Homeಕರ್ನಾಟಕಬೆಳಗಾವಿ| ಡಿಜಿಟಲ್ ಅರೆಸ್ಟ್‌ನಿಂದ ಲಕ್ಷಾಂತರ ರೂ. ವಂಚನೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ| ಡಿಜಿಟಲ್ ಅರೆಸ್ಟ್‌ನಿಂದ ಲಕ್ಷಾಂತರ ರೂ. ವಂಚನೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

- Advertisement -
- Advertisement -

ಸೈಬರ್ ವಂಚಕರ ಕಾಟ ತಾಳಲಾರದೆ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಶುಕ್ರವಾರ (ಮಾ.28) ಬೆಳಕಿಗೆ ಬಂದಿದೆ.

ಬೀಡಿಯ ಕ್ರಿಶ್ಚಿಯನ್ ಓಣಿಯ ನಿವಾಸಿಗಳಾದ ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ಡಿಯಾಗೋ ನಜರತ್ (78) ಸಾವಿಗೆ ಶರಣಾದವರು.

ಸೈಬರ್ ವಂಚಕರ ಕಾಟ ತಾಳಲಾರದೆ ಸಾಯುತ್ತಿರುವುದಾಗಿ ಡಿಯಾಗೋ ಅವರು ಬರೆದಿಟ್ಟಿರುವ ಡೆತ್‌ನೋಟ್‌ ಪೊಲೀಸರಿಗೆ ಸಿಕ್ಕಿದೆ ಎಂದು ವರದಿಗಳು ಹೇಳಿವೆ.

ಡಿಯಾಗೋ ನಜರತ್ ಅವರು ಮಹಾರಾಷ್ಟ್ರದ ಸಚಿವಾಲಯದಲ್ಲಿ ಬಿಎಸ್‌ಎನ್‌ಎಲ್‌ ಸಂಸ್ಥೆಯ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಆ ಬಳಿಕ ತಮ್ಮ ಮೂಲ ಊರಾದ ಬೀಡಿಯಲ್ಲಿ ಪತ್ನಿ ಜೊತೆ ವಾಸವಿದ್ದರು. ದಂಪತಿಗೆ ಮಕ್ಕಳಿರಲಿಲ್ಲ.

ಡಿಯಾಗೋ ದಂಪತಿ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುತ್ತಿದ್ದರು. ಅವರು ಸಮಾಜ ಸೇವೆಗೆ ಹಣ ಖರ್ಚು ಮಾಡುತ್ತಿರುವುದನ್ನು ಗಮನಿಸಿದ ಸೈಬರ್ ವಂಚಕರು ದೆಹಲಿಯಿಂದ ಕರೆ ಮಾಡಿ ಬೆದರಿಸುತ್ತಿದ್ದರು ಎಂದು ವರದಿಯಾಗಿದೆ.

ದೆಹಲಿಯಲ್ಲಿ ಉನ್ನತ ಹುದ್ದೆಯಲ್ಲಿ ಇರುವುದಾಗಿ ಹೇಳಿಕೊಂಡ ಅನಿಲ್ ಯಾದವ್ ಎಂಬ ವ್ಯಕ್ತಿ ಡಿಯಾಗೋ ದಂಪತಿಯ ಮೊಬೈಲ್‌ಗೆ ಪದೇ ಪದೇ ಕರೆ ಮಾಡುತ್ತಿದ್ದ. “ನಿಮ್ಮ ಮೊಬೈಲ್‌ನಿಂದ ನನಗೆ ಅಶ್ಲೀಲ ಫೋಟೋ, ಸಂದೇಶಗಳು ಬಂದಿವೆ. ನಾನು ಸೈಬರ್ ಸೆಲ್‌ಗೆ ದೂರು ನೀಡುತ್ತೇನೆ” ಎಂದು ಬೆದರಿಸುತ್ತಿದ್ದ. ದಂಪತಿಯಿಂದ 50 ಲಕ್ಷ ರೂಪಾಯಿ ಪಡೆದುಕೊಂಡರೂ ಕಿರುಕುಳ ನಿಲ್ಲಿಸಿರಲಿಲ್ಲ.

