Homeಚಳವಳಿಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಈ ಜಾಗದಲ್ಲಿ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ಬೀದಿಪಾಲಾಗಿದ್ದಾರೆ..

- Advertisement -
- Advertisement -

ಕೊಡಗಿನ ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲ ಪಂಚಾಯ್ತಿ ವ್ಯಾಪ್ತಿಯ ಪೆರಂಬಾಡಿ, ಬಾಲಗೋಡುನಲ್ಲಿ ಸರ್ವೆ ನಂ. 337/1ರ ಸರಕಾರಿ ಜಾಗದಲ್ಲಿ ವಸತಿರಹಿತ ಆದಿವಾಸಿಗಳು, ದಲಿತರು, ಕಟ್ಟಿಕೊಂಡಿದ್ದ ಗುಡಿಸಲುಗಳನ್ನು ತಾಲ್ಲೂಕು ಆಡಳಿತ ಧ್ವಂಸ ಮಾಡಿದೆ.

ಇಂದು ಮಧ್ಯಾಹ್ನ 12:30ರ ಸಮಯದಲ್ಲಿ ಪೊಲೀಸರ ಸಮ್ಮುಖದಲ್ಲಿ ಆಗಮಿಸಿದ ತಹಶಿಲ್ದಾರ್‌ ಮಹೇಶ್, ಆರ್‌ಐ ರಂಗಪ್ಪ ಸೇರಿದಂತೆ ಹಲವು ಅಧಿಕಾರಿಗಳು ಅಲ್ಲಿದ್ದ ಜನರನ್ನು ಹೆದರಿಸಿ ಅವರು ಗುಡಿಸಲುಗಳನ್ನು ನೆಲಸಮ ಮಾಡಿದ್ದಾರೆ.

ಅಲ್ಲದೆ ಇದನ್ನು ಪ್ರಶ್ನಿಸಿದ ಭೂಮಿ-ವಸತಿ ಹೋರಾಟ ಸಮಿತಿಯ ಯುವ ಕಾರ್ಯಕರ್ತ ಹೇಮಂತ್ ಎಂಬುವವರ ಮೇಲೆ ಪೋಲೀಸರು ಹಲ್ಲೆ ಮಾಡಿದ್ದಾರೆ. ಗುಡಿಸಲುಗಳನ್ನು ತೆರವುಗೊಳಿಸಲು ಅಡ್ಡಿಪಡಿಸಿದವರ ಮೇಲೆ ಕೇಸು ಹಾಕುವುದಾಗಿ ಎಸಿ, ತಹಸೀಲ್ದಾರ್‌ರವರು ಪೊಲೀಸ್‌ ಇನ್ಸ್‌ಪೆಕ್ಟರ್‌ ರಾಮರೆಡ್ಡಿ ವೀಣಾರವರ ಮೂಲಕ ಬೆದರಿಕೆ ಹಾಕಿದ್ದಾರೆ.

ಈ ಬಡ ಜನರ ಗುಡಿಸಲುಗಳನ್ನು ತೆರವುಗೊಳಿಸಿ ಇದೇ ಜಾಗದಲ್ಲಿ ಕಸ ವಿಲೇವಾರಿ ಘಟಕ ಮಾಡಬೇಕೆಂದು ಜಿಲ್ಲಾಡಳಿತದ ಯೋಜನೆಯಾಗಿದೆ. ಅದಕ್ಕಾಗಿ ಇಂದು ತೆರವು ಕಾರ್ಯಚರಣೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಈ ಜಾಗದಲ್ಲಿ ಸದ್ಯಕ್ಕೆ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ನೆಲೆ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ತಮ್ಮ ಮೇಲಾದ ಏಕಾಏಕಿ ದಾಳಿಯಿಂದ ದಿಕ್ಕುತೋಚದೆ ಜನ ಕಂಗಾಲಾಗಿದ್ದು ಹೋರಾಟ ಮುಂದುವರೆಸಿದ್ದಾರೆ.

