Homeಮುಖಪುಟರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ರೈಲಿನಲ್ಲಿ ABVP ಕಾರ್ಯಕರ್ತರಿಂದ ಕ್ರೈಸ್ತ ಸನ್ಯಾಸಿನಿಗಳಿಗೆ ಕಿರುಕುಳ: ವ್ಯಾಪಕ ಟೀಕೆ

ಆರೋಪಿಗಳ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

- Advertisement -
- Advertisement -

ಮತಾಂತರ ಮಾಡುತ್ತಿದ್ದಾರೆ ಎಂದು ಶಂಕಿಸಿ ಇಬ್ಬರು ಕ್ರೈಸ್ತ ಸನ್ಯಾಸಿಗಳು (ನನ್‌ಗಳು) ಮತ್ತು ಅವರ ಇಬ್ಬರು ನವಶಿಷ್ಯೆಯರಿಗೆ ABVP ಕಾರ್ಯಕರ್ತರು ಕಿರುಕುಳ ನಿಡಿರುವ ಪ್ರಕರಣ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಕ್ರೈಸ್ತ ಸನ್ಯಾಸಿಗಳನ್ನು ABVP ಕಾರ್ಯಕರ್ತರು ರೈಲಿನಿಂದ ಕೆಳಗಿಳಿಸಿ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ವ್ಯಾಪಕ ಟೀಕೆಗಳು ಕೇಳಿ ಬಂದಿವೆ.

ಹಲವಾರು ಚರ್ಚ್‌ಗಳು ಈ ಘಟನೆ ಖಂಡಿಸಿದ್ದು, ಕೇರಳ ಚುನಾವಣೆ ಸಂದರ್ಭದಲ್ಲಿ ಇದು ಗಂಭೀರ ವಿಷಯವಾದ ಪರಿಣಾಮ, ಇಂದು ಗೃಹ ಸಚಿವ ಅಮಿತ್ ಶಾ ಆರೋಪಿಗಳ ಮೇಲೆ ಕ್ರಮ ಜರುಗಿಸುವ ಹೇಳಿಕೆ ನೀಡಿದ್ದಾರೆ.

ಘಟನೆ ಮಾರ್ಚ್ 19 ರಂದೇ ನಡೆದಿದ್ದು, ಕೇರಳ ಮುಖ್ಯಮಂತ್ರಿ ಈ ಕುರಿತು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದ ನಂತರ, ಅಮಿತ್ ಶಾ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ಇಂದು ವರದಿ ಮಾಡಿದೆ.

ಯಾವುದೇ ಮತಾಂತರದ ಪ್ರಯತ್ನ ನಡೆದಿಲ್ಲ ಎಂಬುದನ್ನು ರೈಲ್ವೆ ಪೊಲೀಸರು ಖಾತ್ರಿ ಮಾಡಿಕೊಂಡ ನಂತರವಷ್ಟೇ ಆ ನಾಲ್ವರನ್ನು ಅವರಿಗೆ ಪ್ರಯಾಣದಲ್ಲಿ ಮುಂದುವರಿಯಲು ಅವಕಾಶ ನೀಡಲಾಯಿತು. ಈ ವಿಷಯದಲ್ಲಿ ABVP ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

‘ಝಾನ್ಸಿ ಸನ್ಯಾಸಿಗಳ ಕಿರುಕುಳ ಘಟನೆಯಲ್ಲಿ ಭಾಗಿಯಾದವರನ್ನು ಕಾನೂನಿನ ಮುಂದೆ ತರಲಾಗುವುದು” ಎಂದು ಶಾ ಇಂದು ಹೇಳಿದರು.

“ಇಂತಹ ಘಟನೆಗಳು ರಾಷ್ಟ್ರದ ಗೌರವ ಮತ್ತು ಅದರ ಪ್ರಾಚೀನ ಧಾರ್ಮಿಕ ಸಹಿಷ್ಣುತೆಯನ್ನು ಕೆಡಿಸುತ್ತವೆ. ಇಂತಹ ಘಟನೆಗಳಿಗೆ ಕೇಂದ್ರ ಸರ್ಕಾರದಿಂದ ಅತ್ಯಂತ ಖಂಡನೆ ಅಗತ್ಯ. ಅಡ್ಡಿಪಡಿಸುವ, ದುರ್ಬಲಗೊಳಿಸುವ ಎಲ್ಲ ಗುಂಪುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲು ನಿಮ್ಮ ಹಸ್ತಕ್ಷೇಪವನ್ನು ನಾನು ಕೋರುತ್ತೇನೆ. ಸಂವಿಧಾನವು ಖಾತರಿಪಡಿಸಿದ ವೈಯಕ್ತಿಕ ಹಕ್ಕುಗಳ ಸ್ವಾತಂತ್ರ‍್ಯ ಕಾಪಾಡಿ” ಎಂದು ಪಿಣರಾಯಿ ವಿಜಯನ್ ಬರೆದಿದ್ದರು.

ಕ್ರೈಸ್ತ ಸನ್ಯಾಸಿಗಳು ಮಾರ್ಚ್ 19 ರಂದು ಹರಿದ್ವಾರ-ಪುರಿ ಉತ್ಕಲ್ ಎಕ್ಸ್‌ಪ್ರೆಸ್‌‌ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ವಿಭಾಗದ 25 ಸೆಕೆಂಡುಗಳ ವೀಡಿಯೊದಲ್ಲಿ ಕೆಲವು ಪುರುಷರು ಸುತ್ತುವರೆದಿರುವ ಮಹಿಳೆಯರನ್ನು ತೋರಿಸಲಾಗಿದೆ, ಅವರಲ್ಲಿ ಕೆಲವರು ಪೊಲೀಸರಾಗಿ ಕಾಣಿಸಿಕೊಂಡಿದ್ದಾರೆ.

