Homeಕರ್ನಾಟಕಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ಪೌರಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿಯಕೂಡದು ಎಂಬ ನಿಯಮವಿದೆ. ಆದರೆ ಅದನ್ನು ಮೀರಿದ ಅಧಿಕಾರಿಗಳು ನಾರಾಯಣ ಅವರನ್ನು ಮ್ಯಾನ್‌ಹೋಲ್‌ಗೆ ಇಳಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

- Advertisement -
- Advertisement -

ಪುರಸಭೆ ಅಧಿಕಾರಿಗಳು ಕಿರುಕುಳ ನೀಡಿತ್ತಿದ್ದಾರೆ ಎಂದು ಆರೋಪಿಸಿರುವ ಪೌರ ಕಾರ್ಮಿಕರೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಮೃತರಿಗೆ ಮೂರು ಜನ ಮಕ್ಕಳಿದ್ದು, ಹೆಂಡತಿ ಕಳೆದ 5 ವರ್ಷಗಳ ಹಿಂದೆಯೇ ಮೃತಪಟ್ಟಿದ್ದರು.

ಪುರಸಭೆ ಪೌರಕಾರ್ಮಿಕರಾದ ನಾರಾಯಣ ಎಂಬುವವರು ನೇಣಿಗೆ ಶರಣಾಗಿದ್ದಾರೆ. ಇದಕ್ಕೆ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ಮತ್ತು ಜಾಸ್ಮಿನ್ ಖಾನ್ ಅವರೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಘಟನೆಯ ವಿವರ:

ಪೌರಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿಯಕೂಡದು ಎಂಬ ನಿಯಮವಿದೆ. ಆದರೆ ಅದನ್ನು ಮೀರಿದ ಅಧಿಕಾರಿಗಳು ನಾರಾಯಣ ಅವರನ್ನು ಮ್ಯಾನ್‌ಹೋಲ್‌ಗೆ ಇಳಿಸಿದ್ದರು. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ನಾರಾಯಣ ಅವರನ್ನು ಕರೆದು ಬೆದರಿಕೆ ಹಾಕಿದ್ದಾರೆ. “ತಾನು ಮ್ಯಾನ್‌ಹೋಲ್‌ಗೆ ಇಳಿಯಲು ಅಧಿಕಾರಿಗಳು ಕಾರಣವಲ್ಲ; ನಾನೇ ಸ್ವಯಿಚ್ಚೆಯಿಂದ ಇಳಿದಿದ್ದೇನೆ” ಎಂದು ಆತನಿಂದ ಹೇಳಿಕೆ ಕೊಡಿಸಿದ್ದಾರೆ.

ಈ ಘಟನೆಯ ಕುರಿತು ನಾರಾಯಣ ಅವರ ಅತ್ತೆ ಸಂಪೂರ್ಣ ವಿವರ ನೀಡಿದ್ದಾರೆ. ವೀಡಿಯೋ ನೋಡಿ.

ನಂತರ 2018 ರಲ್ಲಿ ಒಮ್ಮೆ ಆರೋಗ್ಯ ಅಧಿಕಾರಿ ಹೇಳಿದ ಕೆಲಸವನ್ನು ಮಾಡಲು ನಿರಾಕರಿಸಿದ ನಾರಾಯಣ ಅವರನ್ನು ಅಧಿಕಾರಿ ಹೊಡೆದಿದ್ದರು. ಈ ಘಟನೆಯಿಂದ ನೊಂದ ನಾರಾಯಣ ದೂರು ನೀಡುವುದಾಗಿ ತಿಳಿಸಿದ್ದಾರೆ. ಆದರೆ ಕೌನ್ಸಿಲರ್ ಸೇರಿದಂತೆ ಕೆಲವರು ಮಧ್ಯಪ್ರವೇಶಿಸಿ ಸಮಸ್ಯೆ ಇತ್ಯರ್ಥಪಡಿಸಿದ್ದಾರೆ. ಜೊತೆಗೆ ಆರೋಗ್ಯ ಆಧಿಕಾರಿ ನಾರಾಯಣ ಅವರ ಬಳಿ ಕ್ಷಮೆ ಕೇಳುವಂತೆ ಆದೇಶಿಸಿದ್ದಾರೆ. ಹಾಗಾಗಿ ಅಧಿಕಾರಿ ಕ್ಷಮೆ ಕೂಡ ಕೇಳಿದ್ದರು. ಆದರೆ ಇದನ್ನೇ ಗುರಿಯಾಗಿಸಿಕೊಂಡು ಅಂದಿನಿಂದ ಆ ಅಧಿಕಾರಿ ನಾರಾಯಣ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಆರಂಭಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಗೋಡ್ಸೆ ಬಗ್ಗೆ ಸುಳ್ಳು ಹೇಳಿ ತಪ್ಪುದಾರಿಗೆಳೆದಿದ್ದರು: ಕಾಂಗ್ರೆಸ್ ಸೇರಿದ ಹಿಂದೂ ಮಹಾಸಭಾ ಸದಸ್ಯ

