Homeಮುಖಪುಟಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

ಸಾವಿಗೂ ಮುನ್ನ ವಿಡಿಯೊ ಮಾಡಿರುವ ಸಂತ್ರಸ್ತ ಮಹಿಳೆ, ತಾನು ಅನುಭವಿಸಿರುವ ಕಿರುಕುಳವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ವಿಡಿಯೊ ಮಾಡಿ ಹಂಚಿಕೊಂಡಿದ್ದಾರೆ. “ಗಂಡನ ಕಿರುಕುಳವೇ ಕಾರಣ” ಎಂದು ತಿಳಿಸಿ ಸಾವಿಗೆ ಶರಣಾಗಿದ್ದಾರೆ.

“ಹೆಣ್ಣು ಮಕ್ಕಳಿಗೆ ಮಾತ್ರ ಜನ್ಮ ನೀಡುತ್ತಿದ್ದೀಯ” ಎಂದು ಗಂಡ ವರ್ಷಗಳ ಕಾಲ ಕಿರುಕುಳ ನೀಡಿರುವುದನ್ನು ಮಹಿಳೆ ವಿಡಿಯೊದಲ್ಲಿ ಉಲ್ಲೇಖಿಸಿದ್ದಾರೆ.

30 ವರ್ಷ ವಯಸ್ಸಿನ ಮಂದೀಪ್ ಕೌರ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, “ನಾನು ಎಲ್ಲವನ್ನೂ ಸಹಿಸಿಕೊಂಡಿದ್ದೇನೆ, ಆತ ಒಂದು ದಿನ ತನ್ನ ದಾರಿಯನ್ನು ಸರಿ ಮಾಡಿಕೊಳ್ಳಬಹುದು ಎಂದು ಭಾವಿಸುತ್ತೇನೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಎಂಟು ವರ್ಷವಾಯಿತು. ನಾನು ಈಗ ದಿನವೂ ಹಲ್ಲೆಗೊಳಗಾಗುತ್ತಿದ್ದೇನೆ” ಎಂದು ಪದೇ ಪದೇ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ. 4 ಮತ್ತು 2 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳ ತಾಯಿ ಇವರಾಗಿದ್ದಾರೆ.

ಪಂಜಾಬಿ ಭಾಷೆಯಲ್ಲಿ ಮಾತನಾಡಿರುವ ಕೌರ್‌, ‘ನನ್ನ ಪತಿ ಮತ್ತು ಅತ್ತೆ ನಾನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಬಲವಂತ ಮಾಡಿದ್ದಾರೆ. ಅಪ್ಪಾ, ನಾನು ಸಾಯುತ್ತೇನೆ, ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದಿದ್ದಾರೆ.

ಯುಪಿಯ ಬಿಜ್ನೋರ್‌ನವರಾದ ಕೌರ್, 2015ರಲ್ಲಿ ರಂಜೋಧ್‌ಬೀರ್ ಸಿಂಗ್ ಸಂಧು ಅವರನ್ನು ಮದುವೆಯಾಗಿ ಅಮೆರಿಕಕ್ಕೆ ತೆರಳಿದ್ದರು. ಬಿಜ್ನೋರ್‌ನಲ್ಲಿರುವ ಕೌರ್‌‌ ಕುಟುಂಬವು, “ಈ ಶೋಷಣೆಯು ಒಂದು ದಿನ ಕೊನೆಗೊಳ್ಳುತ್ತದೆ ಎಂದು ಭಾವಿಸಿದ್ದೆವು” ಎಂದಿದೆ. ಇದೀಗ ಕೌರ್‌ ಅವರ ಮೃತದೇಹವನ್ನು ಭಾರತಕ್ಕೆ ತರಲು ಸರ್ಕಾರದ ನೆರವನ್ನು ಕುಟುಂಬ ಕೋರಿದೆ.

ಗಂಡ ನಿಂದಿಸುತ್ತಿರುವ ಹಲವಾರು ವೀಡಿಯೊಗಳು ವೈರಲ್ ಆಗಿದ್ದು, ಅದರಲ್ಲಿ ಹೆಣ್ಣುಮಕ್ಕಳು ಕಿರುಚುವುದು ಮತ್ತು ಅಳುವುದು ಕೇಳುತ್ತದೆ. ಮತ್ತೊಂದು ವಿಡಿಯೊ ಮನೆಯೊಳಗಿನ ಕ್ಯಾಮೆರಾದಲ್ಲಿ ದಾಖಲಾಗಿದೆ. ಕ್ಷಮೆ ಕೇಳುವವರೆಗೂ ಕೌರ್‌ಗೆ ಗಂಡ ಹೊಡೆಯುತ್ತಾರೆ.

