಿ ಫುಲೆ)’ ಎಂದು ಉತ್ತರಿಸುವುದು ವಿಡಿಯೋದಲ್ಲಿ ಸೆರೆಯಾಗಿತ್ತು.

ಬೈರ್ವಾ ಹಿಂದೂ ದೇವತೆ ಸರಸ್ವತಿಯ ಪೂಜೆಯನ್ನು ಮಾಡಬೇಕೆಂದು ಗುಂಪು ಒತ್ತಾಯಿಸಿದಾಗ, ಅವರ ಅದನ್ನು ನಿರಾಕರಿಸುವುದನ್ನು ಕಾಣಬಹುದು. ಇದಾದ ಬಳಿಕ ಶಾಲೆಯ ಮುಂದೆ ಜಮಾಯಿಸಿದ ಗುಂಪು ಆಕೆಗೆ ಕಾರ್ಯಕ್ರಮ ಹೇಗೆ ಮುಂದುವರಿಸುತ್ತೀರೆಂದು ಸವಾಲು ಹಾಕುತ್ತಿರುವುದು ಕಂಡು ಬಂದಿದೆ. ದೀಪ ಏಕೆ ಇರಲಿಲ್ಲ?  ಬೈರ್ವಾ ಹಿಂದೂ ಸಂಪ್ರದಾಯಗಳ ಬಗ್ಗೆ ತಿಳಿದಿಲ್ಲವೇ ಎಂದು ಒಬ್ಬ ವ್ಯಕ್ತಿ ಕೇಳುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ. ಹಿಂದೂ ಎಂದರೆ ಏನು? ಹಿಂದೂ, ಮುಸ್ಲಿಂ, ಸಿಖ್, ಇಸಾಯಿ ಸಬ್ ಬರಾಬರ್ ಹೈ (ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್ ಎಲ್ಲರೂ ಸಮಾನರು) ಎಂದು ಬೈರ್ವಾ ಹೇಳುತ್ತಿರುವುದು ವಿಡಿಯೋದಲ್ಲಿ ಕೇಳಿಬರುತ್ತಿದೆ.

ಎಫ್‌ಐಆರ್‌ ದಾಖಲು:

ಘಟನೆಯ ಬಗ್ಗೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅದರಲ್ಲಿ ಒಂದು ಬೈರ್ವಾ ಅವರ ವಿರುದ್ಧ ದಾಖಲಿಸಲಾಗಿದೆ ಮತ್ತು ಇನ್ನೊಂದು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದಕ್ಕಾಗಿ ಶಿಕ್ಷಕಿ ಬೈರ್ವಾ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಗಣರಾಜ್ಯೋತ್ಸವದಂದು ಸರ್ಕಾರಿ ಸೇವಕಳಾಗಿ ನಾನು ಭಾರತದ ಪವಿತ್ರ ಸಂವಿಧಾನದ ಅನುಷ್ಠಾನದ 75ನೇ ವಾರ್ಷಿಕೋತ್ಸವವನ್ನು ಆಚರಿಸಲು ಶಾಲೆಯಲ್ಲಿ ಸಿದ್ಧತೆ ಮಾಡುತ್ತಿದ್ದೆ, ಈ ವೇಳೆ ಗುಂಪು ಮತ್ತು ಶಾಲಾ ಸಿಬ್ಬಂದಿಗಳಾದ  ಹಂಸರಾಜ್ ಸೈನ್ ಮತ್ತು ಭೂಪೇಂದ್ರ ಸೇನ್ ಅವರು ಸಾರ್ವಜನಿಕ ಸ್ಥಳದಲ್ಲಿ ಸರಸ್ವತಿ ಪೂಜೆ ಮಾಡುವಂತೆ ನನಗೆ ಕಿರುಕುಳ ನೀಡಲು ಪ್ರಾರಂಭಿಸಿದರು ಎಂದು ಎಫ್‌ಐಆರ್ ದಾಖಲಿಸಲಾಗಿದೆ.

ಈ ಬಗ್ಗೆ ಬರಾನ್‌ನ ನಹರ್‌ಗಢ್ ಪೊಲೀಸ್ ಠಾಣೆಯಲ್ಲಿ ಬೈರ್ವಾ ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ನಾನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದ ಮಹಿಳಾ ಸೇವಕಿ. ಹಂಸರಾಜ್ ನಗರ, ಭಾರತ್ ನಗರ, ರಾಧೇಶ್ಯಾಮ್ ನಗರ ಜಾತಿ ನಿಂದನೆಗಳನ್ನು ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಕಿರುಕುಳವಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

ಇದಲ್ಲದೆ ಸರ್ಕಾರಿ ಶಿಕ್ಷಕಿ ಹೇಮಲತಾ ಬೈರ್ವಾ ವಿರುದ್ಧ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಸೇರಿದಂತೆ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಜನವರಿ 26ರ ಘಟನೆಯ ನಂತರ, ಬಿಜೆಪಿಯ ಹಿರಿಯ ಶಾಸಕ ಮತ್ತು ರಾಜಸ್ಥಾನ ಶಿಕ್ಷಣ ಸಚಿವ ಮದನ್ ದಿಲಾವರ್ಹಾದ್ ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಬೈರ್ವಾ ಅವರನ್ನು ಕಳೆದ ವಾರ ಅಮಾನತುಗೊಳಿಸಲಾಗಿತ್ತು.

ಬೈರ್ವಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ತನ್ನ ಜಾತಿಯ ಕಾರಣಕ್ಕಾಗಿ ತನಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ತಾನು ಬಿಕಾನೇರ್‌ಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಸಾರ್ವಜನಿಕ ವೇದಿಕೆಯಲ್ಲಿ ನನಗೆ ಬೆದರಿಕೆ ಹಾಕುವುದು ಎಷ್ಟು ಸರಿ? ನಾನು ಎಫ್‌ಐಆರ್ ದಾಖಲಿಸಿದ್ದು, ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ. ಬದಲಾಗಿ ನನ್ನನ್ನು ಅಮಾನತು ಮಾಡಲಾಗಿದೆ. ದಲಿತ ಮಕ್ಕಳು ಇರುವ ಶಾಲೆಯಲ್ಲಿ ಕೆಲವು ಆರೋಪಿಗಳು ನಿಯಮಿತವಾಗಿ ಜಾತಿಪದ್ಧತಿ ಅನುಸರಿಸುತ್ತಾರೆ. ಸಾವಿತ್ರಿಭಾಯಿ ಫುಲೆ ಮಹಿಳೆಯರಿಗಾಗಿ ಶಾಲೆಗಳನ್ನು ತೆರೆದರು. ಅವಳಿಗಿಂತ ಮೊದಲು ಎಷ್ಟು ಮಹಿಳೆಯರು ಅಕ್ಷರಸ್ಥರಾಗಿದ್ದರು? ಧಾರ್ಮಿಕ ನಂಬಿಕೆಗಳು ವೈಯಕ್ತಿಕ ಮತ್ತು ನಾವು ಸಂವಿಧಾನವನ್ನು ಮಾತ್ರ ಅನುಸರಿಸುತ್ತೇವೆ ಎಂದು ಹೇಳಿದ್ದಾರೆ.

ಇದಲ್ಲದೆ ದಲಿತ ಶಿಕ್ಷಕಿಯನ್ನು ಅಮಾನತು ಮಾಡಿದ್ದನ್ನು ಖಂಡಿಸಿ ಪ್ರತಿಭಟಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನು ಓದಿ: ಬ್ರಾಹ್ಮಣರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಅರ್ಚಕ ಹುದ್ದೆ ಪ್ರಶ್ನಿಸಿದ್ದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...