ನಂತರ, ಸುಮಿತ ಬಿಸ್ರಾ ಎಂಬ ಹೆಸರಿನಲ್ಲಿ ಕರೆ ಮಾಡಿ, ಅನಿಲ್ ಅವರು ದೂರು ಕೊಟ್ಟಿದ್ದಾರೆ. ಹಾಗಾಗಿ ನಿಮ್ಮ ಮೇಲೆ ಪ್ರಕರಣ ದಾಖಲಾಗಿದೆ. ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಹಣ ಕೊಡದಿದ್ದರೆ ಅಶ್ಲೀಲ ಫೋಟೋ, ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಾರೆ. ಅವರ ಕಾಟ ತಾಳಲಾರದೆ ಸಾಯುತ್ತಿದ್ದೇವೆ. ನಮ್ಮ ದೇಹಗಳನ್ನು ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಮೆಡಿಕಲ್ ಕಾಲೇಜಿಗೆ ಕೊಡಿ ಎಂದು ಡಿಯಾಗೋ ಅವರು ಡೆತ್‌ನೋಟ್‌ನಲ್ಲಿ ಬರೆದಿರುವುದಾಗಿ ವರದಿಗಳು ವಿವರಿಸಿವೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಸೈಬರ್ ವಂಚಕರ ಕಾಟ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಏನಿದು ಡಿಜಿಟಲ್ ಅರೆಸ್ಟ್ ?

ಸೈಬರ್ ವಂಚಕರು ಸಿಬಿಐ, ಇಡಿ, ನಾರ್ಕೋಟಿಕ್ಸ್ ಬ್ಯೂರೋ ಅಥವಾ ಕಸ್ಟಮ್ಸ್‌ ಅಧಿಕಾರಿಗಳಂತಹ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸಿ ವಾಟ್ಸಾಪ್, ಸ್ಕೈಪ್‌ನಂತಹ ಪ್ಲಾಟ್‌ಫಾರ್ಮ್‌ಗಳ ಮೂಲಕ ಆಡಿಯೋ-ವಿಡಿಯೋ ಬಳಸಿಕೊಂಡು ಜನರನ್ನು ಸಂಪರ್ಕಿಸಿ ಅವರಿಂದ ಹಣ ಸುಲಿಗೆ ಮಾಡುವ ಪ್ರಕ್ರಿಯೇ ಡಿಜಿಟಲ್ ಅರೆಸ್ಟ್‌. ಇಲ್ಲಿ ವಂಚಕರು ನಿಷೇಧಿಗಳ ವಸ್ತುಗಳ ಸಾಗಾಟ, ಮಾದಕ ವಸ್ತುಗಳ ವ್ಯವಹಾರ, ಹಣ ಅಕ್ರಮ ವರ್ಗಾವಣೆಯಂತಹ ಸುಳ್ಳು ಆರೋಪಗಳನ್ನು ಜನರ ಮೇಲೆ ಹೊರಿಸಿ, ಅವರನ್ನು ಬೆದರಿಸಿ ಹಣ ಪಡೆಯುತ್ತಾರೆ. ಇದಕ್ಕಾಗಿ ಮುಖ್ಯವಾಗಿ ಆಧಾರ್ ಕಾರ್ಡ್‌ನಲ್ಲಿರುವ ವೈಯಕ್ತಿಕ ಮಾಹಿತಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಡಿಜಿಟಲ್ ಅರೆಸ್ಟ್‌ ಮೂಲಕ ಹಣ ಸುಲಿಗೆ ಮಾಡುವ ವಂಚಕರು, ಸರ್ಕಾರಿ ಅಧಿಕಾರಿಗಳಂತೆ ಜನರನ್ನು ನಂಬಿಸಲು ಸಮವಸ್ತ್ರ, ಕಚೇರಿ ವ್ಯವಸ್ಥೆಗಳನ್ನು ಮಾಡಿಕೊಂಡಿರುತ್ತಾರೆ. ಇಲ್ಲದಿದ್ದರೆ ಡೀಪ್‌ಫೇಕ್‌ನಂತಹ ಪರಿಕರಗಳನ್ನು ಬಳಸಿಕೊಂಡು ವಿಡಿಯೋ ಕರೆಗಳನ್ನು ಮಾಡುತ್ತಾರೆ. ಒಂದು ಸಲ ಬಲಿಪಶು ವಂಚಕರ ಜೊತೆ ಮಾತನಾಡಿದರೆ, ಅವರು ಮನೆ ಬಿಟ್ಟು ಹೋಗದಂತೆ, ಸ್ನೇಹಿತರು ಮತ್ತು ಕುಟುಂಬಸ್ಥರಿಂದ ಪ್ರತ್ಯೇಕವಾಗಿರುವಂತೆ ವಂಚಕರು ನೋಡಿಕೊಂಡಿರುತ್ತಾರೆ. ಒಂದು ರೀತಿಯಲ್ಲಿ “ನಾನು ಏನೋ ತಪ್ಪು ಮಾಡಿದ್ದೇನೆ, ಬಂಧನದಲ್ಲಿದ್ದೇನೆ” ಎಂಬ ಭಾವನೆಯನ್ನು ಬಲಿಪಶುಗಳ ಮನಸ್ಸಿನಲ್ಲಿ ಮೂಡಿಸುತ್ತಾರೆ.

