Homeಮುಖಪುಟರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ಆರೋಪಿಗಳ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

- Advertisement -
- Advertisement -

ಮತಾಂತರ ಮಾಡುತ್ತಿದ್ದಾರೆ ಎಂದು ಶಂಕಿಸಿ ಇಬ್ಬರು ಕ್ರೈಸ್ತ ಸನ್ಯಾಸಿಗಳು (ನನ್‌ಗಳು) ಮತ್ತು ಅವರ ಇಬ್ಬರು ನವಶಿಷ್ಯೆಯರಿಗೆ ABVP ಕಾರ್ಯಕರ್ತರು ಕಿರುಕುಳ ನಿಡಿರುವ ಪ್ರಕರಣ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಕ್ರೈಸ್ತ ಸನ್ಯಾಸಿಗಳನ್ನು ABVP ಕಾರ್ಯಕರ್ತರು ರೈಲಿನಿಂದ ಕೆಳಗಿಳಿಸಿ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ವ್ಯಾಪಕ ಟೀಕೆಗಳು ಕೇಳಿ ಬಂದಿವೆ.

ಹಲವಾರು ಚರ್ಚ್‌ಗಳು ಈ ಘಟನೆ ಖಂಡಿಸಿದ್ದು, ಕೇರಳ ಚುನಾವಣೆ ಸಂದರ್ಭದಲ್ಲಿ ಇದು ಗಂಭೀರ ವಿಷಯವಾದ ಪರಿಣಾಮ, ಇಂದು ಗೃಹ ಸಚಿವ ಅಮಿತ್ ಶಾ ಆರೋಪಿಗಳ ಮೇಲೆ ಕ್ರಮ ಜರುಗಿಸುವ ಹೇಳಿಕೆ ನೀಡಿದ್ದಾರೆ.

ಘಟನೆ ಮಾರ್ಚ್ 19 ರಂದೇ ನಡೆದಿದ್ದು, ಕೇರಳ ಮುಖ್ಯಮಂತ್ರಿ ಈ ಕುರಿತು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದ ನಂತರ, ಅಮಿತ್ ಶಾ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ಇಂದು ವರದಿ ಮಾಡಿದೆ.

ಯಾವುದೇ ಮತಾಂತರದ ಪ್ರಯತ್ನ ನಡೆದಿಲ್ಲ ಎಂಬುದನ್ನು ರೈಲ್ವೆ ಪೊಲೀಸರು ಖಾತ್ರಿ ಮಾಡಿಕೊಂಡ ನಂತರವಷ್ಟೇ ಆ ನಾಲ್ವರನ್ನು ಅವರಿಗೆ ಪ್ರಯಾಣದಲ್ಲಿ ಮುಂದುವರಿಯಲು ಅವಕಾಶ ನೀಡಲಾಯಿತು. ಈ ವಿಷಯದಲ್ಲಿ ABVP ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

‘ಝಾನ್ಸಿ ಸನ್ಯಾಸಿಗಳ ಕಿರುಕುಳ ಘಟನೆಯಲ್ಲಿ ಭಾಗಿಯಾದವರನ್ನು ಕಾನೂನಿನ ಮುಂದೆ ತರಲಾಗುವುದು” ಎಂದು ಶಾ ಇಂದು ಹೇಳಿದರು.

“ಇಂತಹ ಘಟನೆಗಳು ರಾಷ್ಟ್ರದ ಗೌರವ ಮತ್ತು ಅದರ ಪ್ರಾಚೀನ ಧಾರ್ಮಿಕ ಸಹಿಷ್ಣುತೆಯನ್ನು ಕೆಡಿಸುತ್ತವೆ. ಇಂತಹ ಘಟನೆಗಳಿಗೆ ಕೇಂದ್ರ ಸರ್ಕಾರದಿಂದ ಅತ್ಯಂತ ಖಂಡನೆ ಅಗತ್ಯ. ಅಡ್ಡಿಪಡಿಸುವ, ದುರ್ಬಲಗೊಳಿಸುವ ಎಲ್ಲ ಗುಂಪುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲು ನಿಮ್ಮ ಹಸ್ತಕ್ಷೇಪವನ್ನು ನಾನು ಕೋರುತ್ತೇನೆ. ಸಂವಿಧಾನವು ಖಾತರಿಪಡಿಸಿದ ವೈಯಕ್ತಿಕ ಹಕ್ಕುಗಳ ಸ್ವಾತಂತ್ರ‍್ಯ ಕಾಪಾಡಿ” ಎಂದು ಪಿಣರಾಯಿ ವಿಜಯನ್ ಬರೆದಿದ್ದರು.

ಕ್ರೈಸ್ತ ಸನ್ಯಾಸಿಗಳು ಮಾರ್ಚ್ 19 ರಂದು ಹರಿದ್ವಾರ-ಪುರಿ ಉತ್ಕಲ್ ಎಕ್ಸ್‌ಪ್ರೆಸ್‌‌ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ವಿಭಾಗದ 25 ಸೆಕೆಂಡುಗಳ ವೀಡಿಯೊದಲ್ಲಿ ಕೆಲವು ಪುರುಷರು ಸುತ್ತುವರೆದಿರುವ ಮಹಿಳೆಯರನ್ನು ತೋರಿಸಲಾಗಿದೆ, ಅವರಲ್ಲಿ ಕೆಲವರು ಪೊಲೀಸರಾಗಿ ಕಾಣಿಸಿಕೊಂಡಿದ್ದಾರೆ.

