Homeಮುಖಪುಟಭಾರತೀಯ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬ್ರಿಟನ್‌ನಲ್ಲಿ ಮೃತ ಸಿಖ್‌ ಕಾರ್ಯಕರ್ತ

ಭಾರತೀಯ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬ್ರಿಟನ್‌ನಲ್ಲಿ ಮೃತ ಸಿಖ್‌ ಕಾರ್ಯಕರ್ತ

- Advertisement -
- Advertisement -

ಸಿಖ್‌ ಪ್ರತ್ಯೇಕತವಾದಿ ನಾಯಕ ಹರ್ದಿಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡದ ಬಗ್ಗೆ ಕೆನಡಾ ಆರೋಪಿಸಿತ್ತು. ಇದರಿಂದ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಇದಾದ ಕೆಲವೇ ತಿಂಗಳಲ್ಲಿ ಅಮೆರಿಕಾದಲ್ಲಿ ಇನ್ನೋರ್ವ ಸಿಖ್‌ ಪ್ರತ್ಯೇಕತವಾದಿ ನಾಯಕ ಪನ್ನೂನ್‌ ಹತ್ಯೆ ಸಂಚು ಆರೋಪ ಕೂಡ ಭಾರತದ ಮೇಲೆ ಹೊರಿಸಲಾಗಿತ್ತು. ಇದೀಗ ಭಾರತದ ಮೇಲೆ ಮತ್ತೊಂದು ಆರೋಪ ಕೇಳಿ ಬಂದಿದೆ.

ಬ್ರಿಟನ್‌ನಲ್ಲಿ ನೆಲೆಸಿರುವ ಖಲಿಸ್ತಾನ್‌ ಪರ ಹೋರಾಟಗಾರ ಅವತಾರ್‌ ಸಿಂಗ್‌ ಖಾಂಡಾ ಜೂನ್‌ನಲ್ಲಿ ಮೃತಪಟ್ಟಿದ್ದಾರೆ. ಆದರೆ ಅವತಾರ್‌ ಸಿಂಗ್‌ ಖಾಂಡಾ ಅವರು ತನ್ನ ಸಾವಿಗೆ ಕೆಲವೇ ತಿಂಗಳುಗಳ ಮೊದಲು, ಭಾರತೀಯ ಪೊಲೀಸರು ನನಗೆ ಕಿರುಕುಳ ನೀಡಿದ್ದಾರೆ. ಪಂಜಾಬ್‌ನಲ್ಲಿರುವ ತಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಅವತಾರ್‌ ಸಿಂಗ್‌ ಖಾಂಡಾ ಪ್ರತ್ಯೇಕತಾವಾದಿ ಸಿದ್ಧಾಂತದೊಂದಿಗೆ ಯುಕೆಯಲ್ಲಿ ಸಿಖ್ ಯುವಕರನ್ನು ತೀವ್ರಗಾಮಿಗಳಾನ್ನಾಗಿಸುತ್ತಿದ್ದಾರೆ ಎಂದು ಭಾರತೀಯ ತನಿಖಾ ಏಜೆನ್ಸಿಗಳು ಖಾಂಡಾ ವಿರುದ್ಧ ಆರೋಪಿಸಿದೆ. ಖಲಿಸ್ತಾನಿ ಪರ ಗುಂಪುಗಳ ಪ್ರತಿಭಟನೆಯ ಸಂದರ್ಭದಲ್ಲಿ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ಅವತಾರ್‌ ಸಿಂಗ್‌ ಖಾಂಡಾ ಓರ್ವನಾಗಿದ್ದ ಎನ್ನಲಾಗಿದೆ.

ಗಾರ್ಡಿಯನ್‌ನ ಪ್ರಕಾರ, ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವತಾರ್‌ ಸಿಂಗ್‌ ಖಾಂಡಾ ಯುಕೆಯ ಬರ್ಮಿಂಗ್ಹ್ಯಾಮ್‌ನಲ್ಲಿರುವ ಆಸ್ಪತ್ರೆಗೆ ದಾಖಲಾದ 4 ದಿನಗಳಲ್ಲಿ ಅಂದರೆ ಜೂ.15 ರಂದು ನಿಧನರಾಗಿದ್ದರು. ಅವನ ಸಹವರ್ತಿಗಳು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು.

ಈ ಬಗ್ಗೆ ದಿ ಗಾರ್ಡಿಯನ್ ವರದಿಗಳು ಬ್ರಿಟನ್‌ ಪೊಲೀಸರು ಈ ವಿಚಾರಕ್ಕೆ ಸಂಬಂಧಿಸಿ ಪತ್ರಿಕಾ ಮಾಧ್ಯಮಕ್ಕೆ ನೀಡುವ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ ಮತ್ತು ಈ ವಿಷಯವನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗಿದೆ ಎಂದು ಹೇಳಿದೆ. ಆದರೆ ಖಾಂಡಾ ಅವರ ಸ್ನೇಹಿತರು, ಸಿಖ್ ಕಾರ್ಯಕರ್ತರು ಮತ್ತು ಕುಟುಂಬದ ಸದಸ್ಯರಿಗೆ ತನಿಖೆಯ ಬಗ್ಗೆ ಸಮಾಧಾನವಿರಲಿಲ್ಲ.