ಸುಳ್ಳು ತನಿಖೆ, ಜೈಲು ಇತ್ಯಾದಿ ವಿಚಾರಗಳನ್ನು ವಿಡಿಯೋ, ಆಡಿಯೋ ಕರೆಗಳ ಮೂಲಕವೇ ಮಾಡುವ ವಂಚಕರು, ಬಲಿಪಶು ಇರುವ ಜಾಗದ ಮೇಲೆ ನಿಗಾ ಇಟ್ಟು ಅವರಲ್ಲಿ ಭಯ ಮೂಡಿಸುತ್ತಾರೆ. ನಾನು ವಂಚನೆಗೆ ಒಳಗಾಗಿದ್ದೇನೆ ಎಂದು ತಿಳಿಯದ ಅಮಾಯಕ ಜನರು ವಂಚಕರು ಹೇಳಿದಂತೆ ಕೇಳಲು ಶುರು ಮಾಡುತ್ತಾರೆ. ತಾನು ಅನುಭವಿಸುತ್ತಿರುವ ಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಇದರ ಲಾಭ ಪಡೆಯುವ ವಂಚಕರು ಹಣ ಸುಲಿಗೆ ಮಾಡುತ್ತಾರೆ.

ವಂಚಕರು ತಮ್ಮನ್ನು ನಂಬುವಂತೆ ಮಾಡಲು ನಕಲಿ ಬಂಧನ ವಾರೆಂಟ್, ನ್ಯಾಯಾಲಯದ ಆದೇಶ ಪ್ರತಿಗಳನ್ನು ತೋರಿಸುತ್ತಾರೆ. ಅದನ್ನು ಬಲಿಪಶುವಿನ ಮೊಬೈಲ್‌ಗೆ ಕಳುಹಿಸಿಕೊಡುತ್ತಾರೆ. ಕೆಲವೊಮ್ಮೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಕಲಿ ನ್ಯಾಯಾಲಯದ ಕಲಾಪಗಳನ್ನು ನಡೆಸುತ್ತಾರೆ.

ನ್ಯಾಷನಲ್ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ ಪ್ರಕಾರ, ಭಾರತದಲ್ಲಿ 2024ರಲ್ಲಿ ಡಿಜಿಟಲ್ ಬಂಧನ ಪ್ರಕರಣಗಳಲ್ಲಿ ಭಾರೀ ಏರಿಕೆ ಕಂಡಿದೆ. ಮೊದಲ ತ್ರೈಮಾಸಿಕವೊಂದರಲ್ಲೇ ಭಾರತೀಯರು ಡಿಜಿಟಲ್ ವಂಚನೆಗಳಿಂದ 120.3 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಈ ಪೈಕಿ ಹೆಚ್ಚಿನವು ಡಿಜಿಟಲ್ ಬಂಧನ ಪ್ರಕರಣಗಳಾಗಿವೆ.

ನಿಮಗೆ ಏನಾದರು ಅನುಮಾನಾಸ್ಪದ ಕರೆಗಳು ಬಂದರೆ, ರಾಷ್ಟ್ರೀಯ ಸೈಬರ್ ಸಹಾಯವಾಣಿ 1930, ಅಥವಾ cybercrime.gov.in ಗೆ ಮಾಹಿತಿ ನೀಡಿ. ಆ ಬಗ್ಗೆ ನಿಮ್ಮ ಕುಟುಂಬ ಮತ್ತು ಪೊಲೀಸರ ಗಮನಕ್ಕೆ ತನ್ನಿ. ಸಾಕ್ಷ್ಯಗಳನ್ನು ಸಂಗ್ರಹಿಸಲು ಮರೆಯದಿರಿ.

ಸಹಕಾರ ಸಚಿವ ರಾಜಣ್ಣ ಮಗನ ಹತ್ಯೆಗೆ ಸಂಚು ಆರೋಪ: ಐವರ ವಿರುದ್ಧ ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...