Homeಚಳವಳಿಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಈ ಜಾಗದಲ್ಲಿ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ಬೀದಿಪಾಲಾಗಿದ್ದಾರೆ..

- Advertisement -
- Advertisement -

ಕೊಡಗಿನ ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲ ಪಂಚಾಯ್ತಿ ವ್ಯಾಪ್ತಿಯ ಪೆರಂಬಾಡಿ, ಬಾಲಗೋಡುನಲ್ಲಿ ಸರ್ವೆ ನಂ. 337/1ರ ಸರಕಾರಿ ಜಾಗದಲ್ಲಿ ವಸತಿರಹಿತ ಆದಿವಾಸಿಗಳು, ದಲಿತರು, ಕಟ್ಟಿಕೊಂಡಿದ್ದ ಗುಡಿಸಲುಗಳನ್ನು ತಾಲ್ಲೂಕು ಆಡಳಿತ ಧ್ವಂಸ ಮಾಡಿದೆ.

ಇಂದು ಮಧ್ಯಾಹ್ನ 12:30ರ ಸಮಯದಲ್ಲಿ ಪೊಲೀಸರ ಸಮ್ಮುಖದಲ್ಲಿ ಆಗಮಿಸಿದ ತಹಶಿಲ್ದಾರ್‌ ಮಹೇಶ್, ಆರ್‌ಐ ರಂಗಪ್ಪ ಸೇರಿದಂತೆ ಹಲವು ಅಧಿಕಾರಿಗಳು ಅಲ್ಲಿದ್ದ ಜನರನ್ನು ಹೆದರಿಸಿ ಅವರು ಗುಡಿಸಲುಗಳನ್ನು ನೆಲಸಮ ಮಾಡಿದ್ದಾರೆ.

ಅಲ್ಲದೆ ಇದನ್ನು ಪ್ರಶ್ನಿಸಿದ ಭೂಮಿ-ವಸತಿ ಹೋರಾಟ ಸಮಿತಿಯ ಯುವ ಕಾರ್ಯಕರ್ತ ಹೇಮಂತ್ ಎಂಬುವವರ ಮೇಲೆ ಪೋಲೀಸರು ಹಲ್ಲೆ ಮಾಡಿದ್ದಾರೆ. ಗುಡಿಸಲುಗಳನ್ನು ತೆರವುಗೊಳಿಸಲು ಅಡ್ಡಿಪಡಿಸಿದವರ ಮೇಲೆ ಕೇಸು ಹಾಕುವುದಾಗಿ ಎಸಿ, ತಹಸೀಲ್ದಾರ್‌ರವರು ಪೊಲೀಸ್‌ ಇನ್ಸ್‌ಪೆಕ್ಟರ್‌ ರಾಮರೆಡ್ಡಿ ವೀಣಾರವರ ಮೂಲಕ ಬೆದರಿಕೆ ಹಾಕಿದ್ದಾರೆ.

ಈ ಬಡ ಜನರ ಗುಡಿಸಲುಗಳನ್ನು ತೆರವುಗೊಳಿಸಿ ಇದೇ ಜಾಗದಲ್ಲಿ ಕಸ ವಿಲೇವಾರಿ ಘಟಕ ಮಾಡಬೇಕೆಂದು ಜಿಲ್ಲಾಡಳಿತದ ಯೋಜನೆಯಾಗಿದೆ. ಅದಕ್ಕಾಗಿ ಇಂದು ತೆರವು ಕಾರ್ಯಚರಣೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಈ ಜಾಗದಲ್ಲಿ ಸದ್ಯಕ್ಕೆ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ನೆಲೆ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ತಮ್ಮ ಮೇಲಾದ ಏಕಾಏಕಿ ದಾಳಿಯಿಂದ ದಿಕ್ಕುತೋಚದೆ ಜನ ಕಂಗಾಲಾಗಿದ್ದು ಹೋರಾಟ ಮುಂದುವರೆಸಿದ್ದಾರೆ.

