Homeಮುಖಪುಟರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ಆರೋಪಿಗಳ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

- Advertisement -
- Advertisement -

ಮತಾಂತರ ಮಾಡುತ್ತಿದ್ದಾರೆ ಎಂದು ಶಂಕಿಸಿ ಇಬ್ಬರು ಕ್ರೈಸ್ತ ಸನ್ಯಾಸಿಗಳು (ನನ್‌ಗಳು) ಮತ್ತು ಅವರ ಇಬ್ಬರು ನವಶಿಷ್ಯೆಯರಿಗೆ ABVP ಕಾರ್ಯಕರ್ತರು ಕಿರುಕುಳ ನಿಡಿರುವ ಪ್ರಕರಣ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಕ್ರೈಸ್ತ ಸನ್ಯಾಸಿಗಳನ್ನು ABVP ಕಾರ್ಯಕರ್ತರು ರೈಲಿನಿಂದ ಕೆಳಗಿಳಿಸಿ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ವ್ಯಾಪಕ ಟೀಕೆಗಳು ಕೇಳಿ ಬಂದಿವೆ.

ಹಲವಾರು ಚರ್ಚ್‌ಗಳು ಈ ಘಟನೆ ಖಂಡಿಸಿದ್ದು, ಕೇರಳ ಚುನಾವಣೆ ಸಂದರ್ಭದಲ್ಲಿ ಇದು ಗಂಭೀರ ವಿಷಯವಾದ ಪರಿಣಾಮ, ಇಂದು ಗೃಹ ಸಚಿವ ಅಮಿತ್ ಶಾ ಆರೋಪಿಗಳ ಮೇಲೆ ಕ್ರಮ ಜರುಗಿಸುವ ಹೇಳಿಕೆ ನೀಡಿದ್ದಾರೆ.

ಘಟನೆ ಮಾರ್ಚ್ 19 ರಂದೇ ನಡೆದಿದ್ದು, ಕೇರಳ ಮುಖ್ಯಮಂತ್ರಿ ಈ ಕುರಿತು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದ ನಂತರ, ಅಮಿತ್ ಶಾ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ಇಂದು ವರದಿ ಮಾಡಿದೆ.

ಯಾವುದೇ ಮತಾಂತರದ ಪ್ರಯತ್ನ ನಡೆದಿಲ್ಲ ಎಂಬುದನ್ನು ರೈಲ್ವೆ ಪೊಲೀಸರು ಖಾತ್ರಿ ಮಾಡಿಕೊಂಡ ನಂತರವಷ್ಟೇ ಆ ನಾಲ್ವರನ್ನು ಅವರಿಗೆ ಪ್ರಯಾಣದಲ್ಲಿ ಮುಂದುವರಿಯಲು ಅವಕಾಶ ನೀಡಲಾಯಿತು. ಈ ವಿಷಯದಲ್ಲಿ ABVP ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

‘ಝಾನ್ಸಿ ಸನ್ಯಾಸಿಗಳ ಕಿರುಕುಳ ಘಟನೆಯಲ್ಲಿ ಭಾಗಿಯಾದವರನ್ನು ಕಾನೂನಿನ ಮುಂದೆ ತರಲಾಗುವುದು” ಎಂದು ಶಾ ಇಂದು ಹೇಳಿದರು.

“ಇಂತಹ ಘಟನೆಗಳು ರಾಷ್ಟ್ರದ ಗೌರವ ಮತ್ತು ಅದರ ಪ್ರಾಚೀನ ಧಾರ್ಮಿಕ ಸಹಿಷ್ಣುತೆಯನ್ನು ಕೆಡಿಸುತ್ತವೆ. ಇಂತಹ ಘಟನೆಗಳಿಗೆ ಕೇಂದ್ರ ಸರ್ಕಾರದಿಂದ ಅತ್ಯಂತ ಖಂಡನೆ ಅಗತ್ಯ. ಅಡ್ಡಿಪಡಿಸುವ, ದುರ್ಬಲಗೊಳಿಸುವ ಎಲ್ಲ ಗುಂಪುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲು ನಿಮ್ಮ ಹಸ್ತಕ್ಷೇಪವನ್ನು ನಾನು ಕೋರುತ್ತೇನೆ. ಸಂವಿಧಾನವು ಖಾತರಿಪಡಿಸಿದ ವೈಯಕ್ತಿಕ ಹಕ್ಕುಗಳ ಸ್ವಾತಂತ್ರ‍್ಯ ಕಾಪಾಡಿ” ಎಂದು ಪಿಣರಾಯಿ ವಿಜಯನ್ ಬರೆದಿದ್ದರು.

ಕ್ರೈಸ್ತ ಸನ್ಯಾಸಿಗಳು ಮಾರ್ಚ್ 19 ರಂದು ಹರಿದ್ವಾರ-ಪುರಿ ಉತ್ಕಲ್ ಎಕ್ಸ್‌ಪ್ರೆಸ್‌‌ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ವಿಭಾಗದ 25 ಸೆಕೆಂಡುಗಳ ವೀಡಿಯೊದಲ್ಲಿ ಕೆಲವು ಪುರುಷರು ಸುತ್ತುವರೆದಿರುವ ಮಹಿಳೆಯರನ್ನು ತೋರಿಸಲಾಗಿದೆ, ಅವರಲ್ಲಿ ಕೆಲವರು ಪೊಲೀಸರಾಗಿ ಕಾಣಿಸಿಕೊಂಡಿದ್ದಾರೆ.

