Homeಮುಖಪುಟರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ಆರೋಪಿಗಳ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

- Advertisement -
- Advertisement -

ಮತಾಂತರ ಮಾಡುತ್ತಿದ್ದಾರೆ ಎಂದು ಶಂಕಿಸಿ ಇಬ್ಬರು ಕ್ರೈಸ್ತ ಸನ್ಯಾಸಿಗಳು (ನನ್‌ಗಳು) ಮತ್ತು ಅವರ ಇಬ್ಬರು ನವಶಿಷ್ಯೆಯರಿಗೆ ABVP ಕಾರ್ಯಕರ್ತರು ಕಿರುಕುಳ ನಿಡಿರುವ ಪ್ರಕರಣ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಕ್ರೈಸ್ತ ಸನ್ಯಾಸಿಗಳನ್ನು ABVP ಕಾರ್ಯಕರ್ತರು ರೈಲಿನಿಂದ ಕೆಳಗಿಳಿಸಿ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ವ್ಯಾಪಕ ಟೀಕೆಗಳು ಕೇಳಿ ಬಂದಿವೆ.

ಹಲವಾರು ಚರ್ಚ್‌ಗಳು ಈ ಘಟನೆ ಖಂಡಿಸಿದ್ದು, ಕೇರಳ ಚುನಾವಣೆ ಸಂದರ್ಭದಲ್ಲಿ ಇದು ಗಂಭೀರ ವಿಷಯವಾದ ಪರಿಣಾಮ, ಇಂದು ಗೃಹ ಸಚಿವ ಅಮಿತ್ ಶಾ ಆರೋಪಿಗಳ ಮೇಲೆ ಕ್ರಮ ಜರುಗಿಸುವ ಹೇಳಿಕೆ ನೀಡಿದ್ದಾರೆ.

ಘಟನೆ ಮಾರ್ಚ್ 19 ರಂದೇ ನಡೆದಿದ್ದು, ಕೇರಳ ಮುಖ್ಯಮಂತ್ರಿ ಈ ಕುರಿತು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದ ನಂತರ, ಅಮಿತ್ ಶಾ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ಇಂದು ವರದಿ ಮಾಡಿದೆ.

ಯಾವುದೇ ಮತಾಂತರದ ಪ್ರಯತ್ನ ನಡೆದಿಲ್ಲ ಎಂಬುದನ್ನು ರೈಲ್ವೆ ಪೊಲೀಸರು ಖಾತ್ರಿ ಮಾಡಿಕೊಂಡ ನಂತರವಷ್ಟೇ ಆ ನಾಲ್ವರನ್ನು ಅವರಿಗೆ ಪ್ರಯಾಣದಲ್ಲಿ ಮುಂದುವರಿಯಲು ಅವಕಾಶ ನೀಡಲಾಯಿತು. ಈ ವಿಷಯದಲ್ಲಿ ABVP ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

‘ಝಾನ್ಸಿ ಸನ್ಯಾಸಿಗಳ ಕಿರುಕುಳ ಘಟನೆಯಲ್ಲಿ ಭಾಗಿಯಾದವರನ್ನು ಕಾನೂನಿನ ಮುಂದೆ ತರಲಾಗುವುದು” ಎಂದು ಶಾ ಇಂದು ಹೇಳಿದರು.

“ಇಂತಹ ಘಟನೆಗಳು ರಾಷ್ಟ್ರದ ಗೌರವ ಮತ್ತು ಅದರ ಪ್ರಾಚೀನ ಧಾರ್ಮಿಕ ಸಹಿಷ್ಣುತೆಯನ್ನು ಕೆಡಿಸುತ್ತವೆ. ಇಂತಹ ಘಟನೆಗಳಿಗೆ ಕೇಂದ್ರ ಸರ್ಕಾರದಿಂದ ಅತ್ಯಂತ ಖಂಡನೆ ಅಗತ್ಯ. ಅಡ್ಡಿಪಡಿಸುವ, ದುರ್ಬಲಗೊಳಿಸುವ ಎಲ್ಲ ಗುಂಪುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲು ನಿಮ್ಮ ಹಸ್ತಕ್ಷೇಪವನ್ನು ನಾನು ಕೋರುತ್ತೇನೆ. ಸಂವಿಧಾನವು ಖಾತರಿಪಡಿಸಿದ ವೈಯಕ್ತಿಕ ಹಕ್ಕುಗಳ ಸ್ವಾತಂತ್ರ‍್ಯ ಕಾಪಾಡಿ” ಎಂದು ಪಿಣರಾಯಿ ವಿಜಯನ್ ಬರೆದಿದ್ದರು.

ಕ್ರೈಸ್ತ ಸನ್ಯಾಸಿಗಳು ಮಾರ್ಚ್ 19 ರಂದು ಹರಿದ್ವಾರ-ಪುರಿ ಉತ್ಕಲ್ ಎಕ್ಸ್‌ಪ್ರೆಸ್‌‌ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ವಿಭಾಗದ 25 ಸೆಕೆಂಡುಗಳ ವೀಡಿಯೊದಲ್ಲಿ ಕೆಲವು ಪುರುಷರು ಸುತ್ತುವರೆದಿರುವ ಮಹಿಳೆಯರನ್ನು ತೋರಿಸಲಾಗಿದೆ, ಅವರಲ್ಲಿ ಕೆಲವರು ಪೊಲೀಸರಾಗಿ ಕಾಣಿಸಿಕೊಂಡಿದ್ದಾರೆ.