“ನಿಮ್ಮ ಲಗೇಜ್ ತೆಗೆದುಕೊಂಡು ಹೋಗಿ. ನೀವು ಹೇಳುತ್ತಿರುವುದು ಸರಿಯಾಗಿದ್ದರೆ ನಿಮ್ಮನ್ನು ಮನೆಗೆ ಕಳುಹಿಸಲಾಗುತ್ತದೆ” ಎಂದು ಒಬ್ಬ ಮನುಷ್ಯ ಹೇಳುತ್ತಾನೆ.
“ನೀವು ನೇತಾಗಿರಿಯಲ್ಲಿ ಏಕೆ ಪಾಲ್ಗೊಳ್ಳುತ್ತಿದ್ದೀರಿ” ಎಂದು ಮತ್ತೊಬ್ಬರು ಹೇಳುತ್ತಾರೆ.
“ಏನು ನೇತಾಗಿರಿ ಅರೇ. ಚಲಿಯೆ ಮೇಡಂ. ಜಲ್ದಿ ಉತಾವೋ ಸಾಮಾನ್” ಎಂದು ಮೂರನೆಯವರು ಹೇಳುತ್ತಾನೆ.

ರೈಲ್ವೆ ನಿಲ್ದಾಣದ ಇತರ ವೀಡಿಯೊಗಳು ಮತ್ತು ಛಾಯಾಚಿತ್ರಗಳು ಮಹಿಳೆಯರನ್ನು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ತೋರಿಸುತ್ತವೆ ಮತ್ತು ನಂತರ, ಝಾನ್ಸಿ ರೈಲ್ವೆ ಪೊಲೀಸ್ ಠಾಣೆ ಎಂದು ಕಾಣಿಸಿಕೊಳ್ಳುತ್ತದೆ.

“ಎಬಿವಿಪಿಯ ಕೆಲವು ಸದಸ್ಯರು ಉತ್ಸಲ್ ಎಕ್ಸ್‌ಪ್ರೆಸ್‌‌ ರೈಲಿನಲ್ಲಿ ಝಾನ್ಸಿಗೆ ರಿಷಿಕೇಶದ ತರಬೇತಿ ಶಿಬಿರದಿಂದ ಹಿಂದಿರುಗುತ್ತಿದ್ದರು. ನಾಲ್ಕು ಕ್ರಿಶ್ಚಿಯನ್ ಮಹಿಳೆಯರು ದೆಹಲಿಯ ಹಜರತ್ ನಿಜಾಮುದ್ದೀನ್‌ನಿಂದ ಒಡಿಶಾದ ರೂರ್ಕೆಲಾಕ್ಕೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರು ಸನ್ಯಾಸಿಗಳು ಮತ್ತು ಇಬ್ಬರು ತರಬೇತಿಯಲ್ಲಿದ್ದವರು. ಸನ್ಯಾಸಿಗಳು ಇತರ ಮಹಿಳೆಯರೊಂದಿಗೆ ಮಾತನಾಡುತ್ತಿರುವುದರಿಂದ ಈ ಇಬ್ಬರು ಸನ್ಯಾಸಿಗಳು ಇತರ ಇಬ್ಬರು ಮಹಿಳೆಯರನ್ನು ಮತಾಂತರಕ್ಕಾಗಿ ಕರೆದೊಯ್ಯುತ್ತಿದ್ದಾರೆ ಎಂದು ಎಬಿವಿಪಿಯ ಈ ಸದಸ್ಯರು ಶಂಕಿಸಿದ್ದಾರೆ. ಈ ಅನುಮಾನದ ಮೇಲೆ ಅವರು ರೈಲ್ವೆ ಸಂರಕ್ಷಣಾ ಪಡೆಗೆ ಮಾಹಿತಿ ನೀಡಿದರು. ಹುಟ್ಟಿನಿಂದ ನಾಲ್ವರು  ಮಹಿಳೆಯರು ಕ್ರಿಶ್ಚಿಯನ್ ಆಗಿದ್ದು ಯಾವುದೇ ಮತಾಂತರದಲ್ಲಿ ಪಾಲ್ಗೊಂಡಿಲ್ಲ. ಇದರ ನಂತರ ನಾವು ನಾಲ್ವರು ಮಹಿಳೆಯರನ್ನು ಒಡಿಶಾದ ಅವರ ಸ್ವಂತ ಸ್ಥಳಕ್ಕೆ ಕಳುಹಿಸಿದ್ದೇವೆ’ ಎಂದು ಝಾನ್ಸಿ ರೈಲ್ವೆ ಠಾಣೆಯ ಪೊಲೀಸ್ ವರಿಷ್ಠಾಧಿಕಾರಿ ನಯೀಮ್ ಖಾನ್ ಮನ್ಸೂರಿ ವಿವರವಾದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಿರುಕುಳ ಘಟನೆಯಲ್ಲಿ ಭಾಗಿಯಾಗಿದ್ದ ಎಬಿವಿಪಿ ಸದಸ್ಯರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.


ಇದನ್ನೂ ಓದಿ: ಕೇಜ್ರಿವಾಲ್‌ಗೆ ಬೆಂಬಲ: ದೆಹಲಿ ಮಸೂದೆ ಸೋಲಿಸಲು ಹಾರಿಬರುತ್ತಿರುವ ಟಿಎಂಸಿ ಸಂಸದರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...