Homeಕರ್ನಾಟಕಬೆಳಗಾವಿ| ಡಿಜಿಟಲ್ ಅರೆಸ್ಟ್‌ನಿಂದ ಲಕ್ಷಾಂತರ ರೂ. ವಂಚನೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ| ಡಿಜಿಟಲ್ ಅರೆಸ್ಟ್‌ನಿಂದ ಲಕ್ಷಾಂತರ ರೂ. ವಂಚನೆ: ನೊಂದ ವೃದ್ಧ ದಂಪತಿ ಆತ್ಮಹತ್ಯೆ

- Advertisement -
- Advertisement -

ಸೈಬರ್ ವಂಚಕರ ಕಾಟ ತಾಳಲಾರದೆ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಶುಕ್ರವಾರ (ಮಾ.28) ಬೆಳಕಿಗೆ ಬಂದಿದೆ.

ಬೀಡಿಯ ಕ್ರಿಶ್ಚಿಯನ್ ಓಣಿಯ ನಿವಾಸಿಗಳಾದ ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ಡಿಯಾಗೋ ನಜರತ್ (78) ಸಾವಿಗೆ ಶರಣಾದವರು.

ಸೈಬರ್ ವಂಚಕರ ಕಾಟ ತಾಳಲಾರದೆ ಸಾಯುತ್ತಿರುವುದಾಗಿ ಡಿಯಾಗೋ ಅವರು ಬರೆದಿಟ್ಟಿರುವ ಡೆತ್‌ನೋಟ್‌ ಪೊಲೀಸರಿಗೆ ಸಿಕ್ಕಿದೆ ಎಂದು ವರದಿಗಳು ಹೇಳಿವೆ.

ಡಿಯಾಗೋ ನಜರತ್ ಅವರು ಮಹಾರಾಷ್ಟ್ರದ ಸಚಿವಾಲಯದಲ್ಲಿ ಬಿಎಸ್‌ಎನ್‌ಎಲ್‌ ಸಂಸ್ಥೆಯ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಆ ಬಳಿಕ ತಮ್ಮ ಮೂಲ ಊರಾದ ಬೀಡಿಯಲ್ಲಿ ಪತ್ನಿ ಜೊತೆ ವಾಸವಿದ್ದರು. ದಂಪತಿಗೆ ಮಕ್ಕಳಿರಲಿಲ್ಲ.

ಡಿಯಾಗೋ ದಂಪತಿ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುತ್ತಿದ್ದರು. ಅವರು ಸಮಾಜ ಸೇವೆಗೆ ಹಣ ಖರ್ಚು ಮಾಡುತ್ತಿರುವುದನ್ನು ಗಮನಿಸಿದ ಸೈಬರ್ ವಂಚಕರು ದೆಹಲಿಯಿಂದ ಕರೆ ಮಾಡಿ ಬೆದರಿಸುತ್ತಿದ್ದರು ಎಂದು ವರದಿಯಾಗಿದೆ.

ದೆಹಲಿಯಲ್ಲಿ ಉನ್ನತ ಹುದ್ದೆಯಲ್ಲಿ ಇರುವುದಾಗಿ ಹೇಳಿಕೊಂಡ ಅನಿಲ್ ಯಾದವ್ ಎಂಬ ವ್ಯಕ್ತಿ ಡಿಯಾಗೋ ದಂಪತಿಯ ಮೊಬೈಲ್‌ಗೆ ಪದೇ ಪದೇ ಕರೆ ಮಾಡುತ್ತಿದ್ದ. “ನಿಮ್ಮ ಮೊಬೈಲ್‌ನಿಂದ ನನಗೆ ಅಶ್ಲೀಲ ಫೋಟೋ, ಸಂದೇಶಗಳು ಬಂದಿವೆ. ನಾನು ಸೈಬರ್ ಸೆಲ್‌ಗೆ ದೂರು ನೀಡುತ್ತೇನೆ” ಎಂದು ಬೆದರಿಸುತ್ತಿದ್ದ. ದಂಪತಿಯಿಂದ 50 ಲಕ್ಷ ರೂಪಾಯಿ ಪಡೆದುಕೊಂಡರೂ ಕಿರುಕುಳ ನಿಲ್ಲಿಸಿರಲಿಲ್ಲ.