“ನಿಮ್ಮ ಲಗೇಜ್ ತೆಗೆದುಕೊಂಡು ಹೋಗಿ. ನೀವು ಹೇಳುತ್ತಿರುವುದು ಸರಿಯಾಗಿದ್ದರೆ ನಿಮ್ಮನ್ನು ಮನೆಗೆ ಕಳುಹಿಸಲಾಗುತ್ತದೆ” ಎಂದು ಒಬ್ಬ ಮನುಷ್ಯ ಹೇಳುತ್ತಾನೆ.
“ನೀವು ನೇತಾಗಿರಿಯಲ್ಲಿ ಏಕೆ ಪಾಲ್ಗೊಳ್ಳುತ್ತಿದ್ದೀರಿ” ಎಂದು ಮತ್ತೊಬ್ಬರು ಹೇಳುತ್ತಾರೆ.
“ಏನು ನೇತಾಗಿರಿ ಅರೇ. ಚಲಿಯೆ ಮೇಡಂ. ಜಲ್ದಿ ಉತಾವೋ ಸಾಮಾನ್” ಎಂದು ಮೂರನೆಯವರು ಹೇಳುತ್ತಾನೆ.

ರೈಲ್ವೆ ನಿಲ್ದಾಣದ ಇತರ ವೀಡಿಯೊಗಳು ಮತ್ತು ಛಾಯಾಚಿತ್ರಗಳು ಮಹಿಳೆಯರನ್ನು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ತೋರಿಸುತ್ತವೆ ಮತ್ತು ನಂತರ, ಝಾನ್ಸಿ ರೈಲ್ವೆ ಪೊಲೀಸ್ ಠಾಣೆ ಎಂದು ಕಾಣಿಸಿಕೊಳ್ಳುತ್ತದೆ.

“ಎಬಿವಿಪಿಯ ಕೆಲವು ಸದಸ್ಯರು ಉತ್ಸಲ್ ಎಕ್ಸ್‌ಪ್ರೆಸ್‌‌ ರೈಲಿನಲ್ಲಿ ಝಾನ್ಸಿಗೆ ರಿಷಿಕೇಶದ ತರಬೇತಿ ಶಿಬಿರದಿಂದ ಹಿಂದಿರುಗುತ್ತಿದ್ದರು. ನಾಲ್ಕು ಕ್ರಿಶ್ಚಿಯನ್ ಮಹಿಳೆಯರು ದೆಹಲಿಯ ಹಜರತ್ ನಿಜಾಮುದ್ದೀನ್‌ನಿಂದ ಒಡಿಶಾದ ರೂರ್ಕೆಲಾಕ್ಕೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರು ಸನ್ಯಾಸಿಗಳು ಮತ್ತು ಇಬ್ಬರು ತರಬೇತಿಯಲ್ಲಿದ್ದವರು. ಸನ್ಯಾಸಿಗಳು ಇತರ ಮಹಿಳೆಯರೊಂದಿಗೆ ಮಾತನಾಡುತ್ತಿರುವುದರಿಂದ ಈ ಇಬ್ಬರು ಸನ್ಯಾಸಿಗಳು ಇತರ ಇಬ್ಬರು ಮಹಿಳೆಯರನ್ನು ಮತಾಂತರಕ್ಕಾಗಿ ಕರೆದೊಯ್ಯುತ್ತಿದ್ದಾರೆ ಎಂದು ಎಬಿವಿಪಿಯ ಈ ಸದಸ್ಯರು ಶಂಕಿಸಿದ್ದಾರೆ. ಈ ಅನುಮಾನದ ಮೇಲೆ ಅವರು ರೈಲ್ವೆ ಸಂರಕ್ಷಣಾ ಪಡೆಗೆ ಮಾಹಿತಿ ನೀಡಿದರು. ಹುಟ್ಟಿನಿಂದ ನಾಲ್ವರು  ಮಹಿಳೆಯರು ಕ್ರಿಶ್ಚಿಯನ್ ಆಗಿದ್ದು ಯಾವುದೇ ಮತಾಂತರದಲ್ಲಿ ಪಾಲ್ಗೊಂಡಿಲ್ಲ. ಇದರ ನಂತರ ನಾವು ನಾಲ್ವರು ಮಹಿಳೆಯರನ್ನು ಒಡಿಶಾದ ಅವರ ಸ್ವಂತ ಸ್ಥಳಕ್ಕೆ ಕಳುಹಿಸಿದ್ದೇವೆ’ ಎಂದು ಝಾನ್ಸಿ ರೈಲ್ವೆ ಠಾಣೆಯ ಪೊಲೀಸ್ ವರಿಷ್ಠಾಧಿಕಾರಿ ನಯೀಮ್ ಖಾನ್ ಮನ್ಸೂರಿ ವಿವರವಾದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಿರುಕುಳ ಘಟನೆಯಲ್ಲಿ ಭಾಗಿಯಾಗಿದ್ದ ಎಬಿವಿಪಿ ಸದಸ್ಯರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.


ಇದನ್ನೂ ಓದಿ: ಕೇಜ್ರಿವಾಲ್‌ಗೆ ಬೆಂಬಲ: ದೆಹಲಿ ಮಸೂದೆ ಸೋಲಿಸಲು ಹಾರಿಬರುತ್ತಿರುವ ಟಿಎಂಸಿ ಸಂಸದರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...