ಫೆ.22 ರಂದು ನಾರಾಯಣ ಅವರಿಗೆ ಕೋವಾಕ್ಸಿನ್ ಲಸಿಕೆ ನೀಡಲಾಗಿತ್ತು. ನಂತರ ಸ್ವಲ್ಪ ಚಳಿ-ಜ್ವರ ಕಾಣಿಸಿಕೊಂಡಿದ್ದರಿಂದ ಅವರು ಕೆಲಸಕ್ಕೆ ಹೋಗಲು ಸಾಧ್ಯವಾಗಿಲ್ಲ. ಮರುದಿನ ಕೆಲಸಕ್ಕೆ ಹೋದಾಗ ಮುಖ್ಯ ಅಧಿಕಾರಗಳಿಂದ ಅನುಮತಿ ಪಡೆದು ಕೆಲಸಕ್ಕೆ ಬರಬೇಕು ಎಂದು ಮೇಸ್ತ್ರಿಗಳು ಹೇಳಿಕಳುಹಿಸಿದ್ದಾರೆ. ಆಗ ನಾರಾಯಣ ಆರೋಗ್ಯ ಅಧಿಕಾರಿಗಳ ಬಳಿ ಹೋದಾಗ, ಅಲ್ಲಿ ಅವರು “ನೀನು ಟ್ರ್ಯಾಕ್ಟರ್ ಕೆಲಸಕ್ಕೆ ಹೋಗು” ಎಂದು ಹೇಳಿದ್ದಾರೆ. ಇದು ತುಂಬಾ ಕಷ್ಟದ ಕೆಲಸವಾಗಿರುವುದರಿಂದ, ಜೊತೆಗೆ ತನಗೆ ಆರೋಗ್ಯ ಸರಿಯಿಲ್ಲದಿರುವುದರಿಂದ ಬೇರೆ ಕೆಲಸ ಕೊಡಿ ಎಂದು ನಾರಾಯಣ ಕೇಳಿದ್ದಾರೆ. ಈ ಹಿಂದೆಯೂ ನಾರಾಯಣ ಇದೇ ಕೆಲಸವನ್ನು ಮಾಡಿದ್ದಾರೆ. ಆದರೆ ಅಂದು ಆರೋಗ್ಯ ಸರಿಯಿಲ್ಲದಿದ್ದುದರಿಂದ ಈ ಕೆಲಸ ಮಾಡಲು ನಿರಾಕರಿಸಿದ್ದಾರೆ. ಆದರೆ ಕಿರುಕುಳ ನೀಡುತ್ತಿದ್ದ ಅಧಿಕಾರಿ ಈ ಅವಕಾಶವನ್ನು ಬಳಸಿಕೊಂಡು, “ಮಾಡಿದರೆ ಈ ಕೆಲಸ ಮಾಡು; ಇಲ್ಲದಿದ್ದರೆ ಮನೆಗೆ ಹೋಗು” ಎಂದು ನಿಂದಿಸಿ ಕಳುಹಿಸಿದ್ದಾರೆ.

ಇದರಿಂದ ಮನನೊಂದ ನಾರಾಯಣ, ತನ್ನ ಮನೆಗೆ ಬಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ, “ಪುರಸಭೆಯ ಮುಖ್ಯ ಅಧಿಕಾರಿ ಮತ್ತು ಆರೋಗ್ಯ ಅಧಿಕಾರಿಗಳೇ ನನ್ನ ಸಾವಿಗೆ ಕಾರಣ. ಅವರು ನನಗೆ ಕಿರುಕುಳ ನೀಡಿದ್ದಾರೆ” ಎಂದು ಬರೆದಿದ್ದಾರೆ.

ಈ ವಿಷಯ ತಿಳಿದ ಅಧಿಕಾರಿಗಳು ಇತರ ಪೌರ ಕಾರ್ಮಿಕರಿಗೂ ಬೆದರಿಕೆ ಹಾಕಿದ್ದು, ಯಾರೂ ಕೂಡ ಅಲ್ಲಿಗೆ ಹೋಗಕೂಡದು ಎಂದು ಒತ್ತಾಯಿಸಿದ್ದಾರೆ. ನಂತರ ಈ ಪ್ರಕರಣವನ್ನು ಮುಚ್ಚಿಹಾಕಲು ಪುರಸಭೆಯ ಇತರ ಅಧಿಕಾರಿಗಳು ಮತ್ತು ಕೌನ್ಸಿಲರ್‌ಗಳು ಸೇರಿ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಈ ವಿಷಯ ಸಮಾಜ ಕಲ್ಯಾಣ ಇಲಾಖೆಯ ಮಟ್ಟದಲ್ಲಿ ಚರ್ಚೆಗೆ ಬಂದು ಪುರಸಭೆಯ ಅಧಿಕಾರಿಗಳನ್ನು ಕರೆದು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಈ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕಾಂಗ್ರೆಸ್-ಡಿಎಂಕೆ ಸರ್ಕಾರ ಪತನ ಹಿನ್ನೆಲೆ – ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...