Homeಮುಖಪುಟಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

ಸಾವಿಗೂ ಮುನ್ನ ವಿಡಿಯೊ ಮಾಡಿರುವ ಸಂತ್ರಸ್ತ ಮಹಿಳೆ, ತಾನು ಅನುಭವಿಸಿರುವ ಕಿರುಕುಳವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ವಿಡಿಯೊ ಮಾಡಿ ಹಂಚಿಕೊಂಡಿದ್ದಾರೆ. “ಗಂಡನ ಕಿರುಕುಳವೇ ಕಾರಣ” ಎಂದು ತಿಳಿಸಿ ಸಾವಿಗೆ ಶರಣಾಗಿದ್ದಾರೆ.

“ಹೆಣ್ಣು ಮಕ್ಕಳಿಗೆ ಮಾತ್ರ ಜನ್ಮ ನೀಡುತ್ತಿದ್ದೀಯ” ಎಂದು ಗಂಡ ವರ್ಷಗಳ ಕಾಲ ಕಿರುಕುಳ ನೀಡಿರುವುದನ್ನು ಮಹಿಳೆ ವಿಡಿಯೊದಲ್ಲಿ ಉಲ್ಲೇಖಿಸಿದ್ದಾರೆ.

30 ವರ್ಷ ವಯಸ್ಸಿನ ಮಂದೀಪ್ ಕೌರ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, “ನಾನು ಎಲ್ಲವನ್ನೂ ಸಹಿಸಿಕೊಂಡಿದ್ದೇನೆ, ಆತ ಒಂದು ದಿನ ತನ್ನ ದಾರಿಯನ್ನು ಸರಿ ಮಾಡಿಕೊಳ್ಳಬಹುದು ಎಂದು ಭಾವಿಸುತ್ತೇನೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಎಂಟು ವರ್ಷವಾಯಿತು. ನಾನು ಈಗ ದಿನವೂ ಹಲ್ಲೆಗೊಳಗಾಗುತ್ತಿದ್ದೇನೆ” ಎಂದು ಪದೇ ಪದೇ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ. 4 ಮತ್ತು 2 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳ ತಾಯಿ ಇವರಾಗಿದ್ದಾರೆ.

ಪಂಜಾಬಿ ಭಾಷೆಯಲ್ಲಿ ಮಾತನಾಡಿರುವ ಕೌರ್‌, ‘ನನ್ನ ಪತಿ ಮತ್ತು ಅತ್ತೆ ನಾನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಬಲವಂತ ಮಾಡಿದ್ದಾರೆ. ಅಪ್ಪಾ, ನಾನು ಸಾಯುತ್ತೇನೆ, ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದಿದ್ದಾರೆ.

ಯುಪಿಯ ಬಿಜ್ನೋರ್‌ನವರಾದ ಕೌರ್, 2015ರಲ್ಲಿ ರಂಜೋಧ್‌ಬೀರ್ ಸಿಂಗ್ ಸಂಧು ಅವರನ್ನು ಮದುವೆಯಾಗಿ ಅಮೆರಿಕಕ್ಕೆ ತೆರಳಿದ್ದರು. ಬಿಜ್ನೋರ್‌ನಲ್ಲಿರುವ ಕೌರ್‌‌ ಕುಟುಂಬವು, “ಈ ಶೋಷಣೆಯು ಒಂದು ದಿನ ಕೊನೆಗೊಳ್ಳುತ್ತದೆ ಎಂದು ಭಾವಿಸಿದ್ದೆವು” ಎಂದಿದೆ. ಇದೀಗ ಕೌರ್‌ ಅವರ ಮೃತದೇಹವನ್ನು ಭಾರತಕ್ಕೆ ತರಲು ಸರ್ಕಾರದ ನೆರವನ್ನು ಕುಟುಂಬ ಕೋರಿದೆ.

ಗಂಡ ನಿಂದಿಸುತ್ತಿರುವ ಹಲವಾರು ವೀಡಿಯೊಗಳು ವೈರಲ್ ಆಗಿದ್ದು, ಅದರಲ್ಲಿ ಹೆಣ್ಣುಮಕ್ಕಳು ಕಿರುಚುವುದು ಮತ್ತು ಅಳುವುದು ಕೇಳುತ್ತದೆ. ಮತ್ತೊಂದು ವಿಡಿಯೊ ಮನೆಯೊಳಗಿನ ಕ್ಯಾಮೆರಾದಲ್ಲಿ ದಾಖಲಾಗಿದೆ. ಕ್ಷಮೆ ಕೇಳುವವರೆಗೂ ಕೌರ್‌ಗೆ ಗಂಡ ಹೊಡೆಯುತ್ತಾರೆ.

