Homeಅಂಕಣಗಳುಹೆಣ್ಮಕ್ಕಳ ಮೂಕವೇದನೆ ಕೊನೆಯಾಗಲಿ

ಹೆಣ್ಮಕ್ಕಳ ಮೂಕವೇದನೆ ಕೊನೆಯಾಗಲಿ

- Advertisement -
- Advertisement -
ರಾಜಕುಮಾರನಾಗಿದ್ದ ಸಿದ್ಧಾರ್ಥ, ಬುದ್ಧನಾದ. ಬುದ್ಧನಾದ ಮೇಲೆ ಭಾರತದ ಎಲ್ಲ ಕಡೆ ಪ್ರವಾಸಕ್ಕೆ ಹೊರಟ. ಹಾಗೆ ಹೊರಟವನು ಒಮ್ಮೆ ತನ್ನ ಊರಾದ ಕಪಿಲವಸ್ತುವಿಗೂ ಭೇಟಿ ನೀಡಿದ. ಕಪಿಲವಸ್ತುವಿನಲ್ಲಿ ಮೊಕ್ಕಾಂ ಹೂಡಿದಾಗ, ಬುದ್ಧನ ಸೇವೆಯಲ್ಲಿದ್ದ ಸಿದ್ದಾರ್ಥನ ಸೋದರಳಿಯ ಆನಂದ ಬುದ್ಧನ ಪೂರ್ವಾಶ್ರಮದ ಮಡದಿ ಯಶೋಧರಾ ಅವರನ್ನು ಕಾಣಲು ಅವಳ ಅರಮನೆಗೆ ಬಂದ. ಆಕೆ ಪೂರ್ವಾಶ್ರಮದ ಗಂಡ ಸಿದ್ಧಾರ್ಥನ ಯೋಗಕ್ಷೆÃಮ ವಿಚಾರಿಸಿದಳು. ಬುದ್ಧನ ಕೀರ್ತಿ ಭಾರತದಲ್ಲಿ ಪಸರಿಸುತ್ತಿರುವುದನ್ನು ಕೇಳಿ ತಿಳಿದು ಸಂಪ್ರಿÃತಳಾದಳು. ಪೂರ್ವಾಶ್ರಮದ ಮಡದಿಯಾದ ಯಶೋಧರೆ ತನ್ನ ಮನೆಗೆ ಆತಿಥ್ಯ ಸ್ವಿÃಕರಿಸಲು ಬುದ್ಧನನ್ನು ಆನಂದನ ಮೂಲಕ ಆಹ್ವಾನಿಸಿದಳು. ಹಿಂತಿರುಗಿ ಬಂದ ಆನಂದ ಯಶೋಧರೆಯ ಆಹ್ವಾನದ ಬಗೆಗೆ ಬುದ್ದನಿಗೆ ತಿಳಿಸಿದ. ಮನೆ ತೊರೆದು ಸನ್ಯಾಸ ಸ್ವಿÃಕರಿಸಿದವರು ತನ್ನ ಪೂರ್ವಾಶ್ರಮದ ಮಡದಿ-ಮಕ್ಕಳನ್ನು ನೋಡಲು ಹೋಗುವುದು ಆ ದಿನಗಳಲ್ಲಿ ನಿಷೇಧಿಸಲ್ಪಟ್ಟಿತ್ತು. ಬುದ್ದ ಈ ನಿಯಮವನ್ನು ಮೀರಲು ತೀರ್ಮಾನಿಸಿದ. ಯಶೋಧರೆಯ ಕೋರಿಕೆಯನ್ನು ಮನ್ನಿಸಿ ಆಕೆಯ ಅರಮನೆಗೆ ಹೊರಟ.
