Homeಮುಖಪುಟರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ಆರೋಪಿಗಳ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

- Advertisement -
- Advertisement -

ಮತಾಂತರ ಮಾಡುತ್ತಿದ್ದಾರೆ ಎಂದು ಶಂಕಿಸಿ ಇಬ್ಬರು ಕ್ರೈಸ್ತ ಸನ್ಯಾಸಿಗಳು (ನನ್‌ಗಳು) ಮತ್ತು ಅವರ ಇಬ್ಬರು ನವಶಿಷ್ಯೆಯರಿಗೆ ABVP ಕಾರ್ಯಕರ್ತರು ಕಿರುಕುಳ ನಿಡಿರುವ ಪ್ರಕರಣ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಕ್ರೈಸ್ತ ಸನ್ಯಾಸಿಗಳನ್ನು ABVP ಕಾರ್ಯಕರ್ತರು ರೈಲಿನಿಂದ ಕೆಳಗಿಳಿಸಿ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ವ್ಯಾಪಕ ಟೀಕೆಗಳು ಕೇಳಿ ಬಂದಿವೆ.

ಹಲವಾರು ಚರ್ಚ್‌ಗಳು ಈ ಘಟನೆ ಖಂಡಿಸಿದ್ದು, ಕೇರಳ ಚುನಾವಣೆ ಸಂದರ್ಭದಲ್ಲಿ ಇದು ಗಂಭೀರ ವಿಷಯವಾದ ಪರಿಣಾಮ, ಇಂದು ಗೃಹ ಸಚಿವ ಅಮಿತ್ ಶಾ ಆರೋಪಿಗಳ ಮೇಲೆ ಕ್ರಮ ಜರುಗಿಸುವ ಹೇಳಿಕೆ ನೀಡಿದ್ದಾರೆ.

ಘಟನೆ ಮಾರ್ಚ್ 19 ರಂದೇ ನಡೆದಿದ್ದು, ಕೇರಳ ಮುಖ್ಯಮಂತ್ರಿ ಈ ಕುರಿತು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದ ನಂತರ, ಅಮಿತ್ ಶಾ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ಇಂದು ವರದಿ ಮಾಡಿದೆ.

ಯಾವುದೇ ಮತಾಂತರದ ಪ್ರಯತ್ನ ನಡೆದಿಲ್ಲ ಎಂಬುದನ್ನು ರೈಲ್ವೆ ಪೊಲೀಸರು ಖಾತ್ರಿ ಮಾಡಿಕೊಂಡ ನಂತರವಷ್ಟೇ ಆ ನಾಲ್ವರನ್ನು ಅವರಿಗೆ ಪ್ರಯಾಣದಲ್ಲಿ ಮುಂದುವರಿಯಲು ಅವಕಾಶ ನೀಡಲಾಯಿತು. ಈ ವಿಷಯದಲ್ಲಿ ABVP ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

‘ಝಾನ್ಸಿ ಸನ್ಯಾಸಿಗಳ ಕಿರುಕುಳ ಘಟನೆಯಲ್ಲಿ ಭಾಗಿಯಾದವರನ್ನು ಕಾನೂನಿನ ಮುಂದೆ ತರಲಾಗುವುದು” ಎಂದು ಶಾ ಇಂದು ಹೇಳಿದರು.

“ಇಂತಹ ಘಟನೆಗಳು ರಾಷ್ಟ್ರದ ಗೌರವ ಮತ್ತು ಅದರ ಪ್ರಾಚೀನ ಧಾರ್ಮಿಕ ಸಹಿಷ್ಣುತೆಯನ್ನು ಕೆಡಿಸುತ್ತವೆ. ಇಂತಹ ಘಟನೆಗಳಿಗೆ ಕೇಂದ್ರ ಸರ್ಕಾರದಿಂದ ಅತ್ಯಂತ ಖಂಡನೆ ಅಗತ್ಯ. ಅಡ್ಡಿಪಡಿಸುವ, ದುರ್ಬಲಗೊಳಿಸುವ ಎಲ್ಲ ಗುಂಪುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲು ನಿಮ್ಮ ಹಸ್ತಕ್ಷೇಪವನ್ನು ನಾನು ಕೋರುತ್ತೇನೆ. ಸಂವಿಧಾನವು ಖಾತರಿಪಡಿಸಿದ ವೈಯಕ್ತಿಕ ಹಕ್ಕುಗಳ ಸ್ವಾತಂತ್ರ‍್ಯ ಕಾಪಾಡಿ” ಎಂದು ಪಿಣರಾಯಿ ವಿಜಯನ್ ಬರೆದಿದ್ದರು.

ಕ್ರೈಸ್ತ ಸನ್ಯಾಸಿಗಳು ಮಾರ್ಚ್ 19 ರಂದು ಹರಿದ್ವಾರ-ಪುರಿ ಉತ್ಕಲ್ ಎಕ್ಸ್‌ಪ್ರೆಸ್‌‌ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ವಿಭಾಗದ 25 ಸೆಕೆಂಡುಗಳ ವೀಡಿಯೊದಲ್ಲಿ ಕೆಲವು ಪುರುಷರು ಸುತ್ತುವರೆದಿರುವ ಮಹಿಳೆಯರನ್ನು ತೋರಿಸಲಾಗಿದೆ, ಅವರಲ್ಲಿ ಕೆಲವರು ಪೊಲೀಸರಾಗಿ ಕಾಣಿಸಿಕೊಂಡಿದ್ದಾರೆ.

