Homeಮುಖಪುಟಪತ್ನಿಗೆ ಕಿರುಕುಳ: ನವಾಜುದ್ದೀನ್ ಸಿದ್ದಿಕಿ ಮತ್ತು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು!

ಪತ್ನಿಗೆ ಕಿರುಕುಳ: ನವಾಜುದ್ದೀನ್ ಸಿದ್ದಿಕಿ ಮತ್ತು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು!

ಈ ಕಿರುಕುಳದ ವಿಷಯವನ್ನು ಕುಟುಂಬಕ್ಕೆ ತಿಳಿಸಿದಾಗ, "ಈ ವಿಷಯವನ್ನು ಕುಟುಂಬದೊಳಗಡೆಯೇ ಬಗೆಹರಿಸಿಕೊಳ್ಳೋಣ, ಸುಮ್ಮನಿರು" ಎಂದು ಹೇಳಿದ್ದರೆಂದೂ ಆರೋಪಿಸಿದ್ದಾರೆ.

- Advertisement -
- Advertisement -

ನವಾಜುದ್ದೀನ್ ಸಿದ್ದಿಕಿ ಅವರಿಂದ ಬೇರೆಯಾಗಿರುವ ಅವರ ಪತ್ನಿ ಆಲಿಯಾ, ತನ್ನ ಪತಿ ಮತ್ತು ಪತಿಯ ಕುಟುಂಬದ ಸದಸ್ಯರ ವಿರುದ್ಧ ನೀಡಲಾಗಿದ್ದ ಕಿರುಕುಳದ ದೂರಿಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆಲಿಯಾ, ಮುಂಬೈನ ಬುಧಾನಾ ಪೊಲೀಸ್ ಠಾಣೆಗೆ ಬಂದು ತಾವು ನೀಡಿರುವ ದೂರಿನಲ್ಲಿನ ಆರೋಪವನ್ನು ದೃಢೀಕರಿಸಿದ್ದಾರೆ ಎಂದು ಠಾಣಾಧಿಕಾರಿ ಕುಶಾಲ್ಪಾಲ್ ಹೇಳಿದರು.

“ಜುಲೈ 27 ರಂದು ಮುಂಬೈ ಪೊಲೀಸ್ ಠಾಣೆಯಲ್ಲಿ ಆಕೆ ದೂರು ನೀಡಿದ್ದು, ಅಲ್ಲಿಯೇ ಎಫ್‌ಐಆರ್ ದಾಖಲಿಸಿದ್ದರು. ಆದರೆ ಅಪರಾದ ನಡೆದಿದೆ ಎಂದು ಆರೋಪಿಸಲಾದ ಸ್ಥಳ ನಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದುದರಿಂದ, ಈ ಪ್ರಕರಣವನ್ನು ಬುಧಾನಾ ಪೊಲೀಸ್ ಠಾಣೆಗೆ ರವಾನಿಸಲಾಗಿದೆ” ಎಂದು ಠಾಣಾಧಿಕಾರಿ ಹೇಳಿದರು.

2012 ರಲ್ಲಿ ನವಾಜುದ್ದೀನ್ ಸಿದ್ದಿಕಿಯವರ ಸಹೋದರ ಮಿನ್ಹಾಜುದ್ದೀನ್ ಸಿದ್ದಿಕಿ ತನಗೆ ಕಿರುಕುಳ ನೀಡಿದ್ದರು ಎಂದು ಮಾಡಿದ್ದ ಆರೋಪವನ್ನು ಪುನರುಚ್ಚರಿಸಿ, ತಮ್ಮ ಹೇಳಿಕೆಯನ್ನು ನೀಡಿದ್ದಾರೆ ಎಂದು ಠಾಣಾಧಿಕಾರಿ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಕಿರುಕುಳದ ವಿಷಯವನ್ನು ಕುಟುಂಬಕ್ಕೆ ತಿಳಿಸಿದಾಗ, “ಈ ವಿಷಯವನ್ನು ಕುಟುಂಬದೊಳಗಡೆಯೇ ಬಗೆಹರಿಸಿಕೊಳ್ಳೋಣ, ಸುಮ್ಮನಿರು” ಎಂದು ಹೇಳಿದ್ದರೆಂದೂ ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಲ್ಲಿ ಕಾರ್ಯದರ್ಶಿಗಳ ಬದಲಾವಣೆ ಪರ್ವ: ರಾಜ್ಯ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

ಕೊರೊನಾ ಲಾಕ್‌ಡೌನ್ ಕಾರಣದಿಂದ ನವಾಜುದ್ದೀನ್ ಸಿದ್ದಿಕಿ ಮುಂಬೈಯಿಂದ ಬುಧಾನಾದಲ್ಲಿರುವ ತನ್ನ ಸ್ವಂತ ಸ್ಥಳಕ್ಕೆ ಮರಳಿ, ಅಂದಿನಿಂದ ಅಲ್ಲಿಯೇ ವಾಸಿಸುತ್ತಿದ್ದಾರೆ.

