Homeಮುಖಪುಟಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

ಸಾವಿಗೂ ಮುನ್ನ ವಿಡಿಯೊ ಮಾಡಿರುವ ಸಂತ್ರಸ್ತ ಮಹಿಳೆ, ತಾನು ಅನುಭವಿಸಿರುವ ಕಿರುಕುಳವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ವಿಡಿಯೊ ಮಾಡಿ ಹಂಚಿಕೊಂಡಿದ್ದಾರೆ. “ಗಂಡನ ಕಿರುಕುಳವೇ ಕಾರಣ” ಎಂದು ತಿಳಿಸಿ ಸಾವಿಗೆ ಶರಣಾಗಿದ್ದಾರೆ.

“ಹೆಣ್ಣು ಮಕ್ಕಳಿಗೆ ಮಾತ್ರ ಜನ್ಮ ನೀಡುತ್ತಿದ್ದೀಯ” ಎಂದು ಗಂಡ ವರ್ಷಗಳ ಕಾಲ ಕಿರುಕುಳ ನೀಡಿರುವುದನ್ನು ಮಹಿಳೆ ವಿಡಿಯೊದಲ್ಲಿ ಉಲ್ಲೇಖಿಸಿದ್ದಾರೆ.

30 ವರ್ಷ ವಯಸ್ಸಿನ ಮಂದೀಪ್ ಕೌರ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, “ನಾನು ಎಲ್ಲವನ್ನೂ ಸಹಿಸಿಕೊಂಡಿದ್ದೇನೆ, ಆತ ಒಂದು ದಿನ ತನ್ನ ದಾರಿಯನ್ನು ಸರಿ ಮಾಡಿಕೊಳ್ಳಬಹುದು ಎಂದು ಭಾವಿಸುತ್ತೇನೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಎಂಟು ವರ್ಷವಾಯಿತು. ನಾನು ಈಗ ದಿನವೂ ಹಲ್ಲೆಗೊಳಗಾಗುತ್ತಿದ್ದೇನೆ” ಎಂದು ಪದೇ ಪದೇ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ. 4 ಮತ್ತು 2 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳ ತಾಯಿ ಇವರಾಗಿದ್ದಾರೆ.

ಪಂಜಾಬಿ ಭಾಷೆಯಲ್ಲಿ ಮಾತನಾಡಿರುವ ಕೌರ್‌, ‘ನನ್ನ ಪತಿ ಮತ್ತು ಅತ್ತೆ ನಾನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಬಲವಂತ ಮಾಡಿದ್ದಾರೆ. ಅಪ್ಪಾ, ನಾನು ಸಾಯುತ್ತೇನೆ, ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದಿದ್ದಾರೆ.

ಯುಪಿಯ ಬಿಜ್ನೋರ್‌ನವರಾದ ಕೌರ್, 2015ರಲ್ಲಿ ರಂಜೋಧ್‌ಬೀರ್ ಸಿಂಗ್ ಸಂಧು ಅವರನ್ನು ಮದುವೆಯಾಗಿ ಅಮೆರಿಕಕ್ಕೆ ತೆರಳಿದ್ದರು. ಬಿಜ್ನೋರ್‌ನಲ್ಲಿರುವ ಕೌರ್‌‌ ಕುಟುಂಬವು, “ಈ ಶೋಷಣೆಯು ಒಂದು ದಿನ ಕೊನೆಗೊಳ್ಳುತ್ತದೆ ಎಂದು ಭಾವಿಸಿದ್ದೆವು” ಎಂದಿದೆ. ಇದೀಗ ಕೌರ್‌ ಅವರ ಮೃತದೇಹವನ್ನು ಭಾರತಕ್ಕೆ ತರಲು ಸರ್ಕಾರದ ನೆರವನ್ನು ಕುಟುಂಬ ಕೋರಿದೆ.

ಗಂಡ ನಿಂದಿಸುತ್ತಿರುವ ಹಲವಾರು ವೀಡಿಯೊಗಳು ವೈರಲ್ ಆಗಿದ್ದು, ಅದರಲ್ಲಿ ಹೆಣ್ಣುಮಕ್ಕಳು ಕಿರುಚುವುದು ಮತ್ತು ಅಳುವುದು ಕೇಳುತ್ತದೆ. ಮತ್ತೊಂದು ವಿಡಿಯೊ ಮನೆಯೊಳಗಿನ ಕ್ಯಾಮೆರಾದಲ್ಲಿ ದಾಖಲಾಗಿದೆ. ಕ್ಷಮೆ ಕೇಳುವವರೆಗೂ ಕೌರ್‌ಗೆ ಗಂಡ ಹೊಡೆಯುತ್ತಾರೆ.