ಹಲ್ಲೆಗೊಳಗಾದ ಯುವ ಹೋರಾಟಗಾರ ಹೇಮಂತ್‌ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಾನುಗೌರಿ.ಕಾಂ ಜೊತೆ ಮಾತನಾಡಿದರು. “ಜನರು ಕೂಲಿಲೈನ್‌ನಲ್ಲಿನ ಶೋಷಣೆ ತಾಳಲಾರದೇ ಬಹಳ ವರ್ಷಗಳಿಂದ ಈ ಸರ್ಕಾರಿ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ. ಇಂತಹ ಅಮಾಯಕ ಜನರ ಮೇಲೆ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ. ಬಡಜನರ ಜೀವನಾವಶ್ಯಕ ವಸ್ತುಗಳನ್ನು, ದಿನಸಿಗಳನ್ನು ಪೊಲೀಸರು ಹೊತ್ತೋಯ್ಯುತ್ತಿದ್ದಾರೆ. ಅವರ ಬೆದರಿಕೆಗೆ ಮಣಿಯುವುದಿಲ್ಲ ಬಡಜನರು ಹೋರಾಟ ತೀವ್ರಗೊಳಿಸುತ್ತೇವೆ ಎಂದಿದ್ದಾರೆ.

ಹಲ್ಲೆಗೊಳಗಾದ ಹೇಮಂತ್‌

ಈ ಜಾಗದಲ್ಲಿ ಗುಡಿಸಲುಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದ ದಲಿತ, ಆದಿವಾಸಿ ಕುಟುಂಬಗಳು ಜಿಲ್ಲಾಧಿಕಾರಿಗಳಿಗೆ, ತಹಸೀಲ್ದಾರ್‌ರವರಿಗೆ ಹಲವಾರು ಭಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮಗಳನ್ನು ಜಿಲ್ಲಾಡಳಿತ ಇಲ್ಲಿಯವರಗೂ ತೆಗೆದುಕೊಂಡಿರಲಿಲ್ಲ. ಈಗ ಏಕಾಏಕಿ ಪೋಲೀಸರನ್ನು ಕರೆದುಕೊಂಡು ಬಂದು ಬಡವರನ್ನು ಬೆದರಿಸಿ ಗುಡಿಸಲುಗಳನ್ನು ಕಿತ್ತುಹಾಕಿದ್ದಾರೆ ಎಂದು ಸ್ಥಳೀಯ ಜಿಲ್ಲಾ ಮುಖಂಡರಾದ ಮೊಣ್ಣಪ್ಪರವರು ಆರೋಪಿಸಿದ್ದಾರೆ.

ಈ ದೇಶದ ಮೂಲ ನಿವಾಸಿಗಳಿಗೆ ಬದುಕಲು, ನೆಲೆಸಲು ಒಂದು ಜಾಗವನ್ನೂ ಗುರುತಿಸದೆ (ಜನರಿಗೆ ವಾಸ ಮಾಡುವ ಜಾಗಕ್ಕಿಂತ ಕಸ ಹಾಕಲು ಜಾಗವೇ ಮುಖ್ಯವಾಗಿದೆ) ಪರ್ಯಾಯ ಜಗವನ್ನೂ ನೀಡದೇ ಸ್ಥಳೀಯ ಶಾಸಕ ಬಿಜೆಪಿ ಎಮ್.ಎಲ್.ಎ. ಕೆ.ಜಿ.ಬೋಪಯ್ಯನ ಕುಮ್ಮಕ್ಕಿನಿಂದ ಗುಡಿಸಲು ತೆರವುಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.

ಶಾಸಕ-ಅಧಿಕಾರಿ-ಪೊಲೀಸ್-ಗೂಂಡಾ ಕೂಟದ ಈ ನ್ಯಾಯಬಾಹಿರ, ನಿರ್ದಯಿ ನಡವಳಿಕೆಯನ್ನು ಹಾಗೂ ಬಡಜನರ ಮತ್ತು ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಹಲ್ಲೆ, ದೌರ್ಜನ್ಯ ನಡೆಸಿದವರ ಮೇಲೆ ತೀವ್ರ ಕ್ರಮ ಕೈಗೊಳ್ಳಬೇಕು ಮತ್ತು ವಸತಿ ರಹಿತರಿಗೆ ಅದೇ ಸರಕಾರಿ ಜಾಗದಲ್ಲಿ ಜಾಗ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕೆಂದು ಭೂಮಿ ವಸತಿ ಸಮಿತಿಯು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...