ಈ ವಿಡಿಯೊಗಳನ್ನು ಉಲ್ಲೇಖಿಸಿರುವ ಎನ್‌ಡಿಟಿವಿ, “ಇವುಗಳ ಅಧಿಕೃತತೆಯನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ. ಈ ವಿಡಿಯೊಗಳನ್ನು ಮಹಿಳೆ ತನ್ನ ಸ್ನೇಹಿತರಿಗೆ ಕಳುಹಿಸಿರಬಹುದು ಎಂದು ಊಹಿಸಲಾಗಿದೆ” ಎಂದು ವರದಿ ಮಾಡಿದೆ.

“ನನ್ನನ್ನು ಐದು ದಿನಗಳ ಕಾಲ ಟ್ರಕ್‌ನಲ್ಲಿ ಬಂಧಿಯಾಗಿಟ್ಟ. ನನ್ನ ತಂದೆ ಪೊಲೀಸ್ ಕೇಸ್ ದಾಖಲಿಸಿದ್ದಾರೆ. ಕೇಸ್‌ ವಾಪಸ್ ಪಡೆಯುವಂತೆ ಆತ ನನ್ನಲ್ಲಿ ಬೇಡಿಕೊಂಡ. ನಾನು ಆತನ ಮನವಿಯನ್ನು ಒಪ್ಪಿದೆ” ಎಂದಿರುವ ಕೌರ್‌‌, ತಾನು ಅನುಭವಿಸಿರುವ ಚಿತ್ರಹಿಂಸೆಯನ್ನು ವಿವರಿಸಿದ್ದಾರೆ.

ಯುಎಸ್‌ನಲ್ಲಿರುವ ಪತಿ ಅಥವಾ ಭಾರತದಲ್ಲಿರುವ ಆತನ ಕುಟುಂಬದ ವಿರುದ್ಧ ಯಾವುದೇ ಕಾನೂನು ಜಾರಿಯಾಗಿರುವ ಮಾಹಿತಿ ಲಭ್ಯವಾಗಿಲ್ಲ.

ಸಿಖ್ ಸಮುದಾಯದೊಳಗೆ ಲೈಂಗಿಕ ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗಾಗಿ ಕೆಲಸ ಮಾಡುತ್ತಿರುವ ದಿ ಕೌರ್ ಮೂವ್‌ಮೆಂಟ್ ಸಂಸ್ಥೆಯು ಈ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದೆ. ಘಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಬಿಜೆಪಿ ಶಾಸಕನ ಕಿರುಕುಳಕ್ಕೆ ಬೇಸತ್ತು ಸಂತ ಆತ್ಮಹತ್ಯೆ- ಆರೋಪ

ನ್ಯೂಯಾರ್ಕ್‌ನ ರಿಚ್‌ಮಂಡ್ ಹಿಲ್‌ನಲ್ಲಿರುವ ಸಂತ್ರಸ್ತೆಯ ಮನೆಯ ಹೊರಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಪಂಜಾಬ್‌ನ ಕೆಲವು ಕಾರ್ಯಕರ್ತರು ಕೌರ್‌ ಕುಟುಂಬವನ್ನು ಬಿಜ್ನೋರ್‌ನಲ್ಲಿ ಭೇಟಿಯಾಗಿದ್ದಾರೆ.

ಹಲವು ದೇಶಗಳಲ್ಲಿನ ಜನರು (ಮುಖ್ಯವಾಗಿ ಪಂಜಾಬಿ ಹಾಗೂ ಸಿಖ್‌ಗಳು) ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ‌ವ್ಯಕ್ತಪಡಿಸಿದ್ದು, #JusticeForMandeep ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

ಸಿಖ್ ಮತ್ತು ಪಂಜಾಬಿ ಸಮುದಾಯಗಳಲ್ಲಿನ ದೌರ್ಜನ್ಯಗಳ ವಿರುದ್ಧ ಕಾರ್ಯನಿರ್ವಹಿಸುವ ಯುಕೆ ಮೂಲದ ಎನ್‌ಜಿಒ ಸಿಖ್ ವುಮೆನ್ಸ್ ಏಡ್ ಹೇಳಿಕೆಯನ್ನು ನೀಡಿದ್ದು, “ಆಕೆ ಜೀವನದಲ್ಲಿ ಅನುಭವಿಸಿದ ಹಿಂಸೆಯನ್ನು ಹೇಳಿಕೊಂಡಿದ್ದಾಳೆ” ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...