ಈ ವಿಡಿಯೊಗಳನ್ನು ಉಲ್ಲೇಖಿಸಿರುವ ಎನ್‌ಡಿಟಿವಿ, “ಇವುಗಳ ಅಧಿಕೃತತೆಯನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ. ಈ ವಿಡಿಯೊಗಳನ್ನು ಮಹಿಳೆ ತನ್ನ ಸ್ನೇಹಿತರಿಗೆ ಕಳುಹಿಸಿರಬಹುದು ಎಂದು ಊಹಿಸಲಾಗಿದೆ” ಎಂದು ವರದಿ ಮಾಡಿದೆ.

“ನನ್ನನ್ನು ಐದು ದಿನಗಳ ಕಾಲ ಟ್ರಕ್‌ನಲ್ಲಿ ಬಂಧಿಯಾಗಿಟ್ಟ. ನನ್ನ ತಂದೆ ಪೊಲೀಸ್ ಕೇಸ್ ದಾಖಲಿಸಿದ್ದಾರೆ. ಕೇಸ್‌ ವಾಪಸ್ ಪಡೆಯುವಂತೆ ಆತ ನನ್ನಲ್ಲಿ ಬೇಡಿಕೊಂಡ. ನಾನು ಆತನ ಮನವಿಯನ್ನು ಒಪ್ಪಿದೆ” ಎಂದಿರುವ ಕೌರ್‌‌, ತಾನು ಅನುಭವಿಸಿರುವ ಚಿತ್ರಹಿಂಸೆಯನ್ನು ವಿವರಿಸಿದ್ದಾರೆ.

ಯುಎಸ್‌ನಲ್ಲಿರುವ ಪತಿ ಅಥವಾ ಭಾರತದಲ್ಲಿರುವ ಆತನ ಕುಟುಂಬದ ವಿರುದ್ಧ ಯಾವುದೇ ಕಾನೂನು ಜಾರಿಯಾಗಿರುವ ಮಾಹಿತಿ ಲಭ್ಯವಾಗಿಲ್ಲ.

ಸಿಖ್ ಸಮುದಾಯದೊಳಗೆ ಲೈಂಗಿಕ ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗಾಗಿ ಕೆಲಸ ಮಾಡುತ್ತಿರುವ ದಿ ಕೌರ್ ಮೂವ್‌ಮೆಂಟ್ ಸಂಸ್ಥೆಯು ಈ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದೆ. ಘಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಬಿಜೆಪಿ ಶಾಸಕನ ಕಿರುಕುಳಕ್ಕೆ ಬೇಸತ್ತು ಸಂತ ಆತ್ಮಹತ್ಯೆ- ಆರೋಪ

ನ್ಯೂಯಾರ್ಕ್‌ನ ರಿಚ್‌ಮಂಡ್ ಹಿಲ್‌ನಲ್ಲಿರುವ ಸಂತ್ರಸ್ತೆಯ ಮನೆಯ ಹೊರಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಪಂಜಾಬ್‌ನ ಕೆಲವು ಕಾರ್ಯಕರ್ತರು ಕೌರ್‌ ಕುಟುಂಬವನ್ನು ಬಿಜ್ನೋರ್‌ನಲ್ಲಿ ಭೇಟಿಯಾಗಿದ್ದಾರೆ.

ಹಲವು ದೇಶಗಳಲ್ಲಿನ ಜನರು (ಮುಖ್ಯವಾಗಿ ಪಂಜಾಬಿ ಹಾಗೂ ಸಿಖ್‌ಗಳು) ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ‌ವ್ಯಕ್ತಪಡಿಸಿದ್ದು, #JusticeForMandeep ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

ಸಿಖ್ ಮತ್ತು ಪಂಜಾಬಿ ಸಮುದಾಯಗಳಲ್ಲಿನ ದೌರ್ಜನ್ಯಗಳ ವಿರುದ್ಧ ಕಾರ್ಯನಿರ್ವಹಿಸುವ ಯುಕೆ ಮೂಲದ ಎನ್‌ಜಿಒ ಸಿಖ್ ವುಮೆನ್ಸ್ ಏಡ್ ಹೇಳಿಕೆಯನ್ನು ನೀಡಿದ್ದು, “ಆಕೆ ಜೀವನದಲ್ಲಿ ಅನುಭವಿಸಿದ ಹಿಂಸೆಯನ್ನು ಹೇಳಿಕೊಂಡಿದ್ದಾಳೆ” ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...