Homeಚಳವಳಿಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಕೊಡಗಿನಲ್ಲಿ ಆದಿವಾಸಿಗಳ ಗುಡಿಸಲು ಧ್ವಂಸ: ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ..

ಈ ಜಾಗದಲ್ಲಿ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ಬೀದಿಪಾಲಾಗಿದ್ದಾರೆ..

- Advertisement -
- Advertisement -

ಕೊಡಗಿನ ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲ ಪಂಚಾಯ್ತಿ ವ್ಯಾಪ್ತಿಯ ಪೆರಂಬಾಡಿ, ಬಾಲಗೋಡುನಲ್ಲಿ ಸರ್ವೆ ನಂ. 337/1ರ ಸರಕಾರಿ ಜಾಗದಲ್ಲಿ ವಸತಿರಹಿತ ಆದಿವಾಸಿಗಳು, ದಲಿತರು, ಕಟ್ಟಿಕೊಂಡಿದ್ದ ಗುಡಿಸಲುಗಳನ್ನು ತಾಲ್ಲೂಕು ಆಡಳಿತ ಧ್ವಂಸ ಮಾಡಿದೆ.

ಇಂದು ಮಧ್ಯಾಹ್ನ 12:30ರ ಸಮಯದಲ್ಲಿ ಪೊಲೀಸರ ಸಮ್ಮುಖದಲ್ಲಿ ಆಗಮಿಸಿದ ತಹಶಿಲ್ದಾರ್‌ ಮಹೇಶ್, ಆರ್‌ಐ ರಂಗಪ್ಪ ಸೇರಿದಂತೆ ಹಲವು ಅಧಿಕಾರಿಗಳು ಅಲ್ಲಿದ್ದ ಜನರನ್ನು ಹೆದರಿಸಿ ಅವರು ಗುಡಿಸಲುಗಳನ್ನು ನೆಲಸಮ ಮಾಡಿದ್ದಾರೆ.

ಅಲ್ಲದೆ ಇದನ್ನು ಪ್ರಶ್ನಿಸಿದ ಭೂಮಿ-ವಸತಿ ಹೋರಾಟ ಸಮಿತಿಯ ಯುವ ಕಾರ್ಯಕರ್ತ ಹೇಮಂತ್ ಎಂಬುವವರ ಮೇಲೆ ಪೋಲೀಸರು ಹಲ್ಲೆ ಮಾಡಿದ್ದಾರೆ. ಗುಡಿಸಲುಗಳನ್ನು ತೆರವುಗೊಳಿಸಲು ಅಡ್ಡಿಪಡಿಸಿದವರ ಮೇಲೆ ಕೇಸು ಹಾಕುವುದಾಗಿ ಎಸಿ, ತಹಸೀಲ್ದಾರ್‌ರವರು ಪೊಲೀಸ್‌ ಇನ್ಸ್‌ಪೆಕ್ಟರ್‌ ರಾಮರೆಡ್ಡಿ ವೀಣಾರವರ ಮೂಲಕ ಬೆದರಿಕೆ ಹಾಕಿದ್ದಾರೆ.

ಈ ಬಡ ಜನರ ಗುಡಿಸಲುಗಳನ್ನು ತೆರವುಗೊಳಿಸಿ ಇದೇ ಜಾಗದಲ್ಲಿ ಕಸ ವಿಲೇವಾರಿ ಘಟಕ ಮಾಡಬೇಕೆಂದು ಜಿಲ್ಲಾಡಳಿತದ ಯೋಜನೆಯಾಗಿದೆ. ಅದಕ್ಕಾಗಿ ಇಂದು ತೆರವು ಕಾರ್ಯಚರಣೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಈ ಜಾಗದಲ್ಲಿ ಸದ್ಯಕ್ಕೆ ವಾಸವಿದ್ದ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳ 57 ಕುಟುಂಬಗಳ ಸುಮಾರು 200ಕ್ಕೂ ಹೆಚ್ಚು ಜನ ನೆಲೆ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ತಮ್ಮ ಮೇಲಾದ ಏಕಾಏಕಿ ದಾಳಿಯಿಂದ ದಿಕ್ಕುತೋಚದೆ ಜನ ಕಂಗಾಲಾಗಿದ್ದು ಹೋರಾಟ ಮುಂದುವರೆಸಿದ್ದಾರೆ.

ಹಲ್ಲೆಗೊಳಗಾದ ಯುವ ಹೋರಾಟಗಾರ ಹೇಮಂತ್‌ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಾನುಗೌರಿ.ಕಾಂ ಜೊತೆ ಮಾತನಾಡಿದರು. “ಜನರು ಕೂಲಿಲೈನ್‌ನಲ್ಲಿನ ಶೋಷಣೆ ತಾಳಲಾರದೇ ಬಹಳ ವರ್ಷಗಳಿಂದ ಈ ಸರ್ಕಾರಿ ಜಾಗದಲ್ಲಿ ವಾಸ ಮಾಡುತ್ತಿದ್ದಾರೆ. ಇಂತಹ ಅಮಾಯಕ ಜನರ ಮೇಲೆ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ. ಬಡಜನರ ಜೀವನಾವಶ್ಯಕ ವಸ್ತುಗಳನ್ನು, ದಿನಸಿಗಳನ್ನು ಪೊಲೀಸರು ಹೊತ್ತೋಯ್ಯುತ್ತಿದ್ದಾರೆ. ಅವರ ಬೆದರಿಕೆಗೆ ಮಣಿಯುವುದಿಲ್ಲ ಬಡಜನರು ಹೋರಾಟ ತೀವ್ರಗೊಳಿಸುತ್ತೇವೆ ಎಂದಿದ್ದಾರೆ.

ಹಲ್ಲೆಗೊಳಗಾದ ಹೇಮಂತ್‌

ಈ ಜಾಗದಲ್ಲಿ ಗುಡಿಸಲುಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದ ದಲಿತ, ಆದಿವಾಸಿ ಕುಟುಂಬಗಳು ಜಿಲ್ಲಾಧಿಕಾರಿಗಳಿಗೆ, ತಹಸೀಲ್ದಾರ್‌ರವರಿಗೆ ಹಲವಾರು ಭಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮಗಳನ್ನು ಜಿಲ್ಲಾಡಳಿತ ಇಲ್ಲಿಯವರಗೂ ತೆಗೆದುಕೊಂಡಿರಲಿಲ್ಲ. ಈಗ ಏಕಾಏಕಿ ಪೋಲೀಸರನ್ನು ಕರೆದುಕೊಂಡು ಬಂದು ಬಡವರನ್ನು ಬೆದರಿಸಿ ಗುಡಿಸಲುಗಳನ್ನು ಕಿತ್ತುಹಾಕಿದ್ದಾರೆ ಎಂದು ಸ್ಥಳೀಯ ಜಿಲ್ಲಾ ಮುಖಂಡರಾದ ಮೊಣ್ಣಪ್ಪರವರು ಆರೋಪಿಸಿದ್ದಾರೆ.

ಈ ದೇಶದ ಮೂಲ ನಿವಾಸಿಗಳಿಗೆ ಬದುಕಲು, ನೆಲೆಸಲು ಒಂದು ಜಾಗವನ್ನೂ ಗುರುತಿಸದೆ (ಜನರಿಗೆ ವಾಸ ಮಾಡುವ ಜಾಗಕ್ಕಿಂತ ಕಸ ಹಾಕಲು ಜಾಗವೇ ಮುಖ್ಯವಾಗಿದೆ) ಪರ್ಯಾಯ ಜಗವನ್ನೂ ನೀಡದೇ ಸ್ಥಳೀಯ ಶಾಸಕ ಬಿಜೆಪಿ ಎಮ್.ಎಲ್.ಎ. ಕೆ.ಜಿ.ಬೋಪಯ್ಯನ ಕುಮ್ಮಕ್ಕಿನಿಂದ ಗುಡಿಸಲು ತೆರವುಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.

ಶಾಸಕ-ಅಧಿಕಾರಿ-ಪೊಲೀಸ್-ಗೂಂಡಾ ಕೂಟದ ಈ ನ್ಯಾಯಬಾಹಿರ, ನಿರ್ದಯಿ ನಡವಳಿಕೆಯನ್ನು ಹಾಗೂ ಬಡಜನರ ಮತ್ತು ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಹಲ್ಲೆ, ದೌರ್ಜನ್ಯ ನಡೆಸಿದವರ ಮೇಲೆ ತೀವ್ರ ಕ್ರಮ ಕೈಗೊಳ್ಳಬೇಕು ಮತ್ತು ವಸತಿ ರಹಿತರಿಗೆ ಅದೇ ಸರಕಾರಿ ಜಾಗದಲ್ಲಿ ಜಾಗ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕೆಂದು ಭೂಮಿ ವಸತಿ ಸಮಿತಿಯು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...