ಯಶೋಧರೆ ಬುದ್ದನನ್ನು ಸಡಗರದಿಂದ, ಭಕ್ತಿಯಿಂದ ಸ್ವಾಗತಿಸಿದಳು. ತನಗೂ ದೀಕ್ಷೆ ನೀಡಬೇಕೆಂದು ವಿನಂತಿಸಿಕೊಂಡಳು. ಹೆಂಗಸರಿಗೆ ದೀಕ್ಷೆ ನೀಡಿದರೆ ನನ್ನ ಧರ್ಮಕ್ಕೆ ಅರ್ಧಾಯಸ್ಸು; ಆದ್ದರಿಂದ ದೀಕ್ಷೆ ಕೊಡಲೊಲ್ಲೆ ಎಂದರು ಬುದ್ದ. ಯಶೋಧರೆ ಕೆರಳಿದ ಸಿಂಹಿಣಿಯಂತಾದಳು. ಬುದ್ಧನಿಗೆ ಕಠಿಣ ಪ್ರಶ್ನೆಗಳನ್ನು ಕೇಳಿದಳು. ಪುರುಷರಿಗೆ ಮಾತ್ರ ಮನ್ನಣೆ ನೀಡುವ ಈ ನಿಮ್ಮ ಧರ್ಮದಲ್ಲಿ ಪರಿಪೂರ್ಣತೆಯಿಲ್ಲ; ಅದು ಮುಕ್ಕಾದ ಧರ್ಮ. ಈ ನಿಮ್ಮ ನಿಲುವನ್ನು ಒಪ್ಪಲಾಗುವುದಿಲ್ಲ’ ಎಂದಳು. ಬುದ್ಧ ಜಿಜ್ಞಾಸೆಗೆ ತೊಡಗಿದ. ಈ ಚರ್ಚೆಯ ಪರಿಣಾಮವಾಗಿ, ಯಶೋಧರೆಯ ಅಪೇಕ್ಷೆಯಂತೆ ಬುದ್ಧ ಆಕೆಗೆ ಧರ್ಮ ದೀಕ್ಷೆ ನೀಡಿದ.

ಬುದ್ದ ಹೆಂಗಸರಿಗೂ ಧರ್ಮ ದೀಕ್ಷೆ ನೀಡಿದ್ದರಿಂದ ಬೌದ್ಧ ಧರ್ಮಕ್ಕೆ ಅರ್ಧಾಯಸ್ಸು ಆದಂತೆ ಕಾಣುತ್ತಿಲ್ಲ. ಹಲವು ದೇಶಗಳಿಗೆ ವಿಸ್ತರಿಸಿ ಗಟ್ಟಿಯಾಗೇ ಬೇರುಬಿಟ್ಟಂತೆ ಕಾಣುತ್ತಿದೆ. ಹಾಗೆಯೇ ಮಹಿಳೆಯರಿಗೂ ಧರ್ಮ ದೀಕ್ಷೆ ಕೊಡುವ ಬುದ್ಧನ ನೀತಿ ವ್ಯಾಪಕ ಪರಿಣಾಮ ಬೀರಿದ್ದಂತೂ ನಿಜ. ಕಾಲದಿಂದ ಕಾಲಕ್ಕೆ ಈ ಸಾಮಾಜಿಕ ಜಾಗೃತಿ ವಿಸ್ತರಿಸುತ್ತಾ ಸಾಗಿದೆ. ಈಗಿನ ಕಾಲದಲ್ಲಿ ಸಿನಿಮಾ, ನಾಟಕ ಕಂಪನಿಗಳಲ್ಲಿ, ಸರ್ಕಾರದಲ್ಲಿ, ಖಾಸಗಿ ಕಂಪನಿಗಳಲ್ಲಿ, ಮಿಲ್ಲುಗಳಲ್ಲಿ, ಐಟಿ ಬಿಟಿಗಳಲ್ಲಿ, ಖಾಸಗಿ ಮತ್ತು ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಪುರುಷರು ಮತ್ತು ಸ್ತಿçÃಯರು ಒಟ್ಟಿಗೆ ಕೆಲಸ ಮಾಡುವ ಅವಕಾಶಗಳು ಹೆಚ್ಚುತ್ತಾ ಸಾಗಿವೆ. ಈ ಅವಕಾಶಗಳು ಹೆಚ್ಚಿದಂತೆಲ್ಲಾ ಸ್ತಿçÃಯರ ಮೇಲಿನ ದೌರ್ಜನ್ಯ, ಲಂಪಟತನ ಮಿತಿಮೀರಿ ಬೆಳೆದಿರುವುದಂತೂ ನಿಜ. ಇದಕ್ಕೆ ಮೊದಲು ನಮ್ಮ ದೇಶದಲ್ಲಿ ಇದೆಲ್ಲ ಇರಲಿಲ್ಲವೇ? ಇತ್ತು, ಸೀಮಿತವಾಗಿತ್ತು.