“ನಿಮ್ಮ ಲಗೇಜ್ ತೆಗೆದುಕೊಂಡು ಹೋಗಿ. ನೀವು ಹೇಳುತ್ತಿರುವುದು ಸರಿಯಾಗಿದ್ದರೆ ನಿಮ್ಮನ್ನು ಮನೆಗೆ ಕಳುಹಿಸಲಾಗುತ್ತದೆ” ಎಂದು ಒಬ್ಬ ಮನುಷ್ಯ ಹೇಳುತ್ತಾನೆ.
“ನೀವು ನೇತಾಗಿರಿಯಲ್ಲಿ ಏಕೆ ಪಾಲ್ಗೊಳ್ಳುತ್ತಿದ್ದೀರಿ” ಎಂದು ಮತ್ತೊಬ್ಬರು ಹೇಳುತ್ತಾರೆ.
“ಏನು ನೇತಾಗಿರಿ ಅರೇ. ಚಲಿಯೆ ಮೇಡಂ. ಜಲ್ದಿ ಉತಾವೋ ಸಾಮಾನ್” ಎಂದು ಮೂರನೆಯವರು ಹೇಳುತ್ತಾನೆ.

ರೈಲ್ವೆ ನಿಲ್ದಾಣದ ಇತರ ವೀಡಿಯೊಗಳು ಮತ್ತು ಛಾಯಾಚಿತ್ರಗಳು ಮಹಿಳೆಯರನ್ನು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ತೋರಿಸುತ್ತವೆ ಮತ್ತು ನಂತರ, ಝಾನ್ಸಿ ರೈಲ್ವೆ ಪೊಲೀಸ್ ಠಾಣೆ ಎಂದು ಕಾಣಿಸಿಕೊಳ್ಳುತ್ತದೆ.

“ಎಬಿವಿಪಿಯ ಕೆಲವು ಸದಸ್ಯರು ಉತ್ಸಲ್ ಎಕ್ಸ್‌ಪ್ರೆಸ್‌‌ ರೈಲಿನಲ್ಲಿ ಝಾನ್ಸಿಗೆ ರಿಷಿಕೇಶದ ತರಬೇತಿ ಶಿಬಿರದಿಂದ ಹಿಂದಿರುಗುತ್ತಿದ್ದರು. ನಾಲ್ಕು ಕ್ರಿಶ್ಚಿಯನ್ ಮಹಿಳೆಯರು ದೆಹಲಿಯ ಹಜರತ್ ನಿಜಾಮುದ್ದೀನ್‌ನಿಂದ ಒಡಿಶಾದ ರೂರ್ಕೆಲಾಕ್ಕೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರು ಸನ್ಯಾಸಿಗಳು ಮತ್ತು ಇಬ್ಬರು ತರಬೇತಿಯಲ್ಲಿದ್ದವರು. ಸನ್ಯಾಸಿಗಳು ಇತರ ಮಹಿಳೆಯರೊಂದಿಗೆ ಮಾತನಾಡುತ್ತಿರುವುದರಿಂದ ಈ ಇಬ್ಬರು ಸನ್ಯಾಸಿಗಳು ಇತರ ಇಬ್ಬರು ಮಹಿಳೆಯರನ್ನು ಮತಾಂತರಕ್ಕಾಗಿ ಕರೆದೊಯ್ಯುತ್ತಿದ್ದಾರೆ ಎಂದು ಎಬಿವಿಪಿಯ ಈ ಸದಸ್ಯರು ಶಂಕಿಸಿದ್ದಾರೆ. ಈ ಅನುಮಾನದ ಮೇಲೆ ಅವರು ರೈಲ್ವೆ ಸಂರಕ್ಷಣಾ ಪಡೆಗೆ ಮಾಹಿತಿ ನೀಡಿದರು. ಹುಟ್ಟಿನಿಂದ ನಾಲ್ವರು  ಮಹಿಳೆಯರು ಕ್ರಿಶ್ಚಿಯನ್ ಆಗಿದ್ದು ಯಾವುದೇ ಮತಾಂತರದಲ್ಲಿ ಪಾಲ್ಗೊಂಡಿಲ್ಲ. ಇದರ ನಂತರ ನಾವು ನಾಲ್ವರು ಮಹಿಳೆಯರನ್ನು ಒಡಿಶಾದ ಅವರ ಸ್ವಂತ ಸ್ಥಳಕ್ಕೆ ಕಳುಹಿಸಿದ್ದೇವೆ’ ಎಂದು ಝಾನ್ಸಿ ರೈಲ್ವೆ ಠಾಣೆಯ ಪೊಲೀಸ್ ವರಿಷ್ಠಾಧಿಕಾರಿ ನಯೀಮ್ ಖಾನ್ ಮನ್ಸೂರಿ ವಿವರವಾದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಿರುಕುಳ ಘಟನೆಯಲ್ಲಿ ಭಾಗಿಯಾಗಿದ್ದ ಎಬಿವಿಪಿ ಸದಸ್ಯರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.


ಇದನ್ನೂ ಓದಿ: ಕೇಜ್ರಿವಾಲ್‌ಗೆ ಬೆಂಬಲ: ದೆಹಲಿ ಮಸೂದೆ ಸೋಲಿಸಲು ಹಾರಿಬರುತ್ತಿರುವ ಟಿಎಂಸಿ ಸಂಸದರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....