Homeಮುಖಪುಟಪತ್ನಿಗೆ ಕಿರುಕುಳ: ನವಾಜುದ್ದೀನ್ ಸಿದ್ದಿಕಿ ಮತ್ತು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು!

ಪತ್ನಿಗೆ ಕಿರುಕುಳ: ನವಾಜುದ್ದೀನ್ ಸಿದ್ದಿಕಿ ಮತ್ತು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು!

ಈ ಕಿರುಕುಳದ ವಿಷಯವನ್ನು ಕುಟುಂಬಕ್ಕೆ ತಿಳಿಸಿದಾಗ, "ಈ ವಿಷಯವನ್ನು ಕುಟುಂಬದೊಳಗಡೆಯೇ ಬಗೆಹರಿಸಿಕೊಳ್ಳೋಣ, ಸುಮ್ಮನಿರು" ಎಂದು ಹೇಳಿದ್ದರೆಂದೂ ಆರೋಪಿಸಿದ್ದಾರೆ.

- Advertisement -
- Advertisement -

ನವಾಜುದ್ದೀನ್ ಸಿದ್ದಿಕಿ ಅವರಿಂದ ಬೇರೆಯಾಗಿರುವ ಅವರ ಪತ್ನಿ ಆಲಿಯಾ, ತನ್ನ ಪತಿ ಮತ್ತು ಪತಿಯ ಕುಟುಂಬದ ಸದಸ್ಯರ ವಿರುದ್ಧ ನೀಡಲಾಗಿದ್ದ ಕಿರುಕುಳದ ದೂರಿಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆಲಿಯಾ, ಮುಂಬೈನ ಬುಧಾನಾ ಪೊಲೀಸ್ ಠಾಣೆಗೆ ಬಂದು ತಾವು ನೀಡಿರುವ ದೂರಿನಲ್ಲಿನ ಆರೋಪವನ್ನು ದೃಢೀಕರಿಸಿದ್ದಾರೆ ಎಂದು ಠಾಣಾಧಿಕಾರಿ ಕುಶಾಲ್ಪಾಲ್ ಹೇಳಿದರು.

“ಜುಲೈ 27 ರಂದು ಮುಂಬೈ ಪೊಲೀಸ್ ಠಾಣೆಯಲ್ಲಿ ಆಕೆ ದೂರು ನೀಡಿದ್ದು, ಅಲ್ಲಿಯೇ ಎಫ್‌ಐಆರ್ ದಾಖಲಿಸಿದ್ದರು. ಆದರೆ ಅಪರಾದ ನಡೆದಿದೆ ಎಂದು ಆರೋಪಿಸಲಾದ ಸ್ಥಳ ನಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದುದರಿಂದ, ಈ ಪ್ರಕರಣವನ್ನು ಬುಧಾನಾ ಪೊಲೀಸ್ ಠಾಣೆಗೆ ರವಾನಿಸಲಾಗಿದೆ” ಎಂದು ಠಾಣಾಧಿಕಾರಿ ಹೇಳಿದರು.

2012 ರಲ್ಲಿ ನವಾಜುದ್ದೀನ್ ಸಿದ್ದಿಕಿಯವರ ಸಹೋದರ ಮಿನ್ಹಾಜುದ್ದೀನ್ ಸಿದ್ದಿಕಿ ತನಗೆ ಕಿರುಕುಳ ನೀಡಿದ್ದರು ಎಂದು ಮಾಡಿದ್ದ ಆರೋಪವನ್ನು ಪುನರುಚ್ಚರಿಸಿ, ತಮ್ಮ ಹೇಳಿಕೆಯನ್ನು ನೀಡಿದ್ದಾರೆ ಎಂದು ಠಾಣಾಧಿಕಾರಿ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಕಿರುಕುಳದ ವಿಷಯವನ್ನು ಕುಟುಂಬಕ್ಕೆ ತಿಳಿಸಿದಾಗ, “ಈ ವಿಷಯವನ್ನು ಕುಟುಂಬದೊಳಗಡೆಯೇ ಬಗೆಹರಿಸಿಕೊಳ್ಳೋಣ, ಸುಮ್ಮನಿರು” ಎಂದು ಹೇಳಿದ್ದರೆಂದೂ ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಕಾರ್ಯದರ್ಶಿಗಳ ಬದಲಾವಣೆ ಪರ್ವ: ರಾಜ್ಯ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

ಕೊರೊನಾ ಲಾಕ್‌ಡೌನ್ ಕಾರಣದಿಂದ ನವಾಜುದ್ದೀನ್ ಸಿದ್ದಿಕಿ ಮುಂಬೈಯಿಂದ ಬುಧಾನಾದಲ್ಲಿರುವ ತನ್ನ ಸ್ವಂತ ಸ್ಥಳಕ್ಕೆ ಮರಳಿ, ಅಂದಿನಿಂದ ಅಲ್ಲಿಯೇ ವಾಸಿಸುತ್ತಿದ್ದಾರೆ.

ಆದಾಗ್ಯೂ, ಅವರ ಕುಟುಂಬ ಮೂಲಗಳ ಪ್ರಕಾರ, “ನವಾಜುದ್ದೀನ್ ಸಿದ್ದಿಕಿ ತನ್ನ ನಿವಾಸದಲ್ಲಿ ಇರಲಿಲ್ಲ. ಅಲಿಯಾ ತನ್ನ ಹೇಳಿಕೆಯನ್ನು ದಾಖಲಿಸಲು ಪೊಲೀಸ್ ಠಾಣೆಗೆ ಬಂದಾಗ ಆತ ಡೆಹ್ರಾಡೂನ್‌ನಲ್ಲಿದ್ದನು” ಎಂದು ಹೇಳಿದ್ದಾರೆ.

“ಆಕೆ ನಮ್ಮಲ್ಲಿ ಯಾರನ್ನೂ ಭೇಟಿಯಾಗಲು ಮನೆಗೆ ಬಂದಿಲ್ಲ” ಎಂದು ಸಿದ್ದಿಕಿಯ ಕುಟುಂಬ ಸದಸ್ಯರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದರು.

2009ರಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಆಲಿಯಾ ಸಿದ್ದಿಕಿ ವಿವಾಹವಾಗಿದ್ದರು. ಅವರಿಗೆ ಶೋರಾ ಮತ್ತು ಯಾನಿ ಎಂಬ ಇಬ್ಬರು ಮಕ್ಕಳಿದ್ದಾರೆ.

ಇತ್ತೀಚೆಗೆ ಸಿದ್ದಿಕಿಯವರೊಂದಿಗಿನ ವೈವಾಹಿಕ ಜೀವನವನ್ನು ಕೊನೆಗೊಳಿಸಿಕೊಳ್ಳುವ ಸಲುವಾಗಿ ವಿಚ್ಚೇದನ ನೋಟೀಸ್ ಅನ್ನೂ ಸಹ ನೀಡಿದ್ದರು.

ಕಳೆದ ಜೂನ್ ತಿಂಗಳಿನಲ್ಲಿ, “ಸಿದ್ದಿಕಿಯವರ ಸಂಬಂಧಿಯೊಬ್ಬರು ತಮ್ಮ ಮೇಲೆ ಕುಟುಂಬದೊಳಗಿನವರಿಂದ ಲೈಂಗಿಕ ಕಿರುಕುಳ ನಡೆದಿತ್ತೆಂದು” ದೆಹಲಿಯಲ್ಲಿ ದೂರು ನೀಡಿದ್ದಾಗ, ಆಲಿಯಾ ಟ್ವೀಟ್ ಮಾಡಿ, “ಇದು ಕೇವಲ ಆರಂಭ ಮಾತ್ರ. ಈಗಾಗಲೇ ನನಗೆ ತುಂಬಾ ಸಹಾಯ ಮಾಡಿರುವುದಕ್ಕೆ ದೇವರಿಗೆ ಧನ್ಯವಾದಗಳು. ಬಹಿರಂಗಗೊಳ್ಳಬೇಕಿರುವುದು ಇನ್ನೂ ಸಾಕಷ್ಟಿದೆ. ನನ್ನಂತೆಯೇ ಮೌನದಲ್ಲಿಯೇ ಸಂಕಟ ಅನುಭವಿಸುತ್ತಿರುವವಳು ಜಗತ್ತಿನಲ್ಲಿ ನಾನು ಮಾತ್ರವಲ್ಲ. ನೋಡೋಣ ಇನ್ನೂ ಎಷ್ಟುದಿನ ಸತ್ಯವನ್ನು ಹಣದಿಂದ ಕೊಂಡುಕೊಳ್ಳುತ್ತಾರೆ ಎಂಬುದನ್ನು” ಎಂದು ಹೇಳಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿತ್ತು.


ಇದನ್ನೂ ಓದಿ: ಇಂದು ರಿಯಾ ಇರುವ ಜಾಗದಲ್ಲಿ ನಾಳೆ ನಾವು-ನೀವೂ ಇರಬಹುದು.. ಮರೆಯಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...