Homeಮುಖಪುಟಭಾರತೀಯ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬ್ರಿಟನ್‌ನಲ್ಲಿ ಮೃತ ಸಿಖ್‌ ಕಾರ್ಯಕರ್ತ

ಭಾರತೀಯ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬ್ರಿಟನ್‌ನಲ್ಲಿ ಮೃತ ಸಿಖ್‌ ಕಾರ್ಯಕರ್ತ

- Advertisement -
- Advertisement -

ಸಿಖ್‌ ಪ್ರತ್ಯೇಕತವಾದಿ ನಾಯಕ ಹರ್ದಿಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡದ ಬಗ್ಗೆ ಕೆನಡಾ ಆರೋಪಿಸಿತ್ತು. ಇದರಿಂದ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಇದಾದ ಕೆಲವೇ ತಿಂಗಳಲ್ಲಿ ಅಮೆರಿಕಾದಲ್ಲಿ ಇನ್ನೋರ್ವ ಸಿಖ್‌ ಪ್ರತ್ಯೇಕತವಾದಿ ನಾಯಕ ಪನ್ನೂನ್‌ ಹತ್ಯೆ ಸಂಚು ಆರೋಪ ಕೂಡ ಭಾರತದ ಮೇಲೆ ಹೊರಿಸಲಾಗಿತ್ತು. ಇದೀಗ ಭಾರತದ ಮೇಲೆ ಮತ್ತೊಂದು ಆರೋಪ ಕೇಳಿ ಬಂದಿದೆ.

ಬ್ರಿಟನ್‌ನಲ್ಲಿ ನೆಲೆಸಿರುವ ಖಲಿಸ್ತಾನ್‌ ಪರ ಹೋರಾಟಗಾರ ಅವತಾರ್‌ ಸಿಂಗ್‌ ಖಾಂಡಾ ಜೂನ್‌ನಲ್ಲಿ ಮೃತಪಟ್ಟಿದ್ದಾರೆ. ಆದರೆ ಅವತಾರ್‌ ಸಿಂಗ್‌ ಖಾಂಡಾ ಅವರು ತನ್ನ ಸಾವಿಗೆ ಕೆಲವೇ ತಿಂಗಳುಗಳ ಮೊದಲು, ಭಾರತೀಯ ಪೊಲೀಸರು ನನಗೆ ಕಿರುಕುಳ ನೀಡಿದ್ದಾರೆ. ಪಂಜಾಬ್‌ನಲ್ಲಿರುವ ತಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಅವತಾರ್‌ ಸಿಂಗ್‌ ಖಾಂಡಾ ಪ್ರತ್ಯೇಕತಾವಾದಿ ಸಿದ್ಧಾಂತದೊಂದಿಗೆ ಯುಕೆಯಲ್ಲಿ ಸಿಖ್ ಯುವಕರನ್ನು ತೀವ್ರಗಾಮಿಗಳಾನ್ನಾಗಿಸುತ್ತಿದ್ದಾರೆ ಎಂದು ಭಾರತೀಯ ತನಿಖಾ ಏಜೆನ್ಸಿಗಳು ಖಾಂಡಾ ವಿರುದ್ಧ ಆರೋಪಿಸಿದೆ. ಖಲಿಸ್ತಾನಿ ಪರ ಗುಂಪುಗಳ ಪ್ರತಿಭಟನೆಯ ಸಂದರ್ಭದಲ್ಲಿ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ಅವತಾರ್‌ ಸಿಂಗ್‌ ಖಾಂಡಾ ಓರ್ವನಾಗಿದ್ದ ಎನ್ನಲಾಗಿದೆ.

ಗಾರ್ಡಿಯನ್‌ನ ಪ್ರಕಾರ, ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವತಾರ್‌ ಸಿಂಗ್‌ ಖಾಂಡಾ ಯುಕೆಯ ಬರ್ಮಿಂಗ್ಹ್ಯಾಮ್‌ನಲ್ಲಿರುವ ಆಸ್ಪತ್ರೆಗೆ ದಾಖಲಾದ 4 ದಿನಗಳಲ್ಲಿ ಅಂದರೆ ಜೂ.15 ರಂದು ನಿಧನರಾಗಿದ್ದರು. ಅವನ ಸಹವರ್ತಿಗಳು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು.

ಈ ಬಗ್ಗೆ ದಿ ಗಾರ್ಡಿಯನ್ ವರದಿಗಳು ಬ್ರಿಟನ್‌ ಪೊಲೀಸರು ಈ ವಿಚಾರಕ್ಕೆ ಸಂಬಂಧಿಸಿ ಪತ್ರಿಕಾ ಮಾಧ್ಯಮಕ್ಕೆ ನೀಡುವ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ ಮತ್ತು ಈ ವಿಷಯವನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗಿದೆ ಎಂದು ಹೇಳಿದೆ. ಆದರೆ ಖಾಂಡಾ ಅವರ ಸ್ನೇಹಿತರು, ಸಿಖ್ ಕಾರ್ಯಕರ್ತರು ಮತ್ತು ಕುಟುಂಬದ ಸದಸ್ಯರಿಗೆ ತನಿಖೆಯ ಬಗ್ಗೆ ಸಮಾಧಾನವಿರಲಿಲ್ಲ.