ನಮ್ಮ ಹೆಣ್ಣು ಮಕ್ಕಳು ಕಳೆದ 50 ವರ್ಷಗಳಿಂದ ಈ ಬಗೆಯ ದೌರ್ಜನ್ಯವನ್ನು ಮೌನವಾಗಿ ಅನುಭವಿಸಿಕೊಂಡು ಬಂದಿದ್ದಾರೆ. ಮುಚ್ಚುಮರೆಯಲ್ಲಿ ನಡೆಯುತ್ತಿದ್ದ ಈ ಬಗೆಯ ದೌರ್ಜನ್ಯ ಈಗ ಮಿತಿಮೀರಿದೆಯಾಗಿ, ಹೆಣ್ಣು ಮಕ್ಕಳು ಒಬ್ಬೊಬ್ಬರೇ ತಮಗಾದ ಅಪಮಾನವನ್ನು ಬಾಯ್ತೆರೆದು ಹೇಳಿಕೊಳ್ಳುತ್ತಿದ್ದಾರೆ. ಹೇಳಿಕೊಂಡರೆ ತಮ್ಮ ಭವಿಷ್ಯ ಹಾಳಾಗುವುದೆಂದು ಭಾವಿಸಿ ಬಾಯಿಯನ್ನು ಬಿಗಿಯಾಗಿ ಹಿಡಿದುಕೊಂಡು ಮೂಕವೇದನೆ ಅನುಭವಿಸುತ್ತಿರುವ ಸಹಸ್ರಾರು ಹೆಣ್ಣು ಮಕ್ಕಳು ನಮ್ಮ ನಡುವೆಯೇ ಇದ್ದಾರೆ. ಬಹಳ ಕಾಲದಿಂದ ನಡೆದು ಬಂದಿರುವ ಕಿರುಕುಳ ತಾಳಲಾದರೆ, ಆಕ್ರೊÃಶಗೊಂಡು ಕೆಂಡಾಮಂಡಲರಾದ ಅಸಹಾಯಕ ಸ್ತಿçÃಯರು ಈಗ ಒಬ್ಬೊಬ್ಬರಾಗಿ ಭುಗಿಲೆದ್ದು ತಮ್ಮ ಆಕ್ರೊÃಶ ವ್ಯಕ್ತ ಪಡಿಸುತ್ತಿದ್ದಾರೆ. ಈ ಪ್ರತಿಕ್ರಿಯೆ ಸಹಜವಾದುದು. ನೊಂದ ಹೆಣ್ಣುಮಕ್ಕಳ ಪರವಾಗಿ ದನಿಯೆತ್ತುವುದು ಸಮಾಜದ ಸ್ವಾಸ್ಥö್ಯ ಬಯಸುವ ಎಲ್ಲರ ಕರ್ತವ್ಯ.
ಈ ಸಂದರ್ಭದಲ್ಲಿ ಸರ್ಕಾರಗಳು, ನ್ಯಾಯಾಲಯಗಳು ಕಾನೂನಿನ ಮಿತಿಯಲ್ಲಿ ತಾನೇನು ಕ್ರಮಗಳನ್ನು ಕೈಗೊಳ್ಳಬೇಕೋ ಅದನ್ನು ತೆಗೆದುಕೊಂಡಿವೆ ಎಂಬುದು ನಿಜ. ಆದರೆ ಈ ಸಾಮಾಜಿಕ ಪಿಡುಗನ್ನು ತಡೆಗಟ್ಟಲು ಇದಿಷ್ಟೆÃ ಸಾಕೆ? ಖಂಡಿತ ಸಾಲದು.
