Homeಮುಖಪುಟಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

ಸಾವಿಗೂ ಮುನ್ನ ವಿಡಿಯೊ ಮಾಡಿರುವ ಸಂತ್ರಸ್ತ ಮಹಿಳೆ, ತಾನು ಅನುಭವಿಸಿರುವ ಕಿರುಕುಳವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ವಿಡಿಯೊ ಮಾಡಿ ಹಂಚಿಕೊಂಡಿದ್ದಾರೆ. “ಗಂಡನ ಕಿರುಕುಳವೇ ಕಾರಣ” ಎಂದು ತಿಳಿಸಿ ಸಾವಿಗೆ ಶರಣಾಗಿದ್ದಾರೆ.

“ಹೆಣ್ಣು ಮಕ್ಕಳಿಗೆ ಮಾತ್ರ ಜನ್ಮ ನೀಡುತ್ತಿದ್ದೀಯ” ಎಂದು ಗಂಡ ವರ್ಷಗಳ ಕಾಲ ಕಿರುಕುಳ ನೀಡಿರುವುದನ್ನು ಮಹಿಳೆ ವಿಡಿಯೊದಲ್ಲಿ ಉಲ್ಲೇಖಿಸಿದ್ದಾರೆ.

30 ವರ್ಷ ವಯಸ್ಸಿನ ಮಂದೀಪ್ ಕೌರ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, “ನಾನು ಎಲ್ಲವನ್ನೂ ಸಹಿಸಿಕೊಂಡಿದ್ದೇನೆ, ಆತ ಒಂದು ದಿನ ತನ್ನ ದಾರಿಯನ್ನು ಸರಿ ಮಾಡಿಕೊಳ್ಳಬಹುದು ಎಂದು ಭಾವಿಸುತ್ತೇನೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಎಂಟು ವರ್ಷವಾಯಿತು. ನಾನು ಈಗ ದಿನವೂ ಹಲ್ಲೆಗೊಳಗಾಗುತ್ತಿದ್ದೇನೆ” ಎಂದು ಪದೇ ಪದೇ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ. 4 ಮತ್ತು 2 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳ ತಾಯಿ ಇವರಾಗಿದ್ದಾರೆ.

ಪಂಜಾಬಿ ಭಾಷೆಯಲ್ಲಿ ಮಾತನಾಡಿರುವ ಕೌರ್‌, ‘ನನ್ನ ಪತಿ ಮತ್ತು ಅತ್ತೆ ನಾನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಬಲವಂತ ಮಾಡಿದ್ದಾರೆ. ಅಪ್ಪಾ, ನಾನು ಸಾಯುತ್ತೇನೆ, ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದಿದ್ದಾರೆ.

ಯುಪಿಯ ಬಿಜ್ನೋರ್‌ನವರಾದ ಕೌರ್, 2015ರಲ್ಲಿ ರಂಜೋಧ್‌ಬೀರ್ ಸಿಂಗ್ ಸಂಧು ಅವರನ್ನು ಮದುವೆಯಾಗಿ ಅಮೆರಿಕಕ್ಕೆ ತೆರಳಿದ್ದರು. ಬಿಜ್ನೋರ್‌ನಲ್ಲಿರುವ ಕೌರ್‌‌ ಕುಟುಂಬವು, “ಈ ಶೋಷಣೆಯು ಒಂದು ದಿನ ಕೊನೆಗೊಳ್ಳುತ್ತದೆ ಎಂದು ಭಾವಿಸಿದ್ದೆವು” ಎಂದಿದೆ. ಇದೀಗ ಕೌರ್‌ ಅವರ ಮೃತದೇಹವನ್ನು ಭಾರತಕ್ಕೆ ತರಲು ಸರ್ಕಾರದ ನೆರವನ್ನು ಕುಟುಂಬ ಕೋರಿದೆ.

ಗಂಡ ನಿಂದಿಸುತ್ತಿರುವ ಹಲವಾರು ವೀಡಿಯೊಗಳು ವೈರಲ್ ಆಗಿದ್ದು, ಅದರಲ್ಲಿ ಹೆಣ್ಣುಮಕ್ಕಳು ಕಿರುಚುವುದು ಮತ್ತು ಅಳುವುದು ಕೇಳುತ್ತದೆ. ಮತ್ತೊಂದು ವಿಡಿಯೊ ಮನೆಯೊಳಗಿನ ಕ್ಯಾಮೆರಾದಲ್ಲಿ ದಾಖಲಾಗಿದೆ. ಕ್ಷಮೆ ಕೇಳುವವರೆಗೂ ಕೌರ್‌ಗೆ ಗಂಡ ಹೊಡೆಯುತ್ತಾರೆ.

