Homeಚಳವಳಿಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಈ ಜಾಗದಲ್ಲಿ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ಬೀದಿಪಾಲಾಗಿದ್ದಾರೆ..

- Advertisement -
- Advertisement -

ಕೊಡಗಿನ ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲ ಪಂಚಾಯ್ತಿ ವ್ಯಾಪ್ತಿಯ ಪೆರಂಬಾಡಿ, ಬಾಲಗೋಡುನಲ್ಲಿ ಸರ್ವೆ ನಂ. 337/1ರ ಸರಕಾರಿ ಜಾಗದಲ್ಲಿ ವಸತಿರಹಿತ ಆದಿವಾಸಿಗಳು, ದಲಿತರು, ಕಟ್ಟಿಕೊಂಡಿದ್ದ ಗುಡಿಸಲುಗಳನ್ನು ತಾಲ್ಲೂಕು ಆಡಳಿತ ಧ್ವಂಸ ಮಾಡಿದೆ.

ಇಂದು ಮಧ್ಯಾಹ್ನ 12:30ರ ಸಮಯದಲ್ಲಿ ಪೊಲೀಸರ ಸಮ್ಮುಖದಲ್ಲಿ ಆಗಮಿಸಿದ ತಹಶಿಲ್ದಾರ್‌ ಮಹೇಶ್, ಆರ್‌ಐ ರಂಗಪ್ಪ ಸೇರಿದಂತೆ ಹಲವು ಅಧಿಕಾರಿಗಳು ಅಲ್ಲಿದ್ದ ಜನರನ್ನು ಹೆದರಿಸಿ ಅವರು ಗುಡಿಸಲುಗಳನ್ನು ನೆಲಸಮ ಮಾಡಿದ್ದಾರೆ.

ಅಲ್ಲದೆ ಇದನ್ನು ಪ್ರಶ್ನಿಸಿದ ಭೂಮಿ-ವಸತಿ ಹೋರಾಟ ಸಮಿತಿಯ ಯುವ ಕಾರ್ಯಕರ್ತ ಹೇಮಂತ್ ಎಂಬುವವರ ಮೇಲೆ ಪೋಲೀಸರು ಹಲ್ಲೆ ಮಾಡಿದ್ದಾರೆ. ಗುಡಿಸಲುಗಳನ್ನು ತೆರವುಗೊಳಿಸಲು ಅಡ್ಡಿಪಡಿಸಿದವರ ಮೇಲೆ ಕೇಸು ಹಾಕುವುದಾಗಿ ಎಸಿ, ತಹಸೀಲ್ದಾರ್‌ರವರು ಪೊಲೀಸ್‌ ಇನ್ಸ್‌ಪೆಕ್ಟರ್‌ ರಾಮರೆಡ್ಡಿ ವೀಣಾರವರ ಮೂಲಕ ಬೆದರಿಕೆ ಹಾಕಿದ್ದಾರೆ.

ಈ ಬಡ ಜನರ ಗುಡಿಸಲುಗಳನ್ನು ತೆರವುಗೊಳಿಸಿ ಇದೇ ಜಾಗದಲ್ಲಿ ಕಸ ವಿಲೇವಾರಿ ಘಟಕ ಮಾಡಬೇಕೆಂದು ಜಿಲ್ಲಾಡಳಿತದ ಯೋಜನೆಯಾಗಿದೆ. ಅದಕ್ಕಾಗಿ ಇಂದು ತೆರವು ಕಾರ್ಯಚರಣೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಈ ಜಾಗದಲ್ಲಿ ಸದ್ಯಕ್ಕೆ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ನೆಲೆ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ತಮ್ಮ ಮೇಲಾದ ಏಕಾಏಕಿ ದಾಳಿಯಿಂದ ದಿಕ್ಕುತೋಚದೆ ಜನ ಕಂಗಾಲಾಗಿದ್ದು ಹೋರಾಟ ಮುಂದುವರೆಸಿದ್ದಾರೆ.

ಹಲ್ಲೆಗೊಳಗಾದ ಯುವ ಹೋರಾಟಗಾರ ಹೇಮಂತ್‌ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಾನುಗೌರಿ.ಕಾಂ ಜೊತೆ ಮಾತನಾಡಿದರು. “ಜನರು ಕೂಲಿಲೈನ್‌ನಲ್ಲಿನ ಶೋಷಣೆ ತಾಳಲಾರದೇ ಬಹಳ ವರ್ಷಗಳಿಂದ ಈ ಸರ್ಕಾರಿ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ. ಇಂತಹ ಅಮಾಯಕ ಜನರ ಮೇಲೆ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ. ಬಡಜನರ ಜೀವನಾವಶ್ಯಕ ವಸ್ತುಗಳನ್ನು, ದಿನಸಿಗಳನ್ನು ಪೊಲೀಸರು ಹೊತ್ತೋಯ್ಯುತ್ತಿದ್ದಾರೆ. ಅವರ ಬೆದರಿಕೆಗೆ ಮಣಿಯುವುದಿಲ್ಲ ಬಡಜನರು ಹೋರಾಟ ತೀವ್ರಗೊಳಿಸುತ್ತೇವೆ ಎಂದಿದ್ದಾರೆ.

ಹಲ್ಲೆಗೊಳಗಾದ ಹೇಮಂತ್‌

ಈ ಜಾಗದಲ್ಲಿ ಗುಡಿಸಲುಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದ ದಲಿತ, ಆದಿವಾಸಿ ಕುಟುಂಬಗಳು ಜಿಲ್ಲಾಧಿಕಾರಿಗಳಿಗೆ, ತಹಸೀಲ್ದಾರ್‌ರವರಿಗೆ ಹಲವಾರು ಭಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮಗಳನ್ನು ಜಿಲ್ಲಾಡಳಿತ ಇಲ್ಲಿಯವರಗೂ ತೆಗೆದುಕೊಂಡಿರಲಿಲ್ಲ. ಈಗ ಏಕಾಏಕಿ ಪೋಲೀಸರನ್ನು ಕರೆದುಕೊಂಡು ಬಂದು ಬಡವರನ್ನು ಬೆದರಿಸಿ ಗುಡಿಸಲುಗಳನ್ನು ಕಿತ್ತುಹಾಕಿದ್ದಾರೆ ಎಂದು ಸ್ಥಳೀಯ ಜಿಲ್ಲಾ ಮುಖಂಡರಾದ ಮೊಣ್ಣಪ್ಪರವರು ಆರೋಪಿಸಿದ್ದಾರೆ.

ಈ ದೇಶದ ಮೂಲ ನಿವಾಸಿಗಳಿಗೆ ಬದುಕಲು, ನೆಲೆಸಲು ಒಂದು ಜಾಗವನ್ನೂ ಗುರುತಿಸದೆ (ಜನರಿಗೆ ವಾಸ ಮಾಡುವ ಜಾಗಕ್ಕಿಂತ ಕಸ ಹಾಕಲು ಜಾಗವೇ ಮುಖ್ಯವಾಗಿದೆ) ಪರ್ಯಾಯ ಜಗವನ್ನೂ ನೀಡದೇ ಸ್ಥಳೀಯ ಶಾಸಕ ಬಿಜೆಪಿ ಎಮ್.ಎಲ್.ಎ. ಕೆ.ಜಿ.ಬೋಪಯ್ಯನ ಕುಮ್ಮಕ್ಕಿನಿಂದ ಗುಡಿಸಲು ತೆರವುಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.

ಶಾಸಕ-ಅಧಿಕಾರಿ-ಪೊಲೀಸ್-ಗೂಂಡಾ ಕೂಟದ ಈ ನ್ಯಾಯಬಾಹಿರ, ನಿರ್ದಯಿ ನಡವಳಿಕೆಯನ್ನು ಹಾಗೂ ಬಡಜನರ ಮತ್ತು ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಹಲ್ಲೆ, ದೌರ್ಜನ್ಯ ನಡೆಸಿದವರ ಮೇಲೆ ತೀವ್ರ ಕ್ರಮ ಕೈಗೊಳ್ಳಬೇಕು ಮತ್ತು ವಸತಿ ರಹಿತರಿಗೆ ಅದೇ ಸರಕಾರಿ ಜಾಗದಲ್ಲಿ ಜಾಗ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕೆಂದು ಭೂಮಿ ವಸತಿ ಸಮಿತಿಯು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...