ಖಾಂಡಾ ಅವರ ಮರಣದ ಸಂಭವಿಸಿದ ಕೆಲವೇ ದಿನಗಳಲ್ಲಿ ವ್ಯಾಂಕೋವರ್‌ನಲ್ಲಿ ಕೆನಡಾದ ಸಿಖ್‌ ಪ್ರತ್ಯೇಕತಾವಾದಿ ನಾಯಕ ಹರ್ದಿಪ್‌ ಸಿಂಗ್‌ ನಿಜ್ಜರ್‌ ಹತ್ಯೆ ನಡೆದಿದೆ. ಹತ್ಯೆಯಲ್ಲಿ ಭಾರತೀಯ ಏಜೆಂಟರು ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ಭಾರತ ಸರ್ಕಾರ ಎದುರಿಸುತ್ತಿದೆ. ಇದಲ್ಲದೆ ಅಮೆರಿಕಾದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಭಾರತ ವಿಫಲವಾದ ಸಂಚನ್ನು ರೂಪಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಉನ್ನತ ಮಟ್ಟದ ತನಿಖೆಗೆ ಸಮಿತಿ ಕೂಡ ಭಾರತ ರಚಿಸಿದೆ.

ದಿ ಗಾರ್ಡಿಯನ್‌ನ ಪ್ರಕಾರ, ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರು ಸಾವಿನ ತನಿಖೆ ನಡೆಸಿದ್ದರು ಎಂಬ ಅಧಿಕೃತ ಹೇಳಿಕೆಗಳಿಗೆ ಖಂಡಾ ಅವರ ಕುಟುಂಬಸ್ಥರು ಮತ್ತು ಸ್ನೇಹಿತರು ವಿರೋಧಿಸಿದ್ದಾರೆ. ಪೊಲೀಸರು ಅವರ ಮರಣದ ನಂತರ ಸ್ನೇಹಿತರು ಮತ್ತು ಕುಟುಂಬದವರಿಂದ ಹೇಳಿಕೆಗಳನ್ನು ತೆಗೆದುಕೊಳ್ಳಲಿಲ್ಲ, ಅವರು  ಕೆಲಸ  ಮಾಡುವಲ್ಲಿ ಸಹೋದ್ಯೋಗಿಗಳೊಂದಿಗೆ ಮಾತನಾಡಲಿಲ್ಲ, ಅವರ ನಿವಾಸಕ್ಕೆ ಭೇಟಿ ನೀಡಲಿಲ್ಲ ಅಥವಾ ಅವರಿಗೆ ಬಂದ ಬೆದರಿಕೆಗಳ ಬಗ್ಗೆ ತನಿಖೆ ನಡೆಸಿಲ್ಲ ಎಂದು ಹೇಳಿದ್ದಾರೆ.

ಪಂಜಾಬ್‌ ಪೊಲೀಸರು ಖಂಡಾ ಅವರನ್ನು ಸಿಖ್ ಪ್ರತ್ಯೇಕತಾವಾದಿ, ವಾರಿಸ್ ಪಂಜಾಬ್ ನಾಯಕ ಅಮೃತಪಾಲ್ ಸಿಂಗ್‌ನ ಆಪ್ತ ಎಂದು ಹೇಳಿಕೊಂಡಿದ್ದಾರೆ. ಆತನ ಕುಟುಂಬ ಈ ಸಂಬಂಧವನ್ನು ನಿರಾಕರಿಸಿದೆ.  ಅಮೃತಪಾಲ್ ಸಿಂಗ್ ಪರಾರಿಯಾಗಿರುವಾಗ ಖಾಂಡಾ ಅವರ ತಾಯಿ ಮತ್ತು ಸಹೋದರಿಯನ್ನು ಪಂಜಾಬ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಪೋಲಿಸ್ ಠಾಣೆಯಲ್ಲಿ ಯುಕೆಯಲ್ಲಿರುವ ಖಾಂಡಾಗೆ ಕರೆ ಮಾಡಲು ತನ್ನ ಫೋನ್‌ನ್ನು  ಬಳಸಿದ್ದಾರೆ. ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಖಾಂಡಾ ಸಹೋದರಿ ಆರೋಪಿಸಿದ್ದಾರೆ.

ಖಂಡಾ ಅವರು ಏಪ್ರಿಲ್‌ನಲ್ಲಿ ತಮ್ಮ ವೈಯಕ್ತಿಕ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಭಾರತೀಯ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಿಂದ ನನಗೆ ಕರೆಗಳು ಬರುತ್ತಿವೆ ಮತ್ತು ಅವರು ಅಮೃತಪಾಲ್ ಸಿಂಗ್ ಎಲ್ಲಿದ್ದಾರೆ? ಎಂದು ಪ್ರಶ್ನಿಸುತ್ತಿದ್ದಾರೆ ಎಂದು ವೀಡಿಯೊದಲ್ಲಿ ಹೇಳಿದ್ದರು.

ಇದನ್ನು ಓದಿ: ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...