ಈ ವಿಡಿಯೊಗಳನ್ನು ಉಲ್ಲೇಖಿಸಿರುವ ಎನ್‌ಡಿಟಿವಿ, “ಇವುಗಳ ಅಧಿಕೃತತೆಯನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ. ಈ ವಿಡಿಯೊಗಳನ್ನು ಮಹಿಳೆ ತನ್ನ ಸ್ನೇಹಿತರಿಗೆ ಕಳುಹಿಸಿರಬಹುದು ಎಂದು ಊಹಿಸಲಾಗಿದೆ” ಎಂದು ವರದಿ ಮಾಡಿದೆ.

“ನನ್ನನ್ನು ಐದು ದಿನಗಳ ಕಾಲ ಟ್ರಕ್‌ನಲ್ಲಿ ಬಂಧಿಯಾಗಿಟ್ಟ. ನನ್ನ ತಂದೆ ಪೊಲೀಸ್ ಕೇಸ್ ದಾಖಲಿಸಿದ್ದಾರೆ. ಕೇಸ್‌ ವಾಪಸ್ ಪಡೆಯುವಂತೆ ಆತ ನನ್ನಲ್ಲಿ ಬೇಡಿಕೊಂಡ. ನಾನು ಆತನ ಮನವಿಯನ್ನು ಒಪ್ಪಿದೆ” ಎಂದಿರುವ ಕೌರ್‌‌, ತಾನು ಅನುಭವಿಸಿರುವ ಚಿತ್ರಹಿಂಸೆಯನ್ನು ವಿವರಿಸಿದ್ದಾರೆ.

ಯುಎಸ್‌ನಲ್ಲಿರುವ ಪತಿ ಅಥವಾ ಭಾರತದಲ್ಲಿರುವ ಆತನ ಕುಟುಂಬದ ವಿರುದ್ಧ ಯಾವುದೇ ಕಾನೂನು ಜಾರಿಯಾಗಿರುವ ಮಾಹಿತಿ ಲಭ್ಯವಾಗಿಲ್ಲ.

ಸಿಖ್ ಸಮುದಾಯದೊಳಗೆ ಲೈಂಗಿಕ ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗಾಗಿ ಕೆಲಸ ಮಾಡುತ್ತಿರುವ ದಿ ಕೌರ್ ಮೂವ್‌ಮೆಂಟ್ ಸಂಸ್ಥೆಯು ಈ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದೆ. ಘಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿರಿ: ರಾಜಸ್ಥಾನ: ಬಿಜೆಪಿ ಶಾಸಕನ ಕಿರುಕುಳಕ್ಕೆ ಬೇಸತ್ತು ಸಂತ ಆತ್ಮಹತ್ಯೆ- ಆರೋಪ

ನ್ಯೂಯಾರ್ಕ್‌ನ ರಿಚ್‌ಮಂಡ್ ಹಿಲ್‌ನಲ್ಲಿರುವ ಸಂತ್ರಸ್ತೆಯ ಮನೆಯ ಹೊರಗೆ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಪಂಜಾಬ್‌ನ ಕೆಲವು ಕಾರ್ಯಕರ್ತರು ಕೌರ್‌ ಕುಟುಂಬವನ್ನು ಬಿಜ್ನೋರ್‌ನಲ್ಲಿ ಭೇಟಿಯಾಗಿದ್ದಾರೆ.

ಹಲವು ದೇಶಗಳಲ್ಲಿನ ಜನರು (ಮುಖ್ಯವಾಗಿ ಪಂಜಾಬಿ ಹಾಗೂ ಸಿಖ್‌ಗಳು) ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ‌ವ್ಯಕ್ತಪಡಿಸಿದ್ದು, #JusticeForMandeep ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

ಸಿಖ್ ಮತ್ತು ಪಂಜಾಬಿ ಸಮುದಾಯಗಳಲ್ಲಿನ ದೌರ್ಜನ್ಯಗಳ ವಿರುದ್ಧ ಕಾರ್ಯನಿರ್ವಹಿಸುವ ಯುಕೆ ಮೂಲದ ಎನ್‌ಜಿಒ ಸಿಖ್ ವುಮೆನ್ಸ್ ಏಡ್ ಹೇಳಿಕೆಯನ್ನು ನೀಡಿದ್ದು, “ಆಕೆ ಜೀವನದಲ್ಲಿ ಅನುಭವಿಸಿದ ಹಿಂಸೆಯನ್ನು ಹೇಳಿಕೊಂಡಿದ್ದಾಳೆ” ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...