“ನಿಮ್ಮ ಲಗೇಜ್ ತೆಗೆದುಕೊಂಡು ಹೋಗಿ. ನೀವು ಹೇಳುತ್ತಿರುವುದು ಸರಿಯಾಗಿದ್ದರೆ ನಿಮ್ಮನ್ನು ಮನೆಗೆ ಕಳುಹಿಸಲಾಗುತ್ತದೆ” ಎಂದು ಒಬ್ಬ ಮನುಷ್ಯ ಹೇಳುತ್ತಾನೆ.
“ನೀವು ನೇತಾಗಿರಿಯಲ್ಲಿ ಏಕೆ ಪಾಲ್ಗೊಳ್ಳುತ್ತಿದ್ದೀರಿ” ಎಂದು ಮತ್ತೊಬ್ಬರು ಹೇಳುತ್ತಾರೆ.
“ಏನು ನೇತಾಗಿರಿ ಅರೇ. ಚಲಿಯೆ ಮೇಡಂ. ಜಲ್ದಿ ಉತಾವೋ ಸಾಮಾನ್” ಎಂದು ಮೂರನೆಯವರು ಹೇಳುತ್ತಾನೆ.

ರೈಲ್ವೆ ನಿಲ್ದಾಣದ ಇತರ ವೀಡಿಯೊಗಳು ಮತ್ತು ಛಾಯಾಚಿತ್ರಗಳು ಮಹಿಳೆಯರನ್ನು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ತೋರಿಸುತ್ತವೆ ಮತ್ತು ನಂತರ, ಝಾನ್ಸಿ ರೈಲ್ವೆ ಪೊಲೀಸ್ ಠಾಣೆ ಎಂದು ಕಾಣಿಸಿಕೊಳ್ಳುತ್ತದೆ.

“ಎಬಿವಿಪಿಯ ಕೆಲವು ಸದಸ್ಯರು ಉತ್ಸಲ್ ಎಕ್ಸ್‌ಪ್ರೆಸ್‌‌ ರೈಲಿನಲ್ಲಿ ಝಾನ್ಸಿಗೆ ರಿಷಿಕೇಶದ ತರಬೇತಿ ಶಿಬಿರದಿಂದ ಹಿಂದಿರುಗುತ್ತಿದ್ದರು. ನಾಲ್ಕು ಕ್ರಿಶ್ಚಿಯನ್ ಮಹಿಳೆಯರು ದೆಹಲಿಯ ಹಜರತ್ ನಿಜಾಮುದ್ದೀನ್‌ನಿಂದ ಒಡಿಶಾದ ರೂರ್ಕೆಲಾಕ್ಕೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರು ಸನ್ಯಾಸಿಗಳು ಮತ್ತು ಇಬ್ಬರು ತರಬೇತಿಯಲ್ಲಿದ್ದವರು. ಸನ್ಯಾಸಿಗಳು ಇತರ ಮಹಿಳೆಯರೊಂದಿಗೆ ಮಾತನಾಡುತ್ತಿರುವುದರಿಂದ ಈ ಇಬ್ಬರು ಸನ್ಯಾಸಿಗಳು ಇತರ ಇಬ್ಬರು ಮಹಿಳೆಯರನ್ನು ಮತಾಂತರಕ್ಕಾಗಿ ಕರೆದೊಯ್ಯುತ್ತಿದ್ದಾರೆ ಎಂದು ಎಬಿವಿಪಿಯ ಈ ಸದಸ್ಯರು ಶಂಕಿಸಿದ್ದಾರೆ. ಈ ಅನುಮಾನದ ಮೇಲೆ ಅವರು ರೈಲ್ವೆ ಸಂರಕ್ಷಣಾ ಪಡೆಗೆ ಮಾಹಿತಿ ನೀಡಿದರು. ಹುಟ್ಟಿನಿಂದ ನಾಲ್ವರು  ಮಹಿಳೆಯರು ಕ್ರಿಶ್ಚಿಯನ್ ಆಗಿದ್ದು ಯಾವುದೇ ಮತಾಂತರದಲ್ಲಿ ಪಾಲ್ಗೊಂಡಿಲ್ಲ. ಇದರ ನಂತರ ನಾವು ನಾಲ್ವರು ಮಹಿಳೆಯರನ್ನು ಒಡಿಶಾದ ಅವರ ಸ್ವಂತ ಸ್ಥಳಕ್ಕೆ ಕಳುಹಿಸಿದ್ದೇವೆ’ ಎಂದು ಝಾನ್ಸಿ ರೈಲ್ವೆ ಠಾಣೆಯ ಪೊಲೀಸ್ ವರಿಷ್ಠಾಧಿಕಾರಿ ನಯೀಮ್ ಖಾನ್ ಮನ್ಸೂರಿ ವಿವರವಾದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಿರುಕುಳ ಘಟನೆಯಲ್ಲಿ ಭಾಗಿಯಾಗಿದ್ದ ಎಬಿವಿಪಿ ಸದಸ್ಯರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.


ಇದನ್ನೂ ಓದಿ: ಕೇಜ್ರಿವಾಲ್‌ಗೆ ಬೆಂಬಲ: ದೆಹಲಿ ಮಸೂದೆ ಸೋಲಿಸಲು ಹಾರಿಬರುತ್ತಿರುವ ಟಿಎಂಸಿ ಸಂಸದರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...