ಈ ಸಾಮಾಜಿಕ ಪಿಡುಗಿಗೆ ನಮ್ಮ ಸಮಾಜದ ಚಾರಿತ್ರö್ಯದ ಕೊರತೆ ಪ್ರಮುಖ ಕಾರಣ. ಚಾರಿತ್ರö್ಯವಿಲ್ಲದ ಜನ ಮತ್ತು ಚಾರಿತ್ರö್ಯವಿಲ್ಲದ ದೇಶಕ್ಕೆ ಭವಿಷ್ಯವಿಲ್ಲ. ಆದ್ದರಿಂದ ವಿದ್ಯೆ ಕಲಿಸುವಾಗ ಚಾರಿತ್ರö್ಯ ವೃದ್ಧಿಯ ಶಿಕ್ಷಣವನ್ನು ಜೊತೆಜೊತೆಗೆ ನೀಡಬೇಕು. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವ ಶಿಕ್ಷಣವನ್ನು ನಾವು ಕೊಡುತ್ತಿಲ್ಲ. ಹೀಗಾಗಿ ಅನೈತಿಕತೆ, ದ್ವೆÃಷ ಭಾವನೆ, ಕಾಮಾತುರತೆ, ದುರಾಸೆ, ಅಹಂಕಾರ, ಸೇಡಿನ ಮನೋಭಾವ ಇವೆಲ್ಲವೂ ಏಕಕಾಲದಲ್ಲಿ ನಮ್ಮ ಸಮಾಜವನ್ನು ಕಾಡುತ್ತಿವೆ.
* ಪ್ರಾಥಮಿಕ ಶಾಲೆಗಳಲ್ಲಿ ಕೋ-ಎಜುಕೇಷನ್ ಇರಬೇಕು, ಇಲ್ಲಿ ಶಿಕ್ಷಕರು ಎಲ್ಲರೂ ಮಹಿಳೆಯರೇ ಇದ್ದರೆ ಚೆನ್ನ. ಹಾಗೆ ಅಲ್ಲಿಂದ ಮುಂದಕ್ಕೆ ತಕ್ಷಣದ ಕ್ರಮವಾಗಿ, ಹುಡುಗರಿಗೆ ಮತ್ತು ಹುಡುಗಿಯರಿಗೆ ಪ್ರತ್ಯೆÃಕ ಶಾಲೆಗಳನ್ನು ಮಾಡುವುದು ಒಳ್ಳೆಯದು. ಹೆಣ್ಣುಮಕ್ಕಳ ಶಾಲೆಗಳಲ್ಲಿ ಪೂರ್ತಿ ಮಹಿಳಾ ಶಿಕ್ಷಕಿಯರೇ ಇರುವಂತೆಯೂ ಹಾಗೂ ಗಂಡುಮಕ್ಕಳ ಶಾಲೆಗಳಲ್ಲಿ ಪುರುಷ ಶಿಕ್ಷಕರು ಇರುವಂತೆಯೂ ವ್ಯವಸ್ಥೆ ಮಾಡಬೇಕು. ಇದು ಶಾಶ್ವತ ಪರಿಹಾರವಲ್ಲವಾದರೂ ಬಿಗಡಾಯಿಸಿರುವ ಇಂದಿನ ಪರಿಸ್ಥಿತಿಗೆ ಒಂದು ತಾತ್ಕಾಲಿಕ ಉಪಕ್ರಮ ಆಗಬಹುದು.