ಈ ವಿಡಿಯೊಗಳನ್ನು ಉಲ್ಲೇಖಿಸಿರುವ ಎನ್‌ಡಿಟಿವಿ, “ಇವುಗಳ ಅಧಿಕೃತತೆಯನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ. ಈ ವಿಡಿಯೊಗಳನ್ನು ಮಹಿಳೆ ತನ್ನ ಸ್ನೇಹಿತರಿಗೆ ಕಳುಹಿಸಿರಬಹುದು ಎಂದು ಊಹಿಸಲಾಗಿದೆ” ಎಂದು ವರದಿ ಮಾಡಿದೆ.

“ನನ್ನನ್ನು ಐದು ದಿನಗಳ ಕಾಲ ಟ್ರಕ್‌ನಲ್ಲಿ ಬಂಧಿಯಾಗಿಟ್ಟ. ನನ್ನ ತಂದೆ ಪೊಲೀಸ್ ಕೇಸ್ ದಾಖಲಿಸಿದ್ದಾರೆ. ಕೇಸ್‌ ವಾಪಸ್ ಪಡೆಯುವಂತೆ ಆತ ನನ್ನಲ್ಲಿ ಬೇಡಿಕೊಂಡ. ನಾನು ಆತನ ಮನವಿಯನ್ನು ಒಪ್ಪಿದೆ” ಎಂದಿರುವ ಕೌರ್‌‌, ತಾನು ಅನುಭವಿಸಿರುವ ಚಿತ್ರಹಿಂಸೆಯನ್ನು ವಿವರಿಸಿದ್ದಾರೆ.

ಯುಎಸ್‌ನಲ್ಲಿರುವ ಪತಿ ಅಥವಾ ಭಾರತದಲ್ಲಿರುವ ಆತನ ಕುಟುಂಬದ ವಿರುದ್ಧ ಯಾವುದೇ ಕಾನೂನು ಜಾರಿಯಾಗಿರುವ ಮಾಹಿತಿ ಲಭ್ಯವಾಗಿಲ್ಲ.

ಸಿಖ್ ಸಮುದಾಯದೊಳಗೆ ಲೈಂಗಿಕ ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗಾಗಿ ಕೆಲಸ ಮಾಡುತ್ತಿರುವ ದಿ ಕೌರ್ ಮೂವ್‌ಮೆಂಟ್ ಸಂಸ್ಥೆಯು ಈ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದೆ. ಘಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಬಿಜೆಪಿ ಶಾಸಕನ ಕಿರುಕುಳಕ್ಕೆ ಬೇಸತ್ತು ಸಂತ ಆತ್ಮಹತ್ಯೆ- ಆರೋಪ

ನ್ಯೂಯಾರ್ಕ್‌ನ ರಿಚ್‌ಮಂಡ್ ಹಿಲ್‌ನಲ್ಲಿರುವ ಸಂತ್ರಸ್ತೆಯ ಮನೆಯ ಹೊರಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಪಂಜಾಬ್‌ನ ಕೆಲವು ಕಾರ್ಯಕರ್ತರು ಕೌರ್‌ ಕುಟುಂಬವನ್ನು ಬಿಜ್ನೋರ್‌ನಲ್ಲಿ ಭೇಟಿಯಾಗಿದ್ದಾರೆ.

ಹಲವು ದೇಶಗಳಲ್ಲಿನ ಜನರು (ಮುಖ್ಯವಾಗಿ ಪಂಜಾಬಿ ಹಾಗೂ ಸಿಖ್‌ಗಳು) ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ‌ವ್ಯಕ್ತಪಡಿಸಿದ್ದು, #JusticeForMandeep ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

ಸಿಖ್ ಮತ್ತು ಪಂಜಾಬಿ ಸಮುದಾಯಗಳಲ್ಲಿನ ದೌರ್ಜನ್ಯಗಳ ವಿರುದ್ಧ ಕಾರ್ಯನಿರ್ವಹಿಸುವ ಯುಕೆ ಮೂಲದ ಎನ್‌ಜಿಒ ಸಿಖ್ ವುಮೆನ್ಸ್ ಏಡ್ ಹೇಳಿಕೆಯನ್ನು ನೀಡಿದ್ದು, “ಆಕೆ ಜೀವನದಲ್ಲಿ ಅನುಭವಿಸಿದ ಹಿಂಸೆಯನ್ನು ಹೇಳಿಕೊಂಡಿದ್ದಾಳೆ” ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...