ಹಲ್ಲೆಗೊಳಗಾದ ಯುವ ಹೋರಾಟಗಾರ ಹೇಮಂತ್‌ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಾನುಗೌರಿ.ಕಾಂ ಜೊತೆ ಮಾತನಾಡಿದರು. “ಜನರು ಕೂಲಿಲೈನ್‌ನಲ್ಲಿನ ಶೋಷಣೆ ತಾಳಲಾರದೇ ಬಹಳ ವರ್ಷಗಳಿಂದ ಈ ಸರ್ಕಾರಿ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ. ಇಂತಹ ಅಮಾಯಕ ಜನರ ಮೇಲೆ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ. ಬಡಜನರ ಜೀವನಾವಶ್ಯಕ ವಸ್ತುಗಳನ್ನು, ದಿನಸಿಗಳನ್ನು ಪೊಲೀಸರು ಹೊತ್ತೋಯ್ಯುತ್ತಿದ್ದಾರೆ. ಅವರ ಬೆದರಿಕೆಗೆ ಮಣಿಯುವುದಿಲ್ಲ ಬಡಜನರು ಹೋರಾಟ ತೀವ್ರಗೊಳಿಸುತ್ತೇವೆ ಎಂದಿದ್ದಾರೆ.

ಹಲ್ಲೆಗೊಳಗಾದ ಹೇಮಂತ್‌

ಈ ಜಾಗದಲ್ಲಿ ಗುಡಿಸಲುಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದ ದಲಿತ, ಆದಿವಾಸಿ ಕುಟುಂಬಗಳು ಜಿಲ್ಲಾಧಿಕಾರಿಗಳಿಗೆ, ತಹಸೀಲ್ದಾರ್‌ರವರಿಗೆ ಹಲವಾರು ಭಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮಗಳನ್ನು ಜಿಲ್ಲಾಡಳಿತ ಇಲ್ಲಿಯವರಗೂ ತೆಗೆದುಕೊಂಡಿರಲಿಲ್ಲ. ಈಗ ಏಕಾಏಕಿ ಪೋಲೀಸರನ್ನು ಕರೆದುಕೊಂಡು ಬಂದು ಬಡವರನ್ನು ಬೆದರಿಸಿ ಗುಡಿಸಲುಗಳನ್ನು ಕಿತ್ತುಹಾಕಿದ್ದಾರೆ ಎಂದು ಸ್ಥಳೀಯ ಜಿಲ್ಲಾ ಮುಖಂಡರಾದ ಮೊಣ್ಣಪ್ಪರವರು ಆರೋಪಿಸಿದ್ದಾರೆ.

ಈ ದೇಶದ ಮೂಲ ನಿವಾಸಿಗಳಿಗೆ ಬದುಕಲು, ನೆಲೆಸಲು ಒಂದು ಜಾಗವನ್ನೂ ಗುರುತಿಸದೆ (ಜನರಿಗೆ ವಾಸ ಮಾಡುವ ಜಾಗಕ್ಕಿಂತ ಕಸ ಹಾಕಲು ಜಾಗವೇ ಮುಖ್ಯವಾಗಿದೆ) ಪರ್ಯಾಯ ಜಗವನ್ನೂ ನೀಡದೇ ಸ್ಥಳೀಯ ಶಾಸಕ ಬಿಜೆಪಿ ಎಮ್.ಎಲ್.ಎ. ಕೆ.ಜಿ.ಬೋಪಯ್ಯನ ಕುಮ್ಮಕ್ಕಿನಿಂದ ಗುಡಿಸಲು ತೆರವುಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.

ಶಾಸಕ-ಅಧಿಕಾರಿ-ಪೊಲೀಸ್-ಗೂಂಡಾ ಕೂಟದ ಈ ನ್ಯಾಯಬಾಹಿರ, ನಿರ್ದಯಿ ನಡವಳಿಕೆಯನ್ನು ಹಾಗೂ ಬಡಜನರ ಮತ್ತು ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಹಲ್ಲೆ, ದೌರ್ಜನ್ಯ ನಡೆಸಿದವರ ಮೇಲೆ ತೀವ್ರ ಕ್ರಮ ಕೈಗೊಳ್ಳಬೇಕು ಮತ್ತು ವಸತಿ ರಹಿತರಿಗೆ ಅದೇ ಸರಕಾರಿ ಜಾಗದಲ್ಲಿ ಜಾಗ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕೆಂದು ಭೂಮಿ ವಸತಿ ಸಮಿತಿಯು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...