“ನಿಮ್ಮ ಲಗೇಜ್ ತೆಗೆದುಕೊಂಡು ಹೋಗಿ. ನೀವು ಹೇಳುತ್ತಿರುವುದು ಸರಿಯಾಗಿದ್ದರೆ ನಿಮ್ಮನ್ನು ಮನೆಗೆ ಕಳುಹಿಸಲಾಗುತ್ತದೆ” ಎಂದು ಒಬ್ಬ ಮನುಷ್ಯ ಹೇಳುತ್ತಾನೆ.
“ನೀವು ನೇತಾಗಿರಿಯಲ್ಲಿ ಏಕೆ ಪಾಲ್ಗೊಳ್ಳುತ್ತಿದ್ದೀರಿ” ಎಂದು ಮತ್ತೊಬ್ಬರು ಹೇಳುತ್ತಾರೆ.
“ಏನು ನೇತಾಗಿರಿ ಅರೇ. ಚಲಿಯೆ ಮೇಡಂ. ಜಲ್ದಿ ಉತಾವೋ ಸಾಮಾನ್” ಎಂದು ಮೂರನೆಯವರು ಹೇಳುತ್ತಾನೆ.

ರೈಲ್ವೆ ನಿಲ್ದಾಣದ ಇತರ ವೀಡಿಯೊಗಳು ಮತ್ತು ಛಾಯಾಚಿತ್ರಗಳು ಮಹಿಳೆಯರನ್ನು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ತೋರಿಸುತ್ತವೆ ಮತ್ತು ನಂತರ, ಝಾನ್ಸಿ ರೈಲ್ವೆ ಪೊಲೀಸ್ ಠಾಣೆ ಎಂದು ಕಾಣಿಸಿಕೊಳ್ಳುತ್ತದೆ.

“ಎಬಿವಿಪಿಯ ಕೆಲವು ಸದಸ್ಯರು ಉತ್ಸಲ್ ಎಕ್ಸ್‌ಪ್ರೆಸ್‌‌ ರೈಲಿನಲ್ಲಿ ಝಾನ್ಸಿಗೆ ರಿಷಿಕೇಶದ ತರಬೇತಿ ಶಿಬಿರದಿಂದ ಹಿಂದಿರುಗುತ್ತಿದ್ದರು. ನಾಲ್ಕು ಕ್ರಿಶ್ಚಿಯನ್ ಮಹಿಳೆಯರು ದೆಹಲಿಯ ಹಜರತ್ ನಿಜಾಮುದ್ದೀನ್‌ನಿಂದ ಒಡಿಶಾದ ರೂರ್ಕೆಲಾಕ್ಕೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರು ಸನ್ಯಾಸಿಗಳು ಮತ್ತು ಇಬ್ಬರು ತರಬೇತಿಯಲ್ಲಿದ್ದವರು. ಸನ್ಯಾಸಿಗಳು ಇತರ ಮಹಿಳೆಯರೊಂದಿಗೆ ಮಾತನಾಡುತ್ತಿರುವುದರಿಂದ ಈ ಇಬ್ಬರು ಸನ್ಯಾಸಿಗಳು ಇತರ ಇಬ್ಬರು ಮಹಿಳೆಯರನ್ನು ಮತಾಂತರಕ್ಕಾಗಿ ಕರೆದೊಯ್ಯುತ್ತಿದ್ದಾರೆ ಎಂದು ಎಬಿವಿಪಿಯ ಈ ಸದಸ್ಯರು ಶಂಕಿಸಿದ್ದಾರೆ. ಈ ಅನುಮಾನದ ಮೇಲೆ ಅವರು ರೈಲ್ವೆ ಸಂರಕ್ಷಣಾ ಪಡೆಗೆ ಮಾಹಿತಿ ನೀಡಿದರು. ಹುಟ್ಟಿನಿಂದ ನಾಲ್ವರು  ಮಹಿಳೆಯರು ಕ್ರಿಶ್ಚಿಯನ್ ಆಗಿದ್ದು ಯಾವುದೇ ಮತಾಂತರದಲ್ಲಿ ಪಾಲ್ಗೊಂಡಿಲ್ಲ. ಇದರ ನಂತರ ನಾವು ನಾಲ್ವರು ಮಹಿಳೆಯರನ್ನು ಒಡಿಶಾದ ಅವರ ಸ್ವಂತ ಸ್ಥಳಕ್ಕೆ ಕಳುಹಿಸಿದ್ದೇವೆ’ ಎಂದು ಝಾನ್ಸಿ ರೈಲ್ವೆ ಠಾಣೆಯ ಪೊಲೀಸ್ ವರಿಷ್ಠಾಧಿಕಾರಿ ನಯೀಮ್ ಖಾನ್ ಮನ್ಸೂರಿ ವಿವರವಾದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಿರುಕುಳ ಘಟನೆಯಲ್ಲಿ ಭಾಗಿಯಾಗಿದ್ದ ಎಬಿವಿಪಿ ಸದಸ್ಯರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.


ಇದನ್ನೂ ಓದಿ: ಕೇಜ್ರಿವಾಲ್‌ಗೆ ಬೆಂಬಲ: ದೆಹಲಿ ಮಸೂದೆ ಸೋಲಿಸಲು ಹಾರಿಬರುತ್ತಿರುವ ಟಿಎಂಸಿ ಸಂಸದರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...