Homeಚಳವಳಿಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಈ ಜಾಗದಲ್ಲಿ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ಬೀದಿಪಾಲಾಗಿದ್ದಾರೆ..

- Advertisement -
- Advertisement -

ಕೊಡಗಿನ ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲ ಪಂಚಾಯ್ತಿ ವ್ಯಾಪ್ತಿಯ ಪೆರಂಬಾಡಿ, ಬಾಲಗೋಡುನಲ್ಲಿ ಸರ್ವೆ ನಂ. 337/1ರ ಸರಕಾರಿ ಜಾಗದಲ್ಲಿ ವಸತಿರಹಿತ ಆದಿವಾಸಿಗಳು, ದಲಿತರು, ಕಟ್ಟಿಕೊಂಡಿದ್ದ ಗುಡಿಸಲುಗಳನ್ನು ತಾಲ್ಲೂಕು ಆಡಳಿತ ಧ್ವಂಸ ಮಾಡಿದೆ.

ಇಂದು ಮಧ್ಯಾಹ್ನ 12:30ರ ಸಮಯದಲ್ಲಿ ಪೊಲೀಸರ ಸಮ್ಮುಖದಲ್ಲಿ ಆಗಮಿಸಿದ ತಹಶಿಲ್ದಾರ್‌ ಮಹೇಶ್, ಆರ್‌ಐ ರಂಗಪ್ಪ ಸೇರಿದಂತೆ ಹಲವು ಅಧಿಕಾರಿಗಳು ಅಲ್ಲಿದ್ದ ಜನರನ್ನು ಹೆದರಿಸಿ ಅವರು ಗುಡಿಸಲುಗಳನ್ನು ನೆಲಸಮ ಮಾಡಿದ್ದಾರೆ.

ಅಲ್ಲದೆ ಇದನ್ನು ಪ್ರಶ್ನಿಸಿದ ಭೂಮಿ-ವಸತಿ ಹೋರಾಟ ಸಮಿತಿಯ ಯುವ ಕಾರ್ಯಕರ್ತ ಹೇಮಂತ್ ಎಂಬುವವರ ಮೇಲೆ ಪೋಲೀಸರು ಹಲ್ಲೆ ಮಾಡಿದ್ದಾರೆ. ಗುಡಿಸಲುಗಳನ್ನು ತೆರವುಗೊಳಿಸಲು ಅಡ್ಡಿಪಡಿಸಿದವರ ಮೇಲೆ ಕೇಸು ಹಾಕುವುದಾಗಿ ಎಸಿ, ತಹಸೀಲ್ದಾರ್‌ರವರು ಪೊಲೀಸ್‌ ಇನ್ಸ್‌ಪೆಕ್ಟರ್‌ ರಾಮರೆಡ್ಡಿ ವೀಣಾರವರ ಮೂಲಕ ಬೆದರಿಕೆ ಹಾಕಿದ್ದಾರೆ.

ಈ ಬಡ ಜನರ ಗುಡಿಸಲುಗಳನ್ನು ತೆರವುಗೊಳಿಸಿ ಇದೇ ಜಾಗದಲ್ಲಿ ಕಸ ವಿಲೇವಾರಿ ಘಟಕ ಮಾಡಬೇಕೆಂದು ಜಿಲ್ಲಾಡಳಿತದ ಯೋಜನೆಯಾಗಿದೆ. ಅದಕ್ಕಾಗಿ ಇಂದು ತೆರವು ಕಾರ್ಯಚರಣೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಈ ಜಾಗದಲ್ಲಿ ಸದ್ಯಕ್ಕೆ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ನೆಲೆ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ತಮ್ಮ ಮೇಲಾದ ಏಕಾಏಕಿ ದಾಳಿಯಿಂದ ದಿಕ್ಕುತೋಚದೆ ಜನ ಕಂಗಾಲಾಗಿದ್ದು ಹೋರಾಟ ಮುಂದುವರೆಸಿದ್ದಾರೆ.

ಹಲ್ಲೆಗೊಳಗಾದ ಯುವ ಹೋರಾಟಗಾರ ಹೇಮಂತ್‌ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಾನುಗೌರಿ.ಕಾಂ ಜೊತೆ ಮಾತನಾಡಿದರು. “ಜನರು ಕೂಲಿಲೈನ್‌ನಲ್ಲಿನ ಶೋಷಣೆ ತಾಳಲಾರದೇ ಬಹಳ ವರ್ಷಗಳಿಂದ ಈ ಸರ್ಕಾರಿ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ. ಇಂತಹ ಅಮಾಯಕ ಜನರ ಮೇಲೆ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ. ಬಡಜನರ ಜೀವನಾವಶ್ಯಕ ವಸ್ತುಗಳನ್ನು, ದಿನಸಿಗಳನ್ನು ಪೊಲೀಸರು ಹೊತ್ತೋಯ್ಯುತ್ತಿದ್ದಾರೆ. ಅವರ ಬೆದರಿಕೆಗೆ ಮಣಿಯುವುದಿಲ್ಲ ಬಡಜನರು ಹೋರಾಟ ತೀವ್ರಗೊಳಿಸುತ್ತೇವೆ ಎಂದಿದ್ದಾರೆ.

ಹಲ್ಲೆಗೊಳಗಾದ ಹೇಮಂತ್‌

ಈ ಜಾಗದಲ್ಲಿ ಗುಡಿಸಲುಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದ ದಲಿತ, ಆದಿವಾಸಿ ಕುಟುಂಬಗಳು ಜಿಲ್ಲಾಧಿಕಾರಿಗಳಿಗೆ, ತಹಸೀಲ್ದಾರ್‌ರವರಿಗೆ ಹಲವಾರು ಭಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮಗಳನ್ನು ಜಿಲ್ಲಾಡಳಿತ ಇಲ್ಲಿಯವರಗೂ ತೆಗೆದುಕೊಂಡಿರಲಿಲ್ಲ. ಈಗ ಏಕಾಏಕಿ ಪೋಲೀಸರನ್ನು ಕರೆದುಕೊಂಡು ಬಂದು ಬಡವರನ್ನು ಬೆದರಿಸಿ ಗುಡಿಸಲುಗಳನ್ನು ಕಿತ್ತುಹಾಕಿದ್ದಾರೆ ಎಂದು ಸ್ಥಳೀಯ ಜಿಲ್ಲಾ ಮುಖಂಡರಾದ ಮೊಣ್ಣಪ್ಪರವರು ಆರೋಪಿಸಿದ್ದಾರೆ.

ಈ ದೇಶದ ಮೂಲ ನಿವಾಸಿಗಳಿಗೆ ಬದುಕಲು, ನೆಲೆಸಲು ಒಂದು ಜಾಗವನ್ನೂ ಗುರುತಿಸದೆ (ಜನರಿಗೆ ವಾಸ ಮಾಡುವ ಜಾಗಕ್ಕಿಂತ ಕಸ ಹಾಕಲು ಜಾಗವೇ ಮುಖ್ಯವಾಗಿದೆ) ಪರ್ಯಾಯ ಜಗವನ್ನೂ ನೀಡದೇ ಸ್ಥಳೀಯ ಶಾಸಕ ಬಿಜೆಪಿ ಎಮ್.ಎಲ್.ಎ. ಕೆ.ಜಿ.ಬೋಪಯ್ಯನ ಕುಮ್ಮಕ್ಕಿನಿಂದ ಗುಡಿಸಲು ತೆರವುಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.

ಶಾಸಕ-ಅಧಿಕಾರಿ-ಪೊಲೀಸ್-ಗೂಂಡಾ ಕೂಟದ ಈ ನ್ಯಾಯಬಾಹಿರ, ನಿರ್ದಯಿ ನಡವಳಿಕೆಯನ್ನು ಹಾಗೂ ಬಡಜನರ ಮತ್ತು ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಹಲ್ಲೆ, ದೌರ್ಜನ್ಯ ನಡೆಸಿದವರ ಮೇಲೆ ತೀವ್ರ ಕ್ರಮ ಕೈಗೊಳ್ಳಬೇಕು ಮತ್ತು ವಸತಿ ರಹಿತರಿಗೆ ಅದೇ ಸರಕಾರಿ ಜಾಗದಲ್ಲಿ ಜಾಗ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕೆಂದು ಭೂಮಿ ವಸತಿ ಸಮಿತಿಯು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...