Homeಚಳವಳಿಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಈ ಜಾಗದಲ್ಲಿ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ಬೀದಿಪಾಲಾಗಿದ್ದಾರೆ..

- Advertisement -
- Advertisement -

ಕೊಡಗಿನ ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲ ಪಂಚಾಯ್ತಿ ವ್ಯಾಪ್ತಿಯ ಪೆರಂಬಾಡಿ, ಬಾಲಗೋಡುನಲ್ಲಿ ಸರ್ವೆ ನಂ. 337/1ರ ಸರಕಾರಿ ಜಾಗದಲ್ಲಿ ವಸತಿರಹಿತ ಆದಿವಾಸಿಗಳು, ದಲಿತರು, ಕಟ್ಟಿಕೊಂಡಿದ್ದ ಗುಡಿಸಲುಗಳನ್ನು ತಾಲ್ಲೂಕು ಆಡಳಿತ ಧ್ವಂಸ ಮಾಡಿದೆ.

ಇಂದು ಮಧ್ಯಾಹ್ನ 12:30ರ ಸಮಯದಲ್ಲಿ ಪೊಲೀಸರ ಸಮ್ಮುಖದಲ್ಲಿ ಆಗಮಿಸಿದ ತಹಶಿಲ್ದಾರ್‌ ಮಹೇಶ್, ಆರ್‌ಐ ರಂಗಪ್ಪ ಸೇರಿದಂತೆ ಹಲವು ಅಧಿಕಾರಿಗಳು ಅಲ್ಲಿದ್ದ ಜನರನ್ನು ಹೆದರಿಸಿ ಅವರು ಗುಡಿಸಲುಗಳನ್ನು ನೆಲಸಮ ಮಾಡಿದ್ದಾರೆ.

ಅಲ್ಲದೆ ಇದನ್ನು ಪ್ರಶ್ನಿಸಿದ ಭೂಮಿ-ವಸತಿ ಹೋರಾಟ ಸಮಿತಿಯ ಯುವ ಕಾರ್ಯಕರ್ತ ಹೇಮಂತ್ ಎಂಬುವವರ ಮೇಲೆ ಪೋಲೀಸರು ಹಲ್ಲೆ ಮಾಡಿದ್ದಾರೆ. ಗುಡಿಸಲುಗಳನ್ನು ತೆರವುಗೊಳಿಸಲು ಅಡ್ಡಿಪಡಿಸಿದವರ ಮೇಲೆ ಕೇಸು ಹಾಕುವುದಾಗಿ ಎಸಿ, ತಹಸೀಲ್ದಾರ್‌ರವರು ಪೊಲೀಸ್‌ ಇನ್ಸ್‌ಪೆಕ್ಟರ್‌ ರಾಮರೆಡ್ಡಿ ವೀಣಾರವರ ಮೂಲಕ ಬೆದರಿಕೆ ಹಾಕಿದ್ದಾರೆ.

ಈ ಬಡ ಜನರ ಗುಡಿಸಲುಗಳನ್ನು ತೆರವುಗೊಳಿಸಿ ಇದೇ ಜಾಗದಲ್ಲಿ ಕಸ ವಿಲೇವಾರಿ ಘಟಕ ಮಾಡಬೇಕೆಂದು ಜಿಲ್ಲಾಡಳಿತದ ಯೋಜನೆಯಾಗಿದೆ. ಅದಕ್ಕಾಗಿ ಇಂದು ತೆರವು ಕಾರ್ಯಚರಣೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಈ ಜಾಗದಲ್ಲಿ ಸದ್ಯಕ್ಕೆ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ನೆಲೆ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ತಮ್ಮ ಮೇಲಾದ ಏಕಾಏಕಿ ದಾಳಿಯಿಂದ ದಿಕ್ಕುತೋಚದೆ ಜನ ಕಂಗಾಲಾಗಿದ್ದು ಹೋರಾಟ ಮುಂದುವರೆಸಿದ್ದಾರೆ.

ಹಲ್ಲೆಗೊಳಗಾದ ಯುವ ಹೋರಾಟಗಾರ ಹೇಮಂತ್‌ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಾನುಗೌರಿ.ಕಾಂ ಜೊತೆ ಮಾತನಾಡಿದರು. “ಜನರು ಕೂಲಿಲೈನ್‌ನಲ್ಲಿನ ಶೋಷಣೆ ತಾಳಲಾರದೇ ಬಹಳ ವರ್ಷಗಳಿಂದ ಈ ಸರ್ಕಾರಿ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ. ಇಂತಹ ಅಮಾಯಕ ಜನರ ಮೇಲೆ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ. ಬಡಜನರ ಜೀವನಾವಶ್ಯಕ ವಸ್ತುಗಳನ್ನು, ದಿನಸಿಗಳನ್ನು ಪೊಲೀಸರು ಹೊತ್ತೋಯ್ಯುತ್ತಿದ್ದಾರೆ. ಅವರ ಬೆದರಿಕೆಗೆ ಮಣಿಯುವುದಿಲ್ಲ ಬಡಜನರು ಹೋರಾಟ ತೀವ್ರಗೊಳಿಸುತ್ತೇವೆ ಎಂದಿದ್ದಾರೆ.

ಹಲ್ಲೆಗೊಳಗಾದ ಹೇಮಂತ್‌

ಈ ಜಾಗದಲ್ಲಿ ಗುಡಿಸಲುಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದ ದಲಿತ, ಆದಿವಾಸಿ ಕುಟುಂಬಗಳು ಜಿಲ್ಲಾಧಿಕಾರಿಗಳಿಗೆ, ತಹಸೀಲ್ದಾರ್‌ರವರಿಗೆ ಹಲವಾರು ಭಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮಗಳನ್ನು ಜಿಲ್ಲಾಡಳಿತ ಇಲ್ಲಿಯವರಗೂ ತೆಗೆದುಕೊಂಡಿರಲಿಲ್ಲ. ಈಗ ಏಕಾಏಕಿ ಪೋಲೀಸರನ್ನು ಕರೆದುಕೊಂಡು ಬಂದು ಬಡವರನ್ನು ಬೆದರಿಸಿ ಗುಡಿಸಲುಗಳನ್ನು ಕಿತ್ತುಹಾಕಿದ್ದಾರೆ ಎಂದು ಸ್ಥಳೀಯ ಜಿಲ್ಲಾ ಮುಖಂಡರಾದ ಮೊಣ್ಣಪ್ಪರವರು ಆರೋಪಿಸಿದ್ದಾರೆ.

ಈ ದೇಶದ ಮೂಲ ನಿವಾಸಿಗಳಿಗೆ ಬದುಕಲು, ನೆಲೆಸಲು ಒಂದು ಜಾಗವನ್ನೂ ಗುರುತಿಸದೆ (ಜನರಿಗೆ ವಾಸ ಮಾಡುವ ಜಾಗಕ್ಕಿಂತ ಕಸ ಹಾಕಲು ಜಾಗವೇ ಮುಖ್ಯವಾಗಿದೆ) ಪರ್ಯಾಯ ಜಗವನ್ನೂ ನೀಡದೇ ಸ್ಥಳೀಯ ಶಾಸಕ ಬಿಜೆಪಿ ಎಮ್.ಎಲ್.ಎ. ಕೆ.ಜಿ.ಬೋಪಯ್ಯನ ಕುಮ್ಮಕ್ಕಿನಿಂದ ಗುಡಿಸಲು ತೆರವುಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.

ಶಾಸಕ-ಅಧಿಕಾರಿ-ಪೊಲೀಸ್-ಗೂಂಡಾ ಕೂಟದ ಈ ನ್ಯಾಯಬಾಹಿರ, ನಿರ್ದಯಿ ನಡವಳಿಕೆಯನ್ನು ಹಾಗೂ ಬಡಜನರ ಮತ್ತು ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಹಲ್ಲೆ, ದೌರ್ಜನ್ಯ ನಡೆಸಿದವರ ಮೇಲೆ ತೀವ್ರ ಕ್ರಮ ಕೈಗೊಳ್ಳಬೇಕು ಮತ್ತು ವಸತಿ ರಹಿತರಿಗೆ ಅದೇ ಸರಕಾರಿ ಜಾಗದಲ್ಲಿ ಜಾಗ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕೆಂದು ಭೂಮಿ ವಸತಿ ಸಮಿತಿಯು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...