ಖಾಂಡಾ ಅವರ ಮರಣದ ಸಂಭವಿಸಿದ ಕೆಲವೇ ದಿನಗಳಲ್ಲಿ ವ್ಯಾಂಕೋವರ್‌ನಲ್ಲಿ ಕೆನಡಾದ ಸಿಖ್‌ ಪ್ರತ್ಯೇಕತಾವಾದಿ ನಾಯಕ ಹರ್ದಿಪ್‌ ಸಿಂಗ್‌ ನಿಜ್ಜರ್‌ ಹತ್ಯೆ ನಡೆದಿದೆ. ಹತ್ಯೆಯಲ್ಲಿ ಭಾರತೀಯ ಏಜೆಂಟರು ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ಭಾರತ ಸರ್ಕಾರ ಎದುರಿಸುತ್ತಿದೆ. ಇದಲ್ಲದೆ ಅಮೆರಿಕಾದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಭಾರತ ವಿಫಲವಾದ ಸಂಚನ್ನು ರೂಪಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಉನ್ನತ ಮಟ್ಟದ ತನಿಖೆಗೆ ಸಮಿತಿ ಕೂಡ ಭಾರತ ರಚಿಸಿದೆ.

ದಿ ಗಾರ್ಡಿಯನ್‌ನ ಪ್ರಕಾರ, ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರು ಸಾವಿನ ತನಿಖೆ ನಡೆಸಿದ್ದರು ಎಂಬ ಅಧಿಕೃತ ಹೇಳಿಕೆಗಳಿಗೆ ಖಂಡಾ ಅವರ ಕುಟುಂಬಸ್ಥರು ಮತ್ತು ಸ್ನೇಹಿತರು ವಿರೋಧಿಸಿದ್ದಾರೆ. ಪೊಲೀಸರು ಅವರ ಮರಣದ ನಂತರ ಸ್ನೇಹಿತರು ಮತ್ತು ಕುಟುಂಬದವರಿಂದ ಹೇಳಿಕೆಗಳನ್ನು ತೆಗೆದುಕೊಳ್ಳಲಿಲ್ಲ, ಅವರು  ಕೆಲಸ  ಮಾಡುವಲ್ಲಿ ಸಹೋದ್ಯೋಗಿಗಳೊಂದಿಗೆ ಮಾತನಾಡಲಿಲ್ಲ, ಅವರ ನಿವಾಸಕ್ಕೆ ಭೇಟಿ ನೀಡಲಿಲ್ಲ ಅಥವಾ ಅವರಿಗೆ ಬಂದ ಬೆದರಿಕೆಗಳ ಬಗ್ಗೆ ತನಿಖೆ ನಡೆಸಿಲ್ಲ ಎಂದು ಹೇಳಿದ್ದಾರೆ.

ಪಂಜಾಬ್‌ ಪೊಲೀಸರು ಖಂಡಾ ಅವರನ್ನು ಸಿಖ್ ಪ್ರತ್ಯೇಕತಾವಾದಿ, ವಾರಿಸ್ ಪಂಜಾಬ್ ನಾಯಕ ಅಮೃತಪಾಲ್ ಸಿಂಗ್‌ನ ಆಪ್ತ ಎಂದು ಹೇಳಿಕೊಂಡಿದ್ದಾರೆ. ಆತನ ಕುಟುಂಬ ಈ ಸಂಬಂಧವನ್ನು ನಿರಾಕರಿಸಿದೆ.  ಅಮೃತಪಾಲ್ ಸಿಂಗ್ ಪರಾರಿಯಾಗಿರುವಾಗ ಖಾಂಡಾ ಅವರ ತಾಯಿ ಮತ್ತು ಸಹೋದರಿಯನ್ನು ಪಂಜಾಬ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಪೋಲಿಸ್ ಠಾಣೆಯಲ್ಲಿ ಯುಕೆಯಲ್ಲಿರುವ ಖಾಂಡಾಗೆ ಕರೆ ಮಾಡಲು ತನ್ನ ಫೋನ್‌ನ್ನು  ಬಳಸಿದ್ದಾರೆ. ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಖಾಂಡಾ ಸಹೋದರಿ ಆರೋಪಿಸಿದ್ದಾರೆ.

ಖಂಡಾ ಅವರು ಏಪ್ರಿಲ್‌ನಲ್ಲಿ ತಮ್ಮ ವೈಯಕ್ತಿಕ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಭಾರತೀಯ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಿಂದ ನನಗೆ ಕರೆಗಳು ಬರುತ್ತಿವೆ ಮತ್ತು ಅವರು ಅಮೃತಪಾಲ್ ಸಿಂಗ್ ಎಲ್ಲಿದ್ದಾರೆ? ಎಂದು ಪ್ರಶ್ನಿಸುತ್ತಿದ್ದಾರೆ ಎಂದು ವೀಡಿಯೊದಲ್ಲಿ ಹೇಳಿದ್ದರು.

ಇದನ್ನು ಓದಿ: ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...