Homeಮುಖಪುಟರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ಆರೋಪಿಗಳ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

- Advertisement -
- Advertisement -

ಮತಾಂತರ ಮಾಡುತ್ತಿದ್ದಾರೆ ಎಂದು ಶಂಕಿಸಿ ಇಬ್ಬರು ಕ್ರೈಸ್ತ ಸನ್ಯಾಸಿಗಳು (ನನ್‌ಗಳು) ಮತ್ತು ಅವರ ಇಬ್ಬರು ನವಶಿಷ್ಯೆಯರಿಗೆ ABVP ಕಾರ್ಯಕರ್ತರು ಕಿರುಕುಳ ನಿಡಿರುವ ಪ್ರಕರಣ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಕ್ರೈಸ್ತ ಸನ್ಯಾಸಿಗಳನ್ನು ABVP ಕಾರ್ಯಕರ್ತರು ರೈಲಿನಿಂದ ಕೆಳಗಿಳಿಸಿ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ವ್ಯಾಪಕ ಟೀಕೆಗಳು ಕೇಳಿ ಬಂದಿವೆ.

ಹಲವಾರು ಚರ್ಚ್‌ಗಳು ಈ ಘಟನೆ ಖಂಡಿಸಿದ್ದು, ಕೇರಳ ಚುನಾವಣೆ ಸಂದರ್ಭದಲ್ಲಿ ಇದು ಗಂಭೀರ ವಿಷಯವಾದ ಪರಿಣಾಮ, ಇಂದು ಗೃಹ ಸಚಿವ ಅಮಿತ್ ಶಾ ಆರೋಪಿಗಳ ಮೇಲೆ ಕ್ರಮ ಜರುಗಿಸುವ ಹೇಳಿಕೆ ನೀಡಿದ್ದಾರೆ.

ಘಟನೆ ಮಾರ್ಚ್ 19 ರಂದೇ ನಡೆದಿದ್ದು, ಕೇರಳ ಮುಖ್ಯಮಂತ್ರಿ ಈ ಕುರಿತು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದ ನಂತರ, ಅಮಿತ್ ಶಾ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ಇಂದು ವರದಿ ಮಾಡಿದೆ.

ಯಾವುದೇ ಮತಾಂತರದ ಪ್ರಯತ್ನ ನಡೆದಿಲ್ಲ ಎಂಬುದನ್ನು ರೈಲ್ವೆ ಪೊಲೀಸರು ಖಾತ್ರಿ ಮಾಡಿಕೊಂಡ ನಂತರವಷ್ಟೇ ಆ ನಾಲ್ವರನ್ನು ಅವರಿಗೆ ಪ್ರಯಾಣದಲ್ಲಿ ಮುಂದುವರಿಯಲು ಅವಕಾಶ ನೀಡಲಾಯಿತು. ಈ ವಿಷಯದಲ್ಲಿ ABVP ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

‘ಝಾನ್ಸಿ ಸನ್ಯಾಸಿಗಳ ಕಿರುಕುಳ ಘಟನೆಯಲ್ಲಿ ಭಾಗಿಯಾದವರನ್ನು ಕಾನೂನಿನ ಮುಂದೆ ತರಲಾಗುವುದು” ಎಂದು ಶಾ ಇಂದು ಹೇಳಿದರು.

“ಇಂತಹ ಘಟನೆಗಳು ರಾಷ್ಟ್ರದ ಗೌರವ ಮತ್ತು ಅದರ ಪ್ರಾಚೀನ ಧಾರ್ಮಿಕ ಸಹಿಷ್ಣುತೆಯನ್ನು ಕೆಡಿಸುತ್ತವೆ. ಇಂತಹ ಘಟನೆಗಳಿಗೆ ಕೇಂದ್ರ ಸರ್ಕಾರದಿಂದ ಅತ್ಯಂತ ಖಂಡನೆ ಅಗತ್ಯ. ಅಡ್ಡಿಪಡಿಸುವ, ದುರ್ಬಲಗೊಳಿಸುವ ಎಲ್ಲ ಗುಂಪುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲು ನಿಮ್ಮ ಹಸ್ತಕ್ಷೇಪವನ್ನು ನಾನು ಕೋರುತ್ತೇನೆ. ಸಂವಿಧಾನವು ಖಾತರಿಪಡಿಸಿದ ವೈಯಕ್ತಿಕ ಹಕ್ಕುಗಳ ಸ್ವಾತಂತ್ರ‍್ಯ ಕಾಪಾಡಿ” ಎಂದು ಪಿಣರಾಯಿ ವಿಜಯನ್ ಬರೆದಿದ್ದರು.

ಕ್ರೈಸ್ತ ಸನ್ಯಾಸಿಗಳು ಮಾರ್ಚ್ 19 ರಂದು ಹರಿದ್ವಾರ-ಪುರಿ ಉತ್ಕಲ್ ಎಕ್ಸ್‌ಪ್ರೆಸ್‌‌ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ವಿಭಾಗದ 25 ಸೆಕೆಂಡುಗಳ ವೀಡಿಯೊದಲ್ಲಿ ಕೆಲವು ಪುರುಷರು ಸುತ್ತುವರೆದಿರುವ ಮಹಿಳೆಯರನ್ನು ತೋರಿಸಲಾಗಿದೆ, ಅವರಲ್ಲಿ ಕೆಲವರು ಪೊಲೀಸರಾಗಿ ಕಾಣಿಸಿಕೊಂಡಿದ್ದಾರೆ.