* ಹೆಂಗಸರು ಗಂಡಸರು ಕೂಡಿ ಕೆಲಸ ಮಾಡುವ ಎಲ್ಲೆಡೆಯೂ ಹೆಣ್ಣು ಮಕ್ಕಳ ವಿಜಿಲೆನ್ಸ್ ಕಮಿಟಿ ರಚಿಸಬೇಕು. ಈ ಸಲಹಾ ಸಮಿತಿ ನೀಡುವ ವರದಿಯನ್ನು ಪರಿಶೀಲಿಸಿ ನ್ಯಾಯಯುತ ತೀರ್ಮಾನ ತೆಗೆದುಕೊಳ್ಳಲು, ಜೊತೆಜೊತೆಗೇ ಒಂದು ನಿಷ್ಪಕ್ಷವಾದ ಉನ್ನತ ಸಮಿತಿಯನ್ನು ರಚಿಸಬೇಕು. ತಪ್ಪಿತಸ್ಥರು ದೊಡ್ಡ ಅಧಿಕಾರಿಯಾಗಿರಲಿ, ಸಾಮಾನ್ಯ ನೌಕರರಾಗಿರಲಿ ಎಲ್ಲರಿಗೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಅಪರಾಧ ಎಸಗಿದವರನ್ನು ಕೆಲಸದಿಂದ ಕಿತ್ತೆಸೆಯಬೇಕು. ಹೀಗೆ ಮಾಡುವುದರಿಂದ ಬಹುಮಟ್ಟಿಗೆ ಮಹಿಳೆಯರ ಮೇಲಿನ ದೌರ್ಜನ್ಯ ಇಳಿಮುಖವಾಗುವುದೆಂದು ನಾನು ಭಾವಿಸುತ್ತೆÃನೆ.
* ಮುಂದಿನ ಪೀಳಿಗೆಯಲ್ಲಾದರೂ ಈ ಪಿಡುಗು ಸಮಾಜದಿಂದ ದೂರವಾಗಲಿ ಎಂಬ ಧ್ಯೆÃಯ ನಮ್ಮದಾದರೆ, ಶಾಲೆಯ ಮಕ್ಕಳಿಗೆ ಅರಿಷಡ್ವರ್ಗಗಳನ್ನು ದೂರ ಮಾಡುವ ಶಿಕ್ಷಣ ನೀಡಬೇಕು. ಕಾಮ, ಕ್ರೊÃಧ, ಮೋಹ, ಲೋಭ, ಮದ, ಮತ್ಸರಗಳು ಅರಿಷಡ್ವರ್ಗಗಳು. ಇವು ನಮ್ಮ ಅರಿಗಳು, ಶತ್ರುಗಳು. ಈ ಅರಿಷಡ್ವರ್ಗಗಳನ್ನು ಗೆದ್ದರೆ ಮನುಷ್ಯ ಸ್ವಚ್ಛಮನಸ್ಸಿನವನಾಗುತ್ತಾನೆ.
ಈ ಅರಿಷಡ್ವರ್ಗಗಳಲ್ಲಿ ಈಗ ನಮ್ಮ ಸಮಾಜವನ್ನು ಕಾಡುತ್ತಿರುವ ಅತಿ ದೊಡ್ಡ ಶತ್ರುವೆಂದರೆ ಕಾಮ. ಕಾಮವನ್ನು ಗೆಲ್ಲಬೇಕಾದರೆ ಮನಸ್ಸಿನ ಮೇಲೆ ಹತೋಟಿ ಇಟ್ಟುಕೊಳ್ಳುವುದನ್ನು ಕಲಿಸಬೇಕು. ಕಾಮ ಎನ್ನುವ ಶತ್ರು ಕಾಡುತ್ತಾ ಬಂದಾಗ ನಮ್ಮ ಮನಸ್ಸನ್ನು ನಿಗ್ರಹಿಸುವ ಶಕ್ತಿ ಬೆಳೆಸಿಕೊಳ್ಳಬೇಕು. ಆಮೆ ತನ್ನ ಶತ್ರುವನ್ನು ಕಂಡೊಡನೆ ಹೇಗೆ ತನ್ನ ಶರೀರವನ್ನು ತನ್ನ ಚಿಪ್ಪಿನೊಳಕ್ಕೆ ಎಳೆದುಕೊಳ್ಳುತ್ತದೆಯೋ ಹಾಗೆ ಕೆಟ್ಟ ವಿಷಯಗಳು ಮನಸ್ಸನ್ನು ಆಕ್ರಮಿಸಿದಾಗ ನಾವು ನಮ್ಮ ಮನಸ್ಸನ್ನು ನಮ್ಮ ಹತೋಟಿಯಲ್ಲಿಟ್ಟುಕೊಂಡು, ಆ ಕೆಟ್ಟ ವಿಚಾರಗಳು ನಮ್ಮನ್ನು ಅಧೋಗತಿಗಿಳಿಸುವುದನ್ನು ತಡೆಗಟ್ಟಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...