ನಂತರ, ಸುಮಿತ ಬಿಸ್ರಾ ಎಂಬ ಹೆಸರಿನಲ್ಲಿ ಕರೆ ಮಾಡಿ, ಅನಿಲ್ ಅವರು ದೂರು ಕೊಟ್ಟಿದ್ದಾರೆ. ಹಾಗಾಗಿ ನಿಮ್ಮ ಮೇಲೆ ಪ್ರಕರಣ ದಾಖಲಾಗಿದೆ. ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಹಣ ಕೊಡದಿದ್ದರೆ ಅಶ್ಲೀಲ ಫೋಟೋ, ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಾರೆ. ಅವರ ಕಾಟ ತಾಳಲಾರದೆ ಸಾಯುತ್ತಿದ್ದೇವೆ. ನಮ್ಮ ದೇಹಗಳನ್ನು ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಮೆಡಿಕಲ್ ಕಾಲೇಜಿಗೆ ಕೊಡಿ ಎಂದು ಡಿಯಾಗೋ ಅವರು ಡೆತ್‌ನೋಟ್‌ನಲ್ಲಿ ಬರೆದಿರುವುದಾಗಿ ವರದಿಗಳು ವಿವರಿಸಿವೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಸೈಬರ್ ವಂಚಕರ ಕಾಟ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಏನಿದು ಡಿಜಿಟಲ್ ಅರೆಸ್ಟ್ ?

ಸೈಬರ್ ವಂಚಕರು ಸಿಬಿಐ, ಇಡಿ, ನಾರ್ಕೋಟಿಕ್ಸ್ ಬ್ಯೂರೋ ಅಥವಾ ಕಸ್ಟಮ್ಸ್‌ ಅಧಿಕಾರಿಗಳಂತಹ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸಿ ವಾಟ್ಸಾಪ್, ಸ್ಕೈಪ್‌ನಂತಹ ಪ್ಲಾಟ್‌ಫಾರ್ಮ್‌ಗಳ ಮೂಲಕ ಆಡಿಯೋ-ವಿಡಿಯೋ ಬಳಸಿಕೊಂಡು ಜನರನ್ನು ಸಂಪರ್ಕಿಸಿ ಅವರಿಂದ ಹಣ ಸುಲಿಗೆ ಮಾಡುವ ಪ್ರಕ್ರಿಯೇ ಡಿಜಿಟಲ್ ಅರೆಸ್ಟ್‌. ಇಲ್ಲಿ ವಂಚಕರು ನಿಷೇಧಿಗಳ ವಸ್ತುಗಳ ಸಾಗಾಟ, ಮಾದಕ ವಸ್ತುಗಳ ವ್ಯವಹಾರ, ಹಣ ಅಕ್ರಮ ವರ್ಗಾವಣೆಯಂತಹ ಸುಳ್ಳು ಆರೋಪಗಳನ್ನು ಜನರ ಮೇಲೆ ಹೊರಿಸಿ, ಅವರನ್ನು ಬೆದರಿಸಿ ಹಣ ಪಡೆಯುತ್ತಾರೆ. ಇದಕ್ಕಾಗಿ ಮುಖ್ಯವಾಗಿ ಆಧಾರ್ ಕಾರ್ಡ್‌ನಲ್ಲಿರುವ ವೈಯಕ್ತಿಕ ಮಾಹಿತಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಡಿಜಿಟಲ್ ಅರೆಸ್ಟ್‌ ಮೂಲಕ ಹಣ ಸುಲಿಗೆ ಮಾಡುವ ವಂಚಕರು, ಸರ್ಕಾರಿ ಅಧಿಕಾರಿಗಳಂತೆ ಜನರನ್ನು ನಂಬಿಸಲು ಸಮವಸ್ತ್ರ, ಕಚೇರಿ ವ್ಯವಸ್ಥೆಗಳನ್ನು ಮಾಡಿಕೊಂಡಿರುತ್ತಾರೆ. ಇಲ್ಲದಿದ್ದರೆ ಡೀಪ್‌ಫೇಕ್‌ನಂತಹ ಪರಿಕರಗಳನ್ನು ಬಳಸಿಕೊಂಡು ವಿಡಿಯೋ ಕರೆಗಳನ್ನು ಮಾಡುತ್ತಾರೆ. ಒಂದು ಸಲ ಬಲಿಪಶು ವಂಚಕರ ಜೊತೆ ಮಾತನಾಡಿದರೆ, ಅವರು ಮನೆ ಬಿಟ್ಟು ಹೋಗದಂತೆ, ಸ್ನೇಹಿತರು ಮತ್ತು ಕುಟುಂಬಸ್ಥರಿಂದ ಪ್ರತ್ಯೇಕವಾಗಿರುವಂತೆ ವಂಚಕರು ನೋಡಿಕೊಂಡಿರುತ್ತಾರೆ. ಒಂದು ರೀತಿಯಲ್ಲಿ “ನಾನು ಏನೋ ತಪ್ಪು ಮಾಡಿದ್ದೇನೆ, ಬಂಧನದಲ್ಲಿದ್ದೇನೆ” ಎಂಬ ಭಾವನೆಯನ್ನು ಬಲಿಪಶುಗಳ ಮನಸ್ಸಿನಲ್ಲಿ ಮೂಡಿಸುತ್ತಾರೆ.

ಸುಳ್ಳು ತನಿಖೆ, ಜೈಲು ಇತ್ಯಾದಿ ವಿಚಾರಗಳನ್ನು ವಿಡಿಯೋ, ಆಡಿಯೋ ಕರೆಗಳ ಮೂಲಕವೇ ಮಾಡುವ ವಂಚಕರು, ಬಲಿಪಶು ಇರುವ ಜಾಗದ ಮೇಲೆ ನಿಗಾ ಇಟ್ಟು ಅವರಲ್ಲಿ ಭಯ ಮೂಡಿಸುತ್ತಾರೆ. ನಾನು ವಂಚನೆಗೆ ಒಳಗಾಗಿದ್ದೇನೆ ಎಂದು ತಿಳಿಯದ ಅಮಾಯಕ ಜನರು ವಂಚಕರು ಹೇಳಿದಂತೆ ಕೇಳಲು ಶುರು ಮಾಡುತ್ತಾರೆ. ತಾನು ಅನುಭವಿಸುತ್ತಿರುವ ಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಇದರ ಲಾಭ ಪಡೆಯುವ ವಂಚಕರು ಹಣ ಸುಲಿಗೆ ಮಾಡುತ್ತಾರೆ.

ವಂಚಕರು ತಮ್ಮನ್ನು ನಂಬುವಂತೆ ಮಾಡಲು ನಕಲಿ ಬಂಧನ ವಾರೆಂಟ್, ನ್ಯಾಯಾಲಯದ ಆದೇಶ ಪ್ರತಿಗಳನ್ನು ತೋರಿಸುತ್ತಾರೆ. ಅದನ್ನು ಬಲಿಪಶುವಿನ ಮೊಬೈಲ್‌ಗೆ ಕಳುಹಿಸಿಕೊಡುತ್ತಾರೆ. ಕೆಲವೊಮ್ಮೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಕಲಿ ನ್ಯಾಯಾಲಯದ ಕಲಾಪಗಳನ್ನು ನಡೆಸುತ್ತಾರೆ.

ನ್ಯಾಷನಲ್ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ ಪ್ರಕಾರ, ಭಾರತದಲ್ಲಿ 2024ರಲ್ಲಿ ಡಿಜಿಟಲ್ ಬಂಧನ ಪ್ರಕರಣಗಳಲ್ಲಿ ಭಾರೀ ಏರಿಕೆ ಕಂಡಿದೆ. ಮೊದಲ ತ್ರೈಮಾಸಿಕವೊಂದರಲ್ಲೇ ಭಾರತೀಯರು ಡಿಜಿಟಲ್ ವಂಚನೆಗಳಿಂದ 120.3 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಈ ಪೈಕಿ ಹೆಚ್ಚಿನವು ಡಿಜಿಟಲ್ ಬಂಧನ ಪ್ರಕರಣಗಳಾಗಿವೆ.

ನಿಮಗೆ ಏನಾದರು ಅನುಮಾನಾಸ್ಪದ ಕರೆಗಳು ಬಂದರೆ, ರಾಷ್ಟ್ರೀಯ ಸೈಬರ್ ಸಹಾಯವಾಣಿ 1930, ಅಥವಾ cybercrime.gov.in ಗೆ ಮಾಹಿತಿ ನೀಡಿ. ಆ ಬಗ್ಗೆ ನಿಮ್ಮ ಕುಟುಂಬ ಮತ್ತು ಪೊಲೀಸರ ಗಮನಕ್ಕೆ ತನ್ನಿ. ಸಾಕ್ಷ್ಯಗಳನ್ನು ಸಂಗ್ರಹಿಸಲು ಮರೆಯದಿರಿ.

ಸಹಕಾರ ಸಚಿವ ರಾಜಣ್ಣ ಮಗನ ಹತ್ಯೆಗೆ ಸಂಚು ಆರೋಪ: ಐವರ ವಿರುದ್ಧ ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...