“ನಿಮ್ಮ ಲಗೇಜ್ ತೆಗೆದುಕೊಂಡು ಹೋಗಿ. ನೀವು ಹೇಳುತ್ತಿರುವುದು ಸರಿಯಾಗಿದ್ದರೆ ನಿಮ್ಮನ್ನು ಮನೆಗೆ ಕಳುಹಿಸಲಾಗುತ್ತದೆ” ಎಂದು ಒಬ್ಬ ಮನುಷ್ಯ ಹೇಳುತ್ತಾನೆ.
“ನೀವು ನೇತಾಗಿರಿಯಲ್ಲಿ ಏಕೆ ಪಾಲ್ಗೊಳ್ಳುತ್ತಿದ್ದೀರಿ” ಎಂದು ಮತ್ತೊಬ್ಬರು ಹೇಳುತ್ತಾರೆ.
“ಏನು ನೇತಾಗಿರಿ ಅರೇ. ಚಲಿಯೆ ಮೇಡಂ. ಜಲ್ದಿ ಉತಾವೋ ಸಾಮಾನ್” ಎಂದು ಮೂರನೆಯವರು ಹೇಳುತ್ತಾನೆ.

ರೈಲ್ವೆ ನಿಲ್ದಾಣದ ಇತರ ವೀಡಿಯೊಗಳು ಮತ್ತು ಛಾಯಾಚಿತ್ರಗಳು ಮಹಿಳೆಯರನ್ನು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ತೋರಿಸುತ್ತವೆ ಮತ್ತು ನಂತರ, ಝಾನ್ಸಿ ರೈಲ್ವೆ ಪೊಲೀಸ್ ಠಾಣೆ ಎಂದು ಕಾಣಿಸಿಕೊಳ್ಳುತ್ತದೆ.

“ಎಬಿವಿಪಿಯ ಕೆಲವು ಸದಸ್ಯರು ಉತ್ಸಲ್ ಎಕ್ಸ್‌ಪ್ರೆಸ್‌‌ ರೈಲಿನಲ್ಲಿ ಝಾನ್ಸಿಗೆ ರಿಷಿಕೇಶದ ತರಬೇತಿ ಶಿಬಿರದಿಂದ ಹಿಂದಿರುಗುತ್ತಿದ್ದರು. ನಾಲ್ಕು ಕ್ರಿಶ್ಚಿಯನ್ ಮಹಿಳೆಯರು ದೆಹಲಿಯ ಹಜರತ್ ನಿಜಾಮುದ್ದೀನ್‌ನಿಂದ ಒಡಿಶಾದ ರೂರ್ಕೆಲಾಕ್ಕೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರು ಸನ್ಯಾಸಿಗಳು ಮತ್ತು ಇಬ್ಬರು ತರಬೇತಿಯಲ್ಲಿದ್ದವರು. ಸನ್ಯಾಸಿಗಳು ಇತರ ಮಹಿಳೆಯರೊಂದಿಗೆ ಮಾತನಾಡುತ್ತಿರುವುದರಿಂದ ಈ ಇಬ್ಬರು ಸನ್ಯಾಸಿಗಳು ಇತರ ಇಬ್ಬರು ಮಹಿಳೆಯರನ್ನು ಮತಾಂತರಕ್ಕಾಗಿ ಕರೆದೊಯ್ಯುತ್ತಿದ್ದಾರೆ ಎಂದು ಎಬಿವಿಪಿಯ ಈ ಸದಸ್ಯರು ಶಂಕಿಸಿದ್ದಾರೆ. ಈ ಅನುಮಾನದ ಮೇಲೆ ಅವರು ರೈಲ್ವೆ ಸಂರಕ್ಷಣಾ ಪಡೆಗೆ ಮಾಹಿತಿ ನೀಡಿದರು. ಹುಟ್ಟಿನಿಂದ ನಾಲ್ವರು  ಮಹಿಳೆಯರು ಕ್ರಿಶ್ಚಿಯನ್ ಆಗಿದ್ದು ಯಾವುದೇ ಮತಾಂತರದಲ್ಲಿ ಪಾಲ್ಗೊಂಡಿಲ್ಲ. ಇದರ ನಂತರ ನಾವು ನಾಲ್ವರು ಮಹಿಳೆಯರನ್ನು ಒಡಿಶಾದ ಅವರ ಸ್ವಂತ ಸ್ಥಳಕ್ಕೆ ಕಳುಹಿಸಿದ್ದೇವೆ’ ಎಂದು ಝಾನ್ಸಿ ರೈಲ್ವೆ ಠಾಣೆಯ ಪೊಲೀಸ್ ವರಿಷ್ಠಾಧಿಕಾರಿ ನಯೀಮ್ ಖಾನ್ ಮನ್ಸೂರಿ ವಿವರವಾದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಿರುಕುಳ ಘಟನೆಯಲ್ಲಿ ಭಾಗಿಯಾಗಿದ್ದ ಎಬಿವಿಪಿ ಸದಸ್ಯರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.


ಇದನ್ನೂ ಓದಿ: ಕೇಜ್ರಿವಾಲ್‌ಗೆ ಬೆಂಬಲ: ದೆಹಲಿ ಮಸೂದೆ ಸೋಲಿಸಲು ಹಾರಿಬರುತ್ತಿರುವ ಟಿಎಂಸಿ ಸಂಸದರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...