ಆದಾಗ್ಯೂ, ಅವರ ಕುಟುಂಬ ಮೂಲಗಳ ಪ್ರಕಾರ, “ನವಾಜುದ್ದೀನ್ ಸಿದ್ದಿಕಿ ತನ್ನ ನಿವಾಸದಲ್ಲಿ ಇರಲಿಲ್ಲ. ಅಲಿಯಾ ತನ್ನ ಹೇಳಿಕೆಯನ್ನು ದಾಖಲಿಸಲು ಪೊಲೀಸ್ ಠಾಣೆಗೆ ಬಂದಾಗ ಆತ ಡೆಹ್ರಾಡೂನ್‌ನಲ್ಲಿದ್ದನು” ಎಂದು ಹೇಳಿದ್ದಾರೆ.

“ಆಕೆ ನಮ್ಮಲ್ಲಿ ಯಾರನ್ನೂ ಭೇಟಿಯಾಗಲು ಮನೆಗೆ ಬಂದಿಲ್ಲ” ಎಂದು ಸಿದ್ದಿಕಿಯ ಕುಟುಂಬ ಸದಸ್ಯರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದರು.

2009ರಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಆಲಿಯಾ ಸಿದ್ದಿಕಿ ವಿವಾಹವಾಗಿದ್ದರು. ಅವರಿಗೆ ಶೋರಾ ಮತ್ತು ಯಾನಿ ಎಂಬ ಇಬ್ಬರು ಮಕ್ಕಳಿದ್ದಾರೆ.

ಇತ್ತೀಚೆಗೆ ಸಿದ್ದಿಕಿಯವರೊಂದಿಗಿನ ವೈವಾಹಿಕ ಜೀವನವನ್ನು ಕೊನೆಗೊಳಿಸಿಕೊಳ್ಳುವ ಸಲುವಾಗಿ ವಿಚ್ಚೇದನ ನೋಟೀಸ್ ಅನ್ನೂ ಸಹ ನೀಡಿದ್ದರು.

ಕಳೆದ ಜೂನ್ ತಿಂಗಳಿನಲ್ಲಿ, “ಸಿದ್ದಿಕಿಯವರ ಸಂಬಂಧಿಯೊಬ್ಬರು ತಮ್ಮ ಮೇಲೆ ಕುಟುಂಬದೊಳಗಿನವರಿಂದ ಲೈಂಗಿಕ ಕಿರುಕುಳ ನಡೆದಿತ್ತೆಂದು” ದೆಹಲಿಯಲ್ಲಿ ದೂರು ನೀಡಿದ್ದಾಗ, ಆಲಿಯಾ ಟ್ವೀಟ್ ಮಾಡಿ, “ಇದು ಕೇವಲ ಆರಂಭ ಮಾತ್ರ. ಈಗಾಗಲೇ ನನಗೆ ತುಂಬಾ ಸಹಾಯ ಮಾಡಿರುವುದಕ್ಕೆ ದೇವರಿಗೆ ಧನ್ಯವಾದಗಳು. ಬಹಿರಂಗಗೊಳ್ಳಬೇಕಿರುವುದು ಇನ್ನೂ ಸಾಕಷ್ಟಿದೆ. ನನ್ನಂತೆಯೇ ಮೌನದಲ್ಲಿಯೇ ಸಂಕಟ ಅನುಭವಿಸುತ್ತಿರುವವಳು ಜಗತ್ತಿನಲ್ಲಿ ನಾನು ಮಾತ್ರವಲ್ಲ. ನೋಡೋಣ ಇನ್ನೂ ಎಷ್ಟುದಿನ ಸತ್ಯವನ್ನು ಹಣದಿಂದ ಕೊಂಡುಕೊಳ್ಳುತ್ತಾರೆ ಎಂಬುದನ್ನು” ಎಂದು ಹೇಳಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿತ್ತು.


ಇದನ್ನೂ ಓದಿ: ಇಂದು ರಿಯಾ ಇರುವ ಜಾಗದಲ್ಲಿ ನಾಳೆ ನಾವು-ನೀವೂ ಇರಬಹುದು.. ಮರೆಯಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...