Homeಚಳವಳಿಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಈ ಜಾಗದಲ್ಲಿ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ಬೀದಿಪಾಲಾಗಿದ್ದಾರೆ..

- Advertisement -
- Advertisement -

ಕೊಡಗಿನ ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲ ಪಂಚಾಯ್ತಿ ವ್ಯಾಪ್ತಿಯ ಪೆರಂಬಾಡಿ, ಬಾಲಗೋಡುನಲ್ಲಿ ಸರ್ವೆ ನಂ. 337/1ರ ಸರಕಾರಿ ಜಾಗದಲ್ಲಿ ವಸತಿರಹಿತ ಆದಿವಾಸಿಗಳು, ದಲಿತರು, ಕಟ್ಟಿಕೊಂಡಿದ್ದ ಗುಡಿಸಲುಗಳನ್ನು ತಾಲ್ಲೂಕು ಆಡಳಿತ ಧ್ವಂಸ ಮಾಡಿದೆ.

ಇಂದು ಮಧ್ಯಾಹ್ನ 12:30ರ ಸಮಯದಲ್ಲಿ ಪೊಲೀಸರ ಸಮ್ಮುಖದಲ್ಲಿ ಆಗಮಿಸಿದ ತಹಶಿಲ್ದಾರ್‌ ಮಹೇಶ್, ಆರ್‌ಐ ರಂಗಪ್ಪ ಸೇರಿದಂತೆ ಹಲವು ಅಧಿಕಾರಿಗಳು ಅಲ್ಲಿದ್ದ ಜನರನ್ನು ಹೆದರಿಸಿ ಅವರು ಗುಡಿಸಲುಗಳನ್ನು ನೆಲಸಮ ಮಾಡಿದ್ದಾರೆ.

ಅಲ್ಲದೆ ಇದನ್ನು ಪ್ರಶ್ನಿಸಿದ ಭೂಮಿ-ವಸತಿ ಹೋರಾಟ ಸಮಿತಿಯ ಯುವ ಕಾರ್ಯಕರ್ತ ಹೇಮಂತ್ ಎಂಬುವವರ ಮೇಲೆ ಪೋಲೀಸರು ಹಲ್ಲೆ ಮಾಡಿದ್ದಾರೆ. ಗುಡಿಸಲುಗಳನ್ನು ತೆರವುಗೊಳಿಸಲು ಅಡ್ಡಿಪಡಿಸಿದವರ ಮೇಲೆ ಕೇಸು ಹಾಕುವುದಾಗಿ ಎಸಿ, ತಹಸೀಲ್ದಾರ್‌ರವರು ಪೊಲೀಸ್‌ ಇನ್ಸ್‌ಪೆಕ್ಟರ್‌ ರಾಮರೆಡ್ಡಿ ವೀಣಾರವರ ಮೂಲಕ ಬೆದರಿಕೆ ಹಾಕಿದ್ದಾರೆ.

ಈ ಬಡ ಜನರ ಗುಡಿಸಲುಗಳನ್ನು ತೆರವುಗೊಳಿಸಿ ಇದೇ ಜಾಗದಲ್ಲಿ ಕಸ ವಿಲೇವಾರಿ ಘಟಕ ಮಾಡಬೇಕೆಂದು ಜಿಲ್ಲಾಡಳಿತದ ಯೋಜನೆಯಾಗಿದೆ. ಅದಕ್ಕಾಗಿ ಇಂದು ತೆರವು ಕಾರ್ಯಚರಣೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಈ ಜಾಗದಲ್ಲಿ ಸದ್ಯಕ್ಕೆ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ನೆಲೆ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ತಮ್ಮ ಮೇಲಾದ ಏಕಾಏಕಿ ದಾಳಿಯಿಂದ ದಿಕ್ಕುತೋಚದೆ ಜನ ಕಂಗಾಲಾಗಿದ್ದು ಹೋರಾಟ ಮುಂದುವರೆಸಿದ್ದಾರೆ.

ಹಲ್ಲೆಗೊಳಗಾದ ಯುವ ಹೋರಾಟಗಾರ ಹೇಮಂತ್‌ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಾನುಗೌರಿ.ಕಾಂ ಜೊತೆ ಮಾತನಾಡಿದರು. “ಜನರು ಕೂಲಿಲೈನ್‌ನಲ್ಲಿನ ಶೋಷಣೆ ತಾಳಲಾರದೇ ಬಹಳ ವರ್ಷಗಳಿಂದ ಈ ಸರ್ಕಾರಿ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ. ಇಂತಹ ಅಮಾಯಕ ಜನರ ಮೇಲೆ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ. ಬಡಜನರ ಜೀವನಾವಶ್ಯಕ ವಸ್ತುಗಳನ್ನು, ದಿನಸಿಗಳನ್ನು ಪೊಲೀಸರು ಹೊತ್ತೋಯ್ಯುತ್ತಿದ್ದಾರೆ. ಅವರ ಬೆದರಿಕೆಗೆ ಮಣಿಯುವುದಿಲ್ಲ ಬಡಜನರು ಹೋರಾಟ ತೀವ್ರಗೊಳಿಸುತ್ತೇವೆ ಎಂದಿದ್ದಾರೆ.

ಹಲ್ಲೆಗೊಳಗಾದ ಹೇಮಂತ್‌

ಈ ಜಾಗದಲ್ಲಿ ಗುಡಿಸಲುಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದ ದಲಿತ, ಆದಿವಾಸಿ ಕುಟುಂಬಗಳು ಜಿಲ್ಲಾಧಿಕಾರಿಗಳಿಗೆ, ತಹಸೀಲ್ದಾರ್‌ರವರಿಗೆ ಹಲವಾರು ಭಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮಗಳನ್ನು ಜಿಲ್ಲಾಡಳಿತ ಇಲ್ಲಿಯವರಗೂ ತೆಗೆದುಕೊಂಡಿರಲಿಲ್ಲ. ಈಗ ಏಕಾಏಕಿ ಪೋಲೀಸರನ್ನು ಕರೆದುಕೊಂಡು ಬಂದು ಬಡವರನ್ನು ಬೆದರಿಸಿ ಗುಡಿಸಲುಗಳನ್ನು ಕಿತ್ತುಹಾಕಿದ್ದಾರೆ ಎಂದು ಸ್ಥಳೀಯ ಜಿಲ್ಲಾ ಮುಖಂಡರಾದ ಮೊಣ್ಣಪ್ಪರವರು ಆರೋಪಿಸಿದ್ದಾರೆ.

ಈ ದೇಶದ ಮೂಲ ನಿವಾಸಿಗಳಿಗೆ ಬದುಕಲು, ನೆಲೆಸಲು ಒಂದು ಜಾಗವನ್ನೂ ಗುರುತಿಸದೆ (ಜನರಿಗೆ ವಾಸ ಮಾಡುವ ಜಾಗಕ್ಕಿಂತ ಕಸ ಹಾಕಲು ಜಾಗವೇ ಮುಖ್ಯವಾಗಿದೆ) ಪರ್ಯಾಯ ಜಗವನ್ನೂ ನೀಡದೇ ಸ್ಥಳೀಯ ಶಾಸಕ ಬಿಜೆಪಿ ಎಮ್.ಎಲ್.ಎ. ಕೆ.ಜಿ.ಬೋಪಯ್ಯನ ಕುಮ್ಮಕ್ಕಿನಿಂದ ಗುಡಿಸಲು ತೆರವುಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.

ಶಾಸಕ-ಅಧಿಕಾರಿ-ಪೊಲೀಸ್-ಗೂಂಡಾ ಕೂಟದ ಈ ನ್ಯಾಯಬಾಹಿರ, ನಿರ್ದಯಿ ನಡವಳಿಕೆಯನ್ನು ಹಾಗೂ ಬಡಜನರ ಮತ್ತು ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಹಲ್ಲೆ, ದೌರ್ಜನ್ಯ ನಡೆಸಿದವರ ಮೇಲೆ ತೀವ್ರ ಕ್ರಮ ಕೈಗೊಳ್ಳಬೇಕು ಮತ್ತು ವಸತಿ ರಹಿತರಿಗೆ ಅದೇ ಸರಕಾರಿ ಜಾಗದಲ್ಲಿ ಜಾಗ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕೆಂದು ಭೂಮಿ ವಸತಿ